< إِرْمِيَا 49 >

عَنْ بَنِي عَمُّونَ: «هَكَذَا قَالَ ٱلرَّبُّ: أَلَيْسَ لِإِسْرَائِيلَ بَنُونَ، أَوْ لَا وَارِثٌ لَهُ؟ لِمَاذَا يَرِثُ مَلِكُهُمْ جَادَ، وَشَعْبُهُ يَسْكُنُ فِي مُدُنِهِ؟ ١ 1
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
لِذَلِكَ هَا أَيَّامٌ تَأْتِي، يَقُولُ ٱلرَّبُّ، وَأُسْمِعُ فِي رَبَّةِ بَنِي عَمُّونَ جَلَبَةَ حَرْبٍ، وَتَصِيرُ تَّلًا خَرِبًا، وَتُحْرَقُ بَنَاتُهَا بِٱلنَّارِ، فَيَرِثُ إِسْرَائِيلُ ٱلَّذِينَ وَرِثُوهُ، يَقُولُ ٱلرَّبُّ. ٢ 2
ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
وَلْوِلِي يَاحَشْبُونُ لِأَنَّ عَايَ قَدْ خَرِبَتْ. اُصْرُخْنَ يَا بَنَاتِ رَبَّةَ. تَنَطَّقْنَ بِمُسُوحٍ. ٱنْدُبْنَ وَطَوِّفْنَ بَيْنَ ٱلْجُدْرَانِ، لِأَنَّ مَلِكَهُمْ يَذْهَبُ إِلَى ٱلسَّبْيِ هُوَ وَكَهَنَتُهُ وَرُؤَسَاؤُهُ مَعًا. ٣ 3
“ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
مَا بَالُكِ تَفْتَخِرِينَ بِٱلْأَوْطِيَةِ؟ قَدْ فَاضَ وَطَاؤُكِ دَمًا أَيَّتُهَا ٱلْبِنْتُ ٱلْمُرْتَدَّةُ وَٱلْمُتَوَكِّلَةُ عَلَى خَزَائِنِهَا، قَائِلَةً: مَنْ يَأْتِي إِلَيَّ؟ ٤ 4
‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
هَأَنَذَا أَجْلِبُ عَلَيْكِ خَوْفًا، يَقُولُ ٱلسَّيِّدُ رَبُّ ٱلْجُنُودِ، مِنْ جَمِيعِ ٱلَّذِينَ حَوَالَيْكِ، وَتُطْرَدُونَ كُلُّ وَاحِدٍ إِلَى مَا أَمَامَهُ، وَلَيْسَ مَنْ يَجْمَعُ ٱلتَّائِهِينَ. ٥ 5
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
ثُمَّ بَعْدَ ذَلِكَ أَرُدُّ سَبْيَ بَنِي عَمُّونَ، يَقُولُ ٱلرَّبُّ». ٦ 6
ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
عَنْ أَدُومَ: «هَكَذَا قَالَ رَبُّ ٱلْجُنُودِ: أَلَا حِكْمَةَ بَعْدُ فِي تِيْمَانَ؟ هَلْ بَادَتِ ٱلْمَشُورَةُ مِنَ ٱلْفُهَمَاءِ؟ هَلْ فَرَغَتْ حِكْمَتُهُمْ؟ ٧ 7
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
اُهْرُبُوا. ٱلْتَفِتُوا. تَعَمَّقُوا فِي ٱلسَّكَنِ يَا سُكَّانَ دَدَانَ، لِأَنِّي قَدْ جَلَبْتُ عَلَيْهِ بَلِيَّةَ عِيسُو حِينَ عَاقَبْتُهُ. ٨ 8
ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
لَوْ أَتَاكَ ٱلْقَاطِفُونَ، أَفَمَا كَانُوا يَتْرُكُونَ عُلَالَةً؟ أَوِ ٱللُّصُوصُ لَيْلًا، أَفَمَا كَانُوا يُهْلِكُونَ مَا يَكْفِيهِمْ؟ ٩ 9
ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
وَلَكِنَّنِي جَرَّدْتُ عِيسُوَ، وَكَشَفْتُ مُسْتَتَرَاتِهِ فَلَا يَسْتَطِيعُ أَنْ يَخْتَبِئَ. هَلَكَ نَسْلُهُ وَإِخْوَتُهُ وَجِيرَانُهُ، فَلَا يُوجَدُ. ١٠ 10
೧೦ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
اُتْرُكْ أَيْتَامَكَ أَنَا أُحْيِيهِمْ، وَأَرَامِلُكَ عَلَيَّ لِيَتَوَكَّلْنَ. ١١ 11
೧೧ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
لِأَنَّهُ هَكَذَا قَالَ ٱلرَّبُّ: هَا إِنَّ ٱلَّذِينَ لَا حَقَّ لَهُمْ أَنْ يَشْرَبُوا ٱلْكَأْسَ قَدْ شَرِبُوا، فَهَلْ أَنْتَ تَتَبَرَّأُ تَبَرُّؤًا؟ لَا تَتَبَرَّأُ! بَلْ إِنَّمَا تَشْرَبُ شُرْبًا. ١٢ 12
೧೨ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
لِأَنِّي بِذَاتِي حَلَفْتُ، يَقُولُ ٱلرَّبُّ، إِنَّ بُصْرَةَ تَكُونُ دَهَشًا وَعَارًا وَخَرَابًا وَلَعْنَةً، وَكُلُّ مُدُنِهَا تَكُونُ خِرَبًا أَبَدِيَّةً. ١٣ 13
೧೩ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
قَدْ سَمِعْتُ خَبَرًا مِنْ قِبَلِ ٱلرَّبِّ، وَأُرْسِلَ رَسُولٌ إِلَى ٱلْأُمَمِ قَائِلًا: تَجَمَّعُوا وَتَعَالَوْا عَلَيْهَا، وَقُومُوا لِلْحَرْبِ. ١٤ 14
೧೪ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
لِأَنِّي هَا قَدْ جَعَلْتُكَ صَغِيرًا بَيْنَ ٱلشُّعُوبِ، وَمُحْتَقَرًا بَيْنَ ٱلنَّاسِ. ١٥ 15
೧೫ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
قَدْ غَرَّكَ تَخْوِيفُكَ، كِبْرِيَاءُ قَلْبِكَ، يَاسَاكِنُ فِي مَحَاجِئِ ٱلصَّخْرِ، ٱلْمَاسِكَ مُرْتَفَعِ ٱلْأَكَمَةِ. وَإِنْ رَفَعْتَ كَنَسْرٍ عُشَّكَ، فَمِنْ هُنَاكَ أُحْدِرُكَ، يَقُولُ ٱلرَّبُّ. ١٦ 16
೧೬ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
وَتَصِيرُ أَدُومُ عَجَبًا. كُلُّ مَارٍّ بِهَا يَتَعَجَّبُ وَيَصْفِرُ بِسَبَبِ كُلِّ ضَرَبَاتِهَا! ١٧ 17
೧೭ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
كَٱنْقِلَابِ سَدُومَ وَعَمُورَةَ وَمُجَاوَرَاتِهِمَا، يَقُولُ ٱلرَّبُّ، لَا يَسْكُنُ هُنَاكَ إِنْسَانٌ وَلَا يَتَغَرَّبُ فِيهَا ٱبْنُ آدَمَ. ١٨ 18
೧೮ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
هُوَذَا يَصْعَدُ كَأَسَدٍ مِنْ كِبْرِيَاءِ ٱلْأُرْدُنِّ إِلَى مَرْعًى دَائِمٍ. لِأَنِّي أَغْمِزُ وَأَجْعَلُهُ يَرْكُضُ عَنْهُ. فَمَنْ هُوَ مُنْتَخَبٌ، فَأُقِيمَهُ عَلَيْهِ؟ لِأَنَّهُ مَنْ مِثْلِي؟ وَمَنْ يُحَاكِمُنِي؟ وَمَنْ هُوَ ٱلرَّاعِي ٱلَّذِي يَقِفُ أَمَامِي؟ ١٩ 19
೧೯ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
لِذَلِكَ ٱسْمَعُوا مَشُورَةَ ٱلرَّبِّ ٱلَّتِي قَضَى بِهَا عَلَى أَدُومَ، وَأَفْكَارَهُ ٱلَّتِي ٱفْتَكَرَ بِهَا عَلَى سُكَّانِ تِيمَانَ: إِنَّ صِغَارَ ٱلْغَنَمِ تَسْحَبُهُمْ. إِنَّهُ يَخْرِبُ مَسْكَنَهُمْ عَلَيْهِمْ. ٢٠ 20
೨೦ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
مِنْ صَوْتِ سُقُوطِهِمْ رَجَفَتِ ٱلْأَرْضُ. صَرْخَةٌ سُمِعَ صَوْتُهَا فِي بَحْرِ سُوفَ. ٢١ 21
೨೧ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
هُوَذَا كَنَسْرٍ يَرْتَفِعُ وَيَطِيرُ وَيَبْسُطُ جَنَاحَيْهِ عَلَى بُصْرَةَ، وَيَكُونُ قَلْبُ جَبَابِرَةِ أَدُومَ فِي ذَلِكَ ٱلْيَوْمِ كَقَلْبِ ٱمْرَأَةٍ مَاخِضٍ». ٢٢ 22
೨೨ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
عَنْ دِمَشْقَ: «خَزِيَتْ حَمَاةُ وَأَرْفَادُ. قَدْ ذَابُوا لِأَنَّهُمْ قَدْ سَمِعُوا خَبَرًا رَدِيئًا. فِي ٱلْبَحْرِ ٱضْطِرَابٌ لَا يَسْتَطِيعُ ٱلْهُدُوءَ. ٢٣ 23
೨೩ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
ٱرْتَخَتْ دِمَشْقُ وَٱلْتَفَتَتْ لِلْهَرَبِ. أَمْسَكَتْهَا ٱلرِّعْدَةُ، وَأَخَذَهَا ٱلضِّيقُ وَٱلْأَوْجَاعُ كَمَاخِضٍ. ٢٤ 24
೨೪ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
كَيْفَ لَمْ تُتْرَكِ ٱلْمَدِينَةُ ٱلشَّهِيرَةُ، قَرْيَةُ فَرَحِي؟ ٢٥ 25
೨೫ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
لِذَلِكَ تَسْقُطُ شُبَّانُهَا فِي شَوَارِعِهَا، وَتَهْلِكُ كُلُّ رِجَالِ ٱلْحَرْبِ فِي ذَلِكَ ٱلْيَوْمِ، يَقُولُ رَبُّ ٱلْجُنُودِ. ٢٦ 26
೨೬ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
وَأُشْعِلُ نَارًا فِي سُورِ دِمَشْقَ فَتَأْكُلُ قُصُورَ بَنْهَدَدَ». ٢٧ 27
೨೭ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
عَنْ قِيدَارَ وَعَنْ مَمَالِكِ حَاصُورَ ٱلَّتِي ضَرَبَهَا نَبُوخَذْرَاصَّرُ مَلِكُ بَابِلَ: «هَكَذَا قَالَ ٱلرَّبُّ: قُومُوا ٱصْعَدُوا إِلَى قِيدَارَ. ٱخْرِبُوا بَنِي ٱلْمَشْرِقِ. ٢٨ 28
೨೮ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
يَأْخُذُونَ خِيَامَهُمْ وَغَنَمَهُمْ، وَيَأْخُذُونَ لِأَنْفُسِهِمْ شُقَقَهُمْ وَكُلَّ آنِيَتِهِمْ وَجِمَالَهُمْ، وَيُنَادُونَ إِلَيْهِمِ: ٱلْخَوْفَ مِنْ كُلِّ جَانِبٍ. ٢٩ 29
೨೯“ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
«اُهْرُبُوا. ٱنْهَزِمُوا جِدًّا. تَعَمَّقُوا فِي ٱلسَّكَنِ يَاسُكَّانَ حَاصُورَ، يَقُولُ ٱلرَّبُّ، لِأَنَّ نَبُوخَذْرَاصَّرَ مَلِكَ بَابِلَ قَدْ أَشَارَ عَلَيْكُمْ مَشُورَةً، وَفَكَّرَ عَلَيْكُمْ فِكْرًا. ٣٠ 30
೩೦ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
قُومُوا ٱصْعَدُوا إِلَى أُمَّةٍ مُطْمَئِنَّةٍ سَاكِنَةٍ آمِنَةٍ، يَقُولُ ٱلرَّبُّ، لَا مَصَارِيعَ وَلَا عَوَارِضَ لَهَا. تَسْكُنُ وَحْدَهَا. ٣١ 31
೩೧ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
وَتَكُونُ جِمَالُهُمْ نَهْبًا، وَكَثْرَةُ مَاشِيَتِهِمْ غَنِيمَةً، وَأُذْرِي لِكُلِّ رِيحٍ مَقْصُوصِي ٱلشَّعْرِ مُسْتَدِيرًا، وَآتِي بِهَلَاكِهِمْ مِنْ كُلِّ جِهَاتِهِ، يَقُولُ ٱلرَّبُّ. ٣٢ 32
೩೨ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
وَتَكُونُ حَاصُورُ مَسْكَنَ بَنَاتِ آوَى، وَخَرِبَةً إِلَى ٱلْأَبَدِ. لَا يَسْكُنُ هُنَاكَ إِنْسَانٌ، وَلَا يَتَغَرَّبُ فِيهَا ٱبْنُ آدَمَ». ٣٣ 33
೩೩ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
كَلِمَةُ ٱلرَّبِّ ٱلَّتِي صَارَتْ إِلَى إِرْمِيَا ٱلنَّبِيِّ عَلَى عِيلَامَ، فِي ٱبْتِدَاءِ مُلْكِ صِدْقِيَّا مَلِكِ يَهُوذَا قَائِلَةً: ٣٤ 34
೩೪ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
«هَكَذَا قَالَ رَبُّ ٱلْجُنُودِ: هَأَنَذَا أُحَطِّمُ قَوْسَ عِيلَامَ أَوَّلَ قُوَّتِهِمْ. ٣٥ 35
೩೫“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
وَأَجْلِبُ عَلَى عِيلَامَ أَرْبَعَ رِيَاحٍ مِنْ أَرْبَعَةِ أَطْرَافِ ٱلسَّمَاءِ، وَأُذْرِيهِمْ لِكُلِّ هَذِهِ ٱلرِّيَاحِ وَلَا تَكُونُ أُمَّةٌ إِلَّا وَيَأْتِي إِلَيْهَا مَنْفِيُّو عِيلَامَ. ٣٦ 36
೩೬ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
وَأَجْعَلُ ٱلْعِيلَامِيِّينَ يَرْتَعِبُونَ أَمَامَ أَعْدَائِهِمْ وَأَمَامَ طَالِبِي نُفُوسِهِمْ، وَأَجْلِبُ عَلَيْهِمْ شَرًّا، حُمُوَّ غَضَبِي، يَقُولُ ٱلرَّبُّ. وَأُرْسِلُ وَرَاءَهُمُ ٱلسَّيْفَ حَتَّى أُفْنِيَهُمْ. ٣٧ 37
೩೭ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
وَأَضَعُ كُرْسِيِّي فِي عِيلَامَ، وَأُبِيدُ مِنْ هُنَاكَ ٱلْمَلِكَ وَٱلرُّؤَسَاءَ، يَقُولُ ٱلرَّبُّ. ٣٨ 38
೩೮ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
«وَيَكُونُ فِي آخِرِ ٱلْأَيَّامِ أَنِّي أَرُدُّ سَبْيَ عِيلَامَ، يَقُولُ ٱلرَّبُّ». ٣٩ 39
೩೯ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

< إِرْمِيَا 49 >