< إِرْمِيَا 6 >

«اُهْرُبُوا يَا بَنِي بَنْيَامِينَ مِنْ وَسْطِ أُورُشَلِيمَ، وَٱضْرِبُوا بِٱلْبُوقِ فِي تَقُوعَ، وَعَلَى بَيْتِ هَكَّارِيمَ ٱرْفَعُوا عَلَمَ نَارٍ، لِأَنَّ ٱلشَّرَّ أَشْرَفَ مِنَ ٱلشِّمَالِ وَكَسْرٌ عَظِيمٌ. ١ 1
“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
اَلْجَمِيلَةُ ٱللَّطِيفَةُ ٱبْنَةُ صِهْيَوْنَ أُهْلِكُهَا. ٢ 2
ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
إِلَيْهَا تَأْتِي ٱلرُّعَاةُ وَقُطْعَانُهُمْ. يَنْصِبُونَ عِنْدَهَا خِيَامًا حَوَالَيْهَا. يَرْعَوْنَ كُلُّ وَاحِدٍ فِي مَكَانِهِ». ٣ 3
ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
«قَدِّسُوا عَلَيْهَا حَرْبًا. قُومُوا فَنَصْعَدَ في ٱلظَّهِيرَةِ. وَيْلٌ لَنَا لِأَنَّ ٱلنَّهَارَ مَالَ، لِأَنَّ ظِلَالَ ٱلْمَسَاءِ ٱمْتَدَّتْ. ٤ 4
ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
قُومُوا فَنَصْعَدَ في ٱللَّيْلِ وَنَهْدِمَ قُصُورَهَا». ٥ 5
ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.
«لِأَنَّهُ هَكَذَا قَالَ رَبُّ ٱلْجُنُودِ: ٱقْطَعُوا أَشْجَارًا. أَقِيمُوا حَوْلَ أُورُشَلِيمَ مِتْرَسَةً. هِيَ ٱلْمَدِينَةُ ٱلْمُعَاقَبَةُ. كُلُّهَا ظُلْمٌ فِي وَسَطِهَا. ٦ 6
ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
كَمَا تُنْبِعُ ٱلْعَيْنُ مِيَاهَهَا، هَكَذَا تُنْبِعُ هِيَ شَرَّهَا. ظُلْمٌ وَخَطْفٌ يُسْمَعُ فِيهَا. أَمَامِي دَائِمًا مَرَضٌ وَضَرْبٌ. ٧ 7
ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
تَأَدَّبِي يَا أُورُشَلِيمُ لِئَلَّا تَجْفُوَكِ نَفْسِي. لِئَلَّا أَجْعَلَكِ خَرَابًا، أَرْضًا غَيْرَ مَسْكُونَةٍ. ٨ 8
ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
«هَكَذَا قَالَ رَبُّ ٱلْجُنُودِ: تَعْلِيلًا يُعَلِّلُونَ، كَجَفْنَةٍ، بَقِيَّةَ إِسْرَائِيلَ. رُدَّ يَدَكَ كَقَاطِفٍ إِلَى ٱلسِّلَالِ. ٩ 9
ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
مَنْ أُكَلِّمُهُمْ وَأُنْذِرُهُمْ فَيَسْمَعُوا؟ هَا إِنَّ أُذْنَهُمْ غَلْفَاءُ فَلَا يَقْدِرُونَ أَنْ يَصْغَوْا. هَا إِنَّ كَلِمَةَ ٱلرَّبِّ صَارَتْ لَهُمْ عَارًا. لَا يُسَرُّونَ بِهَا. ١٠ 10
೧೦ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
فَٱمْتَلَأْتُ مِنْ غَيْظِ ٱلرَّبِّ. مَلِلْتُ ٱلطَّاقَةَ. أَسْكُبُهُ عَلَى ٱلْأَطْفَالِ فِي ٱلْخَارِجِ وَعَلَى مَجْلِسِ ٱلشُّبَّانِ مَعًا، لِأَنَّ ٱلرَّجُلَ وَٱلْمَرْأَةَ يُؤْخَذَانِ كِلَاهُمَا، وَٱلشَّيْخَ مَعَ ٱلْمُمْتَلِئِ أَيَّامًا. ١١ 11
೧೧ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
وَتَتَحَوَّلُ بُيُوتُهُمْ إِلَى آخَرِينَ، ٱلْحُقُولُ وَٱلنِّسَاءُ مَعًا، لِأَنِّي أَمُدُّ يَدِي عَلَى سُكَّانِ ٱلْأَرْضِ، يَقُولُ ٱلرَّبُّ. ١٢ 12
೧೨ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
لِأَنَّهُمْ مِنْ صَغِيرِهِمْ إِلَى كَبِيرِهِمْ، كُلُّ وَاحِدٍ مُولَعٌ بِٱلرِّبْحِ. وَمِنَ ٱلنَّبِيِّ إِلَى ٱلْكَاهِنِ، كُلُّ وَاحِدٍ يَعْمَلُ بِٱلْكَذِبِ. ١٣ 13
೧೩ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
وَيَشْفُونَ كَسْرَ بِنْتِ شَعْبِي عَلَى عَثَمٍ قَائِلِينَ: سَلَامٌ، سَلَامٌ. وَلَا سَلَامَ. ١٤ 14
೧೪ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
هَلْ خَزُوا لِأَنَّهُمْ عَمِلُوا رِجْسًا؟ بَلْ لَمْ يَخْزَوْا خِزْيًا وَلَمْ يَعْرِفُوا ٱلْخَجَلَ. لِذَلِكَ يَسْقُطُونَ بَيْنَ ٱلسَّاقِطِينَ. فِي وَقْتِ مُعَاقَبَتِهِمْ يَعْثُرُونَ، قَالَ ٱلرَّبُّ. ١٥ 15
೧೫ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
«هَكَذَا قَالَ ٱلرَّبُّ: قِفُوا عَلَى ٱلطُّرُقِ وَٱنْظُرُوا، وَٱسْأَلُوا عَنِ ٱلسُّبُلِ ٱلْقَدِيمَةِ: أَيْنَ هُوَ ٱلطَّرِيقُ ٱلصَّالِحُ؟ وَسِيرُوا فِيهِ، فَتَجِدُوا رَاحَةً لِنُفُوسِكُمْ. وَلَكِنَّهُمْ قَالُوا: لَا نَسِيرُ فِيهِ! ١٦ 16
೧೬ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
وَأَقَمْتُ عَلَيْكُمْ رُقَبَاءَ قَائِلِينَ: ٱصْغَوْا لِصَوْتِ ٱلْبُوقِ. فَقَالُوا: لَا نَصْغَى! ١٧ 17
೧೭‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
لِذَلِكَ ٱسْمَعُوا يَا أَيُّهَا ٱلشُّعُوبُ، وَٱعْرِفِي أَيَّتُهَا ٱلْجَمَاعَةُ مَا هُوَ بَيْنَهُمْ. ١٨ 18
೧೮ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
اِسْمَعِي أَيَّتُهَا ٱلْأَرْضُ: هَأَنَذَا جَالِبٌ شَرًّا عَلَى هَذَا ٱلشَّعْبِ ثَمَرَ أَفْكَارِهِمْ، لِأَنَّهُمْ لَمْ يَصْغَوْا لِكَلَامِي، وَشَرِيعَتِي رَفَضُوهَا. ١٩ 19
೧೯ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
لِمَاذَا يَأْتِي لِي ٱللُّبَانُ مِنْ شَبَا، وَقَصَبُ ٱلذَّرِيرَةِ مِنْ أَرْضٍ بَعِيدَةٍ؟ مُحْرَقَاتُكُمْ غَيْرُ مَقْبُولَةٍ، وَذَبَائِحُكُمْ لَا تَلُذُّ لِي. ٢٠ 20
೨೦ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
لِذَلِكَ هَكَذَا قَالَ ٱلرَّبُّ: هَأَنَذَا جَاعِلٌ لِهَذَا ٱلشَّعْبِ مَعْثَرَاتٍ فَيَعْثُرُ بِهَا ٱلْآبَاءُ وَٱلْأَبْنَاءُ مَعًا. اَلْجَارُ وَصَاحِبُهُ يَبِيدَانِ. ٢١ 21
೨೧ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
هَكَذَا قَالَ ٱلرَّبُّ: هُوَذَا شَعْبٌ قَادِمٌ مِنْ أَرْضِ ٱلشِّمَالِ، وَأُمَّةٌ عَظِيمَةٌ تَقُومُ مِنْ أَقَاصِي ٱلْأَرْضِ. ٢٢ 22
೨೨“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
تُمْسِكُ ٱلْقَوْسَ وَٱلرُّمْحَ. هِيَ قَاسِيَةٌ لَا تَرْحَمُ. صَوْتُهَا كَٱلْبَحْرِ يَعِجُّ، وَعَلَى خَيْلٍ تَرْكَبُ، مُصْطَفَّةً كَإِنْسَانٍ لِمُحَارَبَتِكِ يَا ٱبْنَةَ صِهْيَوْنَ». ٢٣ 23
೨೩ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
سَمِعْنَا خَبَرَهَا. اِرْتَخَتْ أَيْدِينَا. أَمْسَكَنَا ضِيقٌ وَوَجَعٌ كَٱلْمَاخِضِ. ٢٤ 24
೨೪ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
لَا تَخْرُجُوا إِلَى ٱلْحَقْلِ وَفِي ٱلطَّرِيقِ لَا تَمْشُوا، لِأَنَّ سَيْفَ ٱلْعَدُوِّ خَوْفٌ مِنْ كُلِّ جِهَةٍ. ٢٥ 25
೨೫ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
يَا ٱبْنَةَ شَعْبِي، تَنَطَّقِي بِمِسْحٍ وَتَمَرَّغِي فِي ٱلرَّمَادِ. نَوْحَ وَحِيدٍ ٱصْنَعِي لِنَفْسِكِ مَنَاحَةً مُرَّةً، لِأَنَّ ٱلْمُخَرِّبَ يَأْتِي عَلَيْنَا بَغْتَةً. ٢٦ 26
೨೬ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
«قَدْ جَعَلْتُكَ بُرْجًا فِي شَعْبِي، حِصْنًا، لِتَعْرِفَ وَتَمْتَحِنَ طَرِيقَهُمْ. ٢٧ 27
೨೭ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
كُلُّهُمْ عُصَاةٌ مُتَمَرِّدُونَ سَاعُونَ فِي ٱلْوِشَايَةِ. هُمْ نُحَاسٌ وَحَدِيدٌ. كُلُّهُمْ مُفْسِدُونَ. ٢٨ 28
೨೮ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
اِحْتَرَقَ ٱلْمِنْفَاخُ مِنَ ٱلنَّارِ. فَنِيَ ٱلرِّصَاصُ. بَاطِلًا صَاغَ ٱلصَّائِغُ، وَٱلْأَشْرَارُ لَا يُفْرَزُونَ. ٢٩ 29
೨೯ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
فِضَّةً مَرْفُوضَةً يُدْعَوْنَ. لِأَنَّ ٱلرَّبَّ قَدْ رَفَضَهُمْ». ٣٠ 30
೩೦ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.

< إِرْمِيَا 6 >