< إِرْمِيَا 8 >

«فِي ذَلِكَ ٱلزَّمَانِ، يَقُولُ ٱلرَّبُّ، يُخْرِجُونَ عِظَامَ مُلُوكِ يَهُوذَا وَعِظَامَ رُؤَسَائِهِ وَعِظَامَ ٱلْكَهَنَةِ وَعِظَامَ ٱلْأَنْبِيَاءِ وَعِظَامَ سُكَّانِ أُورُشَلِيمَ مِنْ قُبُورِهِمْ، ١ 1
ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
وَيَبْسُطُونَهَا لِلشَّمْسِ وَلِلْقَمَرِ وَلِكُلِّ جُنُودِ ٱلسَّمَاوَاتِ ٱلَّتِي أَحَبُّوهَا وَٱلَّتِي عَبَدُوهَا وَٱلَّتِي سَارُوا وَرَاءَهَا وَٱلَّتِي ٱسْتَشَارُوهَا وَالَّتِي سَجَدُوا لَهَا. لَا تُجْمَعُ وَلَا تُدْفَنُ، بَلْ تَكُونُ دِمْنَةً عَلَى وَجْهِ ٱلْأَرْضِ. ٢ 2
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
وَيُخْتَارُ ٱلْمَوْتُ عَلَى ٱلْحَيَاةِ عِنْدَ كُلِّ ٱلْبَقِيَّةِ ٱلْبَاقِيَةِ مِنْ هَذِهِ ٱلْعَشِيرَةِ ٱلشِّرِّيرَةِ ٱلْبَاقِيَةِ فِي كُلِّ ٱلْأَمَاكِنِ ٱلَّتِي طَرَدْتُهُمْ إِلَيْهَا، يَقُولُ رَبُّ ٱلْجُنُودِ. ٣ 3
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
«وَتَقُولُ لَهُمْ: هَكَذَا قَالَ ٱلرَّبُّ: هَلْ يَسْقُطُونَ وَلَا يَقُومُونَ، أَوْ يَرْتَدُّ أَحَدٌ وَلَا يَرْجِعُ؟ ٤ 4
ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
فَلِمَاذَا ٱرْتَدَّ هَذَا ٱلشَّعْبُ فِي أُورُشَلِيمَ ٱرْتِدَادًا دَائِمًا؟ تَمَسَّكُوا بِٱلْمَكْرِ. أَبَوْا أَنْ يَرْجِعُوا. ٥ 5
ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
صَغَيْتُ وَسَمِعْتُ. بِغَيْرِ ٱلْمُسْتَقِيمِ يَتَكَلَّمُونَ. لَيْسَ أَحَدٌ يَتُوبُ عَنْ شَرِّهِ قَائِلًا: مَاذَا عَمِلْتُ؟ كُلُّ وَاحِدٍ رَجَعَ إِلَى مَسْرَاهُ كَفَرَسٍ ثَائِرٍ فِي ٱلْحَرْبِ. ٦ 6
ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
بَلِ ٱللَّقْلَقُ فِي ٱلسَّمَاوَاتِ يَعْرِفُ مِيعَادَهُ، وَٱلْيَمَامَةُ وَٱلسُّنُوْنَةُ ٱلْمُزَقْزِقَةُ حَفِظَتَا وَقْتَ مَجِيئِهِمَا. أَمَّا شَعْبِي فَلَمْ يَعْرِفْ قَضَاءَ ٱلرَّبِّ! ٧ 7
ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
كَيْفَ تَقُولُونَ: نَحْنُ حُكَمَاءُ وَشَرِيعَةُ ٱلرَّبِّ مَعَنَا؟ حَقًّا إِنَّهُ إِلَى ٱلْكَذِبِ حَوَّلَهَا قَلَمُ ٱلْكَتَبَةِ ٱلْكَاذِبُ. ٨ 8
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
خَزِيَ ٱلْحُكَمَاءُ. ٱرْتَاعُوا وَأُخِذُوا. هَا قَدْ رَفَضُوا كَلِمَةَ ٱلرَّبِّ، فَأَيَّةُ حِكْمَةٍ لَهُمْ؟ ٩ 9
ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
لِذَلِكَ أُعْطِي نِسَاءَهُمْ لِآخَرِينَ، وَحُقُولَهُمْ لِمَالِكِينَ، لِأَنَّهُمْ مِنَ ٱلصَّغِيرِ إِلَى ٱلْكَبِيرِ، كُلُّ وَاحِدٍ مُولَعٌ بِٱلرِّبْحِ. مِنَ ٱلنَّبِيِّ إِلَى ٱلْكَاهِنِ، كُلُّ وَاحِدٍ يَعْمَلُ بِٱلْكَذِبِ. ١٠ 10
೧೦ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
وَيَشْفُونَ كَسْرَ بِنْتِ شَعْبِي عَلَى عَثَمٍ، قَائِلِينَ: سَلَامٌ، سَلَامٌ. وَلَا سَلَامَ. ١١ 11
೧೧ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
هَلْ خَزُوا لِأَنَّهُمْ عَمِلُوا رِجْسًا؟ بَلْ لَمْ يَخْزَوْا خِزْيًا، وَلَمْ يَعْرِفُوا ٱلْخَجَلَ! لِذَلِكَ يَسْقُطُونَ بَيْنَ ٱلسَّاقِطِينَ. فِي وَقْتِ مُعَاقَبَتِهِمْ يَعْثُرُونَ، قَالَ ٱلرَّبُّ. ١٢ 12
೧೨ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
«نَزْعًا أَنْزِعُهُمْ، يَقُولُ ٱلرَّبُّ. لَا عِنَبَ فِي ٱلْجَفْنَةِ، وَلَا تِينَ فِي ٱلتِّينَةِ، وَٱلْوَرَقُ ذَبُلَ، وَأُعْطِيهِمْ مَا يَزُولُ عَنْهُمْ». ١٣ 13
೧೩ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
لِمَاذَا نَحْنُ جُلُوسٌ؟ اِجْتَمِعُوا فَلْنَدْخُلْ إِلَى ٱلْمُدُنِ ٱلْحَصِينَةِ وَنَصْمُتْ هُنَاكَ. لِأَنَّ ٱلرَّبَّ إِلَهَنَا قَدْ أَصْمَتَنَا وَأَسْقَانَا مَاءَ ٱلْعَلْقَمِ، لِأَنَّنَا قَدْ أَخْطَأْنَا إِلَى ٱلرَّبِّ. ١٤ 14
೧೪ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
اِنْتَظَرْنَا ٱلسَّلَامَ وَلَمْ يَكُنْ خَيْرٌ، وَزَمَانَ ٱلشِّفَاءِ وَإِذَا رُعْبٌ. ١٥ 15
೧೫ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
مِنْ دَانَ سُمِعَتْ حَمْحَمَةُ خَيْلِهِ. عِنْدَ صَوْتِ صَهِيلِ جِيَادِهِ ٱرْتَجَفَتْ كُلُّ ٱلْأَرْضِ. فَأَتَوْا وَأَكَلُوا ٱلْأَرْضَ وَمِلْأَهَا، ٱلْمَدِينَةَ وَٱلسَّاكِنِينَ فِيهَا. ١٦ 16
೧೬ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
«لِأَنِّي هَأَنَذَا مُرْسِلٌ عَلَيْكُمْ حَيَّاتٍ، أَفَاعِيَ لَا تُرْقَى، فَتَلْدَغُكُمْ، يَقُولُ ٱلرَّبُّ». ١٧ 17
೧೭ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
مَنْ مُفَرِّجٌ عَنِّي ٱلْحُزْنَ؟ قَلْبِي فِيَّ سَقِيمٌ. ١٨ 18
೧೮ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
هُوَذَا صَوْتُ ٱسْتِغَاثَةِ بِنْتِ شَعْبِي مِنْ أَرْضٍ بَعِيدَةٍ: «أَلَعَلَّ ٱلرَّبَّ لَيْسَ فِي صِهْيَوْنَ، أَوْ مَلِكَهَا لَيْسَ فِيهَا؟» «لِمَاذَا أَغَاظُونِي بِمَنْحُوتَاتِهِمْ، بِأَبَاطِيلَ غَرِيبَةٍ؟» ١٩ 19
೧೯ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
«مَضَى ٱلْحَصَادُ، ٱنْتَهَى ٱلصَّيْفُ، وَنَحْنُ لَمْ نَخْلُصْ!» ٢٠ 20
೨೦ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
مِنْ أَجْلِ سَحْقِ بِنْتِ شَعْبِي ٱنْسَحَقْتُ. حَزِنْتُ. أَخَذَتْنِي دَهْشَةٌ. ٢١ 21
೨೧ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
أَلَيْسَ بَلَسَانٌ فِي جِلْعَادَ، أَمْ لَيْسَ هُنَاكَ طَبِيبٌ؟ فَلِمَاذَا لَمْ تُعْصَبْ بِنْتُ شَعْبِي؟ ٢٢ 22
೨೨ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?

< إِرْمِيَا 8 >