< إِرْمِيَا 8 >

«فِي ذَلِكَ ٱلزَّمَانِ، يَقُولُ ٱلرَّبُّ، يُخْرِجُونَ عِظَامَ مُلُوكِ يَهُوذَا وَعِظَامَ رُؤَسَائِهِ وَعِظَامَ ٱلْكَهَنَةِ وَعِظَامَ ٱلْأَنْبِيَاءِ وَعِظَامَ سُكَّانِ أُورُشَلِيمَ مِنْ قُبُورِهِمْ، ١ 1
“‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.
وَيَبْسُطُونَهَا لِلشَّمْسِ وَلِلْقَمَرِ وَلِكُلِّ جُنُودِ ٱلسَّمَاوَاتِ ٱلَّتِي أَحَبُّوهَا وَٱلَّتِي عَبَدُوهَا وَٱلَّتِي سَارُوا وَرَاءَهَا وَٱلَّتِي ٱسْتَشَارُوهَا وَالَّتِي سَجَدُوا لَهَا. لَا تُجْمَعُ وَلَا تُدْفَنُ، بَلْ تَكُونُ دِمْنَةً عَلَى وَجْهِ ٱلْأَرْضِ. ٢ 2
ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.
وَيُخْتَارُ ٱلْمَوْتُ عَلَى ٱلْحَيَاةِ عِنْدَ كُلِّ ٱلْبَقِيَّةِ ٱلْبَاقِيَةِ مِنْ هَذِهِ ٱلْعَشِيرَةِ ٱلشِّرِّيرَةِ ٱلْبَاقِيَةِ فِي كُلِّ ٱلْأَمَاكِنِ ٱلَّتِي طَرَدْتُهُمْ إِلَيْهَا، يَقُولُ رَبُّ ٱلْجُنُودِ. ٣ 3
ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
«وَتَقُولُ لَهُمْ: هَكَذَا قَالَ ٱلرَّبُّ: هَلْ يَسْقُطُونَ وَلَا يَقُومُونَ، أَوْ يَرْتَدُّ أَحَدٌ وَلَا يَرْجِعُ؟ ٤ 4
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?
فَلِمَاذَا ٱرْتَدَّ هَذَا ٱلشَّعْبُ فِي أُورُشَلِيمَ ٱرْتِدَادًا دَائِمًا؟ تَمَسَّكُوا بِٱلْمَكْرِ. أَبَوْا أَنْ يَرْجِعُوا. ٥ 5
ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.
صَغَيْتُ وَسَمِعْتُ. بِغَيْرِ ٱلْمُسْتَقِيمِ يَتَكَلَّمُونَ. لَيْسَ أَحَدٌ يَتُوبُ عَنْ شَرِّهِ قَائِلًا: مَاذَا عَمِلْتُ؟ كُلُّ وَاحِدٍ رَجَعَ إِلَى مَسْرَاهُ كَفَرَسٍ ثَائِرٍ فِي ٱلْحَرْبِ. ٦ 6
ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
بَلِ ٱللَّقْلَقُ فِي ٱلسَّمَاوَاتِ يَعْرِفُ مِيعَادَهُ، وَٱلْيَمَامَةُ وَٱلسُّنُوْنَةُ ٱلْمُزَقْزِقَةُ حَفِظَتَا وَقْتَ مَجِيئِهِمَا. أَمَّا شَعْبِي فَلَمْ يَعْرِفْ قَضَاءَ ٱلرَّبِّ! ٧ 7
ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.
كَيْفَ تَقُولُونَ: نَحْنُ حُكَمَاءُ وَشَرِيعَةُ ٱلرَّبِّ مَعَنَا؟ حَقًّا إِنَّهُ إِلَى ٱلْكَذِبِ حَوَّلَهَا قَلَمُ ٱلْكَتَبَةِ ٱلْكَاذِبُ. ٨ 8
“‘“ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.
خَزِيَ ٱلْحُكَمَاءُ. ٱرْتَاعُوا وَأُخِذُوا. هَا قَدْ رَفَضُوا كَلِمَةَ ٱلرَّبِّ، فَأَيَّةُ حِكْمَةٍ لَهُمْ؟ ٩ 9
ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.
لِذَلِكَ أُعْطِي نِسَاءَهُمْ لِآخَرِينَ، وَحُقُولَهُمْ لِمَالِكِينَ، لِأَنَّهُمْ مِنَ ٱلصَّغِيرِ إِلَى ٱلْكَبِيرِ، كُلُّ وَاحِدٍ مُولَعٌ بِٱلرِّبْحِ. مِنَ ٱلنَّبِيِّ إِلَى ٱلْكَاهِنِ، كُلُّ وَاحِدٍ يَعْمَلُ بِٱلْكَذِبِ. ١٠ 10
ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.
وَيَشْفُونَ كَسْرَ بِنْتِ شَعْبِي عَلَى عَثَمٍ، قَائِلِينَ: سَلَامٌ، سَلَامٌ. وَلَا سَلَامَ. ١١ 11
ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.
هَلْ خَزُوا لِأَنَّهُمْ عَمِلُوا رِجْسًا؟ بَلْ لَمْ يَخْزَوْا خِزْيًا، وَلَمْ يَعْرِفُوا ٱلْخَجَلَ! لِذَلِكَ يَسْقُطُونَ بَيْنَ ٱلسَّاقِطِينَ. فِي وَقْتِ مُعَاقَبَتِهِمْ يَعْثُرُونَ، قَالَ ٱلرَّبُّ. ١٢ 12
ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.
«نَزْعًا أَنْزِعُهُمْ، يَقُولُ ٱلرَّبُّ. لَا عِنَبَ فِي ٱلْجَفْنَةِ، وَلَا تِينَ فِي ٱلتِّينَةِ، وَٱلْوَرَقُ ذَبُلَ، وَأُعْطِيهِمْ مَا يَزُولُ عَنْهُمْ». ١٣ 13
“‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’”
لِمَاذَا نَحْنُ جُلُوسٌ؟ اِجْتَمِعُوا فَلْنَدْخُلْ إِلَى ٱلْمُدُنِ ٱلْحَصِينَةِ وَنَصْمُتْ هُنَاكَ. لِأَنَّ ٱلرَّبَّ إِلَهَنَا قَدْ أَصْمَتَنَا وَأَسْقَانَا مَاءَ ٱلْعَلْقَمِ، لِأَنَّنَا قَدْ أَخْطَأْنَا إِلَى ٱلرَّبِّ. ١٤ 14
ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.
اِنْتَظَرْنَا ٱلسَّلَامَ وَلَمْ يَكُنْ خَيْرٌ، وَزَمَانَ ٱلشِّفَاءِ وَإِذَا رُعْبٌ. ١٥ 15
ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.
مِنْ دَانَ سُمِعَتْ حَمْحَمَةُ خَيْلِهِ. عِنْدَ صَوْتِ صَهِيلِ جِيَادِهِ ٱرْتَجَفَتْ كُلُّ ٱلْأَرْضِ. فَأَتَوْا وَأَكَلُوا ٱلْأَرْضَ وَمِلْأَهَا، ٱلْمَدِينَةَ وَٱلسَّاكِنِينَ فِيهَا. ١٦ 16
ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.
«لِأَنِّي هَأَنَذَا مُرْسِلٌ عَلَيْكُمْ حَيَّاتٍ، أَفَاعِيَ لَا تُرْقَى، فَتَلْدَغُكُمْ، يَقُولُ ٱلرَّبُّ». ١٧ 17
“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.
مَنْ مُفَرِّجٌ عَنِّي ٱلْحُزْنَ؟ قَلْبِي فِيَّ سَقِيمٌ. ١٨ 18
ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.
هُوَذَا صَوْتُ ٱسْتِغَاثَةِ بِنْتِ شَعْبِي مِنْ أَرْضٍ بَعِيدَةٍ: «أَلَعَلَّ ٱلرَّبَّ لَيْسَ فِي صِهْيَوْنَ، أَوْ مَلِكَهَا لَيْسَ فِيهَا؟» «لِمَاذَا أَغَاظُونِي بِمَنْحُوتَاتِهِمْ، بِأَبَاطِيلَ غَرِيبَةٍ؟» ١٩ 19
ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?
«مَضَى ٱلْحَصَادُ، ٱنْتَهَى ٱلصَّيْفُ، وَنَحْنُ لَمْ نَخْلُصْ!» ٢٠ 20
“ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”
مِنْ أَجْلِ سَحْقِ بِنْتِ شَعْبِي ٱنْسَحَقْتُ. حَزِنْتُ. أَخَذَتْنِي دَهْشَةٌ. ٢١ 21
ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.
أَلَيْسَ بَلَسَانٌ فِي جِلْعَادَ، أَمْ لَيْسَ هُنَاكَ طَبِيبٌ؟ فَلِمَاذَا لَمْ تُعْصَبْ بِنْتُ شَعْبِي؟ ٢٢ 22
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?

< إِرْمِيَا 8 >