< إِرْمِيَا 9 >

يَا لَيْتَ رَأْسِي مَاءٌ، وَعَيْنَيَّ يَنْبُوعُ دُمُوعٍ، فَأَبْكِيَ نَهَارًا وَلَيْلًا قَتْلَى بِنْتِ شَعْبِي. ١ 1
ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.
يَا لَيْتَ لِي فِي ٱلْبَرِّيَّةِ مَبِيتَ مُسَافِرِينَ، فَأَتْرُكَ شَعْبِي وَأَنْطَلِقَ مِنْ عِنْدِهِمْ، لِأَنَّهُمْ جَمِيعًا زُنَاةٌ، جَمَاعَةُ خَائِنِينَ. ٢ 2
ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.
«يَمُدُّونَ أَلْسِنَتَهُمْ كَقِسِيِّهِمْ لِلْكَذِبِ. لَا لِلْحَقِّ قَوُوا فِي ٱلْأَرْضِ. لِأَنَّهُمْ خَرَجُوا مِنْ شَرٍّ إِلَى شَرٍّ، وَإِيَّايَ لَمْ يَعْرِفُوا، يَقُولُ ٱلرَّبُّ. ٣ 3
“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
اِحْتَرِزُوا كُلُّ وَاحِدٍ مِنْ صَاحِبِهِ، وَعَلَى كُلِّ أَخٍ لَا تَتَّكِلُوا، لِأَنَّ كُلَّ أَخٍ يَعْقِبُ عَقِبًا، وَكُلَّ صَاحِبٍ يَسْعَى فِي ٱلْوِشَايَةِ. ٤ 4
“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.
وَيَخْتِلُ ٱلْإِنْسَانُ صَاحِبَهُ وَلَا يَتَكَلَّمُونَ بِٱلْحَقِّ. عَلَّمُوا أَلْسِنَتَهُمُ ٱلتَّكَلُّمَ بِٱلْكَذِبِ، وَتَعِبُوا فِي ٱلِٱفْتِرَاءِ. ٥ 5
ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.
مَسْكَنُكَ فِي وَسْطِ ٱلْمَكْرِ. بِٱلْمَكْرِ أَبَوْا أَنْ يَعْرِفُونِي، يَقُولُ ٱلرَّبُّ. ٦ 6
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.
«لِذَلِكَ هَكَذَا قَالَ رَبُّ ٱلْجُنُودِ: هَأَنَذَا أُنَقِّيهِمْ وَأَمْتَحِنُهُمْ. لِأَنِّي مَاذَا أَعْمَلُ مِنْ أَجْلِ بِنْتِ شَعْبِي؟ ٧ 7
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?
لِسَانُهُمْ سَهْمٌ قَتَّالٌ يَتَكَلَّمُ بِٱلْغِشِّ. بِفَمِهِ يُكَلِّمُ صَاحِبَهُ بِسَلَامٍ، وَفِي قَلْبِهِ يَضَعُ لَهُ كَمِينًا. ٨ 8
ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.
أَفَمَا أُعَاقِبُهُمْ عَلَى هَذِهِ، يَقُولُ ٱلرَّبُّ؟ أَمْ لَا تَنْتَقِمُ نَفْسِي مِنْ أُمَّةٍ كَهَذِهِ؟». ٩ 9
ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”
عَلَى ٱلْجِبَالِ أَرْفَعُ بُكَاءً وَمَرْثَاةً، وَعَلَى مَرَاعِي ٱلْبَرِّيَّةِ نَدْبًا، لِأَنَّهَا ٱحْتَرَقَتْ، فَلَا إِنْسَانَ عَابِرٌ وَلَا يُسْمَعُ صَوْتُ ٱلْمَاشِيَةِ. مِنْ طَيْرِ ٱلسَّمَاوَاتِ إِلَى ٱلْبَهَائِمِ هَرَبَتْ مَضَتْ. ١٠ 10
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.
«وَأَجْعَلُ أُورُشَلِيمَ رُجَمًا وَمَأْوَى بَنَاتِ آوَى، وَمُدُنَ يَهُوذَا أَجْعَلُهَا خَرَابًا بِلَا سَاكِنٍ». ١١ 11
ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.
مَنْ هُوَ ٱلْإِنْسَانُ ٱلْحَكِيمُ ٱلَّذِي يَفْهَمُ هَذِهِ، وَٱلَّذِي كَلَّمَهُ فَمُ ٱلرَّبِّ، فَيُخْبِرَ بِهَا؟ لِمَاذَا بَادَتِ ٱلْأَرْضُ وَٱحْتَرَقَتْ كَبَرِّيَّةٍ بِلَا عَابِرٍ؟ ١٢ 12
ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?
فَقَالَ ٱلرَّبُّ: «عَلَى تَرْكِهِمْ شَرِيعَتِي ٱلَّتِي جَعَلْتُهَا أَمَامَهُمْ، وَلَمْ يَسْمَعُوا لِصَوْتِي وَلَمْ يَسْلُكُوا بِهَا. ١٣ 13
ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,
بَلْ سَلَكُوا وَرَاءَ عِنَادِ قُلُوبِهِمْ وَوَرَاءَ ٱلْبَعْلِيمِ ٱلَّتِي عَلَّمَهُمْ إِيَّاهَا آبَاؤُهُمْ. ١٤ 14
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”
لِذَلِكَ هَكَذَا قَالَ رَبُّ ٱلْجُنُودِ إِلَهُ إِسْرَائِيلَ: هَأَنَذَا أُطْعِمُ هَذَا ٱلشَّعْبَ أَفْسَنْتِينًا وَأَسْقِيهِمْ مَاءَ ٱلْعَلْقَمِ، ١٥ 15
ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.
وَأُبَدِّدُهُمْ فِي أُمَمٍ لَمْ يَعْرِفُوهَا هُمْ وَلَا آبَاؤُهُمْ، وَأُطْلِقُ وَرَاءَهُمُ ٱلسَّيْفَ حَتَّى أُفْنِيَهُمْ. ١٦ 16
ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”
«هَكَذَا قَالَ رَبُّ ٱلْجُنُودِ: تَأَمَّلُوا وَٱدْعُوا ٱلنَّادِبَاتِ فَيَأْتِينَ، وَأَرْسِلُوا إِلَى ٱلْحَكِيمَاتِ فَيُقْبِلْنَ ١٧ 17
ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.
وَيُسْرِعْنَ وَيَرْفَعْنَ عَلَيْنَا مَرْثَاةً، فَتَذْرِفَ أَعْيُنُنَا دُمُوعًا وَتَفِيضَ أَجْفَانُنَا مَاءً. ١٨ 18
ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
لِأَنَّ صَوْتَ رِثَايَةٍ سُمِعَ مِنْ صِهْيَوْنَ: كَيْفَ أُهْلِكْنَا؟ خَزِينَا جِدًّا لِأَنَّنَا تَرَكْنَا ٱلْأَرْضَ، لِأَنَّهُمْ هَدَمُوا مَسَاكِنَنَا». ١٩ 19
‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’”
بَلِ ٱسْمَعْنَ أَيَّتُهَا ٱلنِّسَاءُ كَلِمَةَ ٱلرَّبِّ، وَلْتَقْبَلْ آذَانُكُنَّ كَلِمَةَ فَمِهِ، وَعَلِّمْنَ بَنَاتِكُنَّ ٱلرِّثَايَةَ، وَٱلْمَرْأَةُ صَاحِبَتَهَا ٱلنَّدْبَ! ٢٠ 20
ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
لِأَنَّ ٱلْمَوْتَ طَلَعَ إِلَى كُوَانَا، دَخَلَ قُصُورَنَا لِيَقْطَعَ ٱلْأَطْفَالَ مِنْ خَارِجٍ، وَٱلشُّبَّانَ مِنَ ٱلسَّاحَاتِ. ٢١ 21
ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.
تَكَلَّمَ: «هَكَذَا يَقُولُ ٱلرَّبُّ: وَتَسْقُطُ جُثَّةُ ٱلْإِنْسَانِ كَدِمْنَةٍ عَلَى وَجْهِ ٱلْحَقْلِ، وَكَقَبْضَةٍ وَرَاءَ ٱلْحَاصِدِ وَلَيْسَ مَنْ يَجْمَعُ! ٢٢ 22
ಯೆಹೋವ ದೇವರು ನನಗೆ ಹೀಗೆಂದರು: “‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’”
«هَكَذَا قَالَ ٱلرَّبُّ: لَا يَفْتَخِرَنَّ ٱلْحَكِيمُ بِحِكْمَتِهِ، وَلَا يَفْتَخِرِ ٱلْجَبَّارُ بِجَبَرُوتِهِ، وَلَا يَفْتَخِرِ ٱلْغَنِيُّ بِغِنَاهُ. ٢٣ 23
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.
بَلْ بِهَذَا لِيَفْتَخِرَنَّ ٱلْمُفْتَخِرُ: بِأَنَّهُ يَفْهَمُ وَيَعْرِفُنِي أَنِّي أَنَا ٱلرَّبُّ ٱلصَّانِعُ رَحْمَةً وَقَضَاءً وَعَدْلًا فِي ٱلْأَرْضِ، لِأَنِّي بِهَذِهِ أُسَرُّ، يَقُولُ ٱلرَّبُّ. ٢٤ 24
ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
«هَا أَيَّامٌ تَأْتِي، يَقُولُ ٱلرَّبُّ، وَأُعَاقِبُ كُلَّ مَخْتُونٍ وَأَغْلَفَ. ٢٥ 25
“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
مِصْرَ وَيَهُوذَا وَأَدُومَ وَبَنِي عَمُّونَ وَمُوآبَ، وَكُلَّ مَقْصُوصِي ٱلشَّعْرِ مُسْتَدِيرًا ٱلسَّاكِنِينَ فِي ٱلْبَرِّيَّةِ، لِأَنَّ كُلَّ ٱلْأُمَمِ غُلْفٌ، وَكُلَّ بَيْتِ إِسْرَائِيلَ غُلْفُ ٱلْقُلُوبِ». ٢٦ 26

< إِرْمِيَا 9 >