< أَيُّوبَ 28 >

«لِأَنَّهُ يُوجَدُ لِلْفِضَّةِ مَعْدَنٌ، وَمَوْضِعٌ لِلذَّهَبِ حَيْثُ يُمَحِّصُونَهُ. ١ 1
“ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.
ٱلْحَدِيدُ يُسْتَخْرَجُ مِنَ ٱلتُّرَابِ، وَٱلْحَجَرُ يَسْكُبُ نُحَاسًا. ٢ 2
ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
قَدْ جَعَلَ لِلظُّلْمَةِ نَهَايَةً، وَإِلَى كُلِّ طَرَفٍ هُوَ يَفْحَصُ. حَجَرَ ٱلظُّلْمَةِ وَظِلَّ ٱلْمَوْتِ. ٣ 3
ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
حَفَرَ مَنْجَمًا بَعِيدًا عَنِ ٱلسُّكَّانِ. بِلَا مَوْطِئٍ لِلْقَدَمِ، مُتَدَلِّينَ بَعِيدِينَ مِنَ ٱلنَّاسِ يَتَدَلْدَلُونَ. ٤ 4
ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
أَرْضٌ يَخْرُجُ مِنْهَا ٱلْخُبْزُ، أَسْفَلُهَا يَنْقَلِبُ كَمَا بِٱلنَّارِ. ٥ 5
ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.
حِجَارَتُهَا هِيَ مَوْضِعُ ٱلْيَاقُوتِ ٱلْأَزْرَقِ، وَفِيهَا تُرَابُ ٱلذَّهَبِ. ٦ 6
ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.
سَبِيلٌ لَمْ يَعْرِفْهُ كَاسِرٌ، وَلَمْ تُبْصِرْهُ عَيْنُ بَاشِقٍ، ٧ 7
ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.
وَلَمْ تَدُسْهُ أَجْرَاءُ ٱلسَّبْعِ، وَلَمْ يَعْدُهُ ٱلزَّائِرُ. ٨ 8
ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.
إِلَى ٱلصَّوَّانِ يَمُدُّ يَدَهُ. يَقْلِبُ ٱلْجِبَالَ مِنْ أُصُولِهَا. ٩ 9
ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
يَنْقُرُ فِي ٱلصُّخُورِ سَرَبًا، وَعَيْنُهُ تَرَى كُلَّ ثَمِينٍ. ١٠ 10
೧೦ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.
يَمْنَعُ رَشْحَ ٱلْأَنْهَارِ، وَأَبْرَزَ ٱلْخَفِيَّاتِ إِلَى ٱلنُّورِ. ١١ 11
೧೧ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.
«أَمَّا ٱلْحِكْمَةُ فَمِنْ أَيْنَ تُوجَدُ، وَأَيْنَ هُوَ مَكَانُ ٱلْفَهْمِ؟ ١٢ 12
೧೨ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
لَا يَعْرِفُ ٱلْإِنْسَانُ قِيمَتَهَا وَلَا تُوجَدُ فِي أَرْضِ ٱلْأَحْيَاءِ. ١٣ 13
೧೩ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
ٱلْغَمْرُ يَقُولُ: لَيْسَتْ هِيَ فِيَّ، وَٱلْبَحْرُ يَقُولُ: لَيْسَتْ هِيَ عِنْدِي. ١٤ 14
೧೪ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.
لَا يُعْطَى ذَهَبٌ خَالِصٌ بَدَلَهَا، وَلَا تُوزَنُ فِضَّةٌ ثَمَنًا لَهَا. ١٥ 15
೧೫ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.
لَا تُوزَنُ بِذَهَبِ أُوفِيرَ أَوْ بِٱلْجَزْعِ ٱلْكَرِيمِ أَوِ ٱلْيَاقُوتِ ٱلْأَزْرَقِ. ١٦ 16
೧೬ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.
لَا يُعَادِلُهَا ٱلذَّهَبُ وَلَا ٱلزُّجَاجُ، وَلَا تُبْدَلُ بِإِنَاءِ ذَهَبٍ إِبْرِيزٍ. ١٧ 17
೧೭ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
لَا يُذْكَرُ ٱلْمَرْجَانُ أَوِ ٱلْبَلُّوْرُ، وَتَحْصِيلُ ٱلْحِكْمَةِ خَيْرٌ مِنَ ٱللَّآلِئِ. ١٨ 18
೧೮ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
لَا يُعَادِلُهَا يَاقُوتُ كُوشَ ٱلْأَصْفَرُ، وَلَا تُوزَنُ بِٱلذَّهَبِ ٱلْخَالِصِ. ١٩ 19
೧೯ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.
«فَمِنْ أَيْنَ تَأْتِي ٱلْحِكْمَةُ، وَأَيْنَ هُوَ مَكَانُ ٱلْفَهْمِ؟ ٢٠ 20
೨೦ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
إِذْ أُخْفِيَتْ عَنْ عُيُونِ كُلِّ حَيٍّ، وَسُتِرَتْ عَنْ طَيْرِ ٱلسَّمَاءِ. ٢١ 21
೨೧ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
اَلْهَلَاكُ وَٱلْمَوْتُ يَقُولَانِ: بِآذَانِنَا قَدْ سَمِعْنَا خَبَرَهَا. ٢٢ 22
೨೨ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.
ٱللهُ يَفْهَمُ طَرِيقَهَا، وَهُوَ عَالِمٌ بِمَكَانِهَا. ٢٣ 23
೨೩ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
لِأَنَّهُ هُوَ يَنْظُرُ إِلَى أَقَاصِي ٱلْأَرْضِ. تَحْتَ كُلِّ ٱلسَّمَاوَاتِ يَرَى. ٢٤ 24
೨೪ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.
لِيَجْعَلَ لِلرِّيحِ وَزْنًا، وَيُعَايِرَ ٱلْمِيَاهَ بِمِقْيَاسٍ. ٢٥ 25
೨೫ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.
لَمَّا جَعَلَ لِلْمَطَرِ فَرِيضَةً، وَمَذْهَبًا لِلصَّوَاعِقِ، ٢٦ 26
೨೬ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,
حِينَئِذٍ رَآهَا وَأَخْبَرَ بِهَا، هَيَّأَهَا وَأَيْضًا بَحَثَ عَنْهَا، ٢٧ 27
೨೭ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.
وَقَالَ لِلْإِنْسَانِ: هُوَذَا مَخَافَةُ ٱلرَّبِّ هِيَ ٱلْحِكْمَةُ، وَٱلْحَيَدَانُ عَنِ ٱلشَّرِّ هُوَ ٱلْفَهْمُ». ٢٨ 28
೨೮ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

< أَيُّوبَ 28 >