< أَيُّوبَ 28 >

«لِأَنَّهُ يُوجَدُ لِلْفِضَّةِ مَعْدَنٌ، وَمَوْضِعٌ لِلذَّهَبِ حَيْثُ يُمَحِّصُونَهُ. ١ 1
ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
ٱلْحَدِيدُ يُسْتَخْرَجُ مِنَ ٱلتُّرَابِ، وَٱلْحَجَرُ يَسْكُبُ نُحَاسًا. ٢ 2
ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
قَدْ جَعَلَ لِلظُّلْمَةِ نَهَايَةً، وَإِلَى كُلِّ طَرَفٍ هُوَ يَفْحَصُ. حَجَرَ ٱلظُّلْمَةِ وَظِلَّ ٱلْمَوْتِ. ٣ 3
ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
حَفَرَ مَنْجَمًا بَعِيدًا عَنِ ٱلسُّكَّانِ. بِلَا مَوْطِئٍ لِلْقَدَمِ، مُتَدَلِّينَ بَعِيدِينَ مِنَ ٱلنَّاسِ يَتَدَلْدَلُونَ. ٤ 4
ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
أَرْضٌ يَخْرُجُ مِنْهَا ٱلْخُبْزُ، أَسْفَلُهَا يَنْقَلِبُ كَمَا بِٱلنَّارِ. ٥ 5
ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
حِجَارَتُهَا هِيَ مَوْضِعُ ٱلْيَاقُوتِ ٱلْأَزْرَقِ، وَفِيهَا تُرَابُ ٱلذَّهَبِ. ٦ 6
ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
سَبِيلٌ لَمْ يَعْرِفْهُ كَاسِرٌ، وَلَمْ تُبْصِرْهُ عَيْنُ بَاشِقٍ، ٧ 7
ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
وَلَمْ تَدُسْهُ أَجْرَاءُ ٱلسَّبْعِ، وَلَمْ يَعْدُهُ ٱلزَّائِرُ. ٨ 8
ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
إِلَى ٱلصَّوَّانِ يَمُدُّ يَدَهُ. يَقْلِبُ ٱلْجِبَالَ مِنْ أُصُولِهَا. ٩ 9
ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
يَنْقُرُ فِي ٱلصُّخُورِ سَرَبًا، وَعَيْنُهُ تَرَى كُلَّ ثَمِينٍ. ١٠ 10
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
يَمْنَعُ رَشْحَ ٱلْأَنْهَارِ، وَأَبْرَزَ ٱلْخَفِيَّاتِ إِلَى ٱلنُّورِ. ١١ 11
ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
«أَمَّا ٱلْحِكْمَةُ فَمِنْ أَيْنَ تُوجَدُ، وَأَيْنَ هُوَ مَكَانُ ٱلْفَهْمِ؟ ١٢ 12
ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
لَا يَعْرِفُ ٱلْإِنْسَانُ قِيمَتَهَا وَلَا تُوجَدُ فِي أَرْضِ ٱلْأَحْيَاءِ. ١٣ 13
ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
ٱلْغَمْرُ يَقُولُ: لَيْسَتْ هِيَ فِيَّ، وَٱلْبَحْرُ يَقُولُ: لَيْسَتْ هِيَ عِنْدِي. ١٤ 14
ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
لَا يُعْطَى ذَهَبٌ خَالِصٌ بَدَلَهَا، وَلَا تُوزَنُ فِضَّةٌ ثَمَنًا لَهَا. ١٥ 15
ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
لَا تُوزَنُ بِذَهَبِ أُوفِيرَ أَوْ بِٱلْجَزْعِ ٱلْكَرِيمِ أَوِ ٱلْيَاقُوتِ ٱلْأَزْرَقِ. ١٦ 16
ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
لَا يُعَادِلُهَا ٱلذَّهَبُ وَلَا ٱلزُّجَاجُ، وَلَا تُبْدَلُ بِإِنَاءِ ذَهَبٍ إِبْرِيزٍ. ١٧ 17
ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
لَا يُذْكَرُ ٱلْمَرْجَانُ أَوِ ٱلْبَلُّوْرُ، وَتَحْصِيلُ ٱلْحِكْمَةِ خَيْرٌ مِنَ ٱللَّآلِئِ. ١٨ 18
ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
لَا يُعَادِلُهَا يَاقُوتُ كُوشَ ٱلْأَصْفَرُ، وَلَا تُوزَنُ بِٱلذَّهَبِ ٱلْخَالِصِ. ١٩ 19
ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
«فَمِنْ أَيْنَ تَأْتِي ٱلْحِكْمَةُ، وَأَيْنَ هُوَ مَكَانُ ٱلْفَهْمِ؟ ٢٠ 20
ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
إِذْ أُخْفِيَتْ عَنْ عُيُونِ كُلِّ حَيٍّ، وَسُتِرَتْ عَنْ طَيْرِ ٱلسَّمَاءِ. ٢١ 21
ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
اَلْهَلَاكُ وَٱلْمَوْتُ يَقُولَانِ: بِآذَانِنَا قَدْ سَمِعْنَا خَبَرَهَا. ٢٢ 22
ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
ٱللهُ يَفْهَمُ طَرِيقَهَا، وَهُوَ عَالِمٌ بِمَكَانِهَا. ٢٣ 23
ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
لِأَنَّهُ هُوَ يَنْظُرُ إِلَى أَقَاصِي ٱلْأَرْضِ. تَحْتَ كُلِّ ٱلسَّمَاوَاتِ يَرَى. ٢٤ 24
ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
لِيَجْعَلَ لِلرِّيحِ وَزْنًا، وَيُعَايِرَ ٱلْمِيَاهَ بِمِقْيَاسٍ. ٢٥ 25
ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
لَمَّا جَعَلَ لِلْمَطَرِ فَرِيضَةً، وَمَذْهَبًا لِلصَّوَاعِقِ، ٢٦ 26
ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
حِينَئِذٍ رَآهَا وَأَخْبَرَ بِهَا، هَيَّأَهَا وَأَيْضًا بَحَثَ عَنْهَا، ٢٧ 27
ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
وَقَالَ لِلْإِنْسَانِ: هُوَذَا مَخَافَةُ ٱلرَّبِّ هِيَ ٱلْحِكْمَةُ، وَٱلْحَيَدَانُ عَنِ ٱلشَّرِّ هُوَ ٱلْفَهْمُ». ٢٨ 28
ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.

< أَيُّوبَ 28 >