< يُوئِيل 1 >

قَوْلُ ٱلرَّبِّ ٱلَّذِي صَارَ إِلَى يُوئِيلَ بْنِ فَثُوئِيلَ: ١ 1
ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
اِسْمَعُوا هَذَا أَيُّهَا ٱلشُّيُوخُ، وَأَصْغُوا يَا جَمِيعَ سُكَّانِ ٱلْأَرْضِ! هَلْ حَدَثَ هَذَا فِي أَيَّامِكُمْ، أَوْ فِي أَيَّامِ آبَائِكُمْ؟ ٢ 2
ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
أَخْبِرُوا بَنِيكُمْ عَنْهُ، وَبَنُوكُمْ بَنِيهِمْ، وَبَنُوهُمْ دَوْرًا آخَرَ. ٣ 3
ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.
فَضْلَةُ ٱلْقَمَصِ أَكَلَهَا ٱلزَّحَّافُ، وَفَضْلَةُ ٱلزَّحَّافِ أَكَلَهَا ٱلْغَوْغَاءُ، وَفَضْلَةُ ٱلْغَوْغَاءِ أَكَلَهَا ٱلطَّيَّارُ. ٤ 4
ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
اِصْحُوا أَيُّهَا ٱلسَّكَارَى، وَٱبْكُوا وَوَلْوِلُوا يَا جَمِيعَ شَارِبِي ٱلْخَمْرِ عَلَى ٱلْعَصِيرِ لِأَنَّهُ ٱنْقَطَعَ عَنْ أَفْوَاهِكُمْ. ٥ 5
ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
إِذْ قَدْ صَعِدَتْ عَلَى أَرْضِي أُمَّةٌ قَوِيَّةٌ بِلَا عَدَدٍ، أَسْنَانُهَا أَسْنَانُ ٱلْأَسَدِ، وَلَهَا أَضْرَاسُ ٱللَّبْوَةِ. ٦ 6
ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.
جَعَلَتْ كَرْمَتِي خَرِبَةً وَتِينَتِي مُتَهَشَّمَةً. قَدْ قَشَرَتْهَا وَطَرَحَتْهَا فَٱبْيَضَّتْ قُضْبَانُهَا. ٧ 7
ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
نُوحِي يَا أَرْضِي كَعَرُوسٍ مُؤْتَزِرَةٍ بِمَسْحٍ مِنْ أَجْلِ بَعْلِ صِبَاهَا. ٨ 8
ಯೌವನದ ಪತಿಗಾಗಿ ದುಃಖದಿಂದ ಗೋಣಿತಟ್ಟನ್ನು ಧರಿಸಿಕೊಂಡು ಗೋಳಾಡುವ ಕನ್ಯೆಯಂತೆ ಗೋಳಾಡಿರಿ.
ٱنْقَطَعَتِ ٱلتَّقْدِمَةُ وَٱلسَّكِيبُ عَنْ بَيْتِ ٱلرَّبِّ. نَاحَتِ ٱلْكَهَنَةُ خُدَّامُ ٱلرَّبِّ. ٩ 9
ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.
تَلِفَ ٱلْحَقْلُ، نَاحَتِ ٱلْأَرْضُ لِأَنَّهُ قَدْ تَلِفَ ٱلْقَمْحُ، جَفَّ ٱلْمِسْطَارُ، ذَبُلَ ٱلزَّيْتُ. ١٠ 10
೧೦ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
خَجِلَ ٱلْفَلَّاحُونَ، وَلْوَلَ ٱلْكَرَّامُونَ عَلَى ٱلْحِنْطَةِ وَعَلَى ٱلشَّعِيرِ، لِأَنَّهُ قَدْ تَلِفَ حَصِيدُ ٱلْحَقْلِ. ١١ 11
೧೧ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
اَلْجَفْنَةُ يَبِسَتْ، وَٱلتِّينَةُ ذَبُلَتْ. اَلرُّمَّانَةُ وَٱلنَّخْلَةُ وَٱلتُّفَّاحَةُ، كُلُّ أَشْجَارِ ٱلْحَقْلِ يَبِسَتْ. إِنَّهُ قَدْ يَبِسَتِ ٱلْبَهْجَةُ مِنْ بَنِي ٱلْبَشَرِ. ١٢ 12
೧೨ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.
تَنَطَّقُوا وَنُوحُوا أَيُّهَا ٱلْكَهَنَةُ. وَلْوِلُوا يَا خُدَّامَ ٱلْمَذْبَحِ. ٱدْخُلُوا بِيتُوا بِٱلْمُسُوحِ يَا خُدَّامَ إِلَهِي، لِأَنَّهُ قَدِ ٱمْتَنَعَ عَنْ بَيْتِ إِلَهِكُمُ ٱلتَّقْدِمَةُ وَٱلسَّكِيبُ. ١٣ 13
೧೩ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
قَدِّسُوا صَوْمًا. نَادُوا بِٱعْتِكَافٍ. ٱجْمَعُوا ٱلشُّيُوخَ، جَمِيعَ سُكَّانِ ٱلْأَرْضِ إِلَى بَيْتِ ٱلرَّبِّ إِلَهِكُمْ وَٱصْرُخُوا إِلَى ٱلرَّبِّ. ١٤ 14
೧೪ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.
آهِ عَلَى ٱلْيَوْمِ! لِأَنَّ يَوْمَ ٱلرَّبِّ قَرِيبٌ. يَأْتِي كَخَرَابٍ مِنَ ٱلْقَادِرِ عَلَى كُلِّ شَيْءٍ. ١٥ 15
೧೫ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.
أَمَا ٱنْقَطَعَ ٱلطَّعَامُ تُجَاهَ عُيُونِنَا؟ ٱلْفَرَحُ وَٱلِٱبْتِهَاجُ عَنْ بَيْتِ إِلَهِنَا؟ ١٦ 16
೧೬ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!
عَفَّنَتِ ٱلْحُبُوبُ تَحْتَ مَدَرِهَا. خَلَتِ ٱلْأَهْرَاءُ. ٱنْهَدَمَتِ ٱلْمَخَازِنُ لِأَنَّهُ قَدْ يَبِسَ ٱلْقَمْحُ. ١٧ 17
೧೭ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
كَمْ تَئِنُّ ٱلْبَهَائِمُ! هَامَتْ قُطْعَانُ ٱلْبَقَرِ لِأَنْ لَيْسَ لَهَا مَرْعًى. حَتَّى قُطْعَانُ ٱلْغَنَمِ تَفْنَى. ١٨ 18
೧೮ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.
إِلَيْكَ يَارَبُّ أَصْرُخُ، لِأَنَّ نَارًا قَدْ أَكَلَتْ مَرَاعِيَ ٱلْبَرِّيَّةِ، وَلَهِيبًا أَحْرَقَ جَمِيعَ أَشْجَارِ ٱلْحَقْلِ. ١٩ 19
೧೯ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ.
حَتَّى بَهَائِمُ ٱلصَّحْرَاءِ تَنْظُرُ إِلَيْكَ، لِأَنَّ جَدَاوِلَ ٱلْمِيَاهِ قَدْ جَفَّتْ، وَٱلنَّارَ أَكَلَتْ مَرَاعِيَ ٱلْبَرِّيَّةِ. ٢٠ 20
೨೦ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

< يُوئِيل 1 >