< يُوئِيل 1 >

قَوْلُ ٱلرَّبِّ ٱلَّذِي صَارَ إِلَى يُوئِيلَ بْنِ فَثُوئِيلَ: ١ 1
ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:
اِسْمَعُوا هَذَا أَيُّهَا ٱلشُّيُوخُ، وَأَصْغُوا يَا جَمِيعَ سُكَّانِ ٱلْأَرْضِ! هَلْ حَدَثَ هَذَا فِي أَيَّامِكُمْ، أَوْ فِي أَيَّامِ آبَائِكُمْ؟ ٢ 2
ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?
أَخْبِرُوا بَنِيكُمْ عَنْهُ، وَبَنُوكُمْ بَنِيهِمْ، وَبَنُوهُمْ دَوْرًا آخَرَ. ٣ 3
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.
فَضْلَةُ ٱلْقَمَصِ أَكَلَهَا ٱلزَّحَّافُ، وَفَضْلَةُ ٱلزَّحَّافِ أَكَلَهَا ٱلْغَوْغَاءُ، وَفَضْلَةُ ٱلْغَوْغَاءِ أَكَلَهَا ٱلطَّيَّارُ. ٤ 4
ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.
اِصْحُوا أَيُّهَا ٱلسَّكَارَى، وَٱبْكُوا وَوَلْوِلُوا يَا جَمِيعَ شَارِبِي ٱلْخَمْرِ عَلَى ٱلْعَصِيرِ لِأَنَّهُ ٱنْقَطَعَ عَنْ أَفْوَاهِكُمْ. ٥ 5
ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.
إِذْ قَدْ صَعِدَتْ عَلَى أَرْضِي أُمَّةٌ قَوِيَّةٌ بِلَا عَدَدٍ، أَسْنَانُهَا أَسْنَانُ ٱلْأَسَدِ، وَلَهَا أَضْرَاسُ ٱللَّبْوَةِ. ٦ 6
ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.
جَعَلَتْ كَرْمَتِي خَرِبَةً وَتِينَتِي مُتَهَشَّمَةً. قَدْ قَشَرَتْهَا وَطَرَحَتْهَا فَٱبْيَضَّتْ قُضْبَانُهَا. ٧ 7
ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.
نُوحِي يَا أَرْضِي كَعَرُوسٍ مُؤْتَزِرَةٍ بِمَسْحٍ مِنْ أَجْلِ بَعْلِ صِبَاهَا. ٨ 8
ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.
ٱنْقَطَعَتِ ٱلتَّقْدِمَةُ وَٱلسَّكِيبُ عَنْ بَيْتِ ٱلرَّبِّ. نَاحَتِ ٱلْكَهَنَةُ خُدَّامُ ٱلرَّبِّ. ٩ 9
ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.
تَلِفَ ٱلْحَقْلُ، نَاحَتِ ٱلْأَرْضُ لِأَنَّهُ قَدْ تَلِفَ ٱلْقَمْحُ، جَفَّ ٱلْمِسْطَارُ، ذَبُلَ ٱلزَّيْتُ. ١٠ 10
ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.
خَجِلَ ٱلْفَلَّاحُونَ، وَلْوَلَ ٱلْكَرَّامُونَ عَلَى ٱلْحِنْطَةِ وَعَلَى ٱلشَّعِيرِ، لِأَنَّهُ قَدْ تَلِفَ حَصِيدُ ٱلْحَقْلِ. ١١ 11
ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.
اَلْجَفْنَةُ يَبِسَتْ، وَٱلتِّينَةُ ذَبُلَتْ. اَلرُّمَّانَةُ وَٱلنَّخْلَةُ وَٱلتُّفَّاحَةُ، كُلُّ أَشْجَارِ ٱلْحَقْلِ يَبِسَتْ. إِنَّهُ قَدْ يَبِسَتِ ٱلْبَهْجَةُ مِنْ بَنِي ٱلْبَشَرِ. ١٢ 12
ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.
تَنَطَّقُوا وَنُوحُوا أَيُّهَا ٱلْكَهَنَةُ. وَلْوِلُوا يَا خُدَّامَ ٱلْمَذْبَحِ. ٱدْخُلُوا بِيتُوا بِٱلْمُسُوحِ يَا خُدَّامَ إِلَهِي، لِأَنَّهُ قَدِ ٱمْتَنَعَ عَنْ بَيْتِ إِلَهِكُمُ ٱلتَّقْدِمَةُ وَٱلسَّكِيبُ. ١٣ 13
ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.
قَدِّسُوا صَوْمًا. نَادُوا بِٱعْتِكَافٍ. ٱجْمَعُوا ٱلشُّيُوخَ، جَمِيعَ سُكَّانِ ٱلْأَرْضِ إِلَى بَيْتِ ٱلرَّبِّ إِلَهِكُمْ وَٱصْرُخُوا إِلَى ٱلرَّبِّ. ١٤ 14
ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.
آهِ عَلَى ٱلْيَوْمِ! لِأَنَّ يَوْمَ ٱلرَّبِّ قَرِيبٌ. يَأْتِي كَخَرَابٍ مِنَ ٱلْقَادِرِ عَلَى كُلِّ شَيْءٍ. ١٥ 15
ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.
أَمَا ٱنْقَطَعَ ٱلطَّعَامُ تُجَاهَ عُيُونِنَا؟ ٱلْفَرَحُ وَٱلِٱبْتِهَاجُ عَنْ بَيْتِ إِلَهِنَا؟ ١٦ 16
ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?
عَفَّنَتِ ٱلْحُبُوبُ تَحْتَ مَدَرِهَا. خَلَتِ ٱلْأَهْرَاءُ. ٱنْهَدَمَتِ ٱلْمَخَازِنُ لِأَنَّهُ قَدْ يَبِسَ ٱلْقَمْحُ. ١٧ 17
ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.
كَمْ تَئِنُّ ٱلْبَهَائِمُ! هَامَتْ قُطْعَانُ ٱلْبَقَرِ لِأَنْ لَيْسَ لَهَا مَرْعًى. حَتَّى قُطْعَانُ ٱلْغَنَمِ تَفْنَى. ١٨ 18
ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.
إِلَيْكَ يَارَبُّ أَصْرُخُ، لِأَنَّ نَارًا قَدْ أَكَلَتْ مَرَاعِيَ ٱلْبَرِّيَّةِ، وَلَهِيبًا أَحْرَقَ جَمِيعَ أَشْجَارِ ٱلْحَقْلِ. ١٩ 19
ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.
حَتَّى بَهَائِمُ ٱلصَّحْرَاءِ تَنْظُرُ إِلَيْكَ، لِأَنَّ جَدَاوِلَ ٱلْمِيَاهِ قَدْ جَفَّتْ، وَٱلنَّارَ أَكَلَتْ مَرَاعِيَ ٱلْبَرِّيَّةِ. ٢٠ 20
ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.

< يُوئِيل 1 >