< يوحنَّا 6 >
بَعْدَ هَذَا مَضَى يَسُوعُ إِلَى عَبْرِ بَحْرِ ٱلْجَلِيلِ، وَهُوَ بَحْرُ طَبَرِيَّةَ. | ١ 1 |
ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.
وَتَبِعَهُ جَمْعٌ كَثِيرٌ لِأَنَّهُمْ أَبْصَرُوا آيَاتِهِ ٱلَّتِي كَانَ يَصْنَعُهَا فِي ٱلْمَرْضَى. | ٢ 2 |
ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.
فَصَعِدَ يَسُوعُ إِلَى جَبَلٍ وَجَلَسَ هُنَاكَ مَعَ تَلَامِيذِهِ. | ٣ 3 |
ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.
وَكَانَ ٱلْفِصْحُ، عِيدُ ٱلْيَهُودِ، قَرِيبًا. | ٤ 4 |
ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.
فَرَفَعَ يَسُوعُ عَيْنَيْهِ وَنَظَرَ أَنَّ جَمْعًا كَثِيرًا مُقْبِلٌ إِلَيْهِ، فَقَالَ لِفِيلُبُّسَ: «مِنْ أَيْنَ نَبْتَاعُ خُبْزًا لِيَأْكُلَ هَؤُلَاءِ؟». | ٥ 5 |
ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.
وَإِنَّمَا قَالَ هَذَا لِيَمْتَحِنَهُ، لِأَنَّهُ هُوَ عَلِمَ مَا هُوَ مُزْمِعٌ أَنْ يَفْعَلَ. | ٦ 6 |
ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.
أَجَابَهُ فِيلُبُّسُ: «لَا يَكْفِيهِمْ خُبْزٌ بِمِئَتَيْ دِينَارٍ لِيَأْخُذَ كُلُّ وَاحِدٍ مِنْهُمْ شَيْئًا يَسِيرًا». | ٧ 7 |
ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.
قَالَ لَهُ وَاحِدٌ مِنْ تَلَامِيذِهِ، وَهُوَ أَنْدَرَاوُسُ أَخُو سِمْعَانَ بُطْرُسَ: | ٨ 8 |
ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು
«هُنَا غُلَامٌ مَعَهُ خَمْسَةُ أَرْغِفَةِ شَعِيرٍ وَسَمَكَتَانِ، وَلَكِنْ مَا هَذَا لِمِثْلِ هَؤُلَاءِ؟». | ٩ 9 |
ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.
فَقَالَ يَسُوعُ: «ٱجْعَلُوا ٱلنَّاسَ يَتَّكِئُونَ». وَكَانَ فِي ٱلْمَكَانِ عُشْبٌ كَثِيرٌ، فَٱتَّكَأَ ٱلرِّجَالُ وَعَدَدُهُمْ نَحْوُ خَمْسَةِ آلَافٍ. | ١٠ 10 |
ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.
وَأَخَذَ يَسُوعُ ٱلْأَرْغِفَةَ وَشَكَرَ، وَوَزَّعَ عَلَى ٱلتَّلَامِيذِ، وَٱلتَّلَامِيذُ أَعْطَوْا ٱلْمُتَّكِئِينَ. وَكَذَلِكَ مِنَ ٱلسَّمَكَتَيْنِ بِقَدْرِ مَا شَاءُوا. | ١١ 11 |
ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.
فَلَمَّا شَبِعُوا، قَالَ لِتَلَامِيذِهِ: «ٱجْمَعُوا ٱلْكِسَرَ ٱلْفَاضِلَةَ لِكَيْ لَا يَضِيعَ شَيْءٌ». | ١٢ 12 |
ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.
فَجَمَعُوا وَمَلَأُوا ٱثْنَتَيْ عَشْرَةَ قُفَّةً مِنَ ٱلْكِسَرِ، مِنْ خَمْسَةِ أَرْغِفَةِ ٱلشَّعِيرِ، ٱلَّتِي فَضَلَتْ عَنِ ٱلْآكِلِينَ. | ١٣ 13 |
ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.
فَلَمَّا رَأَى ٱلنَّاسُ ٱلْآيَةَ ٱلَّتِي صَنَعَهَا يَسُوعُ قَالُوا: «إِنَّ هَذَا هُوَ بِٱلْحَقِيقَةِ ٱلنَّبِيُّ ٱلْآتِي إِلَى ٱلْعَالَمِ!». | ١٤ 14 |
ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.
وَأَمَّا يَسُوعُ فَإِذْ عَلِمَ أَنَّهُمْ مُزْمِعُونَ أَنْ يَأْتُوا وَيَخْتَطِفُوهُ لِيَجْعَلُوهُ مَلِكًا، ٱنْصَرَفَ أَيْضًا إِلَى ٱلْجَبَلِ وَحْدَهُ. | ١٥ 15 |
ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.
وَلَمَّا كَانَ ٱلْمَسَاءُ نَزَلَ تَلَامِيذُهُ إِلَى ٱلْبَحْرِ، | ١٦ 16 |
ಸಂಜೆಯಾದಾಗ ಯೇಸುವಿನ ಶಿಷ್ಯರು ಸರೋವರಕ್ಕೆ ಹೋಗಿ,
فَدَخَلُوا ٱلسَّفِينَةَ وَكَانُوا يَذْهَبُونَ إِلَى عَبْرِ ٱلْبَحْرِ إِلَى كَفْرِنَاحُومَ. وَكَانَ ٱلظَّلَامُ قَدْ أَقْبَلَ، وَلَمْ يَكُنْ يَسُوعُ قَدْ أَتَى إِلَيْهِمْ. | ١٧ 17 |
ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
وَهَاجَ ٱلْبَحْرُ مِنْ رِيحٍ عَظِيمَةٍ تَهُبُّ. | ١٨ 18 |
ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.
فَلَمَّا كَانُوا قَدْ جَذَّفُوا نَحْوَ خَمْسٍ وَعِشْرِينَ أَوْ ثَلَاثِينَ غَلْوَةً، نَظَرُوا يَسُوعَ مَاشِيًا عَلَى ٱلْبَحْرِ مُقْتَرِبًا مِنَ ٱلسَّفِينَةِ، فَخَافُوا. | ١٩ 19 |
ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.
فَقَالَ لَهُمْ: «أَنَا هُوَ، لَا تَخَافُوا!». | ٢٠ 20 |
ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.
فَرَضُوا أَنْ يَقْبَلُوهُ فِي ٱلسَّفِينَةِ. وَلِلْوَقْتِ صَارَتِ ٱلسَّفِينَةُ إِلَى ٱلْأَرْضِ ٱلَّتِي كَانُوا ذَاهِبِينَ إِلَيْهَا. | ٢١ 21 |
ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.
وَفِي ٱلْغَدِ لَمَّا رَأَى ٱلْجَمْعُ ٱلَّذِينَ كَانُوا وَاقِفِينَ فِي عَبْرِ ٱلْبَحْرِ أَنَّهُ لَمْ تَكُنْ هُنَاكَ سَفِينَةٌ أُخْرَى سِوَى وَاحِدَةٍ، وَهِيَ تِلْكَ ٱلَّتِي دَخَلَهَا تَلَامِيذُهُ، وَأَنَّ يَسُوعَ لَمْ يَدْخُلِ ٱلسَّفِينَةَ مَعَ تَلَامِيذِهِ بَلْ مَضَى تَلَامِيذُهُ وَحْدَهُمْ. | ٢٢ 22 |
ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.
غَيْرَ أَنَّهُ جَاءَتْ سُفُنٌ مِنْ طَبَرِيَّةَ إِلَى قُرْبِ ٱلْمَوْضِعِ ٱلَّذِي أَكَلُوا فِيهِ ٱلْخُبْزَ، إِذْ شَكَرَ ٱلرَّبُّ. | ٢٣ 23 |
ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
فَلَمَّا رَأَى ٱلْجَمْعُ أَنَّ يَسُوعَ لَيْسَ هُوَ هُنَاكَ وَلَا تَلَامِيذُهُ، دَخَلُوا هُمْ أَيْضًا ٱلسُّفُنَ وَجَاءُوا إِلَى كَفْرِنَاحُومَ يَطْلُبُونَ يَسُوعَ. | ٢٤ 24 |
ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
وَلَمَّا وَجَدُوهُ فِي عَبْرِ ٱلْبَحْرِ، قَالُوا لَهُ: «يَا مُعَلِّمُ، مَتَى صِرْتَ هُنَا؟». | ٢٥ 25 |
ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.
أَجَابَهُمْ يَسُوعُ وَقَالَ: «ٱلْحَقَّ ٱلْحَقَّ أَقُولُ لَكُمْ: أَنْتُمْ تَطْلُبُونَنِي لَيْسَ لِأَنَّكُمْ رَأَيْتُمْ آيَاتٍ، بَلْ لِأَنَّكُمْ أَكَلْتُمْ مِنَ ٱلْخُبْزِ فَشَبِعْتُمْ. | ٢٦ 26 |
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
اِعْمَلُوا لَا لِلطَّعَامِ ٱلْبَائِدِ، بَلْ لِلطَّعَامِ ٱلْبَاقِي لِلْحَيَاةِ ٱلْأَبَدِيَّةِ ٱلَّذِي يُعْطِيكُمُ ٱبْنُ ٱلْإِنْسَانِ، لِأَنَّ هَذَا ٱللهُ ٱلْآبُ قَدْ خَتَمَهُ». (aiōnios ) | ٢٧ 27 |
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು. (aiōnios )
فَقَالُوا لَهُ: «مَاذَا نَفْعَلُ حَتَّى نَعْمَلَ أَعْمَالَ ٱللهِ؟». | ٢٨ 28 |
ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,
أَجَابَ يَسُوعُ وَقَالَ لَهُمْ: «هَذَا هُوَ عَمَلُ ٱللهِ: أَنْ تُؤْمِنُوا بِٱلَّذِي هُوَ أَرْسَلَهُ». | ٢٩ 29 |
ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.
فَقَالُوا لَهُ: «فَأَيَّةَ آيَةٍ تَصْنَعُ لِنَرَى وَنُؤْمِنَ بِكَ؟ مَاذَا تَعْمَلُ؟ | ٣٠ 30 |
ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?
آبَاؤُنَا أَكَلُوا ٱلْمَنَّ فِي ٱلْبَرِّيَّةِ، كَمَا هُوَ مَكْتُوبٌ: أَنَّهُ أَعْطَاهُمْ خُبْزًا مِنَ ٱلسَّمَاءِ لِيَأْكُلُوا». | ٣١ 31 |
‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.
فَقَالَ لَهُمْ يَسُوعُ: «ٱلْحَقَّ ٱلْحَقَّ أَقُولُ لَكُمْ: لَيْسَ مُوسَى أَعْطَاكُمُ ٱلْخُبْزَ مِنَ ٱلسَّمَاءِ، بَلْ أَبِي يُعْطِيكُمُ ٱلْخُبْزَ ٱلْحَقِيقِيَّ مِنَ ٱلسَّمَاءِ، | ٣٢ 32 |
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.
لِأَنَّ خُبْزَ ٱللهِ هُوَ ٱلنَّازِلُ مِنَ ٱلسَّمَاءِ ٱلْوَاهِبُ حَيَاةً لِلْعَالَمِ». | ٣٣ 33 |
ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.
فَقَالُوا لَهُ: «يَا سَيِّدُ، أَعْطِنَا فِي كُلِّ حِينٍ هَذَا ٱلْخُبْزَ». | ٣٤ 34 |
ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.
فَقَالَ لَهُمْ يَسُوعُ: «أَنَا هُوَ خُبْزُ ٱلْحَيَاةِ. مَنْ يُقْبِلْ إِلَيَّ فَلَا يَجُوعُ، وَمَنْ يُؤْمِنْ بِي فَلَا يَعْطَشُ أَبَدًا. | ٣٥ 35 |
ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
وَلَكِنِّي قُلْتُ لَكُمْ: إِنَّكُمْ قَدْ رَأَيْتُمُونِي، وَلَسْتُمْ تُؤْمِنُونَ. | ٣٦ 36 |
ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.
كُلُّ مَا يُعْطِينِي ٱلْآبُ فَإِلَيَّ يُقْبِلُ، وَمَنْ يُقْبِلْ إِلَيَّ لَا أُخْرِجْهُ خَارِجًا. | ٣٧ 37 |
ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
لِأَنِّي قَدْ نَزَلْتُ مِنَ ٱلسَّمَاءِ، لَيْسَ لِأَعْمَلَ مَشِيئَتِي، بَلْ مَشِيئَةَ ٱلَّذِي أَرْسَلَنِي. | ٣٨ 38 |
ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.
وَهَذِهِ مَشِيئَةُ ٱلْآبِ ٱلَّذِي أَرْسَلَنِي: أَنَّ كُلَّ مَا أَعْطَانِي لَا أُتْلِفُ مِنْهُ شَيْئًا، بَلْ أُقِيمُهُ فِي ٱلْيَوْمِ ٱلْأَخِيرِ. | ٣٩ 39 |
ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.
لِأَنَّ هَذِهِ هِيَ مَشِيئَةُ ٱلَّذِي أَرْسَلَنِي: أَنَّ كُلَّ مَنْ يَرَى ٱلِٱبْنَ وَيُؤْمِنُ بِهِ تَكُونُ لَهُ حَيَاةٌ أَبَدِيَّةٌ، وَأَنَا أُقِيمُهُ فِي ٱلْيَوْمِ ٱلْأَخِيرِ». (aiōnios ) | ٤٠ 40 |
ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು. (aiōnios )
فَكَانَ ٱلْيَهُودُ يَتَذَمَّرُونَ عَلَيْهِ لِأَنَّهُ قَالَ: «أَنَا هُوَ ٱلْخُبْزُ ٱلَّذِي نَزَلَ مِنَ ٱلسَّمَاءِ». | ٤١ 41 |
“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,
وَقَالُوا: «أَلَيْسَ هَذَا هُوَ يَسُوعَ بْنَ يُوسُفَ، ٱلَّذِي نَحْنُ عَارِفُونَ بِأَبِيهِ وَأُمِّهِ؟ فَكَيْفَ يَقُولُ هَذَا: إِنِّي نَزَلْتُ مِنَ ٱلسَّمَاءِ؟». | ٤٢ 42 |
“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.
فَأَجَابَ يَسُوعُ وَقَالَ لَهُمْ: «لَا تَتَذَمَّرُوا فِيمَا بَيْنَكُمْ. | ٤٣ 43 |
ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.
لَا يَقْدِرُ أَحَدٌ أَنْ يُقْبِلَ إِلَيَّ إِنْ لَمْ يَجْتَذِبْهُ ٱلْآبُ ٱلَّذِي أَرْسَلَنِي، وَأَنَا أُقِيمُهُ فِي ٱلْيَوْمِ ٱلْأَخِيرِ. | ٤٤ 44 |
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
إِنَّهُ مَكْتُوبٌ فِي ٱلْأَنْبِيَاءِ: وَيَكُونُ ٱلْجَمِيعُ مُتَعَلِّمِينَ مِنَ ٱللهِ. فَكُلُّ مَنْ سَمِعَ مِنَ ٱلْآبِ وَتَعَلَّمَ يُقْبِلُ إِلَيَّ. | ٤٥ 45 |
‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.
لَيْسَ أَنَّ أَحَدًا رَأَى ٱلْآبَ إِلَّا ٱلَّذِي مِنَ ٱللهِ. هَذَا قَدْ رَأَى ٱلْآبَ. | ٤٦ 46 |
ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.
اَلْحَقَّ ٱلْحَقَّ أَقُولُ لَكُمْ: مَنْ يُؤْمِنُ بِي فَلَهُ حَيَاةٌ أَبَدِيَّةٌ. (aiōnios ) | ٤٧ 47 |
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. (aiōnios )
أَنَا هُوَ خُبْزُ ٱلْحَيَاةِ. | ٤٨ 48 |
ನಾನೇ ಜೀವದ ರೊಟ್ಟಿ.
آبَاؤُكُمْ أَكَلُوا ٱلْمَنَّ فِي ٱلْبَرِّيَّةِ وَمَاتُوا. | ٤٩ 49 |
ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.
هَذَا هُوَ ٱلْخُبْزُ ٱلنَّازِلُ مِنَ ٱلسَّمَاءِ، لِكَيْ يَأْكُلَ مِنْهُ ٱلْإِنْسَانُ وَلَا يَمُوتَ. | ٥٠ 50 |
ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.
أَنَا هُوَ ٱلْخُبْزُ ٱلْحَيُّ ٱلَّذِي نَزَلَ مِنَ ٱلسَّمَاءِ. إِنْ أَكَلَ أَحَدٌ مِنْ هَذَا ٱلْخُبْزِ يَحْيَا إِلَى ٱلْأَبَدِ. وَٱلْخُبْزُ ٱلَّذِي أَنَا أُعْطِي هُوَ جَسَدِي ٱلَّذِي أَبْذِلُهُ مِنْ أَجْلِ حَيَاةِ ٱلْعَالَمِ». (aiōn ) | ٥١ 51 |
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು. (aiōn )
فَخَاصَمَ ٱلْيَهُودُ بَعْضُهُمْ بَعْضًا قَائِلِينَ: «كَيْفَ يَقْدِرُ هَذَا أَنْ يُعْطِيَنَا جَسَدَهُ لِنَأْكُلَ؟». | ٥٢ 52 |
ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.
فَقَالَ لَهُمْ يَسُوعُ: «ٱلْحَقَّ ٱلْحَقَّ أَقُولُ لَكُمْ: إِنْ لَمْ تَأْكُلُوا جَسَدَ ٱبْنِ ٱلْإِنْسَانِ وَتَشْرَبُوا دَمَهُ، فَلَيْسَ لَكُمْ حَيَاةٌ فِيكُمْ. | ٥٣ 53 |
ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.
مَنْ يَأْكُلُ جَسَدِي وَيَشْرَبُ دَمِي فَلَهُ حَيَاةٌ أَبَدِيَّةٌ، وَأَنَا أُقِيمُهُ فِي ٱلْيَوْمِ ٱلْأَخِيرِ، (aiōnios ) | ٥٤ 54 |
ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. (aiōnios )
لِأَنَّ جَسَدِي مَأْكَلٌ حَقٌّ وَدَمِي مَشْرَبٌ حَقٌّ. | ٥٥ 55 |
ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.
مَنْ يَأْكُلْ جَسَدِي وَيَشْرَبْ دَمِي يَثْبُتْ فِيَّ وَأَنَا فِيهِ. | ٥٦ 56 |
ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.
كَمَا أَرْسَلَنِي ٱلْآبُ ٱلْحَيُّ، وَأَنَا حَيٌّ بِٱلْآبِ، فَمَنْ يَأْكُلْنِي فَهُوَ يَحْيَا بِي. | ٥٧ 57 |
ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.
هَذَا هُوَ ٱلْخُبْزُ ٱلَّذِي نَزَلَ مِنَ ٱلسَّمَاءِ. لَيْسَ كَمَا أَكَلَ آبَاؤُكُمُ ٱلْمَنَّ وَمَاتُوا. مَنْ يَأْكُلْ هَذَا ٱلْخُبْزَ فَإِنَّهُ يَحْيَا إِلَى ٱلْأَبَدِ». (aiōn ) | ٥٨ 58 |
ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು. (aiōn )
قَالَ هَذَا فِي ٱلْمَجْمَعِ وَهُوَ يُعَلِّمُ فِي كَفْرِنَاحُومَ. | ٥٩ 59 |
ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.
فَقَالَ كَثِيرُونَ مِنْ تَلَامِيذِهِ، إِذْ سَمِعُوا: «إِنَّ هَذَا ٱلْكَلَامَ صَعْبٌ! مَنْ يَقْدِرُ أَنْ يَسْمَعَهُ؟». | ٦٠ 60 |
ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.
فَعَلِمَ يَسُوعُ فِي نَفْسِهِ أَنَّ تَلَامِيذَهُ يَتَذَمَّرُونَ عَلَى هَذَا، فَقَالَ لَهُمْ: «أَهَذَا يُعْثِرُكُمْ؟ | ٦١ 61 |
ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?
فَإِنْ رَأَيْتُمُ ٱبْنَ ٱلْإِنْسَانِ صَاعِدًا إِلَى حَيْثُ كَانَ أَوَّلًا! | ٦٢ 62 |
ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
اَلرُّوحُ هُوَ ٱلَّذِي يُحْيِي. أَمَّا ٱلْجَسَدُ فَلَا يُفِيدُ شَيْئًا. اَلْكَلَامُ ٱلَّذِي أُكَلِّمُكُمْ بِهِ هُوَ رُوحٌ وَحَيَاةٌ، | ٦٣ 63 |
ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
وَلَكِنْ مِنْكُمْ قَوْمٌ لَا يُؤْمِنُونَ». لِأَنَّ يَسُوعَ مِنَ ٱلْبَدْءِ عَلِمَ مَنْ هُمُ ٱلَّذِينَ لَا يُؤْمِنُونَ، وَمَنْ هُوَ ٱلَّذِي يُسَلِّمُهُ. | ٦٤ 64 |
ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.
فَقَالَ: «لِهَذَا قُلْتُ لَكُمْ: إِنَّهُ لَا يَقْدِرُ أَحَدٌ أَنْ يَأْتِيَ إِلَيَّ إِنْ لَمْ يُعْطَ مِنْ أَبِي». | ٦٥ 65 |
ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”
مِنْ هَذَا ٱلْوَقْتِ رَجَعَ كَثِيرُونَ مِنْ تَلَامِيذِهِ إِلَى ٱلْوَرَاءِ، وَلَمْ يَعُودُوا يَمْشُونَ مَعَهُ. | ٦٦ 66 |
ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.
فَقَالَ يَسُوعُ لِلِٱثْنَيْ عَشَرَ: «أَلَعَلَّكُمْ أَنْتُمْ أَيْضًا تُرِيدُونَ أَنْ تَمْضُوا؟». | ٦٧ 67 |
ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,
فَأَجَابَهُ سِمْعَانُ بُطْرُسُ: «يَارَبُّ، إِلَى مَنْ نَذْهَبُ؟ كَلَامُ ٱلْحَيَاةِ ٱلْأَبَدِيَّةِ عِنْدَكَ، (aiōnios ) | ٦٨ 68 |
ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ. (aiōnios )
وَنَحْنُ قَدْ آمَنَّا وَعَرَفْنَا أَنَّكَ أَنْتَ ٱلْمَسِيحُ ٱبْنُ ٱللهِ ٱلْحَيِّ». | ٦٩ 69 |
ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.
أَجَابَهُمْ يَسُوعُ: «أَلَيْسَ أَنِّي أَنَا ٱخْتَرْتُكُمْ، ٱلِٱثْنَيْ عَشَرَ؟ وَوَاحِدٌ مِنْكُمْ شَيْطَانٌ!». | ٧٠ 70 |
ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.
قَالَ عَنْ يَهُوذَا سِمْعَانَ ٱلْإِسْخَرْيُوطِيِّ، لِأَنَّ هَذَا كَانَ مُزْمِعًا أَنْ يُسَلِّمَهُ، وَهُوَ وَاحِدٌ مِنَ ٱلِٱثْنَيْ عَشَرَ. | ٧١ 71 |
ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.