< يُونَان 3 >

ثُمَّ صَارَ قَوْلُ ٱلرَّبِّ إِلَى يُونَانَ ثَانِيَةً قَائِلًا: ١ 1
ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
«قُمِ ٱذْهَبْ إِلَى نِينَوَى ٱلْمَدِينَةِ ٱلْعَظِيمَةِ، وَنَادِ لَهَا ٱلْمُنَادَاةَ ٱلَّتِي أَنَا مُكَلِّمُكَ بِهَا». ٢ 2
“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
فَقَامَ يُونَانُ وَذَهَبَ إِلَى نِينَوَى بِحَسَبِ قَوْلِ ٱلرَّبِّ. أَمَّا نِينَوَى فَكَانَتْ مَدِينَةً عَظِيمَةً لِلهِ مَسِيرَةَ ثَلَاثَةِ أَيَّامٍ. ٣ 3
ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
فَٱبْتَدَأَ يُونَانُ يَدْخُلُ ٱلْمَدِينَةَ مَسِيرَةَ يَوْمٍ وَاحِدٍ، وَنَادَى وَقَالَ: «بَعْدَ أَرْبَعِينَ يَوْمًا تَنْقَلِبُ نِينَوَى». ٤ 4
ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
فَآمَنَ أَهْلُ نِينَوَى بِٱللهِ وَنَادَوْا بِصَوْمٍ وَلَبِسُوا مُسُوحًا مِنْ كَبِيرِهِمْ إِلَى صَغِيرِهِمْ. ٥ 5
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
وَبَلَغَ ٱلْأَمْرُ مَلِكَ نِينَوَى، فَقَامَ عَنْ كُرْسِيِّهِ وَخَلَعَ رِدَاءَهُ عَنْهُ، وَتَغَطَّى بِمِسْحٍ وَجَلَسَ عَلَى ٱلرَّمَادِ. ٦ 6
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
وَنُودِيَ وَقِيلَ فِي نِينَوَى عَنْ أَمْرِ ٱلْمَلِكِ وَعُظَمَائِهِ قَائِلًا: «لَا تَذُقِ ٱلنَّاسُ وَلَا ٱلْبَهَائِمُ وَلَا ٱلْبَقَرُ وَلَا ٱلْغَنَمُ شَيْئًا. لَا تَرْعَ وَلَا تَشْرَبْ مَاءً. ٧ 7
ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
وَلْيَتَغَطَّ بِمُسُوحٍ ٱلنَّاسُ وَٱلْبَهَائِمُ، وَيَصْرُخُوا إِلَى ٱللهِ بِشِدَّةٍ، وَيَرْجِعُوا كُلُّ وَاحِدٍ عَنْ طَرِيقِهِ ٱلرَّدِيئَةِ وَعَنِ ٱلظُّلْمِ ٱلَّذِي فِي أَيْدِيهِمْ، ٨ 8
ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
لَعَلَّ ٱللهَ يَعُودُ وَيَنْدَمُ وَيَرْجِعُ عَنْ حُمُوِّ غَضَبِهِ فَلَا نَهْلِكَ». ٩ 9
ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
فَلَمَّا رَأَى ٱللهُ أَعْمَالَهُمْ أَنَّهُمْ رَجَعُوا عَنْ طَرِيقِهِمِ ٱلرَّدِيئَةِ، نَدِمَ ٱللهُ عَلَى ٱلشَّرِّ ٱلَّذِي تَكَلَّمَ أَنْ يَصْنَعَهُ بِهِمْ، فَلَمْ يَصْنَعْهُ. ١٠ 10
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.

< يُونَان 3 >