< يَشُوع 5 >

وَعِنْدَمَا سَمِعَ جَمِيعُ مُلُوكِ ٱلْأَمُورِيِّينَ ٱلَّذِينَ فِي عَبْرِ ٱلْأُرْدُنِّ غَرْبًا، وَجَمِيعُ مُلُوكِ ٱلْكَنْعَانِيِّينَ ٱلَّذِينَ عَلَى ٱلْبَحْرِ، أَنَّ ٱلرَّبَّ قَدْ يَبَّسَ مِيَاهَ ٱلْأُرْدُنِّ مِنْ أَمَامِ بَنِي إِسْرَائِيلَ حَتَّى عَبَرْنَا، ذَابَتْ قُلُوبُهُمْ وَلَمْ تَبْقَ فِيهِمْ رُوحٌ بَعْدُ مِنْ جَرَّاءِ بَنِي إِسْرَائِيلَ. ١ 1
ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
فِي ذَلِكَ ٱلْوَقْتِ قَالَ ٱلرَّبُّ لِيَشُوعَ: «ٱصْنَعْ لِنَفْسِكَ سَكَاكِينَ مِنْ صَوَّانٍ، وَعُدْ فَٱخْتُنْ بَنِي إِسْرَائِيلَ ثَانِيَةً». ٢ 2
ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು.
فَصَنَعَ يَشُوعُ سَكَاكِينَ مِنْ صَوَّانٍ وَخَتَنَ بَنِي إِسْرَائِيلَ فِي تَلِّ ٱلْقُلَفِ. ٣ 3
ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.
وَهَذَا هُوَ سَبَبُ خَتْنِ يَشُوعَ إِيَّاهُمْ: أَنَّ جَمِيعَ ٱلشَّعْبِ ٱلْخَارِجِينَ مِنْ مِصْرَ، ٱلذُّكُوِرَ، جَمِيعَ رِجَالِ ٱلْحَرْبِ، مَاتُوا فِي ٱلْبَرِّيَّةِ عَلَى ٱلطَّرِيقِ بِخُرُوجِهِمْ مِنْ مِصْرَ. ٤ 4
ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.
لِأَنَّ جَمِيعَ ٱلشَّعْبِ ٱلَّذِينَ خَرَجُوا كَانُوا مَخْتُونِينَ، وَأَمَّا جَمِيعُ ٱلشَّعْبِ ٱلَّذِينَ وُلِدُوا فِي ٱلْقَفْرِ عَلَى ٱلطَّرِيقِ بِخُرُوجِهِمْ مِنْ مِصْرَ فَلَمْ يُخْتَنُوا. ٥ 5
ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.
لِأَنَّ بَنِي إِسْرَائِيلَ سَارُوا أَرْبَعِينَ سَنَةً فِي ٱلْقَفْرِ حَتَّى فَنِيَ جَمِيعُ ٱلشَّعْبِ، رِجَالُ ٱلْحَرْبِ ٱلْخَارِجِينَ مِنْ مِصْرَ، ٱلَّذِينَ لَمْ يَسْمَعُوا لِقَوْلِ ٱلرَّبِّ، ٱلَّذِينَ حَلَفَ ٱلرَّبُّ لَهُمْ أَنَّهُ لَا يُرِيهِمِ ٱلْأَرْضَ ٱلَّتِي حَلَفَ ٱلرَّبُّ لِآبَائِهِمْ أَنْ يُعْطِيَنَا إِيَّاهَا، ٱلْأَرْضَ ٱلَّتِي تَفِيضُ لَبَنًا وَعَسَلًا. ٦ 6
ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.
وَأَمَّا بَنُوهُمْ فَأَقَامَهُمْ مَكَانَهُمْ. فَإِيَّاهُمْ خَتَنَ يَشُوعُ لِأَنَّهُمْ كَانُوا قُلْفًا، إِذْ لَمْ يَخْتِنُوهُمْ فِي ٱلطَّرِيقِ. ٧ 7
ಅವರಿಗೆ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿಸಿದನು. ಅವರಿಗೆ ಮಾರ್ಗದಲ್ಲಿ ಸುನ್ನತಿ ಮಾಡದೆ ಇದ್ದುದರಿಂದ ಅವರು ಸುನ್ನತಿ ಇಲ್ಲದವರಾಗಿದ್ದರು.
وَكَانَ بَعْدَمَا ٱنْتَهَى جَمِيعُ ٱلشَّعْبِ مِنْ ٱلِٱخْتِتَانِ، أَنَّهُمْ أَقَامُوا فِي أَمَاكِنِهِمْ فِي ٱلْمَحَلَّةِ حَتَّى بَرِئُوا. ٨ 8
ಜನರೆಲ್ಲರೂ ಸುನ್ನತಿ ಮಾಡಿಸಿಕೊಂಡ ತರುವಾಯ ಅವರು ವಾಸಿಯಾಗುವವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
وَقَالَ ٱلرَّبُّ لِيَشُوعَ: «ٱلْيَوْمَ قَدْ دَحْرَجْتُ عَنْكُمْ عَارَ مِصْرَ». فَدُعِيَ ٱسْمُ ذَلِكَ ٱلْمَكَانِ «ٱلْجِلْجَالَ» إِلَى هَذَا ٱلْيَوْمِ. ٩ 9
ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.
فَحَلَّ بَنُو إِسْرَائِيلَ فِي ٱلْجِلْجَالِ، وَعَمِلُوا ٱلْفِصْحَ فِي ٱلْيَوْمِ ٱلرَّابِعَ عَشَرَ مِنَ ٱلشَّهْرِ مَسَاءً فِي عَرَبَاتِ أَرِيحَا. ١٠ 10
ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.
وَأَكَلُوا مِنْ غَلَّةِ ٱلْأَرْضِ فِي ٱلْغَدِ بَعْدَ ٱلْفِصْحِ فَطِيرًا وَفَرِيكًا فِي نَفْسِ ذَلِكَ ٱلْيَوْمِ. ١١ 11
ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
وَٱنْقَطَعَ ٱلْمَنُّ فِي ٱلْغَدِ عِنْدَ أَكْلِهِمْ مِنْ غَلَّةِ ٱلْأَرْضِ، وَلَمْ يَكُنْ بَعْدُ لِبَنِي إِسْرَائِيلَ مَنٌّ. فَأَكَلُوا مِنْ مَحْصُولِ أَرْضِ كَنْعَانَ فِي تِلْكَ ٱلسَّنَةِ. ١٢ 12
ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು.
وَحَدَثَ لَمَّا كَانَ يَشُوعُ عِنْدَ أَرِيحَا أَنَّهُ رَفَعَ عَيْنَيْهِ وَنَظَرَ، وَإِذَا بِرَجُلٍ وَاقِفٍ قُبَالَتَهُ، وَسَيْفُهُ مَسْلُولٌ بِيَدِهِ. فَسَارَ يَشُوعُ إِلَيْهِ وَقَالَ لَهُ: «هَلْ لَنَا أَنْتَ أَوْ لِأَعدَائِنَا؟» ١٣ 13
ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.
فَقَالَ: «كَلَّا، بَلْ أَنَا رَئِيسُ جُنْدِ ٱلرَّبِّ. ٱلْآنَ أَتَيْتُ». فَسَقَطَ يَشُوعُ عَلَى وَجْهِهِ إِلَى ٱلْأَرْضِ وَسَجَدَ، وَقَالَ لَهُ: «بِمَاذَا يُكَلِّمُ سَيِّدِي عَبْدَهُ؟» ١٤ 14
ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.
فَقَالَ رَئِيسُ جُنْدِ ٱلرَّبِّ لِيَشُوعَ: «ٱخْلَعْ نَعْلَكَ مِنْ رِجْلِكَ، لِأَنَّ ٱلْمَكَانَ ٱلَّذِي أَنْتَ وَاقِفٌ عَلَيْهِ هُوَ مُقَدَّسٌ». فَفَعَلَ يَشُوعُ كَذَلِكَ. ١٥ 15
ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು.

< يَشُوع 5 >