< يَشُوع 6 >

وَكَانَتْ أَرِيحَا مُغَلَّقَةً مُقَفَّلَةً بِسَبَبِ بَنِي إِسْرَائِيلَ. لَا أَحَدٌ يَخْرُجُ وَلَا أَحَدٌ يَدْخُلُ. ١ 1
ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.
فَقَالَ ٱلرَّبُّ لِيَشُوعَ: «ٱنْظُرْ. قَدْ دَفَعْتُ بِيَدِكَ أَرِيحَا وَمَلِكَهَا، جَبَابِرَةَ ٱلْبَأْسِ. ٢ 2
ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
تَدُورُونَ دَائِرَةَ ٱلْمَدِينَةِ، جَمِيعُ رِجَالِ ٱلْحَرْبِ. حَوْلَ ٱلْمَدِينَةِ مَرَّةً وَاحِدَةً. هَكَذَا تَفْعَلُونَ سِتَّةَ أَيَّامٍ. ٣ 3
ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು.
وَسَبْعَةُ كَهَنَةٍ يَحْمِلُونَ أَبْوَاقَ ٱلْهُتَافِ ٱلسَّبْعَةَ أَمَامَ ٱلتَّابُوتِ. وَفِي ٱلْيَوْمِ ٱلسَّابِعِ تَدُورُونَ دَائِرَةَ ٱلْمَدِينَةِ سَبْعَ مَرَّاتٍ، وَٱلْكَهَنَةُ يَضْرِبُونَ بِٱلْأَبْوَاقِ. ٤ 4
ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.
وَيَكُونُ عِنْدَ ٱمْتِدَادِ صَوْتِ قَرْنِ ٱلْهُتَافِ، عِنْدَ ٱسْتِمَاعِكُمْ صَوْتَ ٱلْبُوقِ، أَنَّ جَمِيعَ ٱلشَّعْبِ يَهْتِفُ هُتَافًا عَظِيمًا، فَيَسْقُطُ سُورُ ٱلْمَدِينَةِ فِي مَكَانِهِ، وَيَصْعَدُ ٱلشَّعْبُ كُلُّ رَجُلٍ مَعَ وَجْهِهِ». ٥ 5
ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.
فَدَعَا يَشُوعُ بْنُ نُونٍ ٱلْكَهَنَةَ وَقَالَ لَهُمُ: «ٱحْمِلُوا تَابُوتَ ٱلْعَهْدِ. وَلْيَحْمِلْ سَبْعَةُ كَهَنَةٍ سَبْعَةَ أَبْوَاقِ هُتَافٍ أَمَامَ تَابُوتِ ٱلرَّبِّ». ٦ 6
ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.
وَقَالَ لِلشَّعْبِ: «ٱجْتَازُوا وَدُورُوا دَائِرَةَ ٱلْمَدِينَةِ، وَلْيَجْتَزِ ٱلْمُتَجَرِّدُ أَمَامَ تَابُوتِ ٱلرَّبِّ». ٧ 7
ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.
وَكَانَ كَمَا قَالَ يَشُوعُ لِلشَّعْبِ. ٱجْتَازَ ٱلسَّبْعَةُ ٱلْكَهَنَةُ حَامِلِينَ أَبْوَاقَ ٱلْهُتَافِ ٱلسَّبْعَةَ أَمَامَ ٱلرَّبِّ، وَضَرَبُوا بِٱلْأَبْوَاقِ. وَتَابُوتُ عَهْدِ ٱلرَّبِّ سَائِرٌ وَرَاءَهُمْ، ٨ 8
ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.
وَكُلُّ مُتَجَرِّدٍ سَائِرٌ أَمَامَ ٱلْكَهَنَةِ ٱلضَّارِبِينَ بِٱلْأَبْوَاقِ. وَٱلسَّاقَةُ سَائِرَةٌ وَرَاءَ ٱلتَّابُوتِ. كَانُوا يَسِيرُونَ وَيَضْرِبُونَ بِٱلْأَبْوَاقِ. ٩ 9
ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
وَأَمَرَ يَشُوعُ ٱلشَّعْبَ قَائِلًا: «لَا تَهْتِفُوا وَلَا تُسَمِّعُوا صَوْتَكُمْ، وَلَا تَخْرُجْ مِنْ أَفْوَاهِكُمْ كَلِمَةٌ حَتَّى يَوْمَ أَقُولُ لَكُمُ: ٱهْتِفُوا. فَتَهْتِفُونَ». ١٠ 10
ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.
فَدَارَ تَابُوتُ ٱلرَّبِّ حَوْلَ ٱلْمَدِينَةِ مَرَّةً وَاحِدَةً. ثُمَّ دَخَلُوا ٱلْمَحَلَّةَ وَبَاتُوا فِي ٱلْمَحَلَّةِ. ١١ 11
ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.
فَبَكَّرَ يَشُوعُ فِي ٱلْغَدِ، وَحَمَلَ ٱلْكَهَنَةُ تَابُوتَ ٱلرَّبِّ، ١٢ 12
ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.
وَٱلسَّبْعَةُ ٱلْكَهَنَةُ ٱلْحَامِلُونَ أَبْوَاقَ ٱلْهُتَافِ ٱلسَّبْعَةَ أَمَامَ تَابُوتِ ٱلرَّبِّ سَائِرُونَ سَيْرًا وَضَارِبُونَ بِٱلْأَبْوَاقِ، وَٱلْمُتَجَرِّدُونَ سَائِرُونَ أَمَامَهُمْ، وَٱلْسَّاقَةُ سَائِرَةٌ وَرَاءَ تَابُوتِ ٱلرَّبِّ. كَانُوا يَسِيرُونَ وَيَضْرِبُونَ بِٱلْأَبْوَاقِ. ١٣ 13
ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.
وَدَارُوا بِٱلْمَدِينَةِ فِي ٱلْيَوْمِ ٱلثَّانِي مَرَّةً وَاحِدَةً، ثُمَّ رَجَعُوا إِلَى ٱلْمَحَلَّةِ. هَكَذَا فَعَلُوا سِتَّةَ أَيَّامٍ. ١٤ 14
ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು.
وَكَانَ فِي ٱلْيَوْمِ ٱلسَّابِعِ أَنَّهُمْ بَكَّرُوا عِنْدَ طُلُوعِ ٱلْفَجْرِ وَدَارُوا دَائِرَةَ ٱلْمَدِينَةِ عَلَى هَذَا ٱلْمِنْوَالِ سَبْعَ مَرَّاتٍ. فِي ذَلِكَ ٱلْيَوْمِ فَقَطْ دَارُوا دَائِرَةَ ٱلْمَدِينَةِ سَبْعَ مَرَّاتٍ. ١٥ 15
ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.
وَكَانَ فِي ٱلْمَرَّةِ ٱلسَّابِعَةِ عِنْدَمَا ضَرَبَ ٱلْكَهَنَةُ بِٱلْأَبْوَاقِ أَنَّ يَشُوعَ قَالَ لِلشَّعْبِ: «ٱهْتِفُوا، لِأَنَّ ٱلرَّبَّ قَدْ أَعْطَاكُمُ ٱلْمَدِينَةَ. ١٦ 16
ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.
فَتَكُونُ ٱلْمَدِينَةُ وَكُلُّ مَا فِيهَا مُحَرَّمًا لِلرَّبِّ. رَاحَابُ ٱلزَّانِيَةُ فَقَطْ تَحْيَا هِيَ وَكُلُّ مَنْ مَعَهَا فِي ٱلْبَيْتِ، لِأَنَّهَا قَدْ خَبَّأَتِ ٱلْمُرْسَلَيْنِ ٱللَّذَيْنِ أَرْسَلْنَاهُمَا. ١٧ 17
ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.
وَأَمَّا أَنْتُمْ فَٱحْتَرِزُوا مِنَ ٱلْحَرَامِ لِئَلَّا تُحَرَّمُوا، وَتَأْخُذُوا مِنَ ٱلْحَرَامِ وَتَجْعَلُوا مَحَلَّةَ إِسْرَائِيلَ مُحَرَّمَةً وَتُكَدِّرُوهَا. ١٨ 18
ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.
وَكُلُّ ٱلْفِضَّةِ وَٱلذَّهَبِ وَآنِيَةِ ٱلنُّحَاسِ وَٱلْحَدِيدِ تَكُونُ قُدْسًا لِلرَّبِّ وَتَدْخُلُ فِي خِزَانَةِ ٱلرَّبِّ». ١٩ 19
ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.
فَهَتَفَ ٱلشَّعْبُ وَضَرَبُوا بِٱلْأَبْوَاقِ. وَكَانَ حِينَ سَمِعَ ٱلشَّعْبُ صَوْتَ ٱلْبُوقِ أَنَّ ٱلشَّعْبَ هَتَفَ هُتَافًا عَظِيمًا، فَسَقَطَ ٱلسُّورُ فِي مَكَانِهِ، وَصَعِدَ ٱلشَّعْبُ إِلَى ٱلْمَدِينَةِ كُلُّ رَجُلٍ مَعَ وَجْهِهِ، وَأَخَذُوا ٱلْمَدِينَةَ. ٢٠ 20
ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.
وَحَرَّمُوا كُلَّ مَا فِي ٱلْمَدِينَةِ مِنْ رَجُلٍ وَٱمْرَأَةٍ، مِنْ طِفْلٍ وَشَيْخٍ، حَتَّى ٱلْبَقَرَ وَٱلْغَنَمَ وَٱلْحَمِيرَ بِحَدِّ ٱلسَّيْفِ. ٢١ 21
ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.
وَقَالَ يَشُوعُ لِلرَّجُلَيْنِ ٱللَّذَيْنِ تَجَسَّسَا ٱلْأَرْضَ: «ٱدْخُلَا بَيْتَ ٱلْمَرْأَةِ ٱلزَّانِيَةِ وَأَخْرِجَا مِنْ هُنَاكَ ٱلْمَرْأَةَ وَكُلَّ مَا لَهَا كَمَا حَلَفْتُمَا لَهَا». ٢٢ 22
ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.
فَدَخَلَ ٱلْغُلَامَانِ ٱلْجَاسُوسَانِ وَأَخْرَجَا رَاحَابَ وَأَبَاهَا وَأُمَّهَا وَإِخْوَتَهَا وَكُلَّ مَا لَهَا، وَأَخْرَجَا كُلَّ عَشَائِرِهَا وَتَرَكَاهُمْ خَارِجَ مَحَلَّةِ إِسْرَائِيلَ. ٢٣ 23
ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
وَأَحْرَقُوا ٱلْمَدِينَةَ بِٱلنَّارِ مَعَ كُلِّ مَا بِهَا، إِنَّمَا ٱلْفِضَّةُ وَٱلذَّهَبُ وَآنِيَةُ ٱلنُّحَاسِ وَٱلْحَدِيدِ جَعَلُوهَا فِي خِزَانَةِ بَيْتِ ٱلرَّبِّ. ٢٤ 24
ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.
وَٱسْتَحْيَا يَشُوعُ رَاحَابَ ٱلزَّانِيَةَ وَبَيْتَ أَبِيهَا وَكُلَّ مَا لَهَا، وَسَكَنَتْ فِي وَسَطِ إِسْرَائِيلَ إِلَى هَذَا ٱلْيَوْمِ، لِأَنَّهَا خَبَّأَتِ ٱلْمُرْسَلَيْنِ ٱللَّذَيْنِ أَرْسَلَهُمَا يَشُوعُ لِكَيْ يَتَجَسَّسَا أَرِيحَا. ٢٥ 25
ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.
وَحَلَفَ يَشُوعُ فِي ذَلِكَ ٱلْوَقْتِ قَائِلًا: «مَلْعُونٌ قُدَّامَ ٱلرَّبِّ ٱلرَّجُلُ ٱلَّذِي يَقُومُ وَيَبْنِي هَذِهِ ٱلْمَدِينَةَ أَرِيحَا. بِبِكْرِهِ يُؤَسِّسُهَا وَبِصَغِيرِهِ يَنْصِبُ أَبْوَابَهَا». ٢٦ 26
ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”
وَكَانَ ٱلرَّبُّ مَعَ يَشُوعَ، وَكَانَ خَبَرُهُ فِي جَمِيعِ ٱلْأَرْضِ. ٢٧ 27
ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.

< يَشُوع 6 >