< يَشُوع 7 >

وَخَانَ بَنُو إِسْرَائِيلَ خِيَانَةً فِي ٱلْحَرَامِ، فَأَخَذَ عَخَانُ بْنُ كَرْمِي بْنِ زَبْدِي بْنِ زَارَحَ مِنْ سِبْطِ يَهُوذَا مِنَ ٱلْحَرَامِ، فَحَمِيَ غَضَبُ ٱلرَّبِّ عَلَى بَنِي إِسْرَائِيلَ. ١ 1
ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.
وَأَرْسَلَ يَشُوعُ رِجَالًا مِنْ أَرِيحَا إِلَى عَايَ ٱلَّتِي عِنْدَ بَيْتِ آوِنَ شَرْقِيَّ بَيْتِ إِيلَ، وَكَلَّمَهُمْ قَائِلًا: «ٱصْعَدُوا تَجَسَّسُوا ٱلْأَرْضَ». فَصَعِدَ ٱلرِّجَالُ وَتَجَسَّسُوا عَايَ. ٢ 2
ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.
ثُمَّ رَجَعُوا إِلَى يَشُوعَ وَقَالُوا لَهُ: «لَا يَصْعَدْ كُلُّ ٱلشَّعْبِ، بَلْ يَصْعَدْ نَحْوُ أَلْفَيْ رَجُلٍ أَوْ ثَلَاثَةُ آلَافِ رَجُلٍ وَيَضْرِبُوا عَايَ. لَا تُكَلِّفْ كُلَّ ٱلشَّعْبِ إِلَى هُنَاكَ لِأَنَّهُمْ قَلِيلُونَ». ٣ 3
ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.
فَصَعِدَ مِنَ ٱلشَّعْبِ إِلَى هُنَاكَ نَحْوُ ثَلَاثَةِ آلَافِ رَجُلٍ، وَهَرَبُوا أَمَامَ أَهْلِ عَايَ. ٤ 4
ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.
فَضَرَبَ مِنْهُمْ أَهْلُ عَايَ نَحْوَ سِتَّةٍ وَثَلَاثِينَ رَجُلًا، وَلَحِقُوهُمْ مِنْ أَمَامِ ٱلْبَابِ إِلَى شَبَارِيمَ وَضَرَبُوهُمْ فِي ٱلْمُنْحَدَرِ. فَذَابَ قَلْبُ ٱلشَّعْبِ وَصَارَ مِثْلَ ٱلْمَاءِ. ٥ 5
ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
فَمَزَّقَ يَشُوعُ ثِيَابَهُ وَسَقَطَ عَلَى وَجْهِهِ إِلَى ٱلْأَرْضِ أَمَامَ تَابُوتِ ٱلرَّبِّ إِلَى ٱلْمَسَاءِ، هُوَ وَشُيُوخُ إِسْرَائِيلَ، وَوَضَعُوا تُرَابًا عَلَى رُؤُوسِهِمْ. ٦ 6
ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.
وَقَالَ يَشُوعُ: «آهِ يَا سَيِّدُ ٱلرَّبُّ! لِمَاذَا عَبَّرْتَ هَذَا ٱلشَّعْبَ ٱلْأُرْدُنَّ تَعْبِيرًا لِكَيْ تَدْفَعَنَا إِلَى يَدِ ٱلْأَمُورِيِّينَ لِيُبِيدُونَا؟ لَيْتَنَا ٱرْتَضَيْنَا وَسَكَنَّا فِي عَبْرِ ٱلْأُرْدُنِّ. ٧ 7
ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
أَسْأَلُكَ يَا سَيِّدُ: مَاذَا أَقُولُ بَعْدَمَا حَوَّلَ إِسْرَائِيلُ قَفَاهُ أَمَامَ أَعْدَائِهِ؟ ٨ 8
ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.
فَيَسْمَعُ ٱلْكَنْعَانِيُّونَ وَجَمِيعُ سُكَّانِ ٱلْأَرْضِ وَيُحِيطُونَ بِنَا وَيَقْرِضُونَ ٱسْمَنَا مِنَ ٱلْأَرْضِ. وَمَاذَا تَصْنَعُ لِٱسْمِكَ ٱلْعَظِيمِ؟». ٩ 9
ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.
فَقَالَ ٱلرَّبُّ لِيَشُوعَ: «قُمْ! لِمَاذَا أَنْتَ سَاقِطٌ عَلَى وَجْهِكَ؟ ١٠ 10
ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?
قَدْ أَخْطَأَ إِسْرَائِيلُ، بَلْ تَعَدَّوْا عَهْدِي ٱلَّذِي أَمَرْتُهُمْ بِهِ، بَلْ أَخَذُوا مِنَ ٱلْحَرَامِ، بَلْ سَرَقُوا، بَلْ أَنْكَرُوا، بَلْ وَضَعُوا فِي أَمْتِعَتِهِمْ. ١١ 11
ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
فَلَمْ يَتَمَكَّنْ بَنُو إِسْرَائِيلَ لِلثُّبُوتِ أَمَامَ أَعْدَائِهِمْ. يُدِيرُونَ قَفَاهُمْ أَمَامَ أَعْدَائِهِمْ لِأَنَّهُمْ مَحْرُومُونَ، وَلَا أَعُودُ أَكُونُ مَعَكُمْ إِنْ لَمْ تُبِيدُوا ٱلْحَرَامَ مِنْ وَسَطِكُمْ. ١٢ 12
ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.
قُمْ قَدِّسِ ٱلشَّعْبَ وَقُلْ: تَقَدَّسُوا لِلْغَدِ. لِأَنَّهُ هَكَذَا قَالَ ٱلرَّبُّ إِلَهُ إِسْرَائِيلَ: فِي وَسَطِكَ حَرَامٌ يَا إِسْرَائِيلُ، فَلَا تَتَمَكَّنُ لِلثُّبُوتِ أَمَامَ أَعْدَائِكَ حَتَّى تَنْزِعُوا ٱلْحَرَامَ مِنْ وَسَطِكُمْ. ١٣ 13
“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.
فَتَتَقَدَّمُونَ فِي ٱلْغَدِ بِأَسْبَاطِكُمْ، وَيَكُونُ أَنَّ ٱلسِّبْطَ ٱلَّذِي يَأْخُذُهُ ٱلرَّبُّ يَتَقَدَّمُ بِعَشَائِرِهِ، وَٱلْعَشِيرَةُ ٱلَّتِي يَأْخُذُهَا ٱلرَّبُّ تَتَقَدَّمُ بِبُيُوتِهَا، وَٱلْبَيْتُ ٱلَّذِي يَأْخُذُهُ ٱلرَّبُّ يَتَقَدَّمُ بِرِجَالِهِ. ١٤ 14
“‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
وَيَكُونُ ٱلْمَأْخُوذُ بِٱلْحَرَامِ يُحْرَقُ بِٱلنَّارِ هُوَ وَكُلُّ مَا لَهُ، لِأَنَّهُ تَعَدَّى عَهْدَ ٱلرَّبِّ، وَلِأَنَّهُ عَمِلَ قَبَاحَةً فِي إِسْرَائِيلَ». ١٥ 15
ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”
فَبَكَّرَ يَشُوعُ فِي ٱلْغَدِ وَقَدَّمَ إِسْرَائِيلَ بِأَسْبَاطِهِ، فَأُخِذَ سِبْطُ يَهُوذَا. ١٦ 16
ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು.
ثُمَّ قَدَّمَ قَبِيلَةَ يَهُوذَا فَأُخِذَتْ عَشِيرَةُ ٱلزَّارَحِيِّينَ. ثُمَّ قَدَّمَ عَشِيرَةَ ٱلزَّارَحِيِّينَ بِرِجَالِهِمْ فَأُخِذَ زَبْدِي. ١٧ 17
ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು.
فَقَدَّمَ بَيْتَهُ بِرِجَالِهِ فَأُخِذَ عَخَانُ بْنُ كَرْمِي بْنِ زَبْدِي بْنِ زَارَحَ مِنْ سِبْطِ يَهُوذَا. ١٨ 18
ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.
فَقَالَ يَشُوعُ لِعَخَانَ: «يَا ٱبْنِي، أَعْطِ ٱلْآنَ مَجْدًا لِلرَّبِّ إِلَهِ إِسْرَائِيلَ، وَٱعْتَرِفْ لَهُ وَأَخْبِرْنِي ٱلْآنَ مَاذَا عَمِلْتَ. لَا تُخْفِ عَنِّي». ١٩ 19
ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.
فَأَجَابَ عَخَانُ يَشُوعَ وَقَالَ: «حَقًّا إِنِّي قَدْ أَخْطَأْتُ إِلَى ٱلرَّبِّ إِلَهِ إِسْرَائِيلَ وَصَنَعْتُ كَذَا وَكَذَا. ٢٠ 20
ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.
رَأَيْتُ فِي ٱلْغَنِيمَةِ رِدَاءً شِنْعَارِيًّا نَفِيسًا، وَمِئَتَيْ شَاقِلِ فِضَّةٍ، وَلِسَانَ ذَهَبٍ وَزْنُهُ خَمْسُونَ شَاقِلًا، فَٱشْتَهَيْتُهَا وَأَخَذْتُهَا. وَهَا هِيَ مَطْمُورَةٌ فِي ٱلْأَرْضِ فِي وَسَطِ خَيْمَتِي، وَٱلْفِضَّةُ تَحْتَهَا». ٢١ 21
ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.
فَأَرْسَلَ يَشُوعُ رُسُلًا فَرَكَضُوا إِلَى ٱلْخَيْمَةِ وَإِذَا هِيَ مَطْمُورَةٌ فِي خَيْمَتِهِ وَٱلْفِضَّةُ تَحْتَهَا. ٢٢ 22
ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.
فَأَخَذُوهَا مِنْ وَسَطِ ٱلْخَيْمَةِ وَأَتَوْا بِهَا إِلَى يَشُوعَ وَإِلَى جَمِيعِ بَنِي إِسْرَائِيلَ، وَبَسَطُوهَا أَمَامَ ٱلرَّبِّ. ٢٣ 23
ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.
فَأَخَذَ يَشُوعُ عَخَانَ بْنَ زَارَحَ وَٱلْفِضَّةَ وَٱلرِّدَاءَ وَلِسَانَ ٱلذَّهَبِ وَبَنِيهِ وَبَنَاتِهِ وَبَقَرَهُ وَحَمِيرَهُ وَغَنَمَهُ وَخَيْمَتَهُ وَكُلَّ مَا لَهُ، وَجَمِيعُ إِسْرَائِيلَ مَعَهُ، وَصَعِدُوا بِهِمْ إِلَى وَادِي عَخُورَ. ٢٤ 24
ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು.
فَقَالَ يَشُوعُ: «كَيْفَ كَدَّرْتَنَا؟ يُكَدِّرُكَ ٱلرَّبُّ فِي هَذَا ٱلْيَوْمِ!». فَرَجَمَهُ جَمِيعُ إِسْرَائِيلَ بِٱلْحِجَارَةِ وَأَحْرَقُوهُمْ بِٱلنَّارِ وَرَمَوْهُمْ بِٱلْحِجَارَةِ، ٢٥ 25
ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,
وَأَقَامُوا فَوْقَهُ رُجْمَةَ حِجَارَةٍ عَظِيمَةً إِلَى هَذَا ٱلْيَوْمِ. فَرَجَعَ ٱلرَّبُّ عَنْ حُمُوِّ غَضَبِهِ. وَلِذَلِكَ دُعِيَ ٱسْمُ ذَلِكَ ٱلْمَكَانِ «وَادِيَ عَخُورَ» إِلَى هَذَا ٱلْيَوْمِ. ٢٦ 26
ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.

< يَشُوع 7 >