< اَلْقُضَاة 3 >

فَهَؤُلَاءِ هُمُ ٱلْأُمَمُ ٱلَّذِينَ تَرَكَهُمُ ٱلرَّبُّ لِيَمْتَحِنَ بِهِمْ إِسْرَائِيلَ، كُلَّ ٱلَّذِينَ لَمْ يَعْرِفُوا جَمِيعَ حُرُوبِ كَنْعَانَ ١ 1
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
إِنَّمَا لِمَعْرِفَةِ أَجْيَالِ بَنِي إِسْرَائِيلَ لِتَعْلِيمِهِمْ ٱلْحَرْبَ. ٱلَّذِينَ لَمْ يَعْرِفُوهَا قَبْلُ فَقَطْ: ٢ 2
ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
أَقْطَابُ ٱلْفِلِسْطِينِيِّينَ ٱلْخَمْسَةُ، وَجَمِيعُ ٱلْكَنْعَانِيِّينَ وَٱلصِّيْدُونِيِّينَ وَٱلْحِوِّيِّينَ سُكَّانِ جَبَلِ لُبْنَانَ، مِنْ جَبَلِ بَعْلِ حَرْمُونَ إِلَى مَدْخَلِ حَمَاةَ. ٣ 3
ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
كَانُوا لِٱمْتِحَانِ إِسْرَائِيلَ بِهِمْ، لِكَيْ يُعْلَمَ هَلْ يَسْمَعُونَ وَصَايَا ٱلرَّبِّ ٱلَّتِي أَوْصَى بِهَا آبَاءَهُمْ عَنْ يَدِ مُوسَى. ٤ 4
ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
فَسَكَنَ بَنُو إِسْرَائِيلَ فِي وَسَطِ ٱلْكَنْعَانِيِّينَ وَٱلْحِثِّيِّينَ وَٱلْأَمُورِيِّينَ وَٱلْفِرِزِّيِّينَ وَٱلْحِوِّيِّينَ وَٱلْيَبُوسِيِّينَ، ٥ 5
ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
وَٱتَّخَذُوا بَنَاتِهِمْ لِأَنْفُسِهِمْ نِسَاءً، وَأَعْطَوْا بَنَاتِهِمْ لِبَنِيهِمْ وَعَبَدُوا آلِهَتَهُمْ. ٦ 6
ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
فَعَمِلَ بَنُو إِسْرَائِيلَ ٱلشَّرَّ فِي عَيْنَيِ ٱلرَّبِّ، وَنَسُوا ٱلرَّبَّ إِلَهَهُمْ وَعَبَدُوا ٱلْبَعْلِيمَ وَٱلسَّوَارِيَ. ٧ 7
ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
فَحَمِيَ غَضَبُ ٱلرَّبِّ عَلَى إِسْرَائِيلَ، فَبَاعَهُمْ بِيَدِ كُوشَانَ رِشَعْتَايِمَ مَلِكِ أَرَامِ ٱلنَّهْرَيْنِ. فَعَبَدَ بَنُو إِسْرَائِيلَ كُوشَانَ رِشَعْتَايِمَ ثَمَانِيَ سِنِينَ. ٨ 8
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
وَصَرَخَ بَنُو إِسْرَائِيلَ إِلَى ٱلرَّبِّ، فَأَقَامَ ٱلرَّبُّ مُخَلِّصًا لِبَنِي إِسْرَائِيلَ فَخَلَّصَهُمْ، عُثْنِيئِيلَ بْنَ قَنَازَ أَخَا كَالِبَ ٱلْأَصْغَرَ. ٩ 9
ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
فَكَانَ عَلَيْهِ رُوحُ ٱلرَّبِّ، وَقَضَى لِإِسْرَائِيلَ. وَخَرَجَ لِلْحَرْبِ فَدَفَعَ ٱلرَّبُّ لِيَدِهِ كُوشَانَ رِشَعْتَايِمَ مَلِكَ أَرَامَ، وَٱعْتَزَّتْ يَدُهُ عَلَى كُوشَانِ رِشَعْتَايِمَ. ١٠ 10
೧೦ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
وَٱسْتَرَاحَتِ ٱلْأَرْضُ أَرْبَعِينَ سَنَةً. وَمَاتَ عُثْنِيئِيلُ بْنُ قَنَازَ. ١١ 11
೧೧ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
وَعَادَ بَنُو إِسْرَائِيلَ يَعْمَلُونَ ٱلشَّرَّ فِي عَيْنَيِ ٱلرَّبِّ، فَشَدَّدَ ٱلرَّبُّ عِجْلُونَ مَلِكَ مُوآبَ عَلَى إِسْرَائِيلَ، لِأَنَّهُمْ عَمِلُوا ٱلشَّرَّ فِي عَيْنَيِ ٱلرَّبِّ. ١٢ 12
೧೨ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
فَجَمَعَ إِلَيْهِ بَنِي عَمُّونَ وَعَمَالِيقَ، وَسَارَ وَضَرَبَ إِسْرَائِيلَ، وَٱمْتَلَكُوا مَدِينَةَ ٱلنَّخْلِ. ١٣ 13
೧೩ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
فَعَبَدَ بَنُو إِسْرَائِيلَ عِجْلُونَ مَلِكَ مُوآبَ ثَمَانِيَ عَشْرَةَ سَنَةً. ١٤ 14
೧೪ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
وَصَرَخَ بَنُو إِسْرَائِيلَ إِلَى ٱلرَّبِّ، فَأَقَامَ لَهُمُ ٱلرَّبُّ مُخَلِّصًا إِهُودَ بْنَ جِيرَا ٱلْبَنْيَامِينِيَّ، رَجُلًا أَعْسَرَ. فَأَرْسَلَ بَنُو إِسْرَائِيلَ بِيَدِهِ هَدِيَّةً لِعِجْلُونَ مَلِكِ مُوآبَ. ١٥ 15
೧೫ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
فَعَمِلَ إِهُودُ لِنَفْسِهِ سَيْفًا، ذَا حَدَّيْنِ طُولُهُ ذِرَاعٌ، وَتَقَلَّدَهُ تَحْتَ ثِيَابِهِ عَلَى فَخْذِهِ ٱلْيُمْنَى. ١٦ 16
೧೬ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
وَقَدَّمَ ٱلْهَدِيَّةَ لِعِجْلُونَ مَلِكِ مُوآبَ. وَكَانَ عِجْلُونُ رَجُلًا سَمِينًا جِدًّا. ١٧ 17
೧೭ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
وَكَانَ لَمَّا ٱنْتَهَى مِنْ تَقْدِيمِ ٱلْهَدِيَّةِ، صَرَفَ ٱلْقَوْمَ حَامِلِي ٱلْهَدِيَّةِ، ١٨ 18
೧೮ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
وَأَمَّا هُوَ فَرَجَعَ مِنْ عِنْدِ ٱلْمَنْحُوتَاتِ ٱلَّتِي لَدَى ٱلْجِلْجَالِ وَقَالَ: «لِي كَلَامُ سِرٍّ إِلَيْكَ أَيُّهَا ٱلْمَلِكُ». فَقَالَ: «صَهْ». وَخَرَجَ مِنْ عِنْدِهِ جَمِيعُ ٱلْوَاقِفِينَ لَدَيْهِ. ١٩ 19
೧೯ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
فَدَخَلَ إِلَيْهِ إِهُودُ وَهُوَ جَالِسٌ فِي عُلِّيَّةِ بُرُودٍ كَانَتْ لَهُ وَحْدَهُ. وَقَالَ إِهُودُ: «عِنْدِي كَلَامُ ٱللهِ إِلَيْكَ». فَقَامَ عَنِ ٱلْكُرْسِيِّ. ٢٠ 20
೨೦ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
فَمَدَّ إِهُودُ يَدَهُ ٱلْيُسْرَى وَأَخَذَ ٱلسَّيْفَ عَنْ فَخْذِهِ ٱلْيُمْنَى وَضَرَبَهُ فِي بَطْنِهِ. ٢١ 21
೨೧ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
فَدَخَلَ ٱلْقَائِمُ أَيْضًا وَرَاءَ ٱلنَّصْلِ، وَطَبَقَ ٱلشَّحْمُ وَرَاءَ ٱلنَّصْلِ لِأَنَّهُ لَمْ يَجْذُبِ ٱلسَّيْفَ مِنْ بَطْنِهِ. وَخَرَجَ مِنَ ٱلْحِتَارِ. ٢٢ 22
೨೨ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
فَخَرَجَ إِهُودُ مِنَ ٱلرِّوَاقِ وَأَغْلَقَ أَبْوَابَ ٱلْعِلِّيَّةِ وَرَاءَهُ وَأَقْفَلَهَا. ٢٣ 23
೨೩ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
وَلَمَّا خَرَجَ، جَاءَ عَبِيدُهُ وَنَظَرُوا وَإِذَا أَبْوَابُ ٱلْعِلِّيَّةِ مُقْفَلَةٌ، فَقَالُوا: «إِنَّهُ مُغَطٍّ رِجْلَيْهِ فِي مُخْدَعِ ٱلْبُرُودِ». ٢٤ 24
೨೪ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
فَلَبِثُوا حَتَّى خَجِلُوا وَإِذَا هُوَ لَا يَفْتَحُ أَبْوَابَ ٱلْعِلِّيَّةِ. فَأَخَذُوا ٱلْمِفْتَاحَ وَفَتَحُوا وَإِذَا سَيِّدُهُمْ سَاقِطٌ عَلَى ٱلْأَرْضِ مَيْتًا. ٢٥ 25
೨೫ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
وَأَمَّا إِهُودُ فَنَجَا، إِذْ هُمْ مَبْهُوتُونَ، وَعَبَرَ ٱلْمَنْحُوتَاتِ وَنَجَا إِلَى سِعِيرَةَ. ٢٦ 26
೨೬ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
وَكَانَ عِنْدَ مَجِيئِهِ أَنَّهُ ضَرَبَ بِٱلْبُوقِ فِي جَبَلِ أَفْرَايِمَ، فَنَزَلَ مَعْهُ بَنُو إِسْرَائِيلَ عَنِ ٱلْجَبَلِ وَهُوَ قُدَّامَهُمْ. ٢٧ 27
೨೭ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
وَقَالَ لَهُمُ: «ٱتْبَعُونِي لِأَنَّ ٱلرَّبَّ قَدْ دَفَعَ أَعْدَاءَكُمُ ٱلْمُوآبِيِّينَ لِيَدِكُمْ». فَنَزَلُوا وَرَاءَهُ وَأَخَذُوا مَخَاوِضَ ٱلْأُرْدُنِّ إِلَى مُوآبَ، وَلَمْ يَدَعُوا أَحَدًا يَعْبُرُ. ٢٨ 28
೨೮ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
فَضَرَبُوا مِنْ مُوآبَ فِي ذَلِكَ ٱلْوَقْتِ نَحْوَ عَشَرَةِ آلَافِ رَجُلٍ، كُلَّ نَشِيطٍ، وَكُلَّ ذِي بَأْسٍ، وَلَمْ يَنْجُ أَحَدٌ. ٢٩ 29
೨೯ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
فَذَلَّ ٱلْمُوآبِيُّونَ فِي ذَلِكَ ٱلْيَوْمِ تَحْتَ يَدِ إِسْرَائِيلَ. وَٱسْتَرَاحَتِ ٱلْأَرْضُ ثَمَانِينَ سَنَةً. ٣٠ 30
೩೦ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
وَكَانَ بَعْدَهُ شَمْجَرُ بْنُ عَنَاةَ، فَضَرَبَ مِنَ ٱلْفِلِسْطِينِيِّينَ سِتَّ مِئَةِ رَجُلٍ بِمِنْسَاسِ ٱلْبَقَرِ. وَهُوَ أَيْضًا خَلَّصَ إِسْرَائِيلَ. ٣١ 31
೩೧ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

< اَلْقُضَاة 3 >