< اَللَّاوِيِّينَ 14 >

وَكَلَّمَ ٱلرَّبُّ مُوسَى قَائِلًا: ١ 1
ಯೆಹೋವನು ಮೋಶೆಯೊಂದಿಗೆ ಮಾತನಾಡಿ,
«هَذِهِ تَكُونُ شَرِيعَةَ ٱلْأَبْرَصِ: يَوْمَ طُهْرِهِ، يُؤْتَى بِهِ إِلَى ٱلْكَاهِنِ. ٢ 2
“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
وَيَخْرُجُ ٱلْكَاهِنُ إِلَى خَارِجِ ٱلْمَحَلَّةِ، فَإِنْ رَأَى ٱلْكَاهِنُ وَإِذَا ضَرْبَةُ ٱلْبَرَصِ قَدْ بَرِئَتْ مِنَ ٱلْأَبْرَصِ، ٣ 3
ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
يَأْمُرُ ٱلْكَاهِنُ أَنْ يُؤْخَذَ لِلْمُتَطَهِّرِ عُصْفُورَانِ حَيَّانِ طَاهِرَانِ، وَخَشَبُ أَرْزٍ وَقِرْمِزٌ وَزُوفَا. ٤ 4
ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
وَيَأْمُرُ ٱلْكَاهِنُ أَنْ يُذْبَحَ ٱلْعُصْفُورُ ٱلْوَاحِدُ فِي إِنَاءِ خَزَفٍ عَلَى مَاءٍ حَيٍّ. ٥ 5
ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
أَمَّا ٱلْعُصْفُورُ ٱلْحَيُّ فَيَأْخُذُهُ مَعَ خَشَبِ ٱلْأَرْزِ وَٱلْقِرْمِزِ وَٱلزُّوفَا وَيَغْمِسُهَا مَعَ ٱلْعُصْفُورِ ٱلْحَيِّ فِي دَمِ ٱلْعُصْفُورِ ٱلْمَذْبُوحِ عَلَى ٱلْمَاءِ ٱلْحَيِّ، ٦ 6
“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
وَيَنْضِحُ عَلَى ٱلْمُتَطَهِّرِ مِنَ ٱلْبَرَصِ سَبْعَ مَرَّاتٍ فَيُطَهِّرُهُ، ثُمَّ يُطْلِقُ ٱلْعُصْفُورَ ٱلْحَيَّ عَلَى وَجْهِ ٱلصَّحْرَاءِ. ٧ 7
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
فَيَغْسِلُ ٱلْمُتَطَهِّرُ ثِيَابَهُ وَيَحْلِقُ كُلَّ شَعْرِهِ وَيَسْتَحِمُّ بِمَاءٍ فَيَطْهُرُ. ثُمَّ يَدْخُلُ ٱلْمَحَلَّةَ، لَكِنْ يُقِيمُ خَارِجَ خَيْمَتِهِ سَبْعَةَ أَيَّامٍ. ٨ 8
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
وَفِي ٱلْيَوْمِ ٱلسَّابِعِ يَحْلِقُ كُلَّ شَعْرِهِ: رَأْسَهُ وَلِحْيَتَهُ وَحَوَاجِبَ عَيْنَيْهِ وَجَمِيعَ شَعْرِهِ يَحْلِقُ. وَيَغْسِلُ ثِيَابَهُ وَيَرْحَضُ جَسَدَهُ بِمَاءٍ فَيَطْهُرُ. ٩ 9
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
ثُمَّ فِي ٱلْيَوْمِ ٱلثَّامِنِ يَأْخُذُ خَرُوفَيْنِ صَحِيحَيْنِ وَنَعْجَةً وَاحِدَةً حَوْلِيَّةً صَحِيحَةً وَثَلَاثَةَ أَعْشَارِ دَقِيقٍ تَقْدِمَةً مَلْتُوتَةً بِزَيْتٍ وَلُجَّ زَيْتٍ. ١٠ 10
೧೦“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
فَيُوقِفُ ٱلْكَاهِنُ ٱلْمُطَهِّرُ ٱلْإِنْسَانَ ٱلْمُتَطَهِّرَ وَإِيَّاهَا أَمَامَ ٱلرَّبِّ لَدَى بَابِ خَيْمَةِ ٱلِٱجْتِمَاعِ. ١١ 11
೧೧ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
ثُمَّ يَأْخُذُ ٱلْكَاهِنُ ٱلْخَرُوفَ ٱلْوَاحِدَ وَيُقَرِّبُهُ ذَبِيحَةَ إِثْمٍ مَعَ لُجِّ ٱلزَّيْتِ. يُرَدِّدُهُمَا تَرْدِيدًا أَمَامَ ٱلرَّبِّ. ١٢ 12
೧೨ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
وَيَذْبَحُ ٱلْخَرُوفَ فِي ٱلْمَوْضِعِ ٱلَّذِي يَذْبَحُ فِيهِ ذَبِيحَةَ ٱلْخَطِيَّةِ وَٱلْمُحْرَقَةَ فِي ٱلْمَكَانِ ٱلْمُقَدَّسِ، لِأَنَّ ذَبِيحَةَ ٱلْإِثْمِ كَذَبِيحَةِ ٱلْخَطِيَّةِ لِلْكَاهِنِ. إِنَّهَا قُدْسُ أَقْدَاسٍ. ١٣ 13
೧೩ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
وَيَأْخُذُ ٱلْكَاهِنُ مِنْ دَمِ ذَبِيحَةِ ٱلْإِثْمِ وَيَجْعَلُ ٱلْكَاهِنُ عَلَى شَحْمَةِ أُذُنِ ٱلْمُتَطَهِّرِ ٱلْيُمْنَى، وَعَلَى إِبْهَامِ يَدِهِ ٱلْيُمْنَى، وَعَلَى إِبْهَامِ رِجْلِهِ ٱلْيُمْنَى. ١٤ 14
೧೪ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
وَيَأْخُذُ ٱلْكَاهِنُ مِنْ لُجِّ ٱلزَّيْتِ وَيَصُبُّ فِي كَفِّ ٱلْكَاهِنِ ٱلْيُسْرَى. ١٥ 15
೧೫ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
وَيَغْمِسُ ٱلْكَاهِنُ إِصْبَعَهُ ٱلْيُمْنَى فِي ٱلزَّيْتِ ٱلَّذِي عَلَى كَفِّهِ ٱلْيُسْرَى، وَيَنْضِحُ مِنَ ٱلزَّيْتِ بِإِصْبَعِهِ سَبْعَ مَرَّاتٍ أَمَامَ ٱلرَّبِّ. ١٦ 16
೧೬ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
وَمِمَّا فَضِلَ مِنَ ٱلزَّيْتِ ٱلَّذِي فِي كَفِّهِ يَجْعَلُ ٱلْكَاهِنُ عَلَى شَحْمَةِ أُذُنِ ٱلْمُتَطَهِّرِ ٱلْيُمْنَى، وَعَلَى إِبْهَامِ يَدِهِ ٱلْيُمْنَى، وَعَلَى إِبْهَامِ رِجْلِهِ ٱلْيُمْنَى، عَلَى دَمِ ذَبِيحَةِ ٱلْإِثْمِ. ١٧ 17
೧೭ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
وَٱلْفَاضِلُ مِنَ ٱلزَّيْتِ ٱلَّذِي فِي كَفِّ ٱلْكَاهِنِ يَجْعَلُهُ عَلَى رَأْسِ ٱلْمُتَطَهِّرِ، وَيُكَفِّرُ عَنْهُ ٱلْكَاهِنُ أَمَامَ ٱلرَّبِّ. ١٨ 18
೧೮ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
ثُمَّ يَعْمَلُ ٱلْكَاهِنُ ذَبِيحَةَ ٱلْخَطِيَّةِ وَيُكَفِّرُ عَنِ ٱلْمُتَطَهِّرِ مِنْ نَجَاسَتِهِ. ثُمَّ يَذْبَحُ ٱلْمُحْرَقَةَ. ١٩ 19
೧೯“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
وَيُصْعِدُ ٱلْكَاهِنُ ٱلْمُحْرَقَةَ وَٱلتَّقْدِمَةَ عَلَى ٱلْمَذْبَحِ وَيُكَفِّرُ عَنْهُ ٱلْكَاهِنُ فَيَطْهُرُ. ٢٠ 20
೨೦ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
«لَكِنْ إِنْ كَانَ فَقِيرًا وَلَا تَنَالُ يَدُهُ، يَأْخُذُ خَرُوفًا وَاحِدًا ذَبِيحَةَ إِثْمٍ لِتَرْدِيدٍ، تَكْفِيرًا عَنْهُ، وَعُشْرًا وَاحِدًا مِنْ دَقِيقٍ مَلْتُوتٍ بِزَيْتٍ لِتَقْدِمَةٍ، وَلُجَّ زَيْتٍ، ٢١ 21
೨೧“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
وَيَمَامَتَيْنِ أَوْ فَرْخَيْ حَمَامٍ كَمَا تَنَالُ يَدُهُ، فَيَكُونُ ٱلْوَاحِدُ ذَبِيحَةَ خَطِيَّةٍ، وَٱلْآخَرُ مُحْرَقَةً. ٢٢ 22
೨೨ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
وَيَأْتِي بِهَا فِي ٱلْيَوْمِ ٱلثَّامِنِ لِطُهْرِهِ إِلَى ٱلْكَاهِنِ، إِلَى بَابِ خَيْمَةِ ٱلِٱجْتِمَاعِ أَمَامَ ٱلرَّبِّ. ٢٣ 23
೨೩ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
فَيَأْخُذُ ٱلْكَاهِنُ كَبْشَ ٱلْإِثْمِ وَلُجَّ ٱلزَّيْتِ، وَيُرَدِّدُهُمَا ٱلْكَاهِنُ تَرْدِيدًا أَمَامَ ٱلرَّبِّ. ٢٤ 24
೨೪ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
ثُمَّ يَذْبَحُ كَبْشَ ٱلْإِثْمِ، وَيَأْخُذُ ٱلْكَاهِنُ مِنْ دَمِ ذَبِيحَةِ ٱلْإِثْمِ وَيَجْعَلُ عَلَى شَحْمَةِ أُذُنِ ٱلْمُتَطَهِّرِ ٱلْيُمْنَى، وَعَلَى إِبْهَامِ يَدِهِ ٱلْيُمْنَى، وَعَلَى إِبْهَامِ رِجْلِهِ ٱلْيُمْنَى. ٢٥ 25
೨೫ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
وَيَصُبُّ ٱلْكَاهِنُ مِنَ ٱلزَّيْتِ فِي كَفِّ ٱلْكَاهِنِ ٱلْيُسْرَى، ٢٦ 26
೨೬ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
وَيَنْضِحُ ٱلْكَاهِنُ بِإِصْبَعِهِ ٱلْيُمْنَى مِنَ ٱلزَّيْتِ ٱلَّذِي فِي كَفِّهِ ٱلْيُسْرَى سَبْعَ مَرَّاتٍ أَمَامَ ٱلرَّبِّ. ٢٧ 27
೨೭ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
وَيَجْعَلُ ٱلْكَاهِنُ مِنَ ٱلزَّيْتِ ٱلَّذِي فِي كَفِّهِ عَلَى شَحْمَةِ أُذُنِ ٱلْمُتَطَهِّرِ ٱلْيُمْنَى، وَعَلَى إِبْهَامِ يَدِهِ ٱلْيُمْنَى، وَعَلَى إِبْهَامِ رِجْلِهِ ٱلْيُمْنَى، عَلَى مَوْضِعِ دَمِ ذَبِيحَةِ ٱلْإِثْمِ. ٢٨ 28
೨೮ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
وَٱلْفَاضِلُ مِنَ ٱلزَّيْتِ ٱلَّذِي فِي كَفِّ ٱلْكَاهِنِ يَجْعَلُهُ عَلَى رَأْسِ ٱلْمُتَطَهِّرِ تَكْفِيرًا عَنْهُ أَمَامَ ٱلرَّبِّ. ٢٩ 29
೨೯ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
ثُمَّ يَعْمَلُ وَاحِدَةً مِنَ ٱلْيَمَامَتَيْنِ أَوْ مِنْ فَرْخَيِ ٱلْحَمَامِ، مِمَّا تَنَالُ يَدُهُ. ٣٠ 30
೩೦ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
مَا تَنَالُ يَدُهُ: ٱلْوَاحِدَ ذَبِيحَةَ خَطِيَّةٍ، وَٱلْآخَرَ مُحْرَقَةً مَعَ ٱلتَّقْدِمَةِ. وَيُكَفِّرُ ٱلْكَاهِنُ عَنِ ٱلْمُتَطَهِّرِ أَمَامَ ٱلرَّبِّ. ٣١ 31
೩೧ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
هَذِهِ شَرِيعَةُ ٱلَّذِي فِيهِ ضَرْبَةُ بَرَصٍ ٱلَّذِي لَا تَنَالُ يَدُهُ فِي تَطْهِيرِهِ». ٣٢ 32
೩೨“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
وَكَلَّمَ ٱلرَّبُّ مُوسَى وَهَارُونَ قَائِلًا: ٣٣ 33
೩೩ಯೆಹೋವನು ಮೋಶೆ ಮತ್ತು ಆರೋನರಿಗೆ,
«مَتَى جِئْتُمْ إِلَى أَرْضِ كَنْعَانَ ٱلَّتِي أُعْطِيكُمْ مُلْكًا، وَجَعَلْتُ ضَرْبَةَ بَرَصٍ فِي بَيْتٍ فِي أَرْضِ مُلْكِكُمْ. ٣٤ 34
೩೪“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
يَأْتِي ٱلَّذِي لَهُ ٱلْبَيْتُ، وَيُخبِرُ ٱلْكَاهِنَ قَائِلًا: قَدْ ظَهَرَ لِي شِبْهُ ضَرْبَةٍ فِي ٱلْبَيْتِ. ٣٥ 35
೩೫ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
فَيَأْمُرُ ٱلْكَاهِنُ أَنْ يُفْرِغُوا ٱلْبَيْتَ قَبْلَ دُخُولِ ٱلْكَاهِنِ لِيَرَى ٱلضَّرْبَةَ، لِئَلَّا يَتَنَجَّسَ كُلُّ مَا فِي ٱلْبَيْتِ. وَبَعْدَ ذَلِكَ يَدْخُلُ ٱلْكَاهِنُ لِيَرَى ٱلْبَيْتَ. ٣٦ 36
೩೬ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
فَإِذَا رَأَى ٱلضَّرْبَةَ، وَإِذَا ٱلضَّرْبَةُ فِي حِيطَانِ ٱلْبَيْتِ نُقَرٌ ضَارِبَةٌ إِلَى ٱلْخُضْرَةِ أَوْ إِلَى ٱلْحُمْرَةِ، وَمَنْظَرُهَا أَعْمَقُ مِنَ ٱلْحَائِطِ، ٣٧ 37
೩೭ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
يَخْرُجُ ٱلْكَاهِنُ مِنَ ٱلْبَيْتِ إِلَى بَابِ ٱلْبَيْتِ، وَيُغْلِقُ ٱلْبَيْتَ سَبْعَةَ أَيَّامٍ. ٣٨ 38
೩೮ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
فَإِذَا رَجَعَ ٱلْكَاهِنُ فِي ٱلْيَوْمِ ٱلسَّابِعِ وَرَأَى وَإِذَا ٱلضَّرْبَةُ قَدِ ٱمْتَدَّتْ فِي حِيطَانِ ٱلْبَيْتِ، ٣٩ 39
೩೯ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
يَأْمُرُ ٱلْكَاهِنُ أَنْ يَقْلَعُوا ٱلْحِجَارَةَ ٱلَّتِي فِيهَا ٱلضَّرْبَةُ وَيَطْرَحُوهَا خَارِجَ ٱلْمَدِينَةِ فِي مَكَانٍ نَجِسٍ. ٤٠ 40
೪೦ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
وَيُقَشِّرُ ٱلْبَيْتَ مِنْ دَاخِلٍ حَوَالَيْهِ، وَيَطْرَحُونَ ٱلتُّرَابَ ٱلَّذِي يُقَشِّرُونَهُ خَارِجَ ٱلْمَدِينَةِ فِي مَكَانٍ نَجِسٍ. ٤١ 41
೪೧ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
وَيَأْخُذُونَ حِجَارَةً أُخْرَى وَيُدْخِلُونَهَا فِي مَكَانِ ٱلْحِجَارَةِ، وَيَأْخُذُ تُرَابًا آخَرَ وَيُطَيِّنُ ٱلْبَيْتَ. ٤٢ 42
೪೨ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
فَإِنْ رَجَعَتِ ٱلضَّرْبَةُ وَأَفْرَخَتْ فِي ٱلْبَيْتِ بَعْدَ قَلْعِ ٱلْحِجَارَةِ وَقَشْرِ ٱلْبَيْتِ وَتَطْيِينِهِ، ٤٣ 43
೪೩“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
وَأَتَى ٱلْكَاهِنُ وَرَأَى وَإِذَا ٱلضَّرْبَةُ قَدِ ٱمْتَدَّتْ فِي ٱلْبَيْتِ، فَهِيَ بَرَصٌ مُفْسِدٌ فِي ٱلْبَيْتِ. إِنَّهُ نَجِسٌ. ٤٤ 44
೪೪ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
فَيَهْدِمُ ٱلْبَيْتَ: حِجَارَتَهُ وَأَخْشَابَهُ وَكُلَّ تُرَابِ ٱلْبَيْتِ، وَيُخْرِجُهَا إِلَى خَارِجِ ٱلْمَدِينَةِ إِلَى مَكَانٍ نَجِسٍ. ٤٥ 45
೪೫ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
وَمَنْ دَخَلَ إِلَى ٱلْبَيْتِ فِي كُلِّ أَيَّامِ ٱنْغِلَاقِهِ، يَكُونُ نَجِسًا إِلَى ٱلْمَسَاءِ. ٤٦ 46
೪೬ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
وَمَنْ نَامَ فِي ٱلْبَيْتِ يَغْسِلُ ثِيَابَهُ. وَمَنْ أَكَلَ فِي ٱلْبَيْتِ يَغْسِلُ ثِيَابَهُ. ٤٧ 47
೪೭ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
لَكِنْ إِنْ أَتَى ٱلْكَاهِنُ وَرَأَى وَإِذَا ٱلضَّرْبَةُ لَمْ تَمْتَدَّ فِي ٱلْبَيْتِ بَعْدَ تَطْيِينِ ٱلْبَيْتِ، يُطَهِّرُ ٱلْكَاهِنُ ٱلْبَيْتَ. لِأَنَّ ٱلضَّرْبَةَ قَدْ بَرِئَتْ. ٤٨ 48
೪೮“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
فَيَأْخُذُ لِتَطْهِيرِ ٱلْبَيْتِ عُصْفُورَيْنِ وَخَشَبَ أَرْزٍ وَقِرْمِزًا وَزُوفَا. ٤٩ 49
೪೯ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
وَيَذْبَحُ ٱلْعُصْفُورَ ٱلْوَاحِدَ فِي إِنَاءِ خَزَفٍ عَلَى مَاءٍ حَيٍّ، ٥٠ 50
೫೦ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
وَيَأْخُذُ خَشَبَ ٱلْأَرْزِ وَٱلزُّوفَا وَٱلْقِرْمِزَ وَٱلْعُصْفُورَ ٱلْحَيَّ وَيَغْمِسُهَا فِي دَمِ ٱلْعُصْفُورِ ٱلْمَذْبُوحِ وَفِي ٱلْمَاءِ ٱلْحَيِّ، وَيَنْضِحُ ٱلْبَيْتَ سَبْعَ مَرَّاتٍ، ٥١ 51
೫೧ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
وَيُطَهِّرُ ٱلْبَيْتَ بِدَمِ ٱلْعُصْفُورِ وَبِٱلْمَاءِ ٱلْحَيِّ وَبِٱلْعُصْفُورِ ٱلْحَيِّ وَبِخَشَبِ ٱلْأَرْزِ وَبِالزُّوفَا وَبِالْقِرْمِزِ. ٥٢ 52
೫೨ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
ثُمَّ يُطْلِقُ ٱلْعُصْفُورَ ٱلْحَيَّ إِلَى خَارِجِ ٱلْمَدِينَةِ عَلَى وَجْهِ ٱلصَّحْرَاءِ وَيُكَفِّرُ عَنِ ٱلْبَيْتِ فَيَطْهُرُ. ٥٣ 53
೫೩ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
«هَذِهِ هِيَ ٱلشَّرِيعَةُ لِكُلِّ ضَرْبَةٍ مِنَ ٱلْبَرَصِ وَلِلْقَرَعِ، ٥٤ 54
೫೪“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
وَلِبَرَصِ ٱلثَّوْبِ وَٱلْبَيْتِ، ٥٥ 55
೫೫ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
وَلِلنَّاتِئِ وَلِلْقُوبَاءِ وَلِلُّمْعَةِ، ٥٦ 56
೫೬ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
لِلتَّعْلِيمِ فِي يَوْمِ ٱلنَّجَاسَةِ وَيَوْمِ ٱلطَّهَارَةِ. هَذِهِ شَرِيعَةُ ٱلْبَرَصِ». ٥٧ 57
೫೭ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

< اَللَّاوِيِّينَ 14 >