< اَللَّاوِيِّينَ 4 >

وَكَلَّمَ ٱلرَّبُّ مُوسَى قَائِلًا: ١ 1
ಯೆಹೋವನು ಮೋಶೆಗೆ ಇಂತೆಂದನು,
«كَلِّمْ بَنِي إِسْرَائِيلَ قَائِلًا: إِذَا أَخْطَأَتْ نَفْسٌ سَهْوًا فِي شَيْءٍ مِنْ جَمِيعِ مَنَاهِي ٱلرَّبِّ ٱلَّتِي لَا يَنْبَغِي عَمَلُهَا، وَعَمِلَتْ وَاحِدَةً مِنْهَا: ٢ 2
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
إِنْ كَانَ ٱلْكَاهِنُ ٱلْمَمْسُوحُ يُخْطِئُ لِإِثْمِ ٱلشَّعْبِ، يُقَرِّبُ عَنْ خَطِيَّتِهِ ٱلَّتِي أَخْطَأَ ثَوْرًا ٱبْنَ بَقَرٍ صَحِيحًا لِلرَّبِّ، ذَبِيحَةَ خَطِيَّةٍ. ٣ 3
ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
يُقَدِّمُ ٱلثَّوْرَ إِلَى بَابِ خَيْمَةِ ٱلِٱجْتِمَاعِ أَمَامَ ٱلرَّبِّ، وَيَضَعُ يَدَهُ عَلَى رَأْسِ ٱلثَّوْرِ، وَيَذْبَحُ ٱلثَّوْرَ أَمَامَ ٱلرَّبِّ. ٤ 4
ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
وَيَأْخُذُ ٱلْكَاهِنُ ٱلْمَمْسُوحُ مِنْ دَمِ ٱلثَّوْرِ وَيَدْخُلُ بِهِ إِلَى خَيْمَةِ ٱلِٱجْتِمَاعِ، ٥ 5
ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು.
وَيَغْمِسُ ٱلْكَاهِنُ إِصْبَعَهُ فِي ٱلدَّمِ وَيَنْضِحُ مِنَ ٱلدَّمِ سَبْعَ مَرَّاتٍ أَمَامَ ٱلرَّبِّ لَدَى حِجَابِ ٱلْقُدْسِ. ٦ 6
ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.
وَيَجْعَلُ ٱلْكَاهِنُ مِنَ ٱلدَّمِ عَلَى قُرُونِ مَذْبَحِ ٱلْبَخُورِ ٱلْعَطِرِ ٱلَّذِي فِي خَيْمَةِ ٱلِٱجْتِمَاعِ أَمَامَ ٱلرَّبِّ، وَسَائِرُ دَمِ ٱلثَّوْرِ يَصُبُّهُ إِلَى أَسْفَلِ مَذْبَحِ ٱلْمُحْرَقَةِ ٱلَّذِي لَدَى بَابِ خَيْمَةِ ٱلِٱجْتِمَاعِ. ٧ 7
ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
وَجَمِيعُ شَحْمِ ثَوْرِ ٱلْخَطِيَّةِ يَنْزِعُهُ عَنْهُ. ٱلشَّحْمَ ٱلَّذِي يُغَشِّي ٱلْأَحْشَاءَ، وَسَائِرَ ٱلشَّحْمِ ٱلَّذِي عَلَى ٱلْأَحْشَاءِ، ٨ 8
ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,
وَٱلْكُلْيَتَيْنِ وَٱلشَّحْمَ ٱلَّذِي عَلَيْهِمَا ٱلَّذِي عَلَى ٱلْخَاصِرَتَيْنِ، وَزِيَادَةَ ٱلْكَبِدِ مَعَ ٱلْكُلْيَتَيْنِ يَنْزِعُهَا، ٩ 9
ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದ ಹತ್ತಿರ ಇರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರದಿಂದ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆದುಬಿಡಬೇಕು.
كَمَا تُنْزَعُ مِنْ ثَوْرِ ذَبِيحَةِ ٱلسَّلَامَةِ. وَيُوقِدُهُنَّ ٱلْكَاهِنُ عَلَى مَذْبَحِ ٱلْمُحْرَقَةِ. ١٠ 10
೧೦ಅವನು ಅವುಗಳನ್ನು ಸಮಾಧಾನಯಜ್ಞದ ಹೋರಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲಿಯೂ ಪ್ರತ್ಯೇಕಿಸಿ ಸರ್ವಾಂಗಹೋಮದ ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
وَأَمَّا جِلْدُ ٱلثَّوْرِ وَكُلُّ لَحْمِهِ مَعَ رَأْسِهِ وَأَكَارِعِهِ وَأَحْشَائِهِ وَفَرْثِهِ ١١ 11
೧೧ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
فَيُخْرِجُ سَائِرَ ٱلثَّوْرِ إِلَى خَارِجِ ٱلْمَحَلَّةِ إِلَى مَكَانٍ طَاهِرٍ، إِلَى مَرْمَى ٱلرَّمَادِ، وَيُحْرِقُهَا عَلَى حَطَبٍ بِٱلنَّارِ. عَلَى مَرْمَى ٱلرَّمَادِ تُحْرَقُ. ١٢ 12
೧೨ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.
«وَإِنْ سَهَا كُلُّ جَمَاعَةِ إِسْرَائِيلَ، وَأُخْفِيَ أَمْرٌ عَنْ أَعْيُنِ ٱلْمَجْمَعِ، وَعَمِلُوا وَاحِدَةً مِنْ جَمِيعِ مَنَاهِي ٱلرَّبِّ ٱلَّتِي لَا يَنْبَغِي عَمَلُهَا، وَأَثِمُوا، ١٣ 13
೧೩“‘ಇಸ್ರಾಯೇಲರ ಸಮೂಹವೆಲ್ಲಾ ತಿಳಿಯದೆ ದೋಷಿಗಳಾದರೆ ಅಂದರೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರೂ ಮಾಡಿ ದೋಷಕ್ಕೆ ಗುರಿಯಾದರೆ,
ثُمَّ عُرِفَتِ ٱلْخَطِيَّةُ ٱلَّتِي أَخْطَأُوا بِهَا، يُقَرِّبُ ٱلْمَجْمَعُ ثَوْرًا ٱبْنَ بَقَرٍ ذَبِيحَةَ خَطِيَّةٍ. يَأْتُونَ بِهِ إِلَى قُدَّامِ خَيْمَةِ ٱلِٱجْتِمَاعِ، ١٤ 14
೧೪ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಬೇಕು.
وَيَضَعُ شُيُوخُ ٱلْجَمَاعَةِ أَيْدِيَهُمْ عَلَى رَأْسِ ٱلثَّوْرِ أَمَامَ ٱلرَّبِّ، وَيَذْبَحُ ٱلثَّوْرَ أَمَامَ ٱلرَّبِّ. ١٥ 15
೧೫ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.
وَيُدْخِلُ ٱلْكَاهِنُ ٱلْمَمْسُوحُ مِنْ دَمِ ٱلثَّوْرِ إِلَى خَيْمَةِ ٱلِٱجْتِمَاعِ، ١٦ 16
೧೬ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನ ಗುಡಾರದೊಳಗೆ ತಂದು,
وَيَغْمِسُ ٱلْكَاهِنُ إِصْبَعَهُ فِي ٱلدَّمِ، وَيَنْضِحُ سَبْعَ مَرَّاتٍ أَمَامَ ٱلرَّبِّ لَدَى ٱلْحِجَابِ. ١٧ 17
೧೭ಅದರಲ್ಲಿ ಬೆರಳನ್ನು ಅದ್ದಿ, ತೆರೆಯ ಮುಂದೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.
وَيَجْعَلُ مِنَ ٱلدَّمِ عَلَى قُرُونِ ٱلْمَذْبَحِ ٱلَّذِي أَمَامَ ٱلرَّبِّ فِي خَيْمَةِ ٱلِٱجْتِمَاعِ، وَسَائِرَ ٱلدَّمِ يَصُبُّهُ إِلَى أَسْفَلِ مَذْبَحِ ٱلْمُحْرَقَةِ ٱلَّذِي لَدَى بَابِ خَيْمَةِ ٱلِٱجْتِمَاعِ. ١٨ 18
೧೮ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
وَجَمِيعَ شَحْمِهِ يَنْزِعُهُ عَنْهُ وَيُوقِدُهُ عَلَى ٱلْمَذْبَحِ. ١٩ 19
೧೯ಅವನು ಹೋರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು.
وَيَفْعَلُ بِٱلثَّوْرِ كَمَا فَعَلَ بِثَوْرِ ٱلْخَطِيَّةِ. كَذَلِكَ يَفْعَلُ بِهِ. وَيُكَفِّرُ عَنْهُمُ ٱلْكَاهِنُ، فَيُصْفَحُ عَنْهُمْ. ٢٠ 20
೨೦ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.
ثُمَّ يُخْرِجُ ٱلثَّوْرَ إِلَى خَارِجِ ٱلْمَحَلَّةِ وَيُحْرِقُهُ كَمَا أَحْرَقَ ٱلثَّوْرَ ٱلْأَوَّلَ. إِنَّهُ ذَبِيحَةُ خَطِيَّةِ ٱلْمَجْمَعِ. ٢١ 21
೨೧ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
«إِذَا أَخْطَأَ رَئِيسٌ وَعَمِلَ بِسَهْوٍ وَاحِدَةً مِنْ جَمِيعِ مَنَاهِي ٱلرَّبِّ إِلَهِهِ ٱلَّتِي لَا يَنْبَغِي عَمَلُهَا، وَأَثِمَ، ٢٢ 22
೨೨“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
ثُمَّ أُعْلِمَ بِخَطِيَّتِهِ ٱلَّتِي أَخْطَأَ بِهَا، يَأْتِي بِقُرْبَانِهِ تَيْسًا مِنَ ٱلْمَعْزِ ذَكَرًا صَحِيحًا. ٢٣ 23
೨೩ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.
وَيَضَعُ يَدَهُ عَلَى رَأْسِ ٱلتَّيْسِ وَيَذْبَحُهُ فِي ٱلْمَوْضِعِ ٱلَّذِي يَذْبَحُ فِيهِ ٱلْمُحْرَقَةَ أَمَامَ ٱلرَّبِّ. إِنَّهُ ذَبِيحَةُ خَطِيَّةٍ. ٢٤ 24
೨೪ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.
وَيَأْخُذُ ٱلْكَاهِنُ مِنْ دَمِ ذَبِيحَةِ ٱلْخَطِيَّةِ بِإِصْبَعِهِ وَيَجْعَلُ عَلَى قُرُونِ مَذْبَحِ ٱلْمُحْرَقَةِ، ثُمَّ يَصُبُّ دَمَهُ إِلَى أَسْفَلِ مَذْبَحِ ٱلْمُحْرَقَةِ. ٢٥ 25
೨೫ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
وَجَمِيعَ شَحْمِهِ يُوقِدُهُ عَلَى ٱلْمَذْبَحِ كَشَحْمِ ذَبِيحَةِ ٱلسَّلَامَةِ، وَيُكَفِّرُ ٱلْكَاهِنُ عَنْهُ مِنْ خَطِيَّتِهِ فَيُصْفَحُ عَنْهُ. ٢٦ 26
೨೬ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
«وَإِنْ أَخْطَأَ أَحَدٌ مِنْ عَامَّةِ ٱلْأَرْضِ سَهْوًا، بِعَمَلِهِ وَاحِدَةً مِنْ مَنَاهِي ٱلرَّبِّ ٱلَّتِي لَا يَنْبَغِي عَمَلُهَا، وَأَثِمَ، ٢٧ 27
೨೭“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
ثُمَّ أُعْلِمَ بِخَطِيَّتِهِ ٱلَّتِي أَخْطَأَ بِهَا، يَأْتِي بِقُرْبَانِهِ عَنْزًا مِنَ ٱلْمَعْزِ أُنْثَى صَحِيحَةً عَنْ خَطِيَّتِهِ ٱلَّتِي أَخْطَأَ. ٢٨ 28
೨೮ತನ್ನ ತಪ್ಪು ತನಗೆ ತಿಳಿದುಬಂದಾಗ ಆ ದೋಷಪರಿಹಾರಕ್ಕಾಗಿ ಪೂರ್ಣಾಂಗವಾದ ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.
وَيَضَعُ يَدَهُ عَلَى رَأْسِ ذَبِيحَةِ ٱلْخَطِيَّةِ، وَيَذْبَحُ ذَبِيحَةَ ٱلْخَطِيَّةِ فِي مَوْضِعِ ٱلْمُحْرَقَةِ. ٢٩ 29
೨೯ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.
وَيَأْخُذُ ٱلْكَاهِنُ مِنْ دَمِهَا بِإِصْبَعِهِ وَيَجْعَلُ عَلَى قُرُونِ مَذْبَحِ ٱلْمُحْرَقَةِ، وَيَصُبُّ سَائِرَ دَمِهَا إِلَى أَسْفَلِ ٱلْمَذْبَحِ. ٣٠ 30
೩೦ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
وَجَمِيعَ شَحْمِهَا يَنْزِعُهُ كَمَا نُزِعَ ٱلشَّحْمُ عَنْ ذَبِيحَةِ ٱلسَّلَامَةِ، وَيُوقِدُ ٱلْكَاهِنُ عَلَى ٱلْمَذْبَحِ رَائِحَةَ سَرُورٍ لِلرَّبِّ وَيُكَفِّرُ عَنْهُ ٱلْكَاهِنُ فَيُصْفَحُ عَنْهُ. ٣١ 31
೩೧ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.
«وَإِنْ أَتَى بِقُرْبَانِهِ مِنَ ٱلضَّأْنِ ذَبِيحَةَ خَطِيَّةٍ، يَأْتِي بِهَا أُنْثَى صَحِيحَةً. ٣٢ 32
೩೨“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.
وَيَضَعُ يَدَهُ عَلَى رَأْسِ ذَبِيحَةِ ٱلْخَطِيَّةِ، وَيَذْبَحُهَا ذَبِيحَةَ خَطِيَّةٍ فِي ٱلْمَوْضِعِ ٱلَّذِي يَذْبَحُ فِيهِ ٱلْمُحْرَقَةَ. ٣٣ 33
೩೩ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಕ್ಕಾಗಿ ವಧಿಸಬೇಕು.
وَيَأْخُذُ ٱلْكَاهِنُ مِنْ دَمِ ذَبِيحَةِ ٱلْخَطِيَّةِ بِإِصْبَعِهِ وَيَجْعَلُ عَلَى قُرُونِ مَذْبَحِ ٱلْمُحْرَقَةِ، وَيَصُبُّ سَائِرَ ٱلدَّمِ إِلَى أَسْفَلِ ٱلْمَذْبَحِ. ٣٤ 34
೩೪ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
وَجَمِيعَ شَحْمِهِ يَنْزِعُهُ كَمَا يُنْزَعُ شَحْمُ ٱلضَّأْنِ عَنْ ذَبِيحَةِ ٱلسَّلَامَةِ، وَيُوقِدُهُ ٱلْكَاهِنُ عَلَى ٱلْمَذْبَحِ عَلَى وَقَائِدِ ٱلرَّبِّ. وَيُكَفِّرُ عَنْهُ ٱلْكَاهِنُ مِنْ خَطِيَّتِهِ ٱلَّتِي أَخْطَأَ فَيُصْفَحُ عَنْهُ. ٣٥ 35
೩೫ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

< اَللَّاوِيِّينَ 4 >