< لُوقا 12 >

وَفِي أَثْنَاءِ ذَلِكَ، إِذِ ٱجْتَمَعَ رَبَوَاتُ ٱلشَّعْبِ، حَتَّى كَانَ بَعْضُهُمْ يَدُوسُ بَعْضًا، ٱبْتَدَأَ يَقُولُ لِتَلَامِيذِهِ: «أَوَّلًا تَحَرَّزُوا لِأَنْفُسِكُمْ مِنْ خَمِيرِ ٱلْفَرِّيسِيِّينَ ٱلَّذِي هُوَ ٱلرِّيَاءُ، ١ 1
ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
فَلَيْسَ مَكْتُومٌ لَنْ يُسْتَعْلَنَ، وَلَا خَفِيٌّ لَنْ يُعْرَفَ. ٢ 2
ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.
لِذَلِكَ كُلُّ مَا قُلْتُمُوهُ فِي ٱلظُّلْمَةِ يُسْمَعُ فِي ٱلنُّورِ، وَمَا كَلَّمْتُمْ بِهِ ٱلْأُذْنَ فِي ٱلْمَخَادِعِ يُنَادَى بِهِ عَلَى ٱلسُّطُوحِ. ٣ 3
ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
وَلَكِنْ أَقُولُ لَكُمْ يَا أَحِبَّائِي: لَا تَخَافُوا مِنَ ٱلَّذِينَ يَقْتُلُونَ ٱلْجَسَدَ، وَبَعْدَ ذَلِكَ لَيْسَ لَهُمْ مَا يَفْعَلُونَ أَكْثَرَ. ٤ 4
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
بَلْ أُرِيكُمْ مِمَّنْ تَخَافُونَ: خَافُوا مِنَ ٱلَّذِي بَعْدَمَا يَقْتُلُ، لَهُ سُلْطَانٌ أَنْ يُلْقِيَ فِي جَهَنَّمَ. نَعَمْ، أَقُولُ لَكُمْ: مِنْ هَذَا خَافُوا! (Geenna g1067) ٥ 5
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. (Geenna g1067)
أَلَيْسَتْ خَمْسَةُ عَصَافِيرَ تُبَاعُ بِفَلْسَيْنِ، وَوَاحِدٌ مِنْهَا لَيْسَ مَنْسِيًّا أَمَامَ ٱللهِ؟ ٦ 6
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ.
بَلْ شُعُورُ رُؤُوسِكُمْ أَيْضًا جَمِيعُهَا مُحْصَاةٌ. فَلَا تَخَافُوا! أَنْتُمْ أَفْضَلُ مِنْ عَصَافِيرَ كَثِيرَةٍ! ٧ 7
ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
وَأَقُولُ لَكُمْ: كُلُّ مَنِ ٱعْتَرَفَ بِي قُدَّامَ ٱلنَّاسِ، يَعْتَرِفُ بِهِ ٱبْنُ ٱلْإِنْسَانِ قُدَّامَ مَلَائِكَةِ ٱللهِ. ٨ 8
“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
وَمَنْ أَنْكَرَنِي قُدَّامَ ٱلنَّاسِ، يُنْكَرُ قُدَّامَ مَلَائِكَةِ ٱللهِ. ٩ 9
ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.
وَكُلُّ مَنْ قَالَ كَلِمَةً عَلَى ٱبْنِ ٱلْإِنْسَانِ يُغْفَرُ لَهُ، وَأَمَّا مَنْ جَدَّفَ عَلَى ٱلرُّوحِ ٱلْقُدُسِ فَلَا يُغْفَرُ لَهُ. ١٠ 10
೧೦ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
وَمَتَى قَدَّمُوكُمْ إِلَى ٱلْمَجَامِعِ وَٱلرُّؤَسَاءِ وَٱلسَّلَاطِينِ فَلَا تَهْتَمُّوا كَيْفَ أَوْ بِمَا تَحْتَجُّونَ أَوْ بِمَا تَقُولُونَ، ١١ 11
೧೧ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
لِأَنَّ ٱلرُّوحَ ٱلْقُدُسَ يُعَلِّمُكُمْ فِي تِلْكَ ٱلسَّاعَةِ مَا يَجِبُ أَنْ تَقُولُوهُ». ١٢ 12
೧೨ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
وَقَالَ لَهُ وَاحِدٌ مِنَ ٱلْجَمْعِ: «يَا مُعَلِّمُ، قُلْ لِأَخِي أَنْ يُقَاسِمَنِي ٱلْمِيرَاثَ». ١٣ 13
೧೩ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,
فَقَالَ لَهُ: «يَا إِنْسَانُ، مَنْ أَقَامَنِي عَلَيْكُمَا قَاضِيًا أَوْ مُقَسِّمًا؟». ١٤ 14
೧೪ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
وَقَالَ لَهُمُ: «ٱنْظُرُوا وَتَحَفَّظُوا مِنَ ٱلطَّمَعِ، فَإِنَّهُ مَتَى كَانَ لِأَحَدٍ كَثِيرٌ فَلَيْسَتْ حَيَاتُهُ مِنْ أَمْوَالِهِ». ١٥ 15
೧೫ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
وَضَرَبَ لَهُمْ مَثَلًا قَائِلًا: «إِنْسَانٌ غَنِيٌّ أَخْصَبَتْ كُورَتُهُ، ١٦ 16
೧೬ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.
فَفَكَّرَ فِي نَفْسِهِ قَائِلًا: مَاذَا أَعْمَلُ، لِأَنْ لَيْسَ لِي مَوْضِعٌ أَجْمَعُ فِيهِ أَثْمَارِي؟ ١٧ 17
೧೭ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,
وَقَالَ: أَعْمَلُ هَذَا: أَهْدِمُ مَخَازِنِي وَأَبْنِي أَعْظَمَ، وَأَجْمَعُ هُنَاكَ جَمِيعَ غَلَّاتِي وَخَيْرَاتِي، ١٨ 18
೧೮‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
وَأَقُولُ لِنَفْسِي: يَا نَفْسُ لَكِ خَيْرَاتٌ كَثِيرَةٌ، مَوْضُوعَةٌ لِسِنِينَ كَثِيرَةٍ. اِسْتَرِيحِي وَكُلِي وَٱشْرَبِي وَٱفْرَحِي! ١٩ 19
೧೯ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
فَقَالَ لَهُ ٱللهُ: يَا غَبِيُّ! هَذِهِ ٱللَّيْلَةَ تُطْلَبُ نَفْسُكَ مِنْكَ، فَهَذِهِ ٱلَّتِي أَعْدَدْتَهَا لِمَنْ تَكُونُ؟ ٢٠ 20
೨೦“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
هَكَذَا ٱلَّذِي يَكْنِزُ لِنَفْسِهِ وَلَيْسَ هُوَ غَنِيًّا لِلهِ». ٢١ 21
೨೧ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.
وَقَالَ لِتَلَامِيذِهِ: «مِنْ أَجْلِ هَذَا أَقُولُ لَكُمْ: لَا تَهْتَمُّوا لِحَيَاتِكُمْ بِمَا تَأْكُلُونَ، وَلَا لِلْجَسَدِ بِمَا تَلْبَسُونَ. ٢٢ 22
೨೨ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
اَلْحَيَاةُ أَفْضَلُ مِنَ ٱلطَّعَامِ، وَٱلْجَسَدُ أَفْضَلُ مِنَ ٱللِّبَاسِ. ٢٣ 23
೨೩ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.
تَأَمَّلُوا ٱلْغِرْبَانَ: أَنَّهَا لَا تَزْرَعُ وَلَا تَحْصُدُ، وَلَيْسَ لَهَا مَخْدَعٌ وَلَا مَخْزَنٌ، وَٱللهُ يُقِيتُهَا. كَمْ أَنْتُمْ بِٱلْحَرِيِّ أَفْضَلُ مِنَ ٱلطُّيُورِ! ٢٤ 24
೨೪ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
وَمَنْ مِنْكُمْ إِذَا ٱهْتَمَّ يَقْدِرُ أَنْ يَزِيدَ عَلَى قَامَتِهِ ذِرَاعًا وَاحِدَةً؟ ٢٥ 25
೨೫ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಒಂದು ಮೊಳದಷ್ಟು ಹೆಚ್ಚಿಸಲುನಿಮ್ಮಲ್ಲಿ ಯಾರಿಂದಾದೀತು?
فَإِنْ كُنْتُمْ لَا تَقْدِرُونَ وَلَا عَلَى ٱلْأَصْغَرِ، فَلِمَاذَا تَهْتَمُّونَ بِٱلْبَوَاقِي؟ ٢٦ 26
೨೬ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?
تَأَمَّلُوا ٱلزَّنَابِقَ كَيْفَ تَنْمُو: لَا تَتْعَبُ وَلَا تَغْزِلُ، وَلَكِنْ أَقُولُ لَكُمْ: إِنَّهُ وَلَا سُلَيْمَانُ فِي كُلِّ مَجْدِهِ كَانَ يَلْبَسُ كَوَاحِدَةٍ مِنْهَا. ٢٧ 27
೨೭ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
فَإِنْ كَانَ ٱلْعُشْبُ ٱلَّذِي يُوجَدُ ٱلْيَوْمَ فِي ٱلْحَقْلِ وَيُطْرَحُ غَدًا فِي ٱلتَّنُّورِ يُلْبِسُهُ ٱللهُ هَكَذَا، فَكَمْ بِٱلْحَرِيِّ يُلْبِسُكُمْ أَنْتُمْ يَاقَلِيلِي ٱلْإِيمَانِ؟ ٢٨ 28
೨೮ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
فَلَا تَطْلُبُوا أَنْتُمْ مَا تَأْكُلُونَ وَمَا تَشْرَبُونَ وَلَا تَقْلَقُوا، ٢٩ 29
೨೯ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.
فَإِنَّ هَذِهِ كُلَّهَا تَطْلُبُهَا أُمَمُ ٱلْعَالَمِ. وَأَمَّا أَنْتُمْ فَأَبُوكُمْ يَعْلَمُ أَنَّكُمْ تَحْتَاجُونَ إِلَى هَذِهِ. ٣٠ 30
೩೦ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
بَلِ ٱطْلُبُوا مَلَكُوتَ ٱللهِ، وَهَذِهِ كُلُّهَا تُزَادُ لَكُمْ. ٣١ 31
೩೧ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
«لَا تَخَفْ، أَيُّهَا ٱلْقَطِيعُ ٱلصَّغِيرُ، لِأَنَّ أَبَاكُمْ قَدْ سُرَّ أَنْ يُعْطِيَكُمُ ٱلْمَلَكُوتَ. ٣٢ 32
೩೨ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
بِيعُوا مَا لَكُمْ وَأَعْطُوا صَدَقَةً. اِعْمَلُوا لَكُمْ أَكْيَاسًا لَا تَفْنَى وَكَنْزًا لَا يَنْفَدُ فِي ٱلسَّمَاوَاتِ، حَيْثُ لَا يَقْرَبُ سَارِقٌ وَلَا يُبْلِي سُوسٌ، ٣٣ 33
೩೩ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
لِأَنَّهُ حَيْثُ يَكُونُ كَنْزُكُمْ هُنَاكَ يَكُونُ قَلْبُكُمْ أَيْضًا. ٣٤ 34
೩೪ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
«لِتَكُنْ أَحْقَاؤُكُمْ مُمَنْطَقَةً وَسُرُجُكُمْ مُوقَدَةً، ٣٥ 35
೩೫“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
وَأَنْتُمْ مِثْلُ أُنَاسٍ يَنْتَظِرُونَ سَيِّدَهُمْ مَتَى يَرْجِعُ مِنَ ٱلْعُرْسِ، حَتَّى إِذَا جَاءَ وَقَرَعَ يَفْتَحُونَ لَهُ لِلْوَقْتِ. ٣٦ 36
೩೬ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
طُوبَى لِأُولَئِكَ ٱلْعَبِيدِ ٱلَّذِينَ إِذَا جَاءَ سَيِّدُهُمْ يَجِدُهُمْ سَاهِرِينَ. اَلْحَقَّ أَقُولُ لَكُمْ: إِنَّهُ يَتَمَنْطَقُ وَيُتْكِئُهُمْ وَيَتَقَدَّمُ وَيَخْدُمُهُمْ. ٣٧ 37
೩೭ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
وَإِنْ أَتَى فِي ٱلْهَزِيعِ ٱلثَّانِي أَوْ أَتَى فِي ٱلْهَزِيعِ ٱلثَّالِثِ وَوَجَدَهُمْ هَكَذَا، فَطُوبَى لِأُولَئِكَ ٱلْعَبِيدِ. ٣٨ 38
೩೮ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
وَإِنَّمَا ٱعْلَمُوا هَذَا: أَنَّهُ لَوْ عَرَفَ رَبُّ ٱلْبَيْتِ فِي أَيَّةِ سَاعَةٍ يَأْتِي ٱلسَّارِقُ لَسَهِرَ، وَلَمْ يَدَعْ بَيْتَهُ يُنْقَبُ. ٣٩ 39
೩೯ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ.
فَكُونُوا أَنْتُمْ إِذًا مُسْتَعِدِّينَ، لِأَنَّهُ فِي سَاعَةٍ لَا تَظُنُّونَ يَأْتِي ٱبْنُ ٱلْإِنْسَانِ». ٤٠ 40
೪೦ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು.
فَقَالَ لَهُ بُطْرُسُ: «يَارَبُّ، أَلَنَا تَقُولُ هَذَا ٱلْمَثَلَ أَمْ لِلْجَمِيعِ أَيْضًا؟». ٤١ 41
೪೧ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು,
فَقَالَ ٱلرَّبُّ: «فَمَنْ هُوَ ٱلْوَكِيلُ ٱلْأَمِينُ ٱلْحَكِيمُ ٱلَّذِي يُقِيمُهُ سَيِّدُهُ عَلَى خَدَمِهِ لِيُعْطِيَهُمُ ٱلْعُلُوفَةَ فِي حِينِهَا؟ ٤٢ 42
೪೨ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
طُوبَى لِذَلِكَ ٱلْعَبْدِ ٱلَّذِي إِذَا جَاءَ سَيِّدُهُ يَجِدُهُ يَفْعَلُ هَكَذَا! ٤٣ 43
೪೩ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು.
بِٱلْحَقِّ أَقُولُ لَكُمْ: إِنَّهُ يُقِيمُهُ عَلَى جَمِيعِ أَمْوَالِهِ. ٤٤ 44
೪೪ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
وَلَكِنْ إِنْ قَالَ ذَلِكَ ٱلْعَبْدُ فِي قَلْبِهِ: سَيِّدِي يُبْطِئُ قُدُومَهُ، فَيَبْتَدِئُ يَضْرِبُ ٱلْغِلْمَانَ وَٱلْجَوَارِيَ، وَيَأْكُلُ وَيَشْرَبُ وَيَسْكَرُ. ٤٥ 45
೪೫ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
يَأْتِي سَيِّدُ ذَلِكَ ٱلْعَبْدِ فِي يَوْمٍ لَا يَنْتَظِرُهُ وَفِي سَاعَةٍ لَا يَعْرِفُهَا، فَيَقْطَعُهُ وَيَجْعَلُ نَصِيبَهُ مَعَ ٱلْخَائِنِينَ. ٤٦ 46
೪೬ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
وَأَمَّا ذَلِكَ ٱلْعَبْدُ ٱلَّذِي يَعْلَمُ إِرَادَةَ سَيِّدِهِ وَلَا يَسْتَعِدُّ وَلَا يَفْعَلُ بحَسَبِ إِرَادَتِهِ، فَيُضْرَبُ كَثِيرًا. ٤٧ 47
೪೭ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
وَلَكِنَّ ٱلَّذِي لَا يَعْلَمُ، وَيَفْعَلُ مَا يَسْتَحِقُّ ضَرَبَاتٍ، يُضْرَبُ قَلِيلًا. فَكُلُّ مَنْ أُعْطِيَ كَثِيرًا يُطْلَبُ مِنْهُ كَثِيرٌ، وَمَنْ يُودِعُونَهُ كَثِيرًا يُطَالِبُونَهُ بِأَكْثَرَ. ٤٨ 48
೪೮ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
«جِئْتُ لِأُلْقِيَ نَارًا عَلَى ٱلْأَرْضِ، فَمَاذَا أُرِيدُ لَوِ ٱضْطَرَمَتْ؟ ٤٩ 49
೪೯“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ.
وَلِي صِبْغَةٌ أَصْطَبِغُهَا، وَكَيْفَ أَنْحَصِرُ حَتَّى تُكْمَلَ؟ ٥٠ 50
೫೦ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.
أَتَظُنُّونَ أَنِّي جِئْتُ لِأُعْطِيَ سَلَامًا عَلَى ٱلْأَرْضِ؟ كَلاَّ، أَقُولُ لَكُمْ: بَلِ ٱنْقِسَامًا. ٥١ 51
೫೧ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
لِأَنَّهُ يَكُونُ مِنَ ٱلْآنَ خَمْسَةٌ فِي بَيْتٍ وَاحِدٍ مُنْقَسِمِينَ: ثَلَاثَةٌ عَلَى ٱثْنَيْنِ، وَٱثْنَانِ عَلَى ثَلَاثَةٍ. ٥٢ 52
೫೨ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು.
يَنْقَسِمُ ٱلْأَبُ عَلَى ٱلِٱبْنِ، وَٱلِٱبْنُ عَلَى ٱلْأَبِ، وَٱلْأُمُّ عَلَى ٱلْبِنْتِ، وَٱلْبِنْتُ عَلَى ٱلْأُمِّ، وَٱلْحَمَاةُ عَلَى كَنَّتِهَا، وَٱلْكَنَّةُ عَلَى حَمَاتِهَا». ٥٣ 53
೫೩ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.
ثُمَّ قَالَ أَيْضًا لِلْجُمُوعِ: «إِذَا رَأَيْتُمُ ٱلسَّحَابَ تَطْلُعُ مِنَ ٱلْمَغَارِبِ فَلِلْوَقْتِ تَقُولُونَ: إِنَّهُ يَأْتِي مَطَرٌ، فَيَكُونُ هَكَذَا. ٥٤ 54
೫೪ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
وَإِذَا رَأَيْتُمْ رِيحَ ٱلْجَنُوبِ تَهُبُّ تَقُولُونَ: إِنَّهُ سَيَكُونُ حَرٌّ، فَيَكُونُ. ٥٥ 55
೫೫ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.
يَا مُرَاؤُونَ! تَعْرِفُونَ أَنْ تُمَيِّزُوا وَجْهَ ٱلْأَرْضِ وَٱلسَّمَاءِ، وَأَمَّا هَذَا ٱلزَّمَانُ فَكَيْفَ لَا تُمَيِّزُونَهُ؟ ٥٦ 56
೫೬ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
وَلِمَاذَا لَا تَحْكُمُونَ بِٱلْحَقِّ مِنْ قِبَلِ نُفُوسِكُمْ؟ ٥٧ 57
೫೭“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?
حِينَمَا تَذْهَبُ مَعَ خَصْمِكَ إِلَى ٱلْحَاكِمِ، ٱبْذُلِ ٱلْجَهْدَ وَأَنْتَ فِي ٱلطَّرِيقِ لِتَتَخَلَّصَ مِنْهُ، لِئَلَّا يَجُرَّكَ إِلَى ٱلْقَاضِي، وَيُسَلِّمَكَ ٱلْقَاضِي إِلَى ٱلْحَاكِمِ، فَيُلْقِيَكَ ٱلْحَاكِمُ فِي ٱلسِّجْنِ. ٥٨ 58
೫೮ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
أَقُولُ لَكَ: لَا تَخْرُجُ مِنْ هُنَاكَ حَتَّى تُوفِيَ ٱلْفَلْسَ ٱلْأَخِيرَ». ٥٩ 59
೫೯ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.

< لُوقا 12 >