< لُوقا 14 >

وَإِذْ جَاءَ إِلَى بَيْتِ أَحَدِ رُؤَسَاءِ ٱلْفَرِّيسِيِّينَ فِي ٱلسَّبْتِ لِيَأْكُلَ خُبْزًا، كَانُوا يُرَاقِبُونَهُ. ١ 1
ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.
وَإِذَا إِنْسَانٌ مُسْتَسْقٍ كَانَ قُدَّامَهُ. ٢ 2
ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು.
فَأَجَابَ يَسُوعُ وَكَلَّمَ ٱلنَّامُوسِيِّينَ وَٱلْفَرِّيسِيِّينَ قَائِلًا: «هَلْ يَحِلُّ ٱلْإِبْرَاءُ فِي ٱلسَّبْتِ؟». ٣ 3
ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.
فَسَكَتُوا. فَأَمْسَكَهُ وَأَبْرَأَهُ وَأَطْلَقَهُ. ٤ 4
ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.
ثُمَّ أجَابَهم وَقَالَ: «مَنْ مِنْكُمْ يَسْقُطُ حِمَارُهُ أَوْ ثَوْرُهُ فِي بِئْرٍ وَلَا يَنْشُلُهُ حَالًا فِي يَوْمِ ٱلسَّبْتِ؟». ٥ 5
ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.
فَلَمْ يَقْدِرُوا أَنْ يُجِيبُوهُ عَنْ ذَلِكَ. ٦ 6
ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.
وَقَالَ لِلْمَدْعُوِّينَ مَثَلًا، وَهُوَ يُلَاحِظُ كَيْفَ ٱخْتَارُوا ٱلْمُتَّكَآتِ ٱلْأُولَى قَائِلًا لَهُمْ: ٧ 7
ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:
«مَتَى دُعِيتَ مِنْ أَحَدٍ إِلَى عُرْسٍ فَلَا تَتَّكِئْ فِي ٱلْمُتَّكَإِ ٱلْأَوَّلِ، لَعَلَّ أَكْرَمَ مِنْكَ يَكُونُ قَدْ دُعِيَ مِنْهُ. ٨ 8
“ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು.
فَيَأْتِيَ ٱلَّذِي دَعَاكَ وَإِيَّاهُ وَيَقُولَ لَكَ: أَعْطِ مَكَانًا لِهَذَا. فَحِينَئِذٍ تَبْتَدِئُ بِخَجَلٍ تَأْخُذُ ٱلْمَوْضِعَ ٱلْأَخِيرَ. ٩ 9
ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.
بَلْ مَتَى دُعِيتَ فَٱذْهَبْ وَٱتَّكِئْ فِي ٱلْمَوْضِعِ ٱلْأَخِيرِ، حَتَّى إِذَا جَاءَ ٱلَّذِي دَعَاكَ يَقُولُ لَكَ: يَا صَدِيقُ، ٱرْتَفِعْ إِلَى فَوْقُ. حِينَئِذٍ يَكُونُ لَكَ مَجْدٌ أَمَامَ ٱلْمُتَّكِئِينَ مَعَكَ. ١٠ 10
ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.
لِأَنَّ كُلَّ مَنْ يَرْفَعُ نَفْسَهُ يَتَّضِعُ وَمَنْ يَضَعُ نَفْسَهُ يَرْتَفِعُ». ١١ 11
ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
وَقَالَ أَيْضًا لِلَّذِي دَعَاهُ: «إِذَا صَنَعْتَ غَدَاءً أَوْ عَشَاءً فَلَا تَدْعُ أَصْدِقَاءَكَ وَلَا إِخْوَتَكَ وَلَا أَقْرِبَاءَكَ وَلَا ٱلْجِيرَانَ ٱلْأَغْنِيَاءَ، لِئَلَّا يَدْعُوكَ هُمْ أَيْضًا، فَتَكُونَ لَكَ مُكَافَاةٌ. ١٢ 12
ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.
بَلْ إِذَا صَنَعْتَ ضِيَافَةً فَٱدْعُ: ٱلْمَسَاكِينَ، ٱلْجُدْعَ، ٱلْعُرْجَ، ٱلْعُمْيَ، ١٣ 13
ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.
فَيَكُونَ لَكَ ٱلطُّوبَى إِذْ لَيْسَ لَهُمْ حَتَّى يُكَافُوكَ، لِأَنَّكَ تُكَافَى فِي قِيَامَةِ ٱلْأَبْرَارِ». ١٤ 14
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”
فَلَمَّا سَمِعَ ذَلِكَ وَاحِدٌ مِنَ ٱلْمُتَّكِئِينَ قَالَ لَهُ: «طُوبَى لِمَنْ يَأْكُلُ خُبْزًا فِي مَلَكُوتِ ٱللهِ». ١٥ 15
ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.
فَقَالَ لَهُ: «إِنْسَانٌ صَنَعَ عَشَاءً عَظِيمًا وَدَعَا كَثِيرِينَ، ١٦ 16
ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.
وَأَرْسَلَ عَبْدَهُ فِي سَاعَةِ ٱلْعَشَاءِ لِيَقُولَ لِلْمَدْعُوِّينَ: تَعَالَوْا لِأَنَّ كُلَّ شَيْءٍ قَدْ أُعِدَّ. ١٧ 17
ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.
فَٱبْتَدَأَ ٱلْجَمِيعُ بِرَأْيٍ وَاحِدٍ يَسْتَعْفُونَ. قَالَ لَهُ ٱلْأَوَّلُ: إِنِّي ٱشْتَرَيْتُ حَقْلًا، وَأَنَا مُضْطَرٌّ أَنْ أَخْرُجَ وَأَنْظُرَهُ. أَسْأَلُكَ أَنْ تُعْفِيَنِي. ١٨ 18
“ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.
وَقَالَ آخَرُ: إِنِّي ٱشْتَرَيْتُ خَمْسَةَ أَزْوَاجِ بَقَرٍ، وَأَنَا مَاضٍ لِأَمْتَحِنَهَا. أَسْأَلُكَ أَنْ تُعْفِيَنِي. ١٩ 19
“ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.
وَقَالَ آخَرُ: إِنِّي تَزَوَّجْتُ بِٱمْرَأَةٍ، فَلِذَلِكَ لَا أَقْدِرُ أَنْ أَجِيءَ. ٢٠ 20
“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.
فَأَتَى ذَلِكَ ٱلْعَبْدُ وَأَخْبَرَ سَيِّدَهُ بِذَلِكَ. حِينَئِذٍ غَضِبَ رَبُّ ٱلْبَيْتِ، وَقَالَ لِعَبْدِهِ: ٱخْرُجْ عَاجِلًا إِلَى شَوَارِعِ ٱلْمَدِينَةِ وَأَزِقَّتِهَا، وَأَدْخِلْ إِلَى هُنَا ٱلْمَسَاكِينَ وَٱلْجُدْعَ وَٱلْعُرْجَ وَٱلْعُمْيَ. ٢١ 21
“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.
فَقَالَ ٱلْعَبْدُ: يَا سَيِّدُ، قَدْ صَارَ كَمَا أَمَرْتَ، وَيُوجَدُ أَيْضًا مَكَانٌ. ٢٢ 22
“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.
فَقَالَ ٱلسَّيِّدُ لِلْعَبْدِ: ٱخْرُجْ إِلَى ٱلطُّرُقِ وَٱلسِّيَاجَاتِ وَأَلْزِمْهُمْ بِٱلدُّخُولِ حَتَّى يَمْتَلِئَ بَيْتِي، ٢٣ 23
“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.
لِأَنِّي أَقُولُ لَكُمْ: إِنَّهُ لَيْسَ وَاحِدٌ مِنْ أُولَئِكَ ٱلرِّجَالِ ٱلْمَدْعُوِّينَ يَذُوقُ عَشَائِي». ٢٤ 24
ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’”
وَكَانَ جُمُوعٌ كَثِيرَةٌ سَائِرِينَ مَعَهُ، فَٱلْتَفَتَ وَقَالَ لَهُمْ: ٢٥ 25
ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:
«إِنْ كَانَ أَحَدٌ يَأْتِي إِلَيَّ وَلَا يُبْغِضُ أَبَاهُ وَأُمَّهُ وَٱمْرَأَتَهُ وَأَوْلَادَهُ وَإِخْوَتَهُ وَأَخَوَاتِهِ، حَتَّى نَفْسَهُ أَيْضًا، فَلَا يَقْدِرُ أَنْ يَكُونَ لِي تِلْمِيذًا. ٢٦ 26
“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.
وَمَنْ لَا يَحْمِلُ صَلِيبَهُ وَيَأْتِي وَرَائِي فَلَا يَقْدِرُ أَنْ يَكُونَ لِي تِلْمِيذًا. ٢٧ 27
ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.
وَمَنْ مِنْكُمْ وَهُوَ يُرِيدُ أَنْ يَبْنِيَ بُرْجًا لَا يَجْلِسُ أَوَّلًا وَيَحْسِبُ ٱلنَّفَقَةَ، هَلْ عِنْدَهُ مَا يَلْزَمُ لِكَمَالِهِ؟ ٢٨ 28
“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?
لِئَلَّا يَضَعَ ٱلْأَسَاسَ وَلَا يَقْدِرَ أَنْ يُكَمِّلَ، فَيَبْتَدِئَ جَمِيعُ ٱلنَّاظِرِينَ يَهْزَأُونَ بِهِ، ٢٩ 29
ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.
قَائِلِينَ: هَذَا ٱلْإِنْسَانُ ٱبْتَدَأَ يَبْنِي وَلَمْ يَقْدِرْ أَنْ يُكَمِّلَ. ٣٠ 30
وَأَيُّ مَلِكٍ إِنْ ذَهَبَ لِمُقَاتَلَةِ مَلِكٍ آخَرَ فِي حَرْبٍ، لَا يَجْلِسُ أَوَّلًا وَيَتَشَاوَرُ: هَلْ يَسْتَطِيعُ أَنْ يُلَاقِيَ بِعَشَرَةِ آلَافٍ ٱلَّذِي يَأْتِي عَلَيْهِ بِعِشْرِينَ أَلْفًا؟ ٣١ 31
“ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ?
وَإِلَّا فَمَا دَامَ ذَلِكَ بَعِيدًا، يُرْسِلُ سِفَارَةً وَيَسْأَلُ مَا هُوَ لِلصُّلْحِ. ٣٢ 32
ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?
فَكَذَلِكَ كُلُّ وَاحِدٍ مِنْكُمْ لَا يَتْرُكُ جَمِيعَ أَمْوَالِهِ، لَا يَقْدِرُ أَنْ يَكُونَ لِي تِلْمِيذًا. ٣٣ 33
ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.
«اَلْمِلْحُ جَيِّدٌ. وَلَكِنْ إِذَا فَسَدَ ٱلْمِلْحُ، فَبِمَاذَا يُصْلَحُ؟ ٣٤ 34
“ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು?
لَا يَصْلُحُ لِأَرْضٍ وَلَا لِمَزْبَلَةٍ، فَيَطْرَحُونَهُ خَارِجًا. مَنْ لَهُ أُذُنَانِ لِلسَّمْعِ، فَلْيَسْمَعْ». ٣٥ 35
ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”

< لُوقا 14 >