< لُوقا 18 >
وَقَالَ لَهُمْ أَيْضًا مَثَلًا فِي أَنَّهُ يَنْبَغِي أَنْ يُصَلَّى كُلَّ حِينٍ وَلَا يُمَلَّ، | ١ 1 |
೧ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
قَائِلًا: «كَانَ فِي مَدِينَةٍ قَاضٍ لَا يَخَافُ ٱللهَ وَلَا يَهَابُ إِنْسَانًا. | ٢ 2 |
೨ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
وَكَانَ فِي تِلْكَ ٱلْمَدِينَةِ أَرْمَلَةٌ. وَكَانَتْ تَأْتِي إِلَيْهِ قَائِلَةً: أَنْصِفْنِي مِنْ خَصْمِي! | ٣ 3 |
೩ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
وَكَانَ لَا يَشَاءُ إِلَى زَمَانٍ. وَلَكِنْ بَعْدَ ذَلِكَ قَالَ فِي نَفْسِهِ: وَإِنْ كُنْتُ لَا أَخَافُ ٱللهَ وَلَا أَهَابُ إِنْسَانًا، | ٤ 4 |
೪ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
فَإِنِّي لِأَجْلِ أَنَّ هَذِهِ ٱلْأَرْمَلَةَ تُزْعِجُنِي، أُنْصِفُهَا، لِئَلَّا تَأْتِيَ دَائِمًا فَتَقْمَعَنِي!». | ٥ 5 |
೫ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
وَقَالَ ٱلرَّبُّ: «ٱسْمَعُوا مَا يَقُولُ قَاضِي ٱلظُّلْمِ. | ٦ 6 |
೬ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
أَفَلَا يُنْصِفُ ٱللهُ مُخْتَارِيهِ، ٱلصَّارِخِينَ إِلَيْهِ نَهَارًا وَلَيْلًا، وَهُوَ مُتَمَهِّلٌ عَلَيْهِمْ؟ | ٧ 7 |
೭ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
أَقُولُ لَكُمْ: إِنَّهُ يُنْصِفُهُمْ سَرِيعًا! وَلَكِنْ مَتَى جَاءَ ٱبْنُ ٱلْإِنْسَانِ، أَلَعَلَّهُ يَجِدُ ٱلْإِيمَانَ عَلَى ٱلْأَرْضِ؟». | ٨ 8 |
೮ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
وَقَالَ لِقَوْمٍ وَاثِقِينَ بِأَنْفُسِهِمْ أَنَّهُمْ أَبْرَارٌ، وَيَحْتَقِرُونَ ٱلْآخَرِينَ هَذَا ٱلْمَثَلَ: | ٩ 9 |
೯ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
«إِنْسَانَانِ صَعِدَا إِلَى ٱلْهَيْكَلِ لِيُصَلِّيَا، وَاحِدٌ فَرِّيسِيٌّ وَٱلْآخَرُ عَشَّارٌ. | ١٠ 10 |
೧೦ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
أَمَّا ٱلْفَرِّيسِيُّ فَوَقَفَ يُصَلِّي فِي نَفْسِهِ هَكَذَا: اَللَّهُمَّ أَنَا أَشْكُرُكَ أَنِّي لَسْتُ مِثْلَ بَاقِي ٱلنَّاسِ ٱلْخَاطِفِينَ ٱلظَّالِمِينَ ٱلزُّنَاةِ، وَلَا مِثْلَ هَذَا ٱلْعَشَّارِ. | ١١ 11 |
೧೧ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
أَصُومُ مَرَّتَيْنِ فِي ٱلْأُسْبُوعِ، وَأُعَشِّرُ كُلَّ مَا أَقْتَنِيهِ. | ١٢ 12 |
೧೨ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
وَأَمَّا ٱلْعَشَّارُ فَوَقَفَ مِنْ بَعِيدٍ، لَا يَشَاءُ أَنْ يَرْفَعَ عَيْنَيْهِ نَحْوَ ٱلسَّمَاءِ، بَلْ قَرَعَ عَلَى صَدْرِهِ قَائِلًا: ٱللهُمَّ ٱرْحَمْنِي، أَنَا ٱلْخَاطِئَ. | ١٣ 13 |
೧೩ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
أَقُولُ لَكُمْ: إِنَّ هَذَا نَزَلَ إِلَى بَيْتِهِ مُبَرَّرًا دُونَ ذَاكَ، لِأَنَّ كُلَّ مَنْ يَرْفَعُ نَفْسَهُ يَتَّضِعُ، وَمَنْ يَضَعُ نَفْسَهُ يَرْتَفِعُ». | ١٤ 14 |
೧೪ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
فَقَدَّمُوا إِلَيْهِ ٱلْأَطْفَالَ أَيْضًا لِيَلْمِسَهُمْ، فَلَمَّا رَآهُمُ ٱلتَّلَامِيذُ ٱنْتَهَرُوهُمْ. | ١٥ 15 |
೧೫ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
أَمَّا يَسُوعُ فَدَعَاهُمْ وَقَالَ: «دَعُوا ٱلْأَوْلَادَ يَأْتُونَ إِلَيَّ وَلَا تَمْنَعُوهُمْ، لِأَنَّ لِمِثْلِ هَؤُلَاءِ مَلَكُوتَ ٱللهِ. | ١٦ 16 |
೧೬ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
اَلْحَقَّ أَقُولُ لَكُمْ: مَنْ لَا يَقْبَلُ مَلَكُوتَ ٱللهِ مِثْلَ وَلَدٍ فَلَنْ يَدْخُلَهُ». | ١٧ 17 |
೧೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
وَسَأَلَهُ رَئِيسٌ قَائِلًا: «أَيُّهَا ٱلْمُعَلِّمُ ٱلصَّالِحُ، مَاذَا أَعْمَلُ لِأَرِثَ ٱلْحَيَاةَ ٱلْأَبَدِيَّةَ؟» (aiōnios ) | ١٨ 18 |
೧೮ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios )
فَقَالَ لَهُ يَسُوعُ: «لِمَاذَا تَدْعُونِي صَالِحًا؟ لَيْسَ أَحَدٌ صَالِحًا إِلَّا وَاحِدٌ وَهُوَ ٱللهُ. | ١٩ 19 |
೧೯ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
أَنْتَ تَعْرِفُ ٱلْوَصَايَا: لَا تَزْنِ. لَا تَقْتُلْ. لَا تَسْرِقْ. لَا تَشْهَدْ بِٱلزُّورِ. أَكْرِمْ أَبَاكَ وَأُمَّكَ». | ٢٠ 20 |
೨೦‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
فَقَالَ: «هَذِهِ كُلُّهَا حَفِظْتُهَا مُنْذُ حَدَاثَتِي». | ٢١ 21 |
೨೧ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
فَلَمَّا سَمِعَ يَسُوعُ ذَلِكَ قَالَ لَهُ: «يُعْوِزُكَ أَيْضًا شَيْءٌ: بِعْ كُلَّ مَا لَكَ وَوَزِّعْ عَلَى ٱلْفُقَرَاءِ، فَيَكُونَ لَكَ كَنْزٌ فِي ٱلسَّمَاءِ، وَتَعَالَ ٱتْبَعْنِي». | ٢٢ 22 |
೨೨ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
فَلَمَّا سَمِعَ ذَلِكَ حَزِنَ، لِأَنَّهُ كَانَ غَنِيًّا جِدًّا. | ٢٣ 23 |
೨೩ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
فَلَمَّا رَآهُ يَسُوعُ قَدْ حَزِنَ، قَالَ: «مَا أَعْسَرَ دُخُولَ ذَوِي ٱلْأَمْوَالِ إِلَى مَلَكُوتِ ٱللهِ! | ٢٤ 24 |
೨೪ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
لِأَنَّ دُخُولَ جَمَلٍ مِنْ ثَقْبِ إِبْرَةٍ أَيْسَرُ مِنْ أَنْ يَدْخُلَ غَنِيٌّ إِلَى مَلَكُوتِ ٱللهِ!». | ٢٥ 25 |
೨೫ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
فَقَالَ ٱلَّذِينَ سَمِعُوا: «فَمَنْ يَسْتَطِيعُ أَنْ يَخْلُصَ؟» | ٢٦ 26 |
೨೬ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
فَقَالَ: «غَيْرُ ٱلْمُسْتَطَاعِ عِنْدَ ٱلنَّاسِ مُسْتَطَاعٌ عِنْدَ ٱللهِ». | ٢٧ 27 |
೨೭ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
فَقَالَ بُطْرُسُ: «هَا نَحْنُ قَدْ تَرَكْنَا كُلَّ شَيْءٍ وَتَبِعْنَاكَ». | ٢٨ 28 |
೨೮ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
فَقَالَ لَهُمُ: «ٱلْحَقَّ أَقُولُ لَكُمْ: إِنْ لَيْسَ أَحَدٌ تَرَكَ بَيْتًا أَوْ وَالِدَيْنِ أَوْ إِخْوَةً أَوِ ٱمْرَأَةً أَوْ أَوْلَادًا مِنْ أَجْلِ مَلَكُوتِ ٱللهِ، | ٢٩ 29 |
೨೯ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
إِلَّا وَيَأْخُذُ فِي هَذَا ٱلزَّمَانِ أَضْعَافًا كَثِيرَةً، وَفِي ٱلدَّهْرِ ٱلْآتِي ٱلْحَيَاةَ ٱلْأَبَدِيَّةَ». (aiōn , aiōnios ) | ٣٠ 30 |
೩೦ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn , aiōnios )
وَأَخَذَ ٱلِٱثْنَيْ عَشَرَ وَقَالَ لَهُمْ: «هَا نَحْنُ صَاعِدُونَ إِلَى أُورُشَلِيمَ، وَسَيَتِمُّ كُلُّ مَا هُوَ مَكْتُوبٌ بِٱلْأَنْبِيَاءِ عَنِ ٱبْنِ ٱلْإِنْسَانِ، | ٣١ 31 |
೩೧ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
لِأَنَّهُ يُسَلَّمُ إِلَى ٱلْأُمَمِ، وَيُسْتَهْزَأُ بِهِ، وَيُشْتَمُ وَيُتْفَلُ عَلَيْهِ، | ٣٢ 32 |
೩೨ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
وَيَجْلِدُونَهُ، وَيَقْتُلُونَهُ، وَفِي ٱلْيَوْمِ ٱلثَّالِثِ يَقُومُ». | ٣٣ 33 |
೩೩ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
وَأَمَّا هُمْ فَلَمْ يَفْهَمُوا مِنْ ذَلِكَ شَيْئًا، وَكَانَ هَذَا ٱلْأَمْرُ مُخْفًى عَنْهُمْ، وَلَمْ يَعْلَمُوا مَا قِيلَ. | ٣٤ 34 |
೩೪ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
وَلَمَّا ٱقْتَرَبَ مِنْ أَرِيحَا كَانَ أَعْمَى جَالِسًا علَى ٱلطَّرِيقِ يَسْتَعْطِي. | ٣٥ 35 |
೩೫ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
فَلَمَّا سَمِعَ ٱلْجَمْعَ مُجْتَازًا سَأَلَ: «مَا عَسَى أَنْ يَكُونَ هَذَا؟». | ٣٦ 36 |
೩೬ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
فَأَخْبَرُوهُ أَنَّ يَسُوعَ ٱلنَّاصِرِيَّ مُجْتَازٌ. | ٣٧ 37 |
೩೭ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
فَصَرَخَ قَائِلًا: «يَا يَسُوعُ ٱبْنَ دَاوُدَ، ٱرْحَمْنِي!». | ٣٨ 38 |
೩೮ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
فَٱنْتَهَرَهُ ٱلْمُتَقَدِّمُونَ لِيَسْكُتَ، أَمَّا هُوَ فَصَرَخَ أَكْثَرَ كَثِيرًا: «يَا ٱبْنَ دَاوُدَ، ٱرْحَمْنِي!». | ٣٩ 39 |
೩೯ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
فَوَقَفَ يَسُوعُ وَأَمَرَ أَنْ يُقَدَّمَ إِلَيْهِ. وَلَمَّا ٱقْتَرَبَ سَأَلَهُ | ٤٠ 40 |
೪೦ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
قَائِلًا: «مَاذَا تُرِيدُ أَنْ أَفْعَلَ بِكَ؟». فَقَالَ: «يَاسَيِّدُ، أَنْ أُبْصِرَ!». | ٤١ 41 |
೪೧ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
فَقَالَ لَهُ يَسُوعُ: «أَبْصِرْ. إِيمَانُكَ قَدْ شَفَاكَ». | ٤٢ 42 |
೪೨ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
وَفِي ٱلْحَالِ أَبْصَرَ، وَتَبِعَهُ وَهُوَ يُمَجِّدُ ٱللهَ. وَجَمِيعُ ٱلشَّعْبِ إِذْ رَأَوْا سَبَّحُوا ٱللهَ. | ٤٣ 43 |
೪೩ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.