< لُوقا 20 >
وَفِي أَحَدِ تِلْكَ ٱلْأَيَّامِ إِذْ كَانَ يُعَلِّمُ ٱلشَّعْبَ فِي ٱلْهَيْكَلِ وَيُبَشِّرُ، وَقَفَ رُؤَسَاءُ ٱلْكَهَنَةِ وَٱلْكَتَبَةُ مَعَ ٱلشُّيُوخِ، | ١ 1 |
೧ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
وَكَلَّمُوُه قَائِلِينَ: «قُلْ لَنَا: بِأَيِّ سُلْطَانٍ تَفْعَلُ هَذَا؟ أَوْ مَنْ هُوَ ٱلَّذِي أَعْطَاكَ هَذَا ٱلسُّلْطَانَ؟». | ٢ 2 |
೨“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
فَأَجَابَ وَقَالَ لَهُمْ: «وَأَنَا أَيْضًا أَسْأَلُكُمْ كَلِمَةً وَاحِدَةً، فَقُولُوا لِي: | ٣ 3 |
೩ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
مَعْمُودِيَّةُ يُوحَنَّا: مِنَ ٱلسَّمَاءِ كَانَتْ أَمْ مِنَ ٱلنَّاسِ؟». | ٤ 4 |
೪ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
فَتَآمَرُوا فِيمَا بَيْنَهُمْ قَائِلِينَ: «إِنْ قُلْنَا: مِنَ ٱلسَّمَاءِ، يَقُولُ: فَلِمَاذَا لَمْ تُؤْمِنُوا بِهِ؟ | ٥ 5 |
೫ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
وَإِنْ قُلْنَا: مِنَ ٱلنَّاسِ، فَجَمِيعُ ٱلشَّعْبِ يَرْجُمُونَنَا، لِأَنَّهُمْ وَاثِقُونَ بِأَنَّ يُوحَنَّا نَبِيٌّ». | ٦ 6 |
೬ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
فَأَجَابُوا أَنَّهُمْ لَا يَعْلَمُونَ مِنْ أَيْنَ. | ٧ 7 |
೭ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
فَقَالَ لَهُمْ يَسُوعُ: «وَلَا أَنَا أَقُولُ لَكُمْ بِأَيِّ سُلْطَانٍ أَفْعَلُ هَذَا». | ٨ 8 |
೮ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
وَٱبْتَدَأَ يَقُولُ لِلشَّعْبِ هَذَا ٱلْمَثَلَ: «إِنْسَانٌ غَرَسَ كَرْمًا وَسَلَّمَهُ إِلَى كَرَّامِينَ وَسَافَرَ زَمَانًا طَوِيلًا. | ٩ 9 |
೯ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
وَفِي ٱلْوَقْتِ أَرْسَلَ إِلَى ٱلْكَرَّامِينَ عَبْدًا لِكَيْ يُعْطُوهُ مِنْ ثَمَرِ ٱلْكَرْمِ، فَجَلَدَهُ ٱلْكَرَّامُونَ، وَأَرْسَلُوهُ فَارِغًا. | ١٠ 10 |
೧೦ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
فَعَادَ وَأَرْسَلَ عَبْدًا آخَرَ، فَجَلَدُوا ذَلِكَ أَيْضًا وَأَهَانُوهُ، وَأَرْسَلُوهُ فَارِغًا. | ١١ 11 |
೧೧ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ثُمَّ عَادَ فَأَرْسَلَ ثَالِثًا، فَجَرَّحُوا هَذَا أَيْضًا وَأَخْرَجُوهُ. | ١٢ 12 |
೧೨ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
فَقَالَ صَاحِبُ ٱلْكَرْمِ: مَاذَا أَفْعَلُ؟ أُرْسِلُ ٱبْنِي ٱلْحَبِيبَ، لَعَلَّهُمْ إِذَا رَأَوْهُ يَهَابُونَ! | ١٣ 13 |
೧೩ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
فَلَمَّا رَآهُ ٱلْكَرَّامُونَ تَآمَرُوا فِيمَا بَيْنَهُمْ قَائِلِينَ: هَذَا هُوَ ٱلْوَارِثُ! هَلُمُّوا نَقْتُلْهُ لِكَيْ يَصِيرَ لَنَا ٱلْمِيرَاثُ! | ١٤ 14 |
೧೪ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
فَأَخْرَجُوهُ خَارِجَ ٱلْكَرْمِ وَقَتَلُوهُ. فَمَاذَا يَفْعَلُ بِهِمْ صَاحِبُ ٱلْكَرْمِ؟ | ١٥ 15 |
೧೫ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
يَأْتِي وَيُهْلِكُ هَؤُلَاءِ ٱلْكَرَّامِينَ وَيُعْطِي ٱلْكَرْمَ لِآخَرِينَ». فَلَمَّا سَمِعُوا قَالُوا: «حَاشَا!». | ١٦ 16 |
೧೬ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
فَنَظَرَ إِلَيْهِمْ وَقَالَ: «إِذًا مَا هُوَ هَذَا ٱلْمَكْتُوبُ: ٱلْحَجَرُ ٱلَّذِي رَفَضَهُ ٱلْبَنَّاؤُونَ هُوَ قَدْ صَارَ رَأْسَ ٱلزَّاوِيَةِ؟ | ١٧ 17 |
೧೭ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
كُلُّ مَنْ يَسْقُطُ عَلَى ذَلِكَ ٱلْحَجَرِ يَتَرَضَّضُ، وَمَنْ سَقَطَ هُوَ عَلَيْهِ يَسْحَقُهُ!». | ١٨ 18 |
೧೮“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
فَطَلَبَ رُؤَسَاءُ ٱلْكَهَنَةِ وَٱلْكَتَبَةُ أَنْ يُلْقُوا ٱلْأَيَادِيَ عَلَيْهِ فِي تِلْكَ ٱلسَّاعَةِ، وَلَكِنَّهُمْ خَافُوا ٱلشَّعْبَ، لِأَنَّهُمْ عَرَفُوا أَنَّهُ قَالَ هَذَا ٱلْمَثَلَ عَلَيْهِمْ. | ١٩ 19 |
೧೯ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
فَرَاقَبُوهُ وَأَرْسَلُوا جَوَاسِيسَ يَتَرَاءَوْنَ أَنَّهُمْ أَبْرَارٌ لِكَيْ يُمْسِكُوهُ بِكَلِمَةٍ، حَتَّى يُسَلِّمُوهُ إِلَى حُكْمِ ٱلْوَالِي وَسُلْطَانِهِ. | ٢٠ 20 |
೨೦ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
فَسَأَلُوهُ قَائِلِينَ: «يَا مُعَلِّمُ، نَعْلَمُ أَنَّكَ بِٱلِٱسْتِقَامَةِ تَتَكَلَّمُ وَتُعَلِّمُ، وَلَا تَقْبَلُ ٱلْوُجُوهَ، بَلْ بِٱلْحَقِّ تُعَلِّمُ طَرِيقَ ٱللهِ. | ٢١ 21 |
೨೧ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
أَيَجُوزُ لَنَا أَنْ نُعْطِيَ جِزْيَةً لِقَيْصَرَ أَمْ لَا؟». | ٢٢ 22 |
೨೨ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
فَشَعَرَ بِمَكْرِهِمْ وَقَالَ لَهُمْ: «لِمَاذَا تُجَرِّبُونَنِي؟ | ٢٣ 23 |
೨೩ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
أَرُونِي دِينَارًا. لِمَنِ ٱلصُّورَةُ وَٱلْكِتَابَةُ؟». فَأَجَابُوا وَقَالوُا: «لِقَيْصَرَ». | ٢٤ 24 |
೨೪ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
فَقَالَ لَهُمْ: «أَعْطُوا إِذًا مَا لِقَيْصَرَ لِقَيْصَرَ وَمَا لِلهِ للهِ». | ٢٥ 25 |
೨೫ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
فَلَمْ يَقْدِرُوا أَنْ يُمْسِكُوهُ بِكَلِمَةٍ قُدَّامَ ٱلشَّعْبِ، وَتَعَجَّبُوا مِنْ جَوَابِهِ وَسَكَتُوا. | ٢٦ 26 |
೨೬ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
وَحَضَرَ قَوْمٌ مِنَ ٱلصَّدُّوقِيِّينَ، ٱلَّذِينَ يُقَاوِمُونَ أَمْرَ ٱلْقِيَامَةِ، وَسَأَلُوهُ | ٢٧ 27 |
೨೭ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
قَائِلِيِنَ: «يَا مُعَلِّمُ، كَتَبَ لَنَا مُوسَى: إِنْ مَاتَ لِأَحَدٍ أَخٌ وَلَهُ ٱمْرَأَةٌ، وَمَاتَ بِغَيْرِ وَلَدٍ، يَأْخُذُ أَخُوهُ ٱلْمَرْأَةَ وَيُقِيمُ نَسْلًا لِأَخِيهِ. | ٢٨ 28 |
೨೮“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
فَكَانَ سَبْعَةُ إِخْوَةٍ. وَأَخَذَ ٱلْأَوَّلُ ٱمْرَأَةً وَمَاتَ بِغَيْرِ وَلَدٍ، | ٢٩ 29 |
೨೯ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
فَأَخَذَ ٱلثَّانِي ٱلْمَرْأَةَ وَمَاتَ بِغَيْرِ وَلَدٍ، | ٣٠ 30 |
೩೦ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
ثُمَّ أَخَذَهَا ٱلثَّالِثُ، وَهَكَذَا ٱلسَّبْعَةُ. وَلَمْ يَتْرُكُوا وَلَدًا وَمَاتُوا. | ٣١ 31 |
೩೧
وَآخِرَ ٱلْكُلِّ مَاتَتِ ٱلْمَرْأَةُ أَيْضًا. | ٣٢ 32 |
೩೨ಕಡೆಯಲ್ಲಿ ಆ ಹೆಂಗಸೂ ಸತ್ತಳು.
فَفِي ٱلْقِيَامَةِ، لِمَنْ مِنْهُمْ تَكُونُ زَوْجَةً؟ لِأَنَّهَا كَانَتْ زَوْجَةً لِلسَّبْعَةِ!». | ٣٣ 33 |
೩೩ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
فَأَجَابَ وَقَالَ لَهُمْ يَسُوعُ: «أَبْنَاءُ هَذَا ٱلدَّهْرِ يُزَوِّجُونَ وَيُزَوَّجُونَ، (aiōn ) | ٣٤ 34 |
೩೪ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn )
وَلَكِنَّ ٱلَّذِينَ حُسِبُوا أَهْلًا لِلْحُصُولِ عَلَى ذَلِكَ ٱلدَّهْرِ وَٱلْقِيَامَةِ مِنَ ٱلْأَمْوَاتِ، لَا يُزَوِّجُونَ وَلَا يُزَوَّجُونَ، (aiōn ) | ٣٥ 35 |
೩೫ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn )
إِذْ لَا يَسْتَطِيعُونَ أَنْ يَمُوتُوا أَيْضًا، لِأَنَّهُمْ مِثْلُ ٱلْمَلَائِكَةِ، وَهُمْ أَبْنَاءُ ٱللهِ، إِذْ هُمْ أَبْنَاءُ ٱلْقِيَامَةِ. | ٣٦ 36 |
೩೬ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
وَأَمَّا أَنَّ ٱلْمَوْتَى يَقُومُونَ، فَقَدْ دَلَّ عَلَيْهِ مُوسَى أَيْضًا فِي أَمْرِ ٱلْعُلَّيْقَةِ كَمَا يَقُولُ: اَلرَّبُّ إِلَهُ إِبْرَاهِيمَ وَإِلَهُ إِسْحَاقَ وَإِلَهُ يَعْقُوبَ. | ٣٧ 37 |
೩೭ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
وَلَيْسَ هُوَ إِلَهَ أَمْوَاتٍ بَلْ إِلَهُ أَحْيَاءٍ، لِأَنَّ ٱلْجَمِيعَ عِنْدَهُ أَحْيَاءٌ». | ٣٨ 38 |
೩೮ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
فَأجَابَ قَوْمٌ مِنَ ٱلْكَتَبَةِ وَقَالوا: «يَا مُعَلِّمُ، حَسَنًا قُلْتَ!». | ٣٩ 39 |
೩೯ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
وَلَمْ يَتَجَاسَرُوا أَيْضًا أَنْ يَسْأَلُوهُ عَنْ شَيْءٍ. | ٤٠ 40 |
೪೦ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
وَقَالَ لَهُمْ: «كَيْفَ يَقُولُونَ إِنَّ ٱلْمَسِيحَ ٱبْنُ دَاوُدَ؟ | ٤١ 41 |
೪೧ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
وَدَاوُدُ نَفْسُهُ يَقُولُ فِي كِتَابِ ٱلْمَزَامِيرِ: قَالَ ٱلرَّبُّ لِرَبِّي: ٱجْلِسْ عَنْ يَمِينِي | ٤٢ 42 |
೪೨“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
حَتَّى أَضَعَ أَعْدَاءَكَ مَوْطِئًا لِقَدَمَيْكَ. | ٤٣ 43 |
೪೩
فَإِذًا دَاوُدُ يَدْعُوهُ رَبًّا. فَكَيْفَ يَكُونُ ٱبْنَهُ؟». | ٤٤ 44 |
೪೪“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
وَفِيمَا كَانَ جَمِيعُ ٱلشَّعْبِ يَسْمَعُونَ قَالَ لِتَلَامِيذِهِ: | ٤٥ 45 |
೪೫ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
«ٱحْذَرُوا مِنَ ٱلْكَتَبَةِ ٱلَّذِينَ يَرْغَبُونَ ٱلْمَشْيَ بِٱلطَّيَالِسَةِ، وَيُحِبُّونَ ٱلتَّحِيَّاتِ فِي ٱلْأَسْوَاقِ، وَٱلْمَجَالِسَ ٱلْأُولَى فِي ٱلْمَجَامِعِ، وَٱلْمُتَّكَآتِ ٱلْأُولَى فِي ٱلْوَلَائِمِ. | ٤٦ 46 |
೪೬“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
اَلَّذِينَ يَأْكُلُونَ بُيُوتَ ٱلْأَرَامِلِ، وَلِعِلَّةٍ يُطِيلُونَ ٱلصَّلَوَاتِ. هَؤُلَاءِ يَأْخُذُونَ دَيْنُونَةً أَعْظَمَ!». | ٤٧ 47 |
೪೭ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.