< لُوقا 4 >

أَمَّا يَسُوعُ فَرَجَعَ مِنَ ٱلْأُرْدُنِّ مُمْتَلِئًا مِنَ ٱلرُّوحِ ٱلْقُدُسِ، وَكَانَ يُقْتَادُ بِٱلرُّوحِ فِي ٱلْبَرِّيَّةِ ١ 1
ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,
أَرْبَعِينَ يَوْمًا يُجَرَّبُ مِنْ إِبْلِيسَ. وَلَمْ يَأْكُلْ شَيْئًا فِي تِلْكَ ٱلْأَيَّامِ. وَلَمَّا تَمَّتْ جَاعَ أَخِيرًا. ٢ 2
ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.
وَقَالَ لَهُ إِبْلِيسُ: «إِنْ كُنْتَ ٱبْنَ ٱللهِ، فَقُلْ لِهَذَا ٱلْحَجَرِ أَنْ يَصِيرَ خُبْزًا». ٣ 3
ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.
فَأَجَابَهُ يَسُوعُ قَائِلًا: «مَكْتُوبٌ: أَنْ لَيْسَ بِٱلْخُبْزِ وَحْدَهُ يَحْيَا ٱلْإِنْسَانُ، بَلْ بِكُلِّ كَلِمَةٍ مِنَ ٱللهِ». ٤ 4
ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
ثُمَّ أَصْعَدَهُ إِبْلِيسُ إِلَى جَبَلٍ عَالٍ وَأَرَاهُ جَمِيعَ مَمَالِكِ ٱلْمَسْكُونَةِ فِي لَحْظَةٍ مِنَ ٱلزَّمَانِ. ٥ 5
ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.
وَقَالَ لَهُ إِبْلِيسُ: «لَكَ أُعْطِي هَذَا ٱلسُّلْطَانَ كُلَّهُ وَمَجْدَهُنَّ، لِأَنَّهُ إِلَيَّ قَدْ دُفِعَ، وَأَنَا أُعْطِيهِ لِمَنْ أُرِيدُ. ٦ 6
ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು.
فَإِنْ سَجَدْتَ أَمَامِي يَكُونُ لَكَ ٱلْجَمِيعُ». ٧ 7
ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.
فَأَجَابَهُ يَسُوعُ وَقَالَ: «ٱذْهَبْ يَا شَيْطَانُ! إِنَّهُ مَكْتُوبٌ: لِلرَّبِّ إِلَهِكَ تَسْجُدُ وَإِيَّاهُ وَحْدَهُ تَعْبُدُ». ٨ 8
ಯೇಸು ಅವನಿಗೆ ಉತ್ತರವಾಗಿ, “‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.
ثُمَّ جَاءَ بِهِ إِلَى أُورُشَلِيمَ، وَأَقَامَهُ عَلَى جَنَاحِ ٱلْهَيْكَلِ وَقَالَ لَهُ: «إِنْ كُنْتَ ٱبْنَ ٱللهِ فَٱطْرَحْ نَفْسَكَ مِنْ هُنَا إِلَى أَسْفَلُ، ٩ 9
ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,
لِأَنَّهُ مَكْتُوبٌ: أَنَّهُ يُوصِي مَلَائِكَتَهُ بِكَ لِكَيْ يَحْفَظُوكَ، ١٠ 10
ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು
وَأَنَّهُمْ عَلَى أَيَادِيهِمْ يَحْمِلُونَكَ لِكَيْ لَا تَصْدِمَ بِحَجَرٍ رِجْلَكَ». ١١ 11
ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು.
فَأَجَابَ يَسُوعُ وَقَالَ لَهُ: «إِنَّهُ قِيلَ: لَا تُجَرِّبِ ٱلرَّبَّ إِلَهَكَ». ١٢ 12
ಅದಕ್ಕೆ ಯೇಸು ಅವನಿಗೆ, “‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.
وَلَمَّا أَكْمَلَ إِبْلِيسُ كُلَّ تَجْرِبَةٍ فَارَقَهُ إِلَى حِينٍ. ١٣ 13
ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.
وَرَجَعَ يَسُوعُ بِقُوَّةِ ٱلرُّوحِ إِلَى ٱلْجَلِيلِ، وَخَرَجَ خَبَرٌ عَنْهُ فِي جَمِيعِ ٱلْكُورَةِ ٱلْمُحِيطَةِ. ١٤ 14
ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.
وَكَانَ يُعَلِّمُ فِي مَجَامِعِهِمْ مُمَجَّدًا مِنَ ٱلْجَمِيعِ. ١٥ 15
ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.
وَجَاءَ إِلَى ٱلنَّاصِرَةِ حَيْثُ كَانَ قَدْ تَرَبَّى. وَدَخَلَ ٱلْمَجْمَعَ حَسَبَ عَادَتِهِ يَوْمَ ٱلسَّبْتِ وَقَامَ لِيَقْرَأَ، ١٦ 16
ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.
فَدُفِعَ إِلَيْهِ سِفْرُ إِشَعْيَاءَ ٱلنَّبِيِّ. وَلَمَّا فَتَحَ ٱلسِّفْرَ وَجَدَ ٱلْمَوْضِعَ ٱلَّذِي كَانَ مَكْتُوبًا فِيهِ: ١٧ 17
ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:
«رُوحُ ٱلرَّبِّ عَلَيَّ، لِأَنَّهُ مَسَحَنِي لِأُبَشِّرَ ٱلْمَسَاكِينَ، أَرْسَلَنِي لِأَشْفِيَ ٱلْمُنْكَسِرِي ٱلْقُلُوبِ، لِأُنَادِيَ لِلْمَأْسُورِينَ بِٱلْإِطْلَاقِ ولِلْعُمْيِ بِٱلْبَصَرِ، وَأُرْسِلَ ٱلْمُنْسَحِقِينَ فِي ٱلْحُرِّيَّةِ، ١٨ 18
“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
وَأَكْرِزَ بِسَنَةِ ٱلرَّبِّ ٱلْمَقْبُولَةِ». ١٩ 19
ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”
ثُمَّ طَوَى ٱلسِّفْرَ وَسَلَّمَهُ إِلَى ٱلْخَادِمِ، وَجَلَسَ. وَجَمِيعُ ٱلَّذِينَ فِي ٱلْمَجْمَعِ كَانَتْ عُيُونُهُمْ شَاخِصَةً إِلَيْهِ. ٢٠ 20
ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.
فَٱبْتَدَأَ يَقُولُ لَهُمْ: «إِنَّهُ ٱلْيَوْمَ قَدْ تَمَّ هَذَا ٱلْمَكْتُوبُ فِي مَسَامِعِكُمْ». ٢١ 21
ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.
وَكَانَ ٱلْجَمِيعُ يَشْهَدُونَ لَهُ وَيَتَعَجَّبُونَ مِنْ كَلِمَاتِ ٱلنِّعْمَةِ ٱلْخَارِجَةِ مِنْ فَمِهِ، وَيَقُولُونَ: «أَلَيْسَ هَذَا ٱبْنَ يُوسُفَ؟». ٢٢ 22
ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
فَقَالَ لَهُمْ: «عَلَى كُلِّ حَالٍ تَقُولُونَ لِي هَذَا ٱلْمَثَلَ: أَيُّهَا ٱلطَّبِيبُ ٱشْفِ نَفْسَكَ! كَمْ سَمِعْنَا أَنَّهُ جَرَى فِي كَفْرِنَاحُومَ، فَٱفْعَلْ ذَلِكَ هُنَا أَيْضًا فِي وَطَنِكَ». ٢٣ 23
ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.
وَقَالَ: «ٱلْحَقَّ أَقُولُ لَكُمْ: إِنَّهُ لَيْسَ نَبِيٌّ مَقْبُولًا فِي وَطَنِهِ. ٢٤ 24
ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.
وَبِالْحَقِّ أَقُولُ لَكُمْ: إِنَّ أَرَامِلَ كَثِيرَةً كُنَّ فِي إِسْرَائِيلَ فِي أَيَّامِ إِيلِيَّا حِينَ أُغْلِقَتِ ٱلسَّمَاءُ مُدَّةَ ثَلَاثِ سِنِينَ وَسِتَّةِ أَشْهُرٍ، لَمَّا كَانَ جُوعٌ عَظِيمٌ فِي ٱلْأَرْضِ كُلِّهَا، ٢٥ 25
ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.
وَلَمْ يُرْسَلْ إِيلِيَّا إِلَى وَاحِدَةٍ مِنْهَا، إِلَّا إِلَى ٱمْرَأَةٍ أَرْمَلَةٍ، إِلَى صَرْفَةِ صَيْدَاءَ. ٢٦ 26
ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.
وَبُرْصٌ كَثِيرُونَ كَانُوا فِي إِسْرَائِيلَ فِي زَمَانِ أَلِيشَعَ ٱلنَّبِيِّ، وَلَمْ يُطَهَّرْ وَاحِدٌ مِنْهُمْ إِلَّا نُعْمَانُ ٱلسُّرْيَانِيُّ». ٢٧ 27
ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.
فَٱمْتَلَأَ غَضَبًا جَمِيعُ ٱلَّذِينَ فِي ٱلْمَجْمَعِ حِينَ سَمِعُوا هَذَا، ٢٨ 28
ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.
فَقَامُوا وَأَخْرَجُوهُ خَارِجَ ٱلْمَدِينَةِ، وَجَاءُوا بِهِ إِلَى حَافَّةِ ٱلْجَبَلِ ٱلَّذِي كَانَتْ مَدِينَتُهُمْ مَبْنِيَّةً عَلَيْهِ حَتَّى يَطْرَحُوهُ إِلَى أَسْفَلٍ. ٢٩ 29
ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.
أَمَّا هُوَ فَجَازَ فِي وَسْطِهِمْ وَمَضَى. ٣٠ 30
ಆದರೆ ಯೇಸು ಅವರ ಮಧ್ಯದಿಂದ ಹಾದು ಹೊರಟು ಹೋದರು.
وَٱنْحَدَرَ إِلَى كَفْرِنَاحُومَ، مَدِينَةٍ مِنَ ٱلْجَلِيلِ، وَكَانَ يُعَلِّمُهُمْ فِي ٱلسُّبُوتِ. ٣١ 31
ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.
فَبُهِتُوا مِنْ تَعْلِيمِهِ، لِأَنَّ كَلَامَهُ كَانَ بِسُلْطَانٍ. ٣٢ 32
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.
وَكَانَ فِي ٱلْمَجْمَعِ رَجُلٌ بِهِ رُوحُ شَيْطَانٍ نَجِسٍ، فَصَرَخَ بِصَوْتٍ عَظِيمٍ ٣٣ 33
ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,
قَائِلًا: «آهِ! مَا لَنَا وَلَكَ يَا يَسُوعُ ٱلنَّاصِرِيُّ؟ أَتَيْتَ لِتُهْلِكَنَا! أَنَا أَعْرِفُكَ مَنْ أَنْتَ: قُدُّوسُ ٱللهِ!». ٣٤ 34
“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.
فَٱنْتَهَرَهُ يَسُوعُ قَائِلًا: «ٱخْرَسْ! وَٱخْرُجْ مِنْهُ!». فَصَرَعَهُ ٱلشَّيْطَانُ فِي ٱلْوَسْطِ وَخَرَجَ مِنْهُ وَلَمْ يَضُرَّهُ شَيْئًا. ٣٥ 35
ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
فَوَقَعَتْ دَهْشَةٌ عَلَى ٱلْجَمِيعِ، وَكَانُوا يُخَاطِبُونَ بَعْضُهُمْ بَعْضًا قَائِلِينَ: «مَا هَذِهِ ٱلْكَلِمَةُ؟ لِأَنَّهُ بِسُلْطَانٍ وَقُوَّةٍ يَأْمُرُ ٱلْأَرْوَاحَ ٱلنَّجِسَةَ فَتَخْرُجُ!». ٣٦ 36
ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
وَخَرَجَ صِيتٌ عَنْهُ إِلَى كُلِّ مَوْضِعٍ فِي ٱلْكُورَةِ ٱلْمُحِيطَةِ. ٣٧ 37
ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.
وَلَمَّا قَامَ مِنَ ٱلْمَجْمَعِ دَخَلَ بَيْتَ سِمْعَانَ. وَكَانَتْ حَمَاةُ سِمْعَانَ قَدْ أَخَذَتْهَا حُمَّى شَدِيدَةٌ. فَسَأَلُوهُ مِنْ أَجْلِهَا. ٣٨ 38
ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.
فَوَقَفَ فَوْقَهَا وَٱنْتَهَرَ ٱلْحُمَّى فَتَرَكَتْهَا! وَفِي ٱلْحَالِ قَامَتْ وَصَارَتْ تَخْدُمُهُمْ. ٣٩ 39
ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.
وَعِنْدَ غُرُوبِ ٱلشَّمْسِ، جَمِيعُ ٱلَّذِينَ كَانَ عِنْدَهُمْ سُقَمَاءُ بِأَمْرَاضٍ مُخْتَلِفَةٍ قَدَّمُوهُمْ إِلَيْهِ، فَوَضَعَ يَدَيْهِ عَلَى كُلِّ وَاحِدٍ مِنْهُمْ وَشَفَاهُمْ. ٤٠ 40
ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.
وَكَانَتْ شَيَاطِينُ أَيْضًا تَخْرُجُ مِنْ كَثِيرِينَ وَهِيَ تَصْرُخُ وَتَقُولُ: «أَنْتَ ٱلْمَسِيحُ ٱبْنُ ٱللهِ!». فَٱنْتَهَرَهُمْ وَلَمْ يَدَعْهُمْ يَتَكَلَّمُونَ، لِأَنَّهُمْ عَرَفُوهُ أَنَّهُ ٱلْمَسِيحُ. ٤١ 41
ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
وَلَمَّا صَارَ ٱلنَّهَارُ خَرَجَ وَذَهَبَ إِلَى مَوْضِعٍ خَلَاءٍ، وَكَانَ ٱلْجُمُوعُ يُفَتِّشُونَ عَلَيْهِ. فَجَاءُوا إِلَيْهِ وَأَمْسَكُوهُ لِئَلَّا يَذْهَبَ عَنْهُمْ. ٤٢ 42
ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.
فَقَالَ لَهُمْ: «إِنَّهُ يَنْبَغِي لِي أَنْ أُبَشِّرَ ٱلْمُدُنَ ٱلْأُخَرَ أَيْضًا بِمَلَكُوتِ ٱللهِ، لِأَنِّي لِهَذَا قَدْ أُرْسِلْتُ». ٤٣ 43
ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.
فَكَانَ يَكْرِزُ فِي مَجَامِعِ ٱلْجَلِيلِ. ٤٤ 44
ಅನಂತರ ಯೇಸು ಯೂದಾಯದ ಸಭಾಮಂದಿರಗಳಲ್ಲಿ ಸುವಾರ್ತೆ ಸಾರುತ್ತಾ ಇದ್ದರು.

< لُوقا 4 >