< لُوقا 8 >
وَعَلَى أَثَرِ ذَلِكَ كَانَ يَسِيرُ فِي مَدِينَةٍ وَقَرْيَةٍ يَكْرِزُ وَيُبَشِّرُ بِمَلَكُوتِ ٱللهِ، وَمَعَهُ ٱلِٱثْنَا عَشَرَ. | ١ 1 |
೧ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
وَبَعْضُ ٱلنِّسَاءِ كُنَّ قَدْ شُفِينَ مِنْ أَرْوَاحٍ شِرِّيرَةٍ وَأَمْرَاضٍ: مَرْيَمُ ٱلَّتِي تُدْعَى ٱلْمَجْدَلِيَّةَ ٱلَّتِي خَرَجَ مِنْهَا سَبْعَةُ شَيَاطِينَ، | ٢ 2 |
೨ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
وَيُوَنَّا ٱمْرَأَةُ خُوزِي وَكِيلِ هِيرُودُسَ، وَسُوسَنَّةُ، وَأُخَرُ كَثِيرَاتٌ كُنَّ يَخْدِمْنَهُ مِنْ أَمْوَالِهِنَّ. | ٣ 3 |
೩ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
فَلَمَّا ٱجْتَمَعَ جَمْعٌ كَثِيرٌ أَيْضًا مِنَ ٱلَّذِينَ جَاءُوا إِلَيْهِ مِنْ كُلِّ مَدِينَةٍ، قَالَ بِمَثَلٍ: | ٤ 4 |
೪ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
«خَرَجَ ٱلزَّارِعُ لِيَزْرَعَ زَرْعَهُ. وَفِيمَا هُوَ يَزْرَعُ سَقَطَ بَعْضٌ عَلَى ٱلطَّرِيقِ، فَٱنْدَاسَ وَأَكَلَتْهُ طُيُورُ ٱلسَّمَاءِ. | ٥ 5 |
೫“ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
وَسَقَطَ آخَرُ عَلَى ٱلصَّخْرِ، فَلَمَّا نَبَتَ جَفَّ لِأَنَّهُ لَمْ تَكُنْ لَهُ رُطُوبَةٌ. | ٦ 6 |
೬ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
وَسَقَطَ آخَرُ فِي وَسْطِ ٱلشَّوْكِ، فَنَبَتَ مَعَهُ ٱلشَّوْكُ وَخَنَقَهُ. | ٧ 7 |
೭ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
وَسَقَطَ آخَرُ فِي ٱلْأَرْضِ ٱلصَّالِحَةِ، فَلَمَّا نَبَتَ صَنَعَ ثَمَرًا مِئَةَ ضِعْفٍ». قَالَ هَذَا وَنَادَى: «مَنْ لَهُ أُذْنَانِ لِلسَّمْعِ فَلْيَسْمَعْ!». | ٨ 8 |
೮ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
فَسَأَلَهُ تَلَامِيذُهُ قَائِلِينَ: «مَا عَسَى أَنْ يَكُونَ هَذَا ٱلْمَثَلُ؟». | ٩ 9 |
೯ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
فَقَالَ: «لَكُمْ قَدْ أُعْطِيَ أَنْ تَعْرِفُوا أَسْرَارَ مَلَكُوتِ ٱللهِ، وَأَمَّا لِلْبَاقِينَ فَبِأَمْثَالٍ، حَتَّى إِنَّهُمْ مُبْصِرِينَ لَا يُبْصِرُونَ، وَسَامِعِينَ لَا يَفْهَمُونَ. | ١٠ 10 |
೧೦ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
وَهَذَا هُوَ ٱلْمَثَلُ: ٱلزَّرْعُ هُوَ كَلَامُ ٱللهِ، | ١١ 11 |
೧೧ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
وَٱلَّذِينَ عَلَى ٱلطَّرِيقِ هُمُ ٱلَّذِينَ يَسْمَعُونَ، ثُمَّ يَأْتِي إِبْلِيسُ وَيَنْزِعُ ٱلْكَلِمَةَ مِنْ قُلُوبِهِمْ لِئَلَّا يُؤْمِنُوا فَيَخْلُصُوا. | ١٢ 12 |
೧೨ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
وَٱلَّذِينَ عَلَى ٱلصَّخْرِ هُمُ ٱلَّذِينَ مَتَى سَمِعُوا يَقْبَلُونَ ٱلْكَلِمَةَ بِفَرَحٍ، وَهَؤُلَاءِ لَيْسَ لَهُمْ أَصْلٌ، فَيُؤْمِنُونَ إِلَى حِينٍ، وَفِي وَقْتِ ٱلتَّجْرِبَةِ يَرْتَدُّونَ. | ١٣ 13 |
೧೩ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
وَٱلَّذِي سَقَطَ بَيْنَ ٱلشَّوْكِ هُمُ ٱلَّذِينَ يَسْمَعُونَ، ثُمَّ يَذْهَبُونَ فَيَخْتَنِقُونَ مِنْ هُمُومِ ٱلْحَيَاةِ وَغِنَاهَا وَلَذَّاتِهَا، وَلَا يُنْضِجُونَ ثَمَرًا. | ١٤ 14 |
೧೪ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
وَٱلَّذِي فِي ٱلْأَرْضِ ٱلْجَيِّدَةِ، هُوَ ٱلَّذِينَ يَسْمَعُونَ ٱلْكَلِمَةَ فَيَحْفَظُونَهَا فِي قَلْبٍ جَيِّدٍ صَالِحٍ، وَيُثْمِرُونَ بِٱلصَّبْرِ. | ١٥ 15 |
೧೫ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
«وَلَيْسَ أَحَدٌ يُوقِدُ سِرَاجًا وَيُغَطِّيهِ بِإِنَاءٍ أَوْ يَضَعُهُ تَحْتَ سَرِيرٍ، بَلْ يَضَعُهُ عَلَى مَنَارَةٍ، لِيَنْظُرَ ٱلدَّاخِلُونَ ٱلنُّورَ. | ١٦ 16 |
೧೬“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
لِأَنَّهُ لَيْسَ خَفِيٌّ لَا يُظْهَرُ، وَلَا مَكْتُومٌ لَا يُعْلَمُ وَيُعْلَنُ. | ١٧ 17 |
೧೭ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
فَٱنْظُرُوا كَيْفَ تَسْمَعُونَ، لِأَنَّ مَنْ لَهُ سَيُعْطَى، وَمَنْ لَيْسَ لَهُ فَٱلَّذِي يَظُنُّهُ لَهُ يُؤْخَذُ مِنْهُ». | ١٨ 18 |
೧೮ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
وَجَاءَ إِلَيْهِ أُمُّهُ وَإِخْوَتُهُ، وَلَمْ يَقْدِرُوا أَنْ يَصِلُوا إِلَيْهِ لِسَبَبِ ٱلْجَمْعِ. | ١٩ 19 |
೧೯ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
فَأَخْبَرُوهُ قَائِلِينَ: «أُمُّكَ وَإِخْوَتُكَ وَاقِفُونَ خَارِجًا، يُرِيدُونَ أَنْ يَرَوْكَ». | ٢٠ 20 |
೨೦ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
فَأَجَابَ وَقَالَ لَهُمْ: «أُمِّي وَإِخْوَتِي هُمُ ٱلَّذِينَ يَسْمَعُونَ كَلِمَةَ ٱللهِ وَيَعْمَلُونَ بِهَا». | ٢١ 21 |
೨೧ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
وَفِي أَحَدِ ٱلْأَيَّامِ دَخَلَ سَفِينَةً هُوَ وَتَلَامِيذُهُ، فَقَالَ لَهُمْ: «لِنَعْبُرْ إِلَى عَبْرِ ٱلْبُحَيْرَةِ». فَأَقْلَعُوا. | ٢٢ 22 |
೨೨ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
وَفِيمَا هُمْ سَائِرُونَ نَامَ. فَنَزَلَ نَوْءُ رِيحٍ فِي ٱلْبُحَيْرَةِ، وَكَانُوا يَمْتَلِئُونَ مَاءً وَصَارُوا فِي خَطَرٍ. | ٢٣ 23 |
೨೩ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
فَتَقَدَّمُوا وَأَيْقَظُوهُ قَائِلِينَ: «يَا مُعَلِّمُ، يَا مُعَلِّمُ، إِنَّنَا نَهْلِكُ!». فَقَامَ وَٱنْتَهَرَ ٱلرِّيحَ وَتَمَوُّجَ ٱلْمَاءِ، فَٱنْتَهَيَا وَصَارَ هُدُوُّ. | ٢٤ 24 |
೨೪ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
ثُمَّ قَالَ لَهُمْ: «أَيْنَ إِيمَانُكُمْ؟». فَخَافُوا وَتَعَجَّبُوا قَائِلِينَ فِيمَا بَيْنَهُمْ: «مَنْ هُوَ هَذَا؟ فَإِنَّهُ يَأْمُرُ ٱلرِّيَاحَ أَيْضًا وَٱلْمَاءَ فَتُطِيعُهُ!». | ٢٥ 25 |
೨೫ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
وَسَارُوا إِلَى كُورَةِ ٱلْجَدَرِيِّينَ ٱلَّتِي هِيَ مُقَابِلَ ٱلْجَلِيلِ. | ٢٦ 26 |
೨೬ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
وَلَمَّا خَرَجَ إِلَى ٱلْأَرْضِ ٱسْتَقْبَلَهُ رَجُلٌ مِنَ ٱلْمَدِينَةِ كَانَ فِيهِ شَيَاطِينُ مُنْذُ زَمَانٍ طَوِيلٍ، وَكَانَ لَا يَلْبَسُ ثَوْبًا، وَلَا يُقِيمُ فِي بَيْتٍ، بَلْ فِي ٱلْقُبُورِ. | ٢٧ 27 |
೨೭ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
فَلَمَّا رَأَى يَسُوعَ صَرَخَ وَخَرَّ لَهُ، وَقَالَ بِصَوْتٍ عَظِيمٍ: «مَا لِي وَلَكَ يَا يَسُوعُ ٱبْنَ ٱللهِ ٱلْعَلِيِّ؟ أَطْلُبُ مِنْكَ أَنْ لَا تُعَذِّبَنِي!». | ٢٨ 28 |
೨೮ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
لِأَنَّهُ أَمَرَ ٱلرُّوحَ ٱلنَّجِسَ أَنْ يَخْرُجَ مِنَ ٱلْإِنْسَانِ. لِأَنَّهُ مُنْذُ زَمَانٍ كَثِيرٍ كَانَ يَخْطَفُهُ، وَقَدْ رُبِطَ بِسَلَاسِلٍ وَقُيُودٍ مَحْرُوسًا، وَكَانَ يَقْطَعُ ٱلرُّبُطَ وَيُسَاقُ مِنَ ٱلشَّيْطَانِ إِلَى ٱلْبَرَارِي. | ٢٩ 29 |
೨೯ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
فَسَأَلَهُ يَسُوعُ قَائِلًا: «مَا ٱسْمُكَ؟». فَقَالَ: «لَجِئُونُ». لِأَنَّ شَيَاطِينَ كَثِيرَةً دَخَلَتْ فِيهِ. | ٣٠ 30 |
೩೦ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
وَطَلَبَ إِلَيْهِ أَنْ لَا يَأْمُرَهُمْ بِٱلذَّهَابِ إِلَى ٱلْهَاوِيَةِ. (Abyssos ) | ٣١ 31 |
೩೧ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos )
وَكَانَ هُنَاكَ قَطِيعُ خَنَازِيرَ كَثِيرَةٍ تَرْعَى فِي ٱلْجَبَلِ، فَطَلَبُوا إِلَيْهِ أَنْ يَأْذَنَ لَهُمْ بِٱلدُّخُولِ فِيهَا، فَأَذِنَ لَهُمْ. | ٣٢ 32 |
೩೨ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
فَخَرَجَتِ ٱلشَّيَاطِينُ مِنَ ٱلْإِنْسَانِ وَدَخَلَتْ فِي ٱلْخَنَازِيرِ، فَٱنْدَفَعَ ٱلْقَطِيعُ مِنْ عَلَى ٱلْجُرُفِ إِلَى ٱلْبُحَيْرَةِ وَٱخْتَنَقَ. | ٣٣ 33 |
೩೩ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
فَلَمَّا رَأَى ٱلرُّعَاةُ مَا كَانَ هَرَبُوا وَذَهَبُوا وَأَخْبَرُوا فِي ٱلْمَدِينَةِ وَفِي ٱلضِّيَاعِ، | ٣٤ 34 |
೩೪ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
فَخَرَجُوا لِيَرَوْا مَا جَرَى. وَجَاءُوا إِلَى يَسُوعَ فَوَجَدُوا ٱلْإِنْسَانَ ٱلَّذِي كَانَتِ ٱلشَّيَاطِينُ قَدْ خَرَجَتْ مِنْهُ لَابِسًا وَعَاقِلًا، جَالِسًا عِنْدَ قَدَمَيْ يَسُوعَ، فَخَافُوا. | ٣٥ 35 |
೩೫ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
فَأَخْبَرَهُمْ أَيْضًا ٱلَّذِينَ رَأَوْا كَيْفَ خَلَصَ ٱلْمَجْنُونُ. | ٣٦ 36 |
೩೬ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
فَطَلَبَ إِلَيْهِ كُلُّ جُمْهُورِ كُورَةِ ٱلْجَدَرِيِّينَ أَنْ يَذْهَبَ عَنْهُمْ، لِأَنَّهُ ٱعْتَرَاهُمْ خَوْفٌ عَظِيمٌ. فَدَخَلَ ٱلسَّفِينَةَ وَرَجَعَ. | ٣٧ 37 |
೩೭ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
أَمَّا ٱلرَّجُلُ ٱلَّذِي خَرَجَتْ مِنْهُ ٱلشَّيَاطِينُ فَطَلَبَ إِلَيْهِ أَنْ يَكُونَ مَعَهُ، وَلَكِنَّ يَسُوعَ صَرَفَهُ قَائِلًا: | ٣٨ 38 |
೩೮ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
«ٱرْجِعْ إِلَى بَيْتِكَ وَحَدِّثْ بِكَمْ صَنَعَ ٱللهُ بِكَ». فَمَضَى وَهُوَ يُنَادِي فِي ٱلْمَدِينَةِ كُلِّهَا بِكَمْ صَنَعَ بِهِ يَسُوعُ. | ٣٩ 39 |
೩೯ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
وَلَمَّا رَجَعَ يَسُوعُ قَبِلَهُ ٱلْجَمْعُ لِأَنَّهُمْ كَانُوا جَمِيعُهُمْ يَنْتَظِرُونَهُ. | ٤٠ 40 |
೪೦ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
وَإِذَا رَجُلٌ ٱسْمُهُ يَايِرُسُ قَدْ جَاءَ، وَكَانَ رَئِيسَ ٱلْمَجْمَعِ، فَوَقَعَ عِنْدَ قَدَمَيْ يَسُوعَ وَطَلَبَ إِلَيْهِ أَنْ يَدْخُلَ بَيْتَهُ، | ٤١ 41 |
೪೧ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
لِأَنَّهُ كَانَ لَهُ بِنْتٌ وَحِيدَةٌ لَهَا نَحْوُ ٱثْنَتَيْ عَشْرَةَ سَنَةً، وَكَانَتْ فِي حَالِ ٱلْمَوْتِ. فَفِيمَا هُوَ مُنْطَلِقٌ زَحَمَتْهُ ٱلْجُمُوعُ. | ٤٢ 42 |
೪೨
وَٱمْرَأَةٌ بِنَزْفِ دَمٍ مُنْذُ ٱثْنَتَيْ عَشْرَةَ سَنَةً، وَقَدْ أَنْفَقَتْ كُلَّ مَعِيشَتِهَا لِلْأَطِبَّاءِ، وَلَمْ تَقْدِرْ أَنْ تُشْفَى مِنْ أَحَدٍ، | ٤٣ 43 |
೪೩ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
جَاءَتْ مِنْ وَرَائِهِ وَلَمَسَتْ هُدْبَ ثَوْبِهِ. فَفِي ٱلْحَالِ وَقَفَ نَزْفُ دَمِهَا. | ٤٤ 44 |
೪೪ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
فَقَالَ يَسُوعُ: «مَنِ ٱلَّذِي لَمَسَنِي؟». وَإِذْ كَانَ ٱلْجَمِيعُ يُنْكِرُونَ، قَالَ بُطْرُسُ وَٱلَّذِينَ مَعَهُ: «يَا مُعَلِّمُ، ٱلْجُمُوعُ يُضَيِّقُونَ عَلَيْكَ وَيَزْحَمُونَكَ، وَتَقُولُ: مَنِ ٱلَّذِي لَمَسَنِي؟». | ٤٥ 45 |
೪೫ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
فَقَالَ يَسُوعُ: «قَدْ لَمَسَنِي وَاحِدٌ، لِأَنِّي عَلِمْتُ أَنَّ قُوَّةً قَدْ خَرَجَتْ مِنِّي». | ٤٦ 46 |
೪೬ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
فَلَمَّا رَأَتِ ٱلْمَرْأَةُ أَنَّهَا لَمْ تَخْتَفِ، جَاءَتْ مُرْتَعِدَةً وَخَرَّتْ لَهُ، وَأَخْبَرَتْهُ قُدَّامَ جَمِيعِ ٱلشَّعْبِ لِأَيِّ سَبَبٍ لَمَسَتْهُ، وَكَيْفَ بَرِئَتْ فِي ٱلْحَالِ. | ٤٧ 47 |
೪೭ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
فَقَالَ لَهَا: «ثِقِي يَا ٱبْنَةُ، إِيمَانُكِ قَدْ شَفَاكِ، اِذْهَبِي بِسَلَامٍ». | ٤٨ 48 |
೪೮ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
وَبَيْنَمَا هُوَ يَتَكَلَّمُ، جَاءَ وَاحِدٌ مِنْ دَارِ رَئِيسِ ٱلْمَجْمَعِ قَائِلًا لَهُ: «قَدْ مَاتَتِ ٱبْنَتُكَ. لَا تُتْعِبِ ٱلْمُعَلِّمَ». | ٤٩ 49 |
೪೯ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
فَسَمِعَ يَسُوعُ، وَأَجَابَهُ قَائِلًا: «لَاتَخَفْ! آمِنْ فَقَطْ، فَهِيَ تُشْفَى». | ٥٠ 50 |
೫೦ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
فَلَمَّا جَاءَ إِلَى ٱلْبَيْتِ لَمْ يَدَعْ أَحَدًا يَدْخُلُ إِلَّا بُطْرُسَ وَيَعْقُوبَ وَيُوحَنَّا، وَأَبَا ٱلصَّبِيَّةِ وَأُمَّهَا. | ٥١ 51 |
೫೧ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
وَكَانَ ٱلْجَمِيعُ يَبْكُونَ عَلَيْهَا وَيَلْطِمُونَ. فَقَالَ: «لَا تَبْكُوا. لَمْ تَمُتْ لَكِنَّهَا نَائِمَةٌ». | ٥٢ 52 |
೫೨ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
فَضَحِكُوا عَلَيْهِ، عَارِفِينَ أَنَّهَا مَاتَتْ. | ٥٣ 53 |
೫೩ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.
فَأَخْرَجَ ٱلْجَمِيعَ خَارِجًا، وَأَمْسَكَ بِيَدِهَا وَنَادَى قَائِلًا: «يَا صَبِيَّةُ، قُومِي!». | ٥٤ 54 |
೫೪ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
فَرَجَعَتْ رُوحُهَا وَقَامَتْ فِي ٱلْحَالِ. فَأَمَرَ أَنْ تُعْطَى لِتَأْكُلَ. | ٥٥ 55 |
೫೫ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
فَبُهِتَ وَالِدَاهَا. فَأَوْصَاهُمَا أَنْ لَا يَقُولَا لِأَحَدٍ عَمَّا كَانَ. | ٥٦ 56 |
೫೬ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.