< مَرْقُس 14 >

وَكَانَ ٱلْفِصْحُ وَأَيَّامُ ٱلْفَطِيرِ بَعْدَ يَوْمَيْنِ. وَكَانَ رُؤَسَاءُ ٱلْكَهَنَةِ وَٱلْكَتَبَةُ يَطْلُبُونَ كَيْفَ يُمْسِكُونَهُ بِمَكْرٍ وَيَقْتُلُونَهُ، ١ 1
ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
وَلَكِنَّهُمْ قَالُوا: «لَيْسَ فِي ٱلْعِيدِ، لِئَلَّا يَكُونَ شَغَبٌ فِي ٱلشَّعْبِ». ٢ 2
“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.
وَفِيمَا هُوَ فِي بَيْتِ عَنْيَا فِي بَيْتِ سِمْعَانَ ٱلْأَبْرَصِ، وَهُوَ مُتَّكِئٌ، جَاءَتِ ٱمْرَأَةٌ مَعَهَا قَارُورَةُ طِيبِ نَارِدِينٍ خَالِصٍ كَثِيرِ ٱلثَّمَنِ. فَكَسَرَتِ ٱلْقَارُورَةَ وَسَكَبَتْهُ عَلَى رَأْسِهِ. ٣ 3
ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
وَكَانَ قَوْمٌ مُغْتَاظِينَ فِي أَنْفُسِهِمْ، فَقَالُوا: «لِمَاذَا كَانَ تَلَفُ ٱلطِّيبِ هَذَا؟ ٤ 4
ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?
لِأَنَّهُ كَانَ يُمْكِنُ أَنْ يُبَاعَ هَذَا بِأَكْثَرَ مِنْ ثَلَاثِمِئَةِ دِينَارٍ وَيُعْطَى لِلْفُقَرَاءِ». وَكَانُوا يُؤَنِّبُونَهَا. ٥ 5
ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.
أَمَّا يَسُوعُ فَقَالَ: «ٱتْرُكُوهَا! لِمَاذَا تُزْعِجُونَهَا؟ قَدْ عَمِلَتْ بِي عَمَلًا حَسَنًا! ٦ 6
ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
لِأَنَّ ٱلْفُقَرَاءَ مَعَكُمْ فِي كُلِّ حِينٍ، وَمَتَى أَرَدْتُمْ تَقْدِرُونَ أَنْ تَعْمَلُوا بِهِمْ خَيْرًا. وَأَمَّا أَنَا فَلَسْتُ مَعَكُمْ فِي كُلِّ حِينٍ. ٧ 7
ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
عَمِلَتْ مَا عِنْدَهَا. قَدْ سَبَقَتْ وَدَهَنَتْ بِٱلطِّيبِ جَسَدِي لِلتَّكْفِينِ. ٨ 8
ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
اَلْحَقَّ أَقُولُ لَكُمْ: حَيْثُمَا يُكْرَزْ بِهَذَا ٱلْإِنْجِيلِ فِي كُلِّ ٱلْعَالَمِ، يُخْبَرْ أَيْضًا بِمَا فَعَلَتْهُ هَذِهِ، تَذْكَارًا لَهَا». ٩ 9
ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
ثُمَّ إِنَّ يَهُوذَا ٱلْإِسْخَرْيُوطِيَّ، وَاحِدًا مِنَ ٱلِٱثْنَيْ عَشَرَ، مَضَى إِلَى رُؤَسَاءِ ٱلْكَهَنَةِ لِيُسَلِّمَهُ إِلَيْهِمْ. ١٠ 10
೧೦ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
وَلَمَّا سَمِعُوا فَرِحُوا، وَوَعَدُوهُ أَنْ يُعْطُوهُ فِضَّةً. وَكَانَ يَطْلُبُ كَيْفَ يُسَلِّمُهُ فِي فُرْصَةٍ مُوافِقَةٍ. ١١ 11
೧೧ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
وَفِي ٱلْيَوْمِ ٱلْأَوَّلِ مِنَ ٱلْفَطِيرِ. حِينَ كَانُوا يَذْبَحُونَ ٱلْفِصْحَ، قَالَ لَهُ تَلَامِيذُهُ: «أَيْنَ تُرِيدُ أَنْ نَمْضِيَ وَنُعِدَّ لِتَأْكُلَ ٱلْفِصْحَ؟». ١٢ 12
೧೨ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
فَأَرْسَلَ ٱثْنَيْنِ مِنْ تَلَامِيذِهِ وَقَالَ لَهُمَا: «ٱذْهَبَا إِلَى ٱلْمَدِينَةِ، فَيُلَاقِيَكُمَا إِنْسَانٌ حَامِلٌ جَرَّةَ مَاءٍ. اِتْبَعَاهُ. ١٣ 13
೧೩ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
وَحَيْثُمَا يَدْخُلْ فَقُولَا لِرَبِّ ٱلْبَيْتِ: إِنَّ ٱلْمُعَلِّمَ يَقُولُ: أَيْنَ ٱلْمَنْزِلُ حَيْثُ آكُلُ ٱلْفِصْحَ مَعَ تَلَامِيذِي؟ ١٤ 14
೧೪ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.
فَهُوَ يُرِيكُمَا عِلِّيَّةً كَبِيرَةً مَفْرُوشَةً مُعَدَّةً. هُنَاكَ أَعِدَّا لَنَا». ١٥ 15
೧೫“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
فَخَرَجَ تِلْمِيذَاهُ وَأَتَيَا إِلَى ٱلْمَدِينَةِ، وَوَجَدَا كَمَا قَالَ لَهُمَا. فَأَعَدَّا ٱلْفِصْحَ. ١٦ 16
೧೬ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
وَلَمَّا كَانَ ٱلْمَسَاءُ جَاءَ مَعَ ٱلِٱثْنَيْ عَشَرَ. ١٧ 17
೧೭ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
وَفِيمَا هُمْ مُتَّكِئُونَ يَأْكُلُونَ، قَالَ يَسُوعُ: «ٱلْحَقَّ أَقُولُ لَكُمْ: إِنَّ وَاحِدًا مِنْكُمْ يُسَلِّمُنِي. اَلْآكِلُ مَعِي!». ١٨ 18
೧೮ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
فَٱبْتَدَأُوا يَحْزَنُونَ، وَيَقُولُونَ لَهُ وَاحِدًا فَوَاحِدًا: «هَلْ أَنَا؟». وَآخَرُ: «هَلْ أَنَا؟». ١٩ 19
೧೯ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.
فَأَجَابَ وَقَالَ لَهُمْ: «هُوَ وَاحِدٌ مِنَ ٱلِٱثْنَيْ عَشَرَ، ٱلَّذِي يَغْمِسُ مَعِي فِي ٱلصَّحْفَةِ. ٢٠ 20
೨೦ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
إِنَّ ٱبْنَ ٱلْإِنْسَانِ مَاضٍ كَمَا هُوَ مَكْتُوبٌ عَنْهُ، وَلَكِنْ وَيْلٌ لِذَلِكَ ٱلرَّجُلِ ٱلَّذِي بِهِ يُسَلَّمُ ٱبْنُ ٱلْإِنْسَانِ. كَانَ خَيْرًا لِذَلِكَ ٱلرَّجُلِ لَوْ لَمْ يُولَدْ!». ٢١ 21
೨೧ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
وَفِيمَا هُمْ يَأْكُلُونَ، أَخَذَ يَسُوعُ خُبْزًا وَبَارَكَ وَكَسَّرَ، وَأَعْطَاهُمْ وَقَالَ: «خُذُوا كُلُوا، هَذَا هُوَ جَسَدِي». ٢٢ 22
೨೨ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
ثُمَّ أَخَذَ ٱلْكَأْسَ وَشَكَرَ وَأَعْطَاهُمْ، فَشَرِبُوا مِنْهَا كُلُّهُمْ. ٢٣ 23
೨೩ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
وَقَالَ لَهُمْ: «هَذَا هُوَ دَمِي ٱلَّذِي لِلْعَهْدِ ٱلْجَدِيدِ، ٱلَّذِي يُسْفَكُ مِنْ أَجْلِ كَثِيرِينَ. ٢٤ 24
೨೪ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವಒಡಂಬಡಿಕೆಯ ರಕ್ತ.
اَلْحَقَّ أَقُولُ لَكُمْ: إِنِّي لَا أَشْرَبُ بَعْدُ مِنْ نِتَاجِ ٱلْكَرْمَةِ إِلَى ذَلِكَ ٱلْيَوْمِ حِينَمَا أَشْرَبُهُ جَدِيدًا فِي مَلَكُوتِ ٱللهِ». ٢٥ 25
೨೫ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
ثُمَّ سَبَّحُوا وَخَرَجُوا إِلَى جَبَلِ ٱلزَّيْتُونِ. ٢٦ 26
೨೬ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
وَقَالَ لَهُمْ يَسُوعُ: «إِنَّ كُلَّكُمْ تَشُكُّونَ فِيَّ فِي هَذِهِ ٱللَّيْلَةِ، لِأَنَّهُ مَكْتُوبٌ: أَنِّي أَضْرِبُ ٱلرَّاعِيَ فَتَتَبَدَّدُ ٱلْخِرَافُ. ٢٧ 27
೨೭ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನುಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
وَلَكِنْ بَعْدَ قِيَامِي أَسْبِقُكُمْ إِلَى ٱلْجَلِيلِ». ٢٨ 28
೨೮ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
فَقَالَ لَهُ بُطْرُسُ: «وَإِنْ شَكَّ ٱلْجَمِيعُ فَأَنَا لَا أَشُكُّ!». ٢٩ 29
೨೯ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.
فَقَالَ لَهُ يَسُوعُ: «ٱلْحَقَّ أَقُولُ لَكَ: إِنَّكَ ٱلْيَوْمَ فِي هَذِهِ ٱللَّيْلَةِ، قَبْلَ أَنْ يَصِيحَ ٱلدِّيكُ مَرَّتَيْنِ، تُنْكِرُنِي ثَلَاثَ مَرَّاتٍ». ٣٠ 30
೩೦ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
فَقَالَ بِأَكْثَرِ تَشْدِيدٍ: «وَلَوِ ٱضْطُرِرْتُ أَنْ أَمُوتَ مَعَكَ لَا أُنْكِرُكَ!». وَهَكَذَا قَالَ أَيْضًا ٱلْجَمِيعُ. ٣١ 31
೩೧ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
وَجَاءُوا إِلَى ضَيْعَةٍ ٱسْمُهَا جَثْسَيْمَانِي، فَقَالَ لِتَلَامِيذِهِ: «ٱجْلِسُوا هَهُنَا حَتَّى أُصَلِّيَ». ٣٢ 32
೩೨ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
ثُمَّ أَخَذَ مَعَهُ بُطْرُسَ وَيَعْقُوبَ وَيُوحَنَّا، وَٱبْتَدَأَ يَدْهَشُ وَيَكْتَئِبُ. ٣٣ 33
೩೩ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
فَقَالَ لَهُمْ: «نَفْسِي حَزِينَةٌ جِدًّا حَتَّى ٱلْمَوْتِ! اُمْكُثُوا هُنَا وَٱسْهَرُوا». ٣٤ 34
೩೪ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
ثُمَّ تَقَدَّمَ قَلِيلًا وَخَرَّ عَلَى ٱلْأَرْضِ، وَكَانَ يُصَلِّي لِكَيْ تَعْبُرَ عَنْهُ ٱلسَّاعَةُ إِنْ أَمْكَنَ. ٣٥ 35
೩೫ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
وَقَالَ: «يَا أَبَا ٱلْآبُ، كُلُّ شَيْءٍ مُسْتَطَاعٌ لَكَ، فَأَجِزْ عَنِّي هَذِهِ ٱلْكَأْسَ. وَلَكِنْ لِيَكُنْ لَا مَا أُرِيدُ أَنَا، بَلْ مَا تُرِيدُ أَنْتَ». ٣٦ 36
೩೬“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
ثُمَّ جَاءَ وَوَجَدَهُمْ نِيَامًا، فَقَالَ لِبُطْرُسَ: «يَا سِمْعَانُ، أَنْتَ نَائِمٌ! أَمَا قَدَرْتَ أَنْ تَسْهَرَ سَاعَةً وَاحِدَةً؟ ٣٧ 37
೩೭ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
اِسْهَرُوا وَصَلُّوا لِئَلَّا تَدْخُلُوا فِي تَجْرِبَةٍ. أَمَّا ٱلرُّوحُ فَنَشِيطٌ، وَأَمَّا ٱلْجَسَدُ فَضَعِيفٌ». ٣٨ 38
೩೮ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
وَمَضَى أَيْضًا وَصَلَّى قَائِلًا ذَلِكَ ٱلْكَلَامَ بِعَيْنِهِ. ٣٩ 39
೩೯ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.
ثُمَّ رَجَعَ وَوَجَدَهُمْ أَيْضًا نِيَامًا، إِذْ كَانَتْ أَعْيُنُهُمْ ثَقِيلَةً، فَلَمْ يَعْلَمُوا بِمَاذَا يُجِيبُونَهُ. ٤٠ 40
೪೦ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
ثُمَّ جَاءَ ثَالِثَةً وَقَالَ لَهُمْ: «نَامُوا ٱلْآنَ وَٱسْتَرِيحُوا! يَكْفِي! قَدْ أَتَتِ ٱلسَّاعَةُ! هُوَذَا ٱبْنُ ٱلْإِنْسَانِ يُسَلَّمُ إِلَى أَيْدِي ٱلْخُطَاةِ. ٤١ 41
೪೧ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
قُومُوا لِنَذْهَبَ! هُوَذَا ٱلَّذِي يُسَلِّمُنِي قَدِ ٱقْتَرَبَ!». ٤٢ 42
೪೨ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
وَلِلْوَقْتِ فِيمَا هُوَ يَتَكَلَّمُ أَقْبَلَ يَهُوذَا، وَاحِدٌ مِنَ ٱلِٱثْنَيْ عَشَرَ، وَمَعَهُ جَمْعٌ كَثِيرٌ بِسُيُوفٍ وَعِصِيٍّ مِنْ عِنْدِ رُؤَسَاءِ ٱلْكَهَنَةِ وَٱلْكَتَبَةِ وَٱلشُّيُوخِ. ٤٣ 43
೪೩ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
وَكَانَ مُسَلِّمُهُ قَدْ أَعْطَاهُمْ عَلَامَةً قَائِلًا: «ٱلَّذِي أُقَبِّلُهُ هُوَ هُوَ. أَمْسِكُوهُ، وَٱمْضُوا بِهِ بِحِرْصٍ». ٤٤ 44
೪೪ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
فَجَاءَ لِلْوَقْتِ وَتَقَدَّمَ إِلَيْهِ قَائِلًا: «يَا سَيِّدِي، يَا سَيِّدِي!» وَقَبَّلَهُ. ٤٥ 45
೪೫ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
فَأَلْقَوْا أَيْدِيَهُمْ عَلَيْهِ وَأَمْسَكُوهُ. ٤٦ 46
೪೬ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
فَٱسْتَلَّ وَاحِدٌ مِنَ ٱلْحَاضِرِينَ ٱلسَّيْفَ، وَضَرَبَ عَبْدَ رَئِيسِ ٱلْكَهَنَةِ فَقَطَعَ أُذْنَهُ. ٤٧ 47
೪೭ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
فَأَجَابَ يَسُوعُ وَقَالَ لَهُمْ: «كَأَنَّهُ عَلَى لِصٍّ خَرَجْتُمْ بِسُيُوفٍ وَعِصِيٍّ لِتَأْخُذُونِي! ٤٨ 48
೪೮ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
كُلَّ يَوْمٍ كُنْتُ مَعَكُمْ فِي ٱلْهَيْكَلِ أُعَلِّمُ وَلَمْ تُمْسِكُونِي! وَلَكِنْ لِكَيْ تُكْمَلَ ٱلْكُتُبُ». ٤٩ 49
೪೯ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
فَتَرَكَهُ ٱلْجَمِيعُ وَهَرَبُوا. ٥٠ 50
೫೦ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
وَتَبِعَهُ شَابٌّ لَابِسًا إِزَارًا عَلَى عُرْيِهِ، فَأَمْسَكَهُ ٱلشُّبَّانُ، ٥١ 51
೫೧ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
فَتَرَكَ ٱلْإِزَارَ وَهَرَبَ مِنْهُمْ عُرْيَانًا. ٥٢ 52
೫೨ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
فَمَضَوْا بِيَسُوعَ إِلَى رَئِيسِ ٱلْكَهَنَةِ، فَٱجْتَمَعَ مَعَهُ جَمِيعُ رُؤَسَاءِ ٱلْكَهَنَةِ وَٱلشُّيُوخُ وَٱلْكَتَبَةُ. ٥٣ 53
೫೩ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
وَكَانَ بُطْرُسُ قَدْ تَبِعَهُ مِنْ بَعِيدٍ إِلَى دَاخِلِ دَارِ رَئِيسِ ٱلْكَهَنَةِ، وَكَانَ جَالِسًا بَيْنَ ٱلْخُدَّامِ يَسْتَدْفِئُ عِنْدَ ٱلنَّارِ. ٥٤ 54
೫೪ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
وَكَانَ رُؤَسَاءُ ٱلْكَهَنَةِ وَٱلْمَجْمَعُ كُلُّهُ يَطْلُبُونَ شَهَادَةً عَلَى يَسُوعَ لِيَقْتُلُوهُ، فَلَمْ يَجِدُوا. ٥٥ 55
೫೫ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
لِأَنَّ كَثِيرِينَ شَهِدُوا عَلَيْهِ زُورًا، وَلَمْ تَتَّفِقْ شَهَادَاتُهُمْ. ٥٦ 56
೫೬ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
ثُمَّ قَامَ قَوْمٌ وَشَهِدُوا عَلَيْهِ زُورًا قَائِلِينَ: ٥٧ 57
೫೭ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
«نَحْنُ سَمِعْنَاهُ يَقُولُ: إِنِّي أَنْقُضُ هَذَا ٱلْهَيْكَلَ ٱلْمَصْنُوعَ بِٱلْأَيَادِي، وَفِي ثَلَاثَةِ أَيَّامٍ أَبْنِي آخَرَ غَيْرَ مَصْنُوعٍ بِأَيَادٍ». ٥٨ 58
೫೮
وَلَا بِهَذَا كَانَتْ شَهَادَتُهُمْ تَتَّفِقُ. ٥٩ 59
೫೯ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
فَقَامَ رَئِيسُ ٱلْكَهَنَةِ فِي ٱلْوَسْطِ وَسَأَلَ يَسُوعَ قَائِلًا: «أَمَا تُجِيبُ بِشَيْءٍ؟ مَاذَا يَشْهَدُ بِهِ هَؤُلَاءِ عَلَيْكَ؟». ٦٠ 60
೬೦ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
أَمَّا هُوَ فَكَانَ سَاكِتًا وَلَمْ يُجِبْ بِشَيْءٍ. فَسَأَلَهُ رَئِيسُ ٱلْكَهَنَةِ أَيْضًا وَقَالَ لَهُ: «أَأَنْتَ ٱلْمَسِيحُ ٱبْنُ ٱلْمُبَارَكِ؟». ٦١ 61
೬೧ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
فَقَالَ يَسُوعُ: «أَنَا هُوَ. وَسَوْفَ تُبْصِرُونَ ٱبْنَ ٱلْإِنْسَانِ جَالِسًا عَنْ يَمِينِ ٱلْقُوَّةِ، وَآتِيًا فِي سَحَابِ ٱلسَّمَاءِ». ٦٢ 62
೬೨ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
فَمَزَّقَ رَئِيسُ ٱلْكَهَنَةِ ثِيَابَهُ وَقَالَ: «مَا حَاجَتُنَا بَعْدُ إِلَى شُهُودٍ؟ ٦٣ 63
೬೩ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?
قَدْ سَمِعْتُمُ ٱلتَّجَادِيفَ! مَا رَأْيُكُمْ؟». فَٱلْجَمِيعُ حَكَمُوا عَلَيْهِ أَنَّهُ مُسْتَوْجِبٌ ٱلْمَوْتَ. ٦٤ 64
೬೪ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
فَٱبْتَدَأَ قَوْمٌ يَبْصُقُونَ عَلَيْهِ، وَيُغَطُّونَ وَجْهَهُ وَيَلْكُمُونَهُ وَيَقُولُونَ لَهُ: «تَنَبَّأْ». وَكَانَ ٱلْخُدَّامُ يَلْطِمُونَهُ. ٦٥ 65
೬೫ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
وَبَيْنَمَا كَانَ بُطْرُسُ فِي ٱلدَّارِ أَسْفَلَ جَاءَتْ إِحْدَى جَوَارِي رَئِيسِ ٱلْكَهَنَةِ. ٦٦ 66
೬೬ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
فَلَمَّا رَأَتْ بُطْرُسَ يَسْتَدْفِئُ، نَظَرَتْ إِلَيْهِ وَقَالَتْ: «وَأَنْتَ كُنْتَ مَعَ يَسُوعَ ٱلنَّاصِرِيِّ!». ٦٧ 67
೬೭ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.
فَأَنْكَرَ قَائِلًا: «لَسْتُ أَدْرِي وَلَا أَفْهَمُ مَا تَقُولِينَ!». وَخَرَجَ خَارِجًا إِلَى ٱلدِّهْلِيزِ، فَصَاحَ ٱلدِّيكُ. ٦٨ 68
೬೮ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
فَرَأَتْهُ ٱلْجَارِيَةُ أَيْضًا وَٱبْتَدَأَتْ تَقُولُ لِلْحَاضِرِينَ: «إِنَّ هَذَا مِنْهُمْ!». ٦٩ 69
೬೯ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
فَأَنْكَرَ أَيْضًا. وَبَعْدَ قَلِيلٍ أَيْضًا قَالَ ٱلْحَاضِرُونَ لِبُطْرُسَ: «حَقًّا أَنْتَ مِنْهُمْ، لِأَنَّكَ جَلِيلِيٌّ أَيْضًا وَلُغَتُكَ تُشْبِهُ لُغَتَهُمْ!». ٧٠ 70
೭೦ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.
فَٱبْتَدَأَ يَلْعَنُ وَيَحْلِفُ: «إِنِّي لَا أَعْرِفُ هَذَا ٱلرَّجُلَ ٱلَّذِي تَقُولُونَ عَنْهُ!». ٧١ 71
೭೧ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
وَصَاحَ ٱلدِّيكُ ثَانِيَةً، فَتَذَكَّرَ بُطْرُسُ ٱلْقَوْلَ ٱلَّذِي قَالَهُ لَهُ يَسُوعُ: «إِنَّكَ قَبْلَ أَنْ يَصِيحَ ٱلدِّيكُ مَرَّتَيْنِ، تُنْكِرُنِي ثَلَاثَ مَرَّاتٍ». فَلَمَّا تَفَكَّرَ بِهِ بَكَى. ٧٢ 72
೭೨ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.

< مَرْقُس 14 >