< مَرْقُس 4 >

وَٱبْتَدَأَ أَيْضًا يُعَلِّمُ عِنْدَ ٱلْبَحْرِ، فَٱجْتَمَعَ إِلَيْهِ جَمْعٌ كَثِيرٌ حَتَّى إِنَّهُ دَخَلَ ٱلسَّفِينَةَ وَجَلَسَ عَلَى ٱلْبَحْرِ، وَٱلْجَمْعُ كُلُّهُ كَانَ عِنْدَ ٱلْبَحْرِ عَلَى ٱلْأَرْضِ. ١ 1
ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.
فَكَانَ يُعَلِّمُهُمْ كَثِيرًا بِأَمْثَالٍ. وَقَالَ لَهُمْ فِي تَعْلِيمِهِ: ٢ 2
ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:
«ٱسْمَعُوا! هُوَذَا ٱلزَّارِعُ قَدْ خَرَجَ لِيَزْرَعَ، ٣ 3
“ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.
وَفِيمَا هُوَ يَزْرَعُ سَقَطَ بَعْضٌ عَلَى ٱلطَّرِيقِ، فَجَاءَتْ طُيُورُ ٱلسَّمَاءِ وَأَكَلَتْهُ. ٤ 4
ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
وَسَقَطَ آخَرُ عَلَى مَكَانٍ مُحْجِرٍ، حَيْثُ لَمْ تَكُنْ لَهُ تُرْبَةٌ كَثِيرَةٌ، فَنَبَتَ حَالًا إِذْ لَمْ يَكُنْ لَهُ عُمْقُ أَرْضٍ. ٥ 5
ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
وَلَكِنْ لَمَّا أَشْرَقَتِ ٱلشَّمْسُ ٱحْتَرَقَ، وَإِذْ لَمْ يَكُنْ لَهُ أَصْلٌ جَفَّ. ٦ 6
ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
وَسَقَطَ آخَرُ فِي ٱلشَّوْكِ، فَطَلَعَ ٱلشَّوْكُ وَخَنَقَهُ فَلَمْ يُعْطِ ثَمَرًا. ٧ 7
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.
وَسَقَطَ آخَرُ فِي ٱلْأَرْضِ ٱلْجَيِّدَةِ، فَأَعْطَى ثَمَرًا يَصْعَدُ وَيَنْمُو، فَأَتَى وَاحِدٌ بِثَلَاثِينَ وَآخَرُ بِسِتِّينَ وَآخَرُ بِمِئَةٍ». ٨ 8
ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”
ثُمَّ قَالَ لَهُمْ: «مَنْ لَهُ أُذُنَانِ لِلسَّمْعِ، فَلْيَسْمَعْ» ٩ 9
ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.
وَلَمَّا كَانَ وَحْدَهُ سَأَلَهُ ٱلَّذِينَ حَوْلَهُ مَعَ ٱلِٱثْنَيْ عَشَرَ عَنِ ٱلْمَثَلِ، ١٠ 10
ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.
فَقَالَ لَهُمْ: «قَدْ أُعْطِيَ لَكُمْ أَنْ تَعْرِفُوا سِرَّ مَلَكُوتِ ٱللهِ. وَأَمَّا ٱلَّذِينَ هُمْ مِنْ خَارِجٍ فَبِٱلْأَمْثَالِ يَكُونُ لَهُمْ كُلُّ شَيْءٍ، ١١ 11
ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.
لِكَيْ يُبْصِرُوا مُبْصِرِينَ وَلَا يَنْظُرُوا، وَيَسْمَعُوا سَامِعِينَ وَلَا يَفْهَمُوا، لِئَلَّا يَرْجِعُوا فَتُغْفَرَ لَهُمْ خَطَايَاهُمْ». ١٢ 12
ಈ ಕಾರಣದಿಂದ, “‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.
ثُمَّ قَالَ لَهُمْ: «أَمَا تَعْلَمُونَ هَذَا ٱلْمَثَلَ؟ فَكَيْفَ تَعْرِفُونَ جَمِيعَ ٱلْأَمْثَالِ؟ ١٣ 13
ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
اَلزَّارِعُ يَزْرَعُ ٱلْكَلِمَةَ. ١٤ 14
ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.
وَهَؤُلَاءِ هُمُ ٱلَّذِينَ عَلَى ٱلطَّرِيقِ: حَيْثُ تُزْرَعُ ٱلْكَلِمَةُ، وَحِينَمَا يَسْمَعُونَ يَأْتِي ٱلشَّيْطَانُ لِلْوَقْتِ وَيَنْزِعُ ٱلْكَلِمَةَ ٱلْمَزْرُوعَةَ فِي قُلُوبِهِمْ. ١٥ 15
ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.
وَهَؤُلَاءِ كَذَلِكَ هُمُ ٱلَّذِينَ زُرِعُوا عَلَى ٱلْأَمَاكِنِ ٱلْمُحْجِرَةِ: ٱلَّذِينَ حِينَمَا يَسْمَعُونَ ٱلْكَلِمَةَ يَقْبَلُونَهَا لِلْوَقْتِ بِفَرَحٍ، ١٦ 16
ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
وَلَكِنْ لَيْسَ لَهُمْ أَصْلٌ فِي ذَوَاتِهِمْ، بَلْ هُمْ إِلَى حِينٍ. فَبَعْدَ ذَلِكَ إِذَا حَدَثَ ضِيقٌ أَوِ ٱضْطِهَادٌ مِنْ أَجْلِ ٱلْكَلِمَةِ، فَلِلْوَقْتِ يَعْثُرُونَ. ١٧ 17
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
وَهَؤُلَاءِ هُمُ ٱلَّذِينَ زُرِعُوا بَيْنَ ٱلشَّوْكِ: هَؤُلَاءِ هُمُ ٱلَّذِينَ يَسْمَعُونَ ٱلْكَلِمَةَ، ١٨ 18
ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.
وَهُمُومُ هَذَا ٱلْعَالَمِ وَغُرُورُ ٱلْغِنَى وَشَهَوَاتُ سَائِرِ ٱلْأَشْيَاءِ تَدْخُلُ وَتَخْنُقُ ٱلْكَلِمَةَ فَتَصِيرُ بِلَا ثَمَرٍ. (aiōn g165) ١٩ 19
ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn g165)
وَهَؤُلَاءِ هُمُ ٱلَّذِينَ زُرِعُوا عَلَى ٱلْأَرْضِ ٱلْجَيِّدَةِ: ٱلَّذِينَ يَسْمَعُونَ ٱلْكَلِمَةَ وَيَقْبَلُونَهَا، وَيُثْمِرُونَ: وَاحِدٌ ثَلَاثِينَ وَآخَرُ سِتِّينَ وَآخَرُ مِئَةً». ٢٠ 20
ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.
ثُمَّ قَالَ لَهُمْ: «هَلْ يُؤْتَى بِسِرَاجٍ لِيُوضَعَ تَحْتَ ٱلْمِكْيَالِ أَوْ تَحْتَ ٱلسَّرِيرِ؟ أَلَيْسَ لِيُوضَعَ عَلَى ٱلْمَنَارَةِ؟ ٢١ 21
ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
لِأَنَّهُ لَيْسَ شَيْءٌ خَفِيٌّ لَا يُظْهَرُ، وَلَا صَارَ مَكْتُومًا إِلَّا لِيُعْلَنَ. ٢٢ 22
ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.
إِنْ كَانَ لِأَحَدٍ أُذُنَانِ لِلسَّمْعِ، فَلْيَسْمَعْ». ٢٣ 23
ಕಿವಿಯುಳ್ಳವರು ಕೇಳಲಿ.”
وَقَالَ لَهُمُ: «ٱنْظُرُوا مَا تَسْمَعُونَ! بِٱلْكَيْلِ ٱلَّذِي بِهِ تَكِيلُونَ يُكَالُ لَكُمْ وَيُزَادُ لَكُمْ أَيُّهَا ٱلسَّامِعُونَ. ٢٤ 24
ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
لِأَنَّ مَنْ لَهُ سَيُعْطَى، وَأَمَّا مَنْ لَيْسَ لَهُ فَٱلَّذِي عِنْدَهُ سَيُؤْخَذُ مِنْهُ». ٢٥ 25
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.
وَقَالَ: «هَكَذَا مَلَكُوتُ ٱللهِ: كَأَنَّ إِنْسَانًا يُلْقِي ٱلْبِذَارَ عَلَى ٱلْأَرْضِ، ٢٦ 26
ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.
وَيَنَامُ وَيَقُومُ لَيْلًا وَنَهَارًا، وَٱلْبِذَارُ يَطْلُعُ وَيَنْمُو، وَهُوَ لَا يَعْلَمُ كَيْفَ، ٢٧ 27
ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
لِأَنَّ ٱلْأَرْضَ مِنْ ذَاتِهَا تَأْتِي بِثَمَرٍ. أَوَّلًا نَبَاتًا، ثُمَّ سُنْبُلًا، ثُمَّ قَمْحًا مَلْآنَ فِي ٱلسُّنْبُلِ. ٢٨ 28
ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.
وَأَمَّا مَتَى أَدْرَكَ ٱلثَّمَرُ، فَلِلْوَقْتِ يُرْسِلُ ٱلْمِنْجَلَ لِأَنَّ ٱلْحَصَادَ قَدْ حَضَرَ». ٢٩ 29
ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.
وَقَالَ: «بِمَاذَا نُشَبِّهُ مَلَكُوتَ ٱللهِ؟ أَوْ بِأَيِّ مَثَلٍ نُمَثِّلُهُ؟ ٣٠ 30
ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?
مِثْلُ حَبَّةِ خَرْدَلٍ، مَتَى زُرِعَتْ فِي ٱلْأَرْضِ فَهِيَ أَصْغَرُ جَمِيعِ ٱلْبُزُورِ ٱلَّتِي عَلَى ٱلْأَرْضِ. ٣١ 31
ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.
وَلَكِنْ مَتَى زُرِعَتْ تَطْلُعُ وَتَصِيرُ أَكْبَرَ جَمِيعِ ٱلْبُقُولِ، وَتَصْنَعُ أَغْصَانًا كَبِيرَةً، حَتَّى تَسْتَطِيعَ طُيُورُ ٱلسَّمَاءِ أَنْ تَتَآوَى تَحْتَ ظِلِّهَا». ٣٢ 32
ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.
وَبِأَمْثَالٍ كَثِيرَةٍ مِثْلِ هَذِهِ كَانَ يُكَلِّمُهُمْ حَسْبَمَا كَانُوا يَسْتَطِيعُونَ أَنْ يَسْمَعُوا، ٣٣ 33
ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.
وَبِدُونِ مَثَلٍ لَمْ يَكُنْ يُكَلِّمُهُمْ. وَأَمَّا عَلَى ٱنْفِرَادٍ فَكَانَ يُفَسِّرُ لِتَلَامِيذِهِ كُلَّ شَيْءٍ. ٣٤ 34
ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
وَقَالَ لَهُمْ فِي ذَلِكَ ٱلْيَوْمِ لَمَّا كَانَ ٱلْمَسَاءُ: «لِنَجْتَزْ إِلَى ٱلْعَبْرِ». ٣٥ 35
ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.
فَصَرَفُوا ٱلْجَمْعَ وَأَخَذُوهُ كَمَا كَانَ فِي ٱلسَّفِينَةِ. وَكَانَتْ مَعَهُ أَيْضًا سُفُنٌ أُخْرَى صَغِيرَةٌ. ٣٦ 36
ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.
فَحَدَثَ نَوْءُ رِيحٍ عَظِيمٌ، فَكَانَتِ ٱلْأَمْوَاجُ تَضْرِبُ إِلَى ٱلسَّفِينَةِ حَتَّى صَارَتْ تَمْتَلِئُ. ٣٧ 37
ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.
وَكَانَ هُوَ فِي ٱلْمُؤَخَّرِ عَلَى وِسَادَةٍ نَائِمًا. فَأَيْقَظُوهُ وَقَالُوا لَهُ: «يَا مُعَلِّمُ، أَمَا يَهُمُّكَ أَنَّنَا نَهْلِكُ؟». ٣٨ 38
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
فَقَامَ وَٱنْتَهَرَ ٱلرِّيحَ، وَقَالَ لِلْبَحْرِ: «ٱسْكُتْ! اِبْكَمْ!». فَسَكَنَتِ ٱلرِّيحُ وَصَارَ هُدُوءٌ عَظِيمٌ. ٣٩ 39
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
وَقَالَ لَهُمْ: «مَا بَالُكُمْ خَائِفِينَ هَكَذَا؟ كَيْفَ لَا إِيمَانَ لَكُمْ؟». ٤٠ 40
ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.
فَخَافُوا خَوْفًا عَظِيمًا، وَقَالُوا بَعْضُهُمْ لِبَعْضٍ: «مَنْ هُوَ هَذَا؟ فَإِنَّ ٱلرِّيحَ أَيْضًا وَٱلْبَحْرَ يُطِيعَانِهِ!». ٤١ 41
ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

< مَرْقُس 4 >