< مَرْقُس 9 >

وَقَالَ لَهُمُ: «ٱلْحَقَّ أَقُولُ لَكُمْ: إِنَّ مِنَ ٱلْقِيَامِ هَهُنَا قَوْمًا لَا يَذُوقُونَ ٱلْمَوْتَ حَتَّى يَرَوْا مَلَكُوتَ ٱللهِ قَدْ أَتَى بِقُوَّةٍ». ١ 1
ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.
وَبَعْدَ سِتَّةِ أَيَّامٍ أَخَذَ يَسُوعُ بُطْرُسَ وَيَعْقُوبَ وَيُوحَنَّا، وَصَعِدَ بِهِمْ إِلَى جَبَلٍ عَالٍ مُنْفَرِدِينَ وَحْدَهُمْ. وَتَغَيَّرَتْ هَيْئَتُهُ قُدَّامَهُمْ، ٢ 2
ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.
وَصَارَتْ ثِيَابُهُ تَلْمَعُ بَيْضَاءَ جِدًّا كَٱلثَّلْجِ، لَا يَقْدِرُ قَصَّارٌ عَلَى ٱلْأَرْضِ أَنْ يُبَيِّضَ مِثْلَ ذَلِكَ. ٣ 3
ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.
وَظَهَرَ لَهُمْ إِيلِيَّا مَعَ مُوسَى، وَكَانَا يَتَكَلَّمَانِ مَعَ يَسُوعَ. ٤ 4
ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.
فَجَعَلَ بُطْرُسُ يَقولُ لِيَسُوعَ: «يَا سَيِّدِي، جَيِّدٌ أَنْ نَكُونَ هَهُنَا. فَلْنَصْنَعْ ثَلَاثَ مَظَالَّ: لَكَ وَاحِدَةً، وَلِمُوسَى وَاحِدَةً، وَلِإِيلِيَّا وَاحِدَةً». ٥ 5
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.
لِأَنَّهُ لَمْ يَكُنْ يَعْلَمُ مَا يَتَكَلَّمُ بِهِ إِذْ كَانُوا مُرْتَعِبِينَ. ٦ 6
ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.
وَكَانَتْ سَحَابَةٌ تُظَلِّلُهُمْ. فَجَاءَ صَوْتٌ مِنَ ٱلسَّحَابَةِ قَائِلًا: «هَذَا هُوَ ٱبْنِي ٱلْحَبِيبُ. لَهُ ٱسْمَعُوا». ٧ 7
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.
فَنَظَرُوا حَوْلَهُمْ بَغْتَةً وَلَمْ يَرَوْا أَحَدًا غَيْرَ يَسُوعَ وَحْدَهُ مَعَهُمْ. ٨ 8
ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.
وَفِيمَا هُمْ نَازِلُونَ مِنَ ٱلْجَبَلِ، أَوْصَاهُمْ أَنْ لَا يُحَدِّثُوا أَحَدًا بِمَا أَبْصَرُوا، إِلَّا مَتَى قَامَ ٱبْنُ ٱلْإِنْسَانِ مِنَ ٱلْأَمْوَاتِ. ٩ 9
ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.
فَحَفِظُوا ٱلْكَلِمَةَ لِأَنْفُسِهِمْ يَتَسَاءَلُونَ: «مَا هُوَ ٱلْقِيَامُ مِنَ ٱلْأَمْوَاتِ؟». ١٠ 10
“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
فَسَأَلُوهُ قَائِليِنَ: «لِمَاذَا يَقُولُ ٱلْكَتَبَةُ: إِنَّ إِيلِيَّا يَنْبَغِي أَنْ يَأْتِيَ أَوَّلًا؟». ١١ 11
ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
فَأَجَابَ وَقَالَ لَهُمْ: «إِنَّ إِيلِيَّا يَأْتِي أَوَّلًا وَيَرُدُّ كُلَّ شَيْءٍ. وَكَيْفَ هُوَ مَكْتُوبٌ عَنِ ٱبْنِ ٱلْإِنْسَانِ أَنْ يَتَأَلَّمَ كَثِيرًا وَيُرْذَلَ. ١٢ 12
ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?
لَكِنْ أَقُولُ لَكُمْ: إِنَّ إِيلِيَّا أَيْضًا قَدْ أَتَى، وَعَمِلُوا بِهِ كُلَّ مَا أَرَادُوا، كَمَا هُوَ مَكْتُوبٌ عَنْهُ». ١٣ 13
ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.
وَلَمَّا جَاءَ إِلَى ٱلتَّلَامِيذِ رَأَى جَمْعًا كَثِيرًا حَوْلَهُمْ وَكَتَبَةً يُحَاوِرُونَهُمْ. ١٤ 14
ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.
وَلِلْوَقْتِ كُلُّ ٱلْجَمْعِ لَمَّا رَأَوْهُ تَحَيَّرُوا، وَرَكَضُوا وَسَلَّمُوا عَلَيْهِ. ١٥ 15
ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.
فَسَأَلَ ٱلْكَتَبَةَ: «بِمَاذَا تُحَاوِرُونَهُمْ؟» ١٦ 16
ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.
فَأَجَابَ وَاحِدٌ مِنَ ٱلْجَمْعِ وَقَالَ: «يَا مُعَلِّمُ، قَدْ قَدَّمْتُ إِلَيْكَ ٱبْنِي بِهِ رُوحٌ أَخْرَسُ، ١٧ 17
ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.
وَحَيْثُمَا أَدْرَكَهُ يُمَزِّقْهُ فَيُزْبِدُ وَيَصِرُّ بِأَسْنَانِهِ وَيَيْبَسُ. فَقُلْتُ لِتَلَامِيذِكَ أَنْ يُخْرِجُوهُ فَلَمْ يَقْدِرُوا». ١٨ 18
ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.
فَأَجَابَ وَقَالَ لَهُمْ: «أَيُّهَا ٱلْجِيلُ غَيْرُ ٱلْمُؤْمِنِ، إِلَى مَتَى أَكُونُ مَعَكُمْ؟ إِلَى مَتَى أَحْتَمِلُكُمْ؟ قَدِّمُوهُ إِلَيَّ!». ١٩ 19
ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.
فَقَدَّمُوهُ إِلَيْهِ. فَلَمَّا رَآهُ لِلْوَقْتِ صَرَعَهُ ٱلرُّوحُ، فَوَقَعَ عَلَى ٱلْأَرْضِ يَتَمَرَّغُ وَيُزْبِدُ. ٢٠ 20
ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.
فَسَأَلَ أَبَاهُ: «كَمْ مِنَ ٱلزَّمَانِ مُنْذُ أَصَابَهُ هَذَا؟». فَقَالَ: «مُنْذُ صِبَاهُ. ٢١ 21
ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.
وَكَثِيرًا مَا أَلْقَاهُ فِي ٱلنَّارِ وَفِي ٱلْمَاءِ لِيُهْلِكَهُ. لَكِنْ إِنْ كُنْتَ تَسْتَطِيعُ شَيْئًا فَتَحَنَّنْ عَلَيْنَا وَأَعِنَّا». ٢٢ 22
ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.
فَقَالَ لَهُ يَسُوعُ: «إِنْ كُنْتَ تَسْتَطِيعُ أَنْ تُؤْمِنَ. كُلُّ شَيْءٍ مُسْتَطَاعٌ لِلْمُؤْمِنِ». ٢٣ 23
ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.
فَلِلْوَقْتِ صَرَخَ أَبُو ٱلْوَلَدِ بِدُمُوعٍ وَقَالَ: «أُومِنُ يَا سَيِّدُ، فَأَعِنْ عَدَمَ إِيمَانِي». ٢٤ 24
ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.
فَلَمَّا رَأَى يَسُوعُ أَنَّ ٱلْجَمْعَ يَتَرَاكَضُونَ، ٱنْتَهَرَ ٱلرُّوحَ ٱلنَّجِسَ قَائِلًا لَهُ: «أَيُّهَا ٱلرُّوحُ ٱلْأَخْرَسُ ٱلْأَصَمُّ، أَنَا آمُرُكَ: ٱخْرُجْ مِنْهُ وَلَا تَدْخُلْهُ أَيْضًا!». ٢٥ 25
ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.
فَصَرَخَ وَصَرَعَهُ شَدِيدًا وَخَرَجَ. فَصَارَ كَمَيْتٍ، حَتَّى قَالَ كَثِيرُونَ: «إِنَّهُ مَاتَ!». ٢٦ 26
ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.
فَأَمْسَكَهُ يَسُوعُ بِيَدِهِ وَأَقَامَهُ، فَقَامَ. ٢٧ 27
ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.
وَلَمَّا دَخَلَ بَيْتًا سَأَلَهُ تَلَامِيذُهُ عَلَى ٱنْفِرَادٍ: «لِمَاذَا لَمْ نَقْدِرْ نَحْنُ أَنْ نُخْرِجَهُ؟». ٢٨ 28
ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
فَقَالَ لَهُمْ: «هَذَا ٱلْجِنْسُ لَا يُمْكِنُ أَنْ يَخْرُجَ بِشَيْءٍ إِلَّا بِٱلصَّلَاةِ وَٱلصَّوْمِ». ٢٩ 29
ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.
وَخَرَجُوا مِنْ هُنَاكَ وَٱجْتَازُوا ٱلْجَلِيلَ، وَلَمْ يُرِدْ أَنْ يَعْلَمَ أَحَدٌ، ٣٠ 30
ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.
لِأَنَّهُ كَانَ يُعَلِّمُ تَلَامِيذَهُ وَيَقُولُ لَهُمْ: «إِنَّ ٱبْنَ ٱلْإِنْسَانِ يُسَلَّمُ إِلَى أَيْدِي ٱلنَّاسِ فَيَقْتُلُونَهُ. وَبَعْدَ أَنْ يُقْتَلَ يَقُومُ فِي ٱلْيَوْمِ ٱلثَّالِثِ». ٣١ 31
ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.
وَأَمَّا هُمْ فَلَمْ يَفْهَمُوا ٱلْقَوْلَ، وَخَافُوا أَنْ يَسْأَلُوهُ. ٣٢ 32
ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.
وَجَاءَ إِلَى كَفْرِنَاحُومَ. وَإِذْ كَانَ فِي ٱلْبَيْتِ سَأَلَهُمْ: «بِمَاذَا كُنْتُمْ تَتَكَالَمُونَ فِيمَا بَيْنَكُمْ فِي ٱلطَّرِيقِ؟». ٣٣ 33
ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.
فَسَكَتُوا، لِأَنَّهُمْ تَحَاجُّوا فِي ٱلطَّرِيقِ بَعْضُهُمْ مَعَ بَعْضٍ فِي مَنْ هُوَ أَعْظَمُ. ٣٤ 34
ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.
فَجَلَسَ وَنَادَى ٱلِٱثْنَيْ عَشَرَ وَقَالَ لَهُمْ: «إِذَا أَرَادَ أَحَدٌ أَنْ يَكُونَ أَوَّلًا فَيَكُونُ آخِرَ ٱلْكُلِّ وَخَادِمًا لِلْكُلِّ». ٣٥ 35
ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.
فَأَخَذَ وَلَدًا وَأَقَامَهُ فِي وَسْطِهِمْ ثُمَّ ٱحْتَضَنَهُ وَقَالَ لَهُمْ: ٣٦ 36
ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,
«مَنْ قَبِلَ وَاحِدًا مِنْ أَوْلَادٍ مِثْلَ هَذَا بِٱسْمِي يَقْبَلُنِي، وَمَنْ قَبِلَنِي فَلَيْسَ يَقْبَلُنِي أَنَا بَلِ ٱلَّذِي أَرْسَلَنِي». ٣٧ 37
“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.
فَأَجَابَهُ يُوحَنَّا قَائِلًا: «يَا مُعَلِّمُ، رَأَيْنَا وَاحِدًا يُخْرِجُ شَيَاطِينَ بِٱسْمِكَ وَهُوَ لَيْسَ يَتْبَعُنَا، فَمَنَعْنَاهُ لِأَنَّهُ لَيْسَ يَتْبَعُنَا». ٣٨ 38
ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.
فَقَالَ يَسُوعُ: «لَا تَمْنَعُوهُ، لِأَنَّهُ لَيْسَ أَحَدٌ يَصْنَعُ قُوَّةً بِٱسْمِي وَيَسْتَطِيعُ سَرِيعًا أَنْ يَقُولَ عَلَيَّ شَرًّا. ٣٩ 39
ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.
لِأَنَّ مَنْ لَيْسَ عَلَيْنَا فَهُوَ مَعَنَا. ٤٠ 40
ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.
لِأَنَّ مَنْ سَقَاكُمْ كَأْسَ مَاءٍ بِٱسْمِي لِأَنَّكُمْ لِلْمَسِيحِ، فَٱلْحَقَّ أَقُولُ لَكُمْ: إِنَّهُ لَا يُضِيعُ أَجْرَهُ. ٤١ 41
ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.
«وَمَنْ أَعْثَرَ أَحَدَ ٱلصِّغَارِ ٱلْمُؤْمِنِينَ بِي، فَخَيْرٌ لَهُ لَوْ طُوِّقَ عُنُقُهُ بِحَجَرِ رَحًى وَطُرِحَ فِي ٱلْبَحْرِ. ٤٢ 42
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.
وَإِنْ أَعْثَرَتْكَ يَدُكَ فَٱقْطَعْهَا. خَيْرٌ لَكَ أَنْ تَدْخُلَ ٱلْحَيَاةَ أَقْطَعَ مِنْ أَنْ تَكُونَ لَكَ يَدَانِ وَتَمْضِيَ إِلَى جَهَنَّمَ، إِلَى ٱلنَّارِ ٱلَّتِي لَا تُطْفَأُ. (Geenna g1067) ٤٣ 43
ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna g1067)
حَيْثُ دُودُهُمْ لَا يَمُوتُ وَٱلنَّارُ لَا تُطْفَأُ. ٤٤ 44
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
وَإِنْ أَعْثَرَتْكَ رِجْلُكَ فَٱقْطَعْهَا. خَيْرٌ لَكَ أَنْ تَدْخُلَ ٱلْحَيَاةَ أَعْرَجَ مِنْ أَنْ تَكُونَ لَكَ رِجْلَانِ وَتُطْرَحَ فِي جَهَنَّمَ فِي ٱلنَّارِ ٱلَّتِي لَا تُطْفَأُ. (Geenna g1067) ٤٥ 45
ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. (Geenna g1067)
حَيْثُ دُودُهُمْ لَا يَمُوتُ وَٱلنَّارُ لَا تُطْفَأُ. ٤٦ 46
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’
وَإِنْ أَعْثَرَتْكَ عَيْنُكَ فَٱقْلَعْهَا. خَيْرٌ لَكَ أَنْ تَدْخُلَ مَلَكُوتَ ٱللهِ أَعْوَرَ مِنْ أَنْ تَكُونَ لَكَ عَيْنَانِ وَتُطْرَحَ فِي جَهَنَّمِ ٱلنَّارِ. (Geenna g1067) ٤٧ 47
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. (Geenna g1067)
حَيْثُ دُودُهُمْ لَا يَمُوتُ وَٱلنَّارُ لَا تُطْفَأُ. ٤٨ 48
ನರಕದಲ್ಲಿ, “‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’
لِأَنَّ كُلَّ وَاحِدٍ يُمَلَّحُ بِنَارٍ، وَكُلَّ ذَبِيحَةٍ تُمَلَّحُ بِمِلْحٍ. ٤٩ 49
ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.
اَلْمِلْحُ جَيِّدٌ. وَلَكِنْ إِذَا صَارَ ٱلْمِلْحُ بِلَا مُلُوحَةٍ، فَبِمَاذَا تُصْلِحُونَهُ؟ لِيَكُنْ لَكُمْ فِي أَنْفُسِكُمْ مِلْحٌ، وَسَالِمُوا بَعْضُكُمْ بَعْضًا». ٥٠ 50
“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.

< مَرْقُس 9 >