< مَتَّى 12 >

فِي ذَلِكَ ٱلْوَقْتِ ذَهَبَ يَسُوعُ فِي ٱلسَّبْتِ بَيْنَ ٱلزُّرُوعِ، فَجَاعَ تَلَامِيذُهُ وَٱبْتَدَأُوا يَقْطِفُونَ سَنَابِلَ وَيَأْكُلُونَ. ١ 1
ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
فَٱلْفَرِّيسِيُّونَ لَمَّا نَظَرُوا قَالُوا لَهُ: «هُوَذَا تَلَامِيذُكَ يَفْعَلُونَ مَا لَا يَحِلُّ فَعْلُهُ فِي ٱلسَّبْتِ!». ٢ 2
ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
فَقَالَ لَهُمْ: «أَمَا قَرَأْتُمْ مَا فَعَلَهُ دَاوُدُ حِينَ جَاعَ هُوَ وَٱلَّذِينَ مَعَهُ؟ ٣ 3
ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
كَيْفَ دَخَلَ بَيْتَ ٱللهِ وَأَكَلَ خُبْزَ ٱلتَّقْدِمَةِ ٱلَّذِي لَمْ يَحِلَّ أَكْلُهُ لَهُ وَلَا لِلَّذِينَ مَعَهُ، بَلْ لِلْكَهَنَةِ فَقَطْ. ٤ 4
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
أَوَ مَا قَرَأْتُمْ فِي ٱلتَّوْرَاةِ أَنَّ ٱلْكَهَنَةَ فِي ٱلسَّبْتِ فِي ٱلْهَيْكَلِ يُدَنِّسُونَ ٱلسَّبْتَ وَهُمْ أَبْرِيَاءُ؟ ٥ 5
ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
وَلَكِنْ أَقُولُ لَكُمْ: إِنَّ هَهُنَا أَعْظَمَ مِنَ ٱلْهَيْكَلِ! ٦ 6
ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.
فَلَوْ عَلِمْتُمْ مَا هُوَ: إِنِّي أُرِيدُ رَحْمَةً لَا ذَبِيحَةً، لَمَا حَكَمْتُمْ عَلَى ٱلْأَبْرِيَاءِ! ٧ 7
‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
فَإِنَّ ٱبْنَ ٱلْإِنْسَانِ هُوَ رَبُّ ٱلسَّبْتِ أَيْضًا». ٨ 8
ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
ثُمَّ ٱنْصَرَفَ مِنْ هُنَاكَ وَجَاءَ إِلَى مَجْمَعِهِمْ، ٩ 9
ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
وَإِذَا إِنْسَانٌ يَدُهُ يَابِسَةٌ، فَسَأَلُوهُ قَائِلِينَ: «هَلْ يَحِلُّ ٱلْإِبْرَاءُ فِي ٱلسُّبُوتِ؟» لِكَيْ يَشْتَكُوا عَلَيْهِ. ١٠ 10
೧೦ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
فَقَالَ لَهُمْ: «أَيُّ إِنْسَانٍ مِنْكُمْ يَكُونُ لَهُ خَرُوفٌ وَاحِدٌ، فَإِنْ سَقَطَ هَذَا فِي ٱلسَّبْتِ فِي حُفْرَةٍ، أَفَمَا يُمْسِكُهُ وَيُقِيمُهُ؟ ١١ 11
೧೧ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
فَٱلْإِنْسَانُ كَمْ هُوَ أَفْضَلُ مِنَ ٱلْخَرُوفِ! إِذًا يَحِلُّ فِعْلُ ٱلْخَيْرِ فِي ٱلسُّبُوتِ!». ١٢ 12
೧೨ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.
ثُمَّ قَالَ لِلْإِنْسَانِ: «مُدَّ يَدَكَ». فَمَدَّهَا. فَعَادَتْ صَحِيحَةً كَٱلْأُخْرَى. ١٣ 13
೧೩ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
فَلَمَّا خَرَجَ ٱلْفَرِّيسِيُّونَ تَشَاوَرُوا عَلَيْهِ لِكَيْ يُهْلِكُوهُ، ١٤ 14
೧೪ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.
فَعَلِمَ يَسُوعُ وَٱنْصَرَفَ مِنْ هُنَاكَ. وَتَبِعَتْهُ جُمُوعٌ كَثِيرَةٌ فَشَفَاهُمْ جَمِيعًا. ١٥ 15
೧೫ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
وَأَوْصَاهُمْ أَنْ لَا يُظْهِرُوهُ، ١٦ 16
೧೬ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
لِكَيْ يَتِمَّ مَا قِيلَ بِإِشَعْيَاءَ ٱلنَّبِيِّ ٱلْقَائِلِ: ١٧ 17
೧೭ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,
«هُوَذَا فَتَايَ ٱلَّذِي ٱخْتَرْتُهُ، حَبِيبِي ٱلَّذِي سُرَّتْ بِهِ نَفْسِي. أَضَعُ رُوحِي عَلَيْهِ فَيُخْبِرُ ٱلْأُمَمَ بِٱلْحَقِّ. ١٨ 18
೧೮“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
لَا يُخَاصِمُ وَلَا يَصِيحُ، وَلَا يَسْمَعُ أَحَدٌ فِي ٱلشَّوَارِعِ صَوْتَهُ. ١٩ 19
೧೯ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.
قَصَبَةً مَرْضُوضَةً لَا يَقْصِفُ، وَفَتِيلَةً مُدَخِّنَةً لَا يُطْفِئُ، حَتَّى يُخْرِجَ ٱلْحَقَّ إِلَى ٱلنُّصْرَةِ. ٢٠ 20
೨೦ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
وَعَلَى ٱسْمِهِ يَكُونُ رَجَاءُ ٱلْأُمَمِ». ٢١ 21
೨೧ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”
حِينَئِذٍ أُحْضِرَ إِلَيْهِ مَجْنُونٌ أَعْمَى وَأَخْرَسُ فَشَفَاهُ، حَتَّى إِنَّ ٱلْأَعْمَى ٱلْأَخْرَسَ تَكَلَّمَ وَأَبْصَرَ. ٢٢ 22
೨೨ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
فَبُهِتَ كُلُّ ٱلْجُمُوعِ وَقَالُوا: «أَلَعَلَّ هَذَا هُوَ ٱبْنُ دَاوُدَ؟». ٢٣ 23
೨೩ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
أَمَّا ٱلْفَرِّيسِيُّونَ فَلَمَّا سَمِعُوا قَالُوا: «هَذَا لَا يُخْرِجُ ٱلشَّيَاطِينَ إِلَّا بِبَعْلَزَبُولَ رَئِيسِ ٱلشَّيَاطِينِ». ٢٤ 24
೨೪ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
فَعَلِمَ يَسُوعُ أَفْكَارَهُمْ، وَقَالَ لَهُمْ: «كُلُّ مَمْلَكَةٍ مُنْقَسِمَةٍ عَلَى ذَاتِهَا تُخْرَبُ، وَكُلُّ مَدِينَةٍ أَوْ بَيْتٍ مُنْقَسِمٍ عَلَى ذَاتِهِ لَا يَثْبُتُ. ٢٥ 25
೨೫ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
فَإِنْ كَانَ ٱلشَّيْطَانُ يُخْرِجُ ٱلشَّيْطَانَ فَقَدِ ٱنْقَسَمَ عَلَى ذَاتِهِ. فَكَيْفَ تَثْبُتُ مَمْلَكَتُهُ؟ ٢٦ 26
೨೬ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
وَإِنْ كُنْتُ أَنَا بِبَعْلَزَبُولَ أُخْرِجُ ٱلشَّيَاطِينَ، فَأَبْنَاؤُكُمْ بِمَنْ يُخْرِجُونَ؟ لِذَلِكَ هُمْ يَكُونُونَ قُضَاتَكُمْ! ٢٧ 27
೨೭ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
وَلَكِنْ إِنْ كُنْتُ أَنَا بِرُوحِ ٱللهِ أُخْرِجُ ٱلشَّيَاطِينَ، فَقَدْ أَقْبَلَ عَلَيْكُمْ مَلَكُوتُ ٱللهِ! ٢٨ 28
೨೮ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
أَمْ كَيْفَ يَسْتَطِيعُ أَحَدٌ أَنْ يَدْخُلَ بَيْتَ ٱلْقَوِيِّ وَيَنْهَبَ أَمْتِعَتَهُ، إِنْ لَمْ يَرْبِطِ ٱلْقَوِيَّ أَوَّلًا، وَحِينَئِذٍ يَنْهَبُ بَيْتَهُ؟ ٢٩ 29
೨೯ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
مَنْ لَيْسَ مَعِي فَهُوَ عَلَيَّ، وَمَنْ لَا يَجْمَعُ مَعِي فَهُوَ يُفَرِّقُ. ٣٠ 30
೩೦ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
لِذَلِكَ أَقُولُ لَكُمْ: كُلُّ خَطِيَّةٍ وَتَجْدِيفٍ يُغْفَرُ لِلنَّاسِ، وَأَمَّا ٱلتَّجْدِيفُ عَلَى ٱلرُّوحِ فَلَنْ يُغْفَرَ لِلنَّاسِ. ٣١ 31
೩೧ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
وَمَنْ قَالَ كَلِمَةً عَلَى ٱبْنِ ٱلْإِنْسَانِ يُغْفَرُ لَهُ، وَأَمَّا مَنْ قَالَ عَلَى ٱلرُّوحِ ٱلْقُدُسِ فَلَنْ يُغْفَرَ لَهُ، لَا فِي هَذَا ٱلْعَالَمِ وَلَا فِي ٱلْآتِي. (aiōn g165) ٣٢ 32
೩೨ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aiōn g165)
اِجْعَلُوا ٱلشَّجَرَةَ جَيِّدَةً وَثَمَرَهَا جَيِّدًا، أَوِ ٱجْعَلُوا ٱلشَّجَرَةَ رَدِيَّةً وَثَمَرَهَا رَدِيًّا، لِأَنْ مِنَ ٱلثَّمَرِ تُعْرَفُ ٱلشَّجَرَةُ. ٣٣ 33
೩೩“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
يَا أَوْلَادَ ٱلْأَفَاعِي! كَيْفَ تَقْدِرُونَ أَنْ تَتَكَلَّمُوا بِٱلصَّالِحَاتِ وَأَنْتُمْ أَشْرَارٌ؟ فَإِنَّهُ مِنْ فَضْلَةِ ٱلْقَلْبِ يَتَكَلَّمُ ٱلْفَمُ. ٣٤ 34
೩೪ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
اَلْإِنْسَانُ ٱلصَّالِحُ مِنَ ٱلْكَنْزِ ٱلصَّالِحِ فِي ٱلْقَلْبِ يُخْرِجُ ٱلصَّالِحَاتِ، وَٱلْإِنْسَانُ ٱلشِّرِّيرُ مِنَ ٱلْكَنْزِ ٱلشِّرِّيرِ يُخْرِجُ ٱلشُّرُورَ. ٣٥ 35
೩೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
وَلَكِنْ أَقُولُ لَكُمْ: إِنَّ كُلَّ كَلِمَةٍ بَطَّالَةٍ يَتَكَلَّمُ بِهَا ٱلنَّاسُ سَوْفَ يُعْطُونَ عَنْهَا حِسَابًا يَوْمَ ٱلدِّينِ. ٣٦ 36
೩೬ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
لِأَنَّكَ بِكَلَامِكَ تَتَبَرَّرُ وَبِكَلَامِكَ تُدَانُ». ٣٧ 37
೩೭ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
حِينَئِذٍ أَجَابَ قَوْمٌ مِنَ ٱلْكَتَبَةِ وَٱلْفَرِّيسِيِّينَ قَائِلِينَ: «يَا مُعَلِّمُ، نُرِيدُ أَنْ نَرَى مِنْكَ آيَةً». ٣٨ 38
೩೮ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
فَأَجابَ وَقَالَ لَهُمْ: «جِيلٌ شِرِّيرٌ وَفَاسِقٌ يَطْلُبُ آيَةً، وَلَا تُعْطَى لَهُ آيَةٌ إِلَّا آيَةَ يُونَانَ ٱلنَّبِيِّ. ٣٩ 39
೩೯“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
لِأَنَّهُ كَمَا كَانَ يُونَانُ فِي بَطْنِ ٱلْحُوتِ ثَلَاثَةَ أَيَّامٍ وَثَلَاثَ لَيَالٍ، هَكَذَا يَكُونُ ٱبْنُ ٱلْإِنْسَانِ فِي قَلْبِ ٱلْأَرْضِ ثَلَاثَةَ أَيَّامٍ وَثَلَاثَ لَيَالٍ. ٤٠ 40
೪೦ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
رِجَالُ نِينَوَى سَيَقُومُونَ فِي ٱلدِّينِ مَعَ هَذَا ٱلْجِيلِ وَيَدِينُونَهُ، لِأَنَّهُمْ تَابُوا بِمُنَادَاةِ يُونَانَ، وَهُوَذَا أَعْظَمُ مِنْ يُونَانَ هَهُنَا! ٤١ 41
೪೧ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
مَلِكَةُ ٱلتَّيْمَنِ سَتَقُومُ فِي ٱلدِّينِ مَعَ هَذَا ٱلْجِيلِ وَتَدِينُهُ، لِأَنَّهَا أَتَتْ مِنْ أَقَاصِي ٱلْأَرْضِ لِتَسْمَعَ حِكْمَةَ سُلَيْمَانَ، وَهُوَذَا أَعْظَمُ مِنْ سُلَيْمَانَ هَهُنَا! ٤٢ 42
೪೨ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
إِذَا خَرَجَ ٱلرُّوحُ ٱلنَّجِسُ مِنَ ٱلْإِنْسَانِ يَجْتَازُ فِي أَمَاكِنَ لَيْسَ فِيهَا مَاءٌ، يَطْلُبُ رَاحَةً وَلَا يَجِدُ. ٤٣ 43
೪೩“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
ثُمَّ يَقُولُ: أَرْجِعُ إِلَى بَيْتِي ٱلَّذِي خَرَجْتُ مِنْهُ. فَيَأْتِي وَيَجِدُهُ فَارِغًا مَكْنُوسًا مُزَيَّنًا. ٤٤ 44
೪೪ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
ثُمَّ يَذْهَبُ وَيَأْخُذُ مَعَهُ سَبْعَةَ أَرْوَاحٍ أُخَرَ أَشَرَّ مِنْهُ، فَتَدْخُلُ وَتَسْكُنُ هُنَاكَ، فَتَصِيرُ أَوَاخِرُ ذَلِكَ ٱلْإِنْسَانِ أَشَرَّ مِنْ أَوَائِلِهِ! هَكَذَا يَكُونُ أَيْضًا لِهَذَا ٱلْجِيلِ ٱلشِّرِّيرِ». ٤٥ 45
೪೫ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
وَفِيمَا هُوَ يُكَلِّمُ ٱلْجُمُوعَ إِذَا أُمُّهُ وَإِخْوَتُهُ قَدْ وَقَفُوا خَارِجًا طَالِبِينَ أَنْ يُكَلِّمُوهُ. ٤٦ 46
೪೬ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
فَقَالَ لَهُ وَاحِدٌ: «هُوَذَا أُمُّكَ وَإِخْوَتُكَ وَاقِفُونَ خَارِجًا طَالِبِينَ أَنْ يُكَلِّمُوكَ». ٤٧ 47
೪೭ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
فَأَجَابَ وَقَالَ لِلْقَائِلِ لَهُ: «مَنْ هِيَ أُمِّي وَمَنْ هُمْ إِخْوَتي؟». ٤٨ 48
೪೮ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ
ثُمَّ مَدَّ يَدَهُ نَحْوَ تَلَامِيذِهِ وَقَالَ: «هَا أُمِّي وَإِخْوَتِي. ٤٩ 49
೪೯ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
لِأَنَّ مَنْ يَصْنَعُ مَشِيئَةَ أَبِي ٱلَّذِي فِي ٱلسَّمَاوَاتِ هُوَ أَخِي وَأُخْتِي وَأُمِّي». ٥٠ 50
೫೦ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.

< مَتَّى 12 >