< مَتَّى 14 >
فِي ذَلِكَ ٱلْوَقْتِ سَمِعَ هِيرُودُسُ رَئِيسُ ٱلرُّبْعِ خَبَرَ يَسُوعَ، | ١ 1 |
೧ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
فَقَالَ لِغِلْمَانِهِ: «هَذَا هُوَ يُوحَنَّا ٱلْمَعْمَدَانُ قَدْ قَامَ مِنَ ٱلْأَمْوَاتِ! وَلِذَلِكَ تُعْمَلُ بِهِ ٱلْقُوَّاتُ». | ٢ 2 |
೨ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
فَإِنَّ هِيرُودُسَ كَانَ قَدْ أَمْسَكَ يُوحَنَّا وَأَوْثَقَهُ وَطَرَحَهُ فِي سِجْنٍ مِنْ أَجْلِ هِيرُودِيَّا ٱمْرَأَةِ فِيلُبُّسَ أَخِيهِ، | ٣ 3 |
೩ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
لِأَنَّ يُوحَنَّا كَانَ يَقُولُ لَهُ: «لَا يَحِلُّ أَنْ تَكُونَ لَكَ». | ٤ 4 |
೪ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
وَلَمَّا أَرَادَ أَنْ يَقْتُلَهُ خَافَ مِنَ ٱلشَّعْبِ، لِأَنَّهُ كَانَ عِنْدَهُمْ مِثْلَ نَبِيٍّ. | ٥ 5 |
೫ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ثُمَّ لَمَّا صَارَ مَوْلِدُ هِيرُودُسَ، رَقَصَتِ ٱبْنَةُ هِيرُودِيَّا فِي ٱلْوَسْطِ فَسَرَّتْ هِيرُودُسَ. | ٦ 6 |
೬ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
مِنْ ثَمَّ وَعَدَ بِقَسَمٍ أَنَّهُ مَهْمَا طَلَبَتْ يُعْطِيهَا. | ٧ 7 |
೭ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
فَهِيَ إِذْ كَانَتْ قَدْ تَلَقَّنَتْ مِنْ أُمِّهَا قَالَتْ: «أَعْطِنِي هَهُنَا عَلَى طَبَقٍ رَأْسَ يُوحَنَّا ٱلْمَعْمَدَانِ». | ٨ 8 |
೮ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
فَٱغْتَمَّ ٱلْمَلِكُ. وَلَكِنْ مِنْ أَجْلِ ٱلْأَقْسَامِ وَٱلْمُتَّكِئِينَ مَعَهُ أَمَرَ أَنْ يُعْطَى. | ٩ 9 |
೯ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
فَأَرْسَلَ وَقَطَعَ رَأْسَ يُوحَنَّا فِي ٱلسِّجْنِ. | ١٠ 10 |
೧೦ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
فَأُحْضِرَ رَأْسُهُ عَلَى طَبَقٍ وَدُفِعَ إِلَى ٱلصَّبِيَّةِ، فَجَاءَتْ بِهِ إِلَى أُمِّهَا. | ١١ 11 |
೧೧ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
فَتَقَدَّمَ تَلَامِيذُهُ وَرَفَعُوا ٱلْجَسَدَ وَدَفَنُوهُ. ثُمَّ أَتَوْا وَأَخْبَرُوا يَسُوعَ. | ١٢ 12 |
೧೨ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
فَلَمَّا سَمِعَ يَسُوعُ ٱنْصَرَفَ مِنْ هُنَاكَ فِي سَفِينَةٍ إِلَى مَوْضِعٍ خَلَاءٍ مُنْفَرِدًا. فَسَمِعَ ٱلْجُمُوعُ وَتَبِعُوهُ مُشَاةً مِنَ ٱلْمُدُنِ. | ١٣ 13 |
೧೩ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
فَلَمَّا خَرَجَ يَسُوعُ أَبْصَرَ جَمْعًا كَثِيرًا فَتَحَنَّنَ عَلَيْهِمْ وَشَفَى مَرْضَاهُمْ. | ١٤ 14 |
೧೪ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
وَلَمَّا صَارَ ٱلْمَسَاءُ تَقَدَّمَ إِلَيْهِ تَلَامِيذُهُ قَائِلِينَ: «ٱلْمَوْضِعُ خَلَاءٌ وَٱلْوَقْتُ قَدْ مَضَى. اِصْرِفِ ٱلْجُمُوعَ لِكَيْ يَمْضُوا إِلَى ٱلْقُرَى وَيَبْتَاعُوا لَهُمْ طَعَامًا». | ١٥ 15 |
೧೫ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
فَقَالَ لَهُمْ يَسُوعُ: «لَا حَاجَةَ لَهُمْ أَنْ يَمْضُوا. أَعْطُوهُمْ أَنْتُمْ لِيَأْكُلُوا». | ١٦ 16 |
೧೬ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
فَقَالُوا لَهُ: «لَيْسَ عِنْدَنَا هَهُنَا إِلَّا خَمْسَةُ أَرْغِفَةٍ وَسَمَكَتَانِ». | ١٧ 17 |
೧೭ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
فَقَالَ: «ٱئْتُونِي بِهَا إِلَى هُنَا». | ١٨ 18 |
೧೮ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
فَأَمَرَ ٱلْجُمُوعَ أَنْ يَتَّكِئُوا عَلَى ٱلْعُشْبِ. ثُمَّ أَخَذَ ٱلْأَرْغِفَةَ ٱلْخَمْسَةَ وَٱلسَّمَكَتَيْنِ، وَرَفَعَ نَظَرَهُ نَحْوَ ٱلسَّمَاءِ وَبَارَكَ وَكَسَّرَ وَأَعْطَى ٱلْأَرْغِفَةَ لِلتَّلَامِيذِ، وَٱلتَّلَامِيذُ لِلْجُمُوعِ. | ١٩ 19 |
೧೯ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
فَأَكَلَ ٱلْجَمِيعُ وَشَبِعُوا. ثُمَّ رَفَعُوا مَا فَضَلَ مِنَ ٱلْكِسَرِ ٱثْنَتَيْ عَشْرَةَ قُفَّةً مَمْلُوءةً. | ٢٠ 20 |
೨೦ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
وَٱلْآ كِلُونَ كَانُوا نَحْوَ خَمْسَةِ آلَافِ رَجُلٍ، مَا عَدَا ٱلنِّسَاءَ وَٱلْأَوْلَادَ. | ٢١ 21 |
೨೧ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
وَلِلْوَقْتِ أَلْزَمَ يَسُوعُ تَلَامِيذَهُ أَنْ يَدْخُلُوا ٱلسَّفِينَةَ وَيَسْبِقُوهُ إِلَى ٱلْعَبْرِ حَتَّى يَصْرِفَ ٱلْجُمُوعَ. | ٢٢ 22 |
೨೨ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
وَبَعْدَمَا صَرَفَ ٱلْجُمُوعَ صَعِدَ إِلَى ٱلْجَبَلِ مُنْفَرِدًا لِيُصَلِّيَ. وَلَمَّا صَارَ ٱلْمَسَاءُ كَانَ هُنَاكَ وَحْدَهُ. | ٢٣ 23 |
೨೩ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
وَأَمَّا ٱلسَّفِينَةُ فَكَانَتْ قَدْ صَارَتْ فِي وَسْطِ ٱلْبَحْرِ مُعَذَّبَةً مِنَ ٱلْأَمْوَاجِ. لِأَنَّ ٱلرِّيحَ كَانَتْ مُضَادَّةً. | ٢٤ 24 |
೨೪ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
وَفِي ٱلْهَزِيعِ ٱلرَّابِعِ مِنَ ٱللَّيْلِ مَضَى إِلَيْهِمْ يَسُوعُ مَاشِيًا عَلَى ٱلْبَحْرِ. | ٢٥ 25 |
೨೫ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
فَلَمَّا أَبْصَرَهُ ٱلتَّلَامِيذُ مَاشِيًا عَلَى ٱلْبَحْرِ ٱضْطَرَبُوا قَائِلِينَ: «إِنَّهُ خَيَالٌ». وَمِنَ ٱلْخَوْفِ صَرَخُوا! | ٢٦ 26 |
೨೬ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
فَلِلْوَقْتِ كَلَّمَهُمْ يَسُوعُ قَائِلًا: «تَشَجَّعُوا! أَنَا هُوَ. لَا تَخَافُوا». | ٢٧ 27 |
೨೭ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
فَأَجَابَهُ بُطْرُسُ وَقَالَ: «يَا سَيِّدُ، إِنْ كُنْتَ أَنْتَ هُوَ، فَمُرْنِي أَنْ آتِيَ إِلَيْكَ عَلَى ٱلْمَاءِ». | ٢٨ 28 |
೨೮ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
فَقَالَ: «تَعَالَ». فَنَزَلَ بُطْرُسُ مِنَ ٱلسَّفِينَةِ وَمَشَى عَلَى ٱلْمَاءِ لِيَأْتِيَ إِلَى يَسُوعَ. | ٢٩ 29 |
೨೯ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
وَلَكِنْ لَمَّا رَأَى ٱلرِّيحَ شَدِيدَةً خَافَ. وَإِذِ ٱبْتَدَأَ يَغْرَقُ، صَرَخَ قَائِلًا: «يَارَبُّ، نَجِّنِي!». | ٣٠ 30 |
೩೦ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
فَفِي ٱلْحَالِ مَدَّ يَسُوعُ يَدَهُ وَأَمْسَكَ بِهِ وَقَالَ لَهُ: «يَا قَلِيلَ ٱلْإِيمَانِ، لِمَاذَا شَكَكْتَ؟». | ٣١ 31 |
೩೧ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
وَلَمَّا دَخَلَا ٱلسَّفِينَةَ سَكَنَتِ ٱلرِّيحُ. | ٣٢ 32 |
೩೨ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
وَٱلَّذِينَ فِي ٱلسَّفِينَةِ جَاءُوا وَسَجَدُوا لَهُ قَائِلِينَ: «بِٱلْحَقِيقَةِ أَنْتَ ٱبْنُ ٱللهِ!». | ٣٣ 33 |
೩೩ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
فَلَمَّا عَبَرُوا جَاءُوا إِلَى أَرْضِ جَنِّيسَارَتَ، | ٣٤ 34 |
೩೪ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
فَعَرَفَهُ رِجَالُ ذَلِكَ ٱلْمَكَانِ. فَأَرْسَلُوا إِلَى جَمِيعِ تِلْكَ ٱلْكُورَةِ ٱلْمُحِيطَةِ وَأَحْضَرُوا إِلَيْهِ جَمِيعَ ٱلْمَرْضَى، | ٣٥ 35 |
೩೫ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
وَطَلَبُوا إِلَيْهِ أَنْ يَلْمِسُوا هُدْبَ ثَوْبِهِ فَقَطْ. فَجَمِيعُ ٱلَّذِينَ لَمَسُوهُ نَالُوا ٱلشِّفَاءَ. | ٣٦ 36 |
೩೬ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.