< مَتَّى 15 >

حِينَئِذٍ جَاءَ إِلَى يَسُوعَ كَتَبَةٌ وَفَرِّيسِيُّونَ ٱلَّذِينَ مِنْ أُورُشَلِيمَ قَائِلِينَ: ١ 1
ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
«لِمَاذَا يَتَعَدَّى تَلَامِيذُكَ تَقْلِيدَ ٱلشُّيُوخِ، فَإِنَّهُمْ لَا يَغْسِلُونَ أَيْدِيَهُمْ حِينَمَا يَأْكُلُونَ خُبْزًا؟». ٢ 2
“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
فَأَجَابَ وَقَالَ لَهُمْ: «وَأَنْتُمْ أَيْضًا، لِمَاذَا تَتَعَدَّوْنَ وَصِيَّةَ ٱللهِ بِسَبَبِ تَقْلِيدِكُمْ؟ ٣ 3
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
فَإِنَّ ٱللهَ أَوْصَى قَائِلًا: أَكْرِمْ أَبَاكَ وَأُمَّكَ، وَمَنْ يَشْتِمْ أَبًا أَوْ أُمًّا فَلْيَمُتْ مَوْتًا. ٤ 4
ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
وَأَمَّا أَنْتُمْ فَتَقُولُونَ: مَنْ قَالَ لِأَبِيهِ أَوْ أُمِّهِ: قُرْبَانٌ هُوَ ٱلَّذِي تَنْتَفِعُ بِهِ مِنِّي. فَلَا يُكْرِمُ أَبَاهُ أَوْ أُمَّهُ. ٥ 5
ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
فَقَدْ أَبْطَلْتُمْ وَصِيَّةَ ٱللهِ بِسَبَبِ تَقْلِيدِكُمْ! ٦ 6
ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
يَا مُرَاؤُونَ! حَسَنًا تَنَبَّأَ عَنْكُمْ إِشَعْيَاءُ قَائِلًا: ٧ 7
ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
يَقْتَرِبُ إِلَيَّ هَذَا ٱلشَّعْبُ بِفَمِهِ، وَيُكْرِمُنِي بِشَفَتَيْهِ، وَأَمَّا قَلْبُهُ فَمُبْتَعِدٌ عَنِّي بَعِيدًا. ٨ 8
“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
وَبَاطِلًا يَعْبُدُونَنِي وَهُمْ يُعَلِّمُونَ تَعَالِيمَ هِيَ وَصَايَا ٱلنَّاسِ». ٩ 9
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
ثُمَّ دَعَا ٱلْجَمْعَ وَقَالَ لَهُمُ: «ٱسْمَعُوا وَٱفْهَمُوا. ١٠ 10
೧೦ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,
لَيْسَ مَا يَدْخُلُ ٱلْفَمَ يُنَجِّسُ ٱلْإِنْسَانَ، بَلْ مَا يَخْرُجُ مِنَ ٱلْفَمِ هَذَا يُنَجِّسُ ٱلْإِنْسَانَ». ١١ 11
೧೧ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
حِينَئِذٍ تَقَدَّمَ تَلَامِيذُهُ وَقَالُوا لَهُ: «أَتَعْلَمُ أَنَّ ٱلْفَرِّيسِيِّينَ لَمَّا سَمِعُوا ٱلْقَوْلَ نَفَرُوا؟». ١٢ 12
೧೨ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
فَأَجَابَ وَقَالَ: «كُلُّ غَرْسٍ لَمْ يَغْرِسْهُ أَبِي ٱلسَّمَاوِيُّ يُقْلَعُ. ١٣ 13
೧೩ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
اُتْرُكُوهُمْ. هُمْ عُمْيَانٌ قَادَةُ عُمْيَانٍ. وَإِنْ كَانَ أَعْمَى يَقُودُ أَعْمَى يَسْقُطَانِ كِلَاهُمَا فِي حُفْرَةٍ». ١٤ 14
೧೪ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
فَأَجَابَ بُطْرُسُ وَقَالَ لَهُ: «فَسِّرْ لَنَا هَذَا ٱلْمَثَلَ». ١٥ 15
೧೫ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,
فَقَالَ يَسُوعُ: «هَلْ أَنْتُمْ أَيْضًا حَتَّى ٱلْآنَ غَيْرُ فَاهِمِينَ؟ ١٦ 16
೧೬ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
أَلَا تَفْهَمُونَ بَعْدُ أَنَّ كُلَّ مَا يَدْخُلُ ٱلْفَمَ يَمْضِي إِلَى ٱلْجَوْفِ وَيَنْدَفِعُ إِلَى ٱلْمَخْرَجِ؟ ١٧ 17
೧೭ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
وَأَمَّا مَا يَخْرُجُ مِنَ ٱلْفَمِ فَمِنَ ٱلْقَلْبِ يَصْدُرُ، وَذَاكَ يُنَجِّسُ ٱلْإِنْسَانَ، ١٨ 18
೧೮ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
لِأَنْ مِنَ ٱلْقَلْبِ تَخْرُجُ أَفْكَارٌ شِرِّيرَةٌ: قَتْلٌ، زِنىً، فِسْقٌ، سِرْقَةٌ، شَهَادَةُ زُورٍ، تَجْدِيفٌ. ١٩ 19
೧೯ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
هَذِهِ هِيَ ٱلَّتِي تُنَجِّسُ ٱلْإِنْسَانَ. وَأَمَّا ٱلْأَ كْلُ بِأَيْدٍ غَيْرِ مَغْسُولَةٍ فَلَا يُنَجِّسُ ٱلْإِنْسَانَ». ٢٠ 20
೨೦ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.
ثُمَّ خَرَجَ يَسُوعُ مِنْ هُنَاكَ وَٱنْصَرَفَ إِلَى نَوَاحِي صُورَ وَصَيْدَاءَ. ٢١ 21
೨೧ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
وَإِذَا ٱمْرَأَةٌ كَنْعَانِيَّةٌ خَارِجَةٌ مِنْ تِلْكَ ٱلتُّخُومِ صَرَخَتْ إِلَيْهِ قَائِلَةً: «ٱرْحَمْنِي، يا سَيِّدُ، يا ٱبْنَ دَاوُدَ! اِبْنَتِي مَجْنُونَةٌ جِدًّا». ٢٢ 22
೨೨ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
فَلَمْ يُجِبْهَا بِكَلِمَةٍ. فَتَقَدَّمَ تَلَامِيذُهُ وَطَلَبُوا إِلَيْهِ قَائِلِينَ: «ٱصْرِفْهَا، لِأَنَّهَا تَصِيحُ وَرَاءَنَا!». ٢٣ 23
೨೩ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
فَأَجَابَ وَقَالَ: «لَمْ أُرْسَلْ إِلَّا إِلَى خِرَافِ بَيْتِ إِسْرَائِيلَ ٱلضَّالَّةِ». ٢٤ 24
೨೪ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
فَأَتَتْ وَسَجَدَتْ لَهُ قَائِلَةً: «يَا سَيِّدُ، أَعِنِّي!» ٢٥ 25
೨೫ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.
فَأَجَابَ وَقَالَ: «لَيْسَ حَسَنًا أَنْ يُؤْخَذَ خُبْزُ ٱلْبَنِينَ وَيُطْرَحَ لِلْكِلَابِ». ٢٦ 26
೨೬ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
فَقَالَتْ: «نَعَمْ، يا سَيِّدُ! وَٱلْكِلَابُ أَيْضًا تَأْكُلُ مِنَ ٱلْفُتَاتِ ٱلَّذِي يَسْقُطُ مِنْ مَائِدَةِ أَرْبَابِهَا!». ٢٧ 27
೨೭ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
حِينَئِذٍ أَجَابَ يَسُوعُ وَقَالَ لَهَا: «يَا ٱمْرَأَةُ، عَظِيمٌ إِيمَانُكِ! لِيَكُنْ لَكِ كَمَا تُرِيدِينَ». فَشُفِيَتِ ٱبْنَتُهَا مِنْ تِلْكَ ٱلسَّاعَةِ. ٢٨ 28
೨೮ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
ثُمَّ ٱنْتَقَلَ يَسُوعُ مِنْ هُنَاكَ وَجَاءَ إِلَى جَانِبِ بَحْرِ ٱلْجَلِيلِ، وَصَعِدَ إِلَى ٱلْجَبَلِ وَجَلَسَ هُنَاكَ. ٢٩ 29
೨೯ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
فَجَاءَ إِلَيْهِ جُمُوعٌ كَثِيرَةٌ، مَعَهُمْ عُرْجٌ وَعُمْيٌ وَخُرْسٌ وَشُلٌّ وَآخَرُونَ كَثِيرُونَ، وَطَرَحُوهُمْ عِنْدَ قَدَمَيْ يَسُوعَ. فَشَفَاهُمْ ٣٠ 30
೩೦ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
حَتَّى تَعَجَّبَ ٱلْجُمُوعُ إِذْ رَأَوْا ٱلْخُرْسَ يَتَكَلَّمُونَ، وَٱلشُّلَّ يَصِحُّونَ، وَٱلْعُرْجَ يَمْشُونَ، وَٱلْعُمْيَ يُبْصِرُونَ. وَمَجَّدُوا إِلَهَ إِسْرَائِيلَ. ٣١ 31
೩೧ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
وَأَمَّا يَسُوعُ فَدَعَا تَلَامِيذَهُ وَقَالَ: «إِنِّي أُشْفِقُ عَلَى ٱلْجَمْعِ، لِأَنَّ ٱلْآنَ لَهُمْ ثَلَاثَةَ أَيَّامٍ يَمْكُثُونَ مَعِي وَلَيْسَ لَهُمْ مَا يَأْكُلُونَ. وَلَسْتُ أُرِيدُ أَنْ أَصْرِفَهُمْ صَائِمِينَ لِئَلَّا يُخَوِّرُوا فِي ٱلطَّرِيقِ». ٣٢ 32
೩೨ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
فَقَالَ لَهُ تَلَامِيذُهُ: «مِنْ أَيْنَ لَنَا فِي ٱلْبَرِّيَّةِ خُبْزٌ بِهَذَا ٱلْمِقْدَارِ، حَتَّى يُشْبِعَ جَمْعًا هَذَا عَدَدُهُ؟». ٣٣ 33
೩೩ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
فَقَالَ لَهُمْ يَسُوعُ: «كَمْ عِنْدَكُمْ مِنَ ٱلْخُبْزِ؟». فَقَالُوا: «سَبْعَةٌ وَقَلِيلٌ مِنْ صِغَارِ ٱلسَّمَكِ». ٣٤ 34
೩೪ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
فَأَمَرَ ٱلْجُمُوعَ أَنْ يَتَّكِئُوا عَلَى ٱلْأَرْضِ، ٣٥ 35
೩೫ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
وَأَخَذَ ٱلسَّبْعَ خُبْزَاتٍ وَٱلسَّمَكَ، وَشَكَرَ وَكَسَّرَ وَأَعْطَى تَلَامِيذَهُ، وَٱلتَّلَامِيذُ أَعْطَوْا ٱلْجَمْعَ. ٣٦ 36
೩೬ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
فَأَكَلَ ٱلْجَمِيعُ وَشَبِعُوا. ثُمَّ رَفَعُوا مَا فَضَلَ مِنَ ٱلْكِسَرِ سَبْعَةَ سِلَالٍ مَمْلُوءَةٍ، ٣٧ 37
೩೭ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
وَٱلْآكِلُونَ كَانُوا أَرْبَعَةَ آلَافِ رَجُلٍ مَا عَدَا ٱلنِّسَاءَ وَٱلْأَوْلَادَ. ٣٨ 38
೩೮ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
ثُمَّ صَرَفَ ٱلْجُمُوعَ وَصَعِدَ إِلَى ٱلسَّفِينَةِ وَجَاءَ إِلَى تُخُومِ مَجْدَلَ. ٣٩ 39
೩೯ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

< مَتَّى 15 >