< مَتَّى 16 >

وَجَاءَ إِلَيْهِ ٱلْفَرِّيسِيُّونَ وَٱلصَّدُّوقِيُّونَ لِيُجَرِّبُوهُ، فَسَأَلُوهُ أَنْ يُرِيَهُمْ آيَةً مِنَ ٱلسَّمَاءِ. ١ 1
ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
فَأَجَابَ وَقَالَ لَهُمْ: «إِذَا كَانَ ٱلْمَسَاءُ قُلْتُمْ: صَحْوٌ لِأَنَّ ٱلسَّمَاءَ مُحْمَرَّةٌ. ٢ 2
ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
وَفِي ٱلصَّبَاحِ: ٱلْيَوْمَ شِتَاءٌ لِأَنَّ ٱلسَّمَاءَ مُحْمَرَّةٌ بِعُبُوسَةٍ.يَا مُرَاؤُونَ! تَعْرِفُونَ أَنْ تُمَيِّزُوا وَجْهَ ٱلسَّمَاءِ، وَأَمَّا عَلَامَاتُ ٱلْأَزْمِنَةِ فَلَا تَسْتَطِيعُونَ! ٣ 3
ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
جِيلٌ شِرِّيرٌ فَاسِقٌ يَلْتَمِسُ آيَةً، وَلَا تُعْطَى لَهُ آيَةٌ إِلَّا آيَةَ يُونَانَ ٱلنَّبِيِّ». ثُمَّ تَرَكَهُمْ وَمَضَى. ٤ 4
ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
وَلَمَّا جَاءَ تَلَامِيذُهُ إِلَى ٱلْعَبْرِ نَسُوا أَنْ يَأْخُذُوا خُبْزًا. ٥ 5
ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
وَقَالَ لَهُمْ يَسُوعُ: «ٱنْظُرُوا، وَتَحَرَّزُوا مِنْ خَمِيرِ ٱلْفَرِّيسِيِّينَ وَٱلصَّدُّوقِيِّينَ». ٦ 6
ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
فَفَكَّرُوا فِي أَنْفُسِهِمْ قَائِلِينَ: «إِنَّنَا لَمْ نَأْخُذْ خُبْزًا». ٧ 7
ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
فَعَلِمَ يَسُوعُ وَقَالَ لَهُمْ: «لِمَاذَا تُفَكِّرُونَ فِي أَنْفُسِكُمْ يا قَلِيلِي ٱلْإِيمَانِ أَنَّكُمْ لَمْ تَأْخُذُوا خُبْزًا؟ ٨ 8
ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
أَحَتَّى ٱلْآنَ لَا تَفْهَمُونَ؟ وَلَا تَذْكُرُونَ خَمْسَ خُبْزَاتِ ٱلْخَمْسَةِ ٱلْآلَافِ وَكَمْ قُفَّةً أَخَذْتُمْ؟ ٩ 9
ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
وَلَا سَبْعَ خُبْزَاتِ ٱلْأَرْبَعَةِ ٱلْآلَافِ وَكَمْ سَلًّا أَخَذْتُمْ؟ ١٠ 10
೧೦ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
كَيْفَ لَا تَفْهَمُونَ أَنِّي لَيْسَ عَنِ ٱلْخُبْزِ قُلْتُ لَكُمْ أَنْ تَتَحَرَّزُوا مِنْ خَمِيرِ ٱلْفَرِّيسِيِّينَ وَٱلصَّدُّوقِيِّينَ؟». ١١ 11
೧೧ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
حِينَئِذٍ فَهِمُوا أَنَّهُ لَمْ يَقُلْ أَنْ يَتَحَرَّزُوا مِنْ خَمِيرِ ٱلْخُبْزِ، بَلْ مِنْ تَعْلِيمِ ٱلْفَرِّيسِيِّينَ وَٱلصَّدُّوقِيِّينَ. ١٢ 12
೧೨ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
وَلَمَّا جَاءَ يَسُوعُ إِلَى نَوَاحِي قَيْصَرِيَّةِ فِيلُبُّسَ سَأَلَ تَلَامِيذَهُ قَائِلًا: «مَنْ يَقُولُ ٱلنَّاسُ إِنِّي أَنَا ٱبْنُ ٱلْإِنْسَانِ؟». ١٣ 13
೧೩ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
فَقَالُوا: «قَوْمٌ: يُوحَنَّا ٱلْمَعْمَدَانُ، وَآخَرُونَ: إِيلِيَّا، وَآخَرُونَ: إِرْمِيَا أَوْ وَاحِدٌ مِنَ ٱلْأَنْبِيَاءِ». ١٤ 14
೧೪ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
قَالَ لَهُمْ: «وَأَنْتُمْ، مَنْ تَقُولُونَ إِنِّي أَنَا؟». ١٥ 15
೧೫ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
فَأَجَابَ سِمْعَانُ بُطْرُسُ وَقَالَ: «أَنْتَ هُوَ ٱلْمَسِيحُ ٱبْنُ ٱللهِ ٱلْحَيِّ!». ١٦ 16
೧೬ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
فَأجَابَ يَسُوعُ وَقَالَ لَهُ: «طُوبَى لَكَ يا سِمْعَانُ بْنَ يُونَا، إِنَّ لَحْمًا وَدَمًا لَمْ يُعْلِنْ لَكَ، لَكِنَّ أَبِي ٱلَّذِي فِي ٱلسَّمَاوَاتِ. ١٧ 17
೧೭ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
وَأَنَا أَقُولُ لَكَ أَيْضًا: أَنْتَ بُطْرُسُ، وَعَلَى هَذِهِ ٱلصَّخْرَةِ أَبْنِي كَنِيسَتِي، وَأَبْوَابُ ٱلْجَحِيمِ لَنْ تَقْوَى عَلَيْهَا. (Hadēs g86) ١٨ 18
೧೮ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs g86)
وَأُعْطِيكَ مَفَاتِيحَ مَلَكُوتِ ٱلسَّمَاوَاتِ، فَكُلُّ مَا تَرْبِطُهُ عَلَى ٱلْأَرْضِ يَكُونُ مَرْبُوطًا فِي ٱلسَّمَاوَاتِ. وَكُلُّ مَا تَحُلُّهُ عَلَى ٱلْأَرْضِ يَكُونُ مَحْلُولًا فِي ٱلسَّمَاوَاتِ». ١٩ 19
೧೯ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
حِينَئِذٍ أَوْصَى تَلَامِيذَهُ أَنْ لَا يَقُولُوا لِأَحَدٍ إِنَّهُ يَسُوعُ ٱلْمَسِيحُ. ٢٠ 20
೨೦ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
مِنْ ذَلِكَ ٱلْوَقْتِ ٱبْتَدَأَ يَسُوعُ يُظْهِرُ لِتَلَامِيذِهِ أَنَّهُ يَنْبَغِي أَنْ يَذْهَبَ إِلَى أُورُشَلِيمَ وَيَتَأَلَّمَ كَثِيرًا مِنَ ٱلشُّيُوخِ وَرُؤَسَاءِ ٱلْكَهَنَةِ وَٱلْكَتَبَةِ، وَيُقْتَلَ، وَفِي ٱلْيَوْمِ ٱلثَّالِثِ يَقُومَ. ٢١ 21
೨೧ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
فَأَخَذَهُ بُطْرُسُ إِلَيْهِ وَٱبْتَدَأَ يَنْتَهِرُهُ قَائِلًا: «حَاشَاكَ يَارَبُّ! لَا يَكُونُ لَكَ هَذَا!». ٢٢ 22
೨೨ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
فَٱلْتَفَتَ وَقَالَ لِبُطْرُسَ: «ٱذْهَبْ عَنِّي يَاشَيْطَانُ! أَنْتَ مَعْثَرَةٌ لِي، لِأَنَّكَ لَا تَهْتَمُّ بِمَا لِلهِ لَكِنْ بِمَا لِلنَّاسِ». ٢٣ 23
೨೩ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
حِينَئِذٍ قَالَ يَسُوعُ لِتَلَامِيذِهِ: «إِنْ أَرَادَ أَحَدٌ أَنْ يَأْتِيَ وَرَائِي فَلْيُنْكِرْ نَفْسَهُ وَيَحْمِلْ صَلِيبَهُ وَيَتْبَعْنِي، ٢٤ 24
೨೪ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
فَإِنَّ مَنْ أَرَادَ أَنْ يُخَلِّصَ نَفْسَهُ يُهْلِكُهَا، وَمَنْ يُهْلِكُ نَفْسَهُ مِنْ أَجْلِي يَجِدُهَا. ٢٥ 25
೨೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
لِأَنَّهُ مَاذَا يَنْتَفِعُ ٱلْإِنْسَانُ لَوْ رَبِحَ ٱلْعَالَمَ كُلَّهُ وَخَسِرَ نَفْسَهُ؟ أَوْ مَاذَا يُعْطِي ٱلْإِنْسَانُ فِدَاءً عَنْ نَفْسِهِ؟ ٢٦ 26
೨೬ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
فَإِنَّ ٱبْنَ ٱلْإِنْسَانِ سَوْفَ يَأْتِي فِي مَجْدِ أَبِيهِ مَعَ مَلَائِكَتِهِ، وَحِينَئِذٍ يُجَازِي كُلَّ وَاحِدٍ حَسَبَ عَمَلِهِ. ٢٧ 27
೨೭ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
اَلْحَقَّ أَقُولُ لَكُمْ: إِنَّ مِنَ ٱلْقِيَامِ هَهُنَا قَوْمًا لَا يَذُوقُونَ ٱلْمَوْتَ حَتَّى يَرَوْا ٱبْنَ ٱلْإِنْسَانِ آتِيًا فِي مَلَكُوتِهِ». ٢٨ 28
೨೮“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

< مَتَّى 16 >