< نَحَمْيَا 2 >

وَفِي شَهْرِ نِيسَانَ فِي ٱلسَّنَةِ ٱلْعِشْرِينَ لِأَرْتَحْشَسْتَا ٱلْمَلِكِ، كَانَتْ خَمْرٌ أَمَامَهُ، فَحَمَلْتُ ٱلْخَمْرَ وَأَعْطَيْتُ ٱلْمَلِكَ. وَلَمْ أَكُنْ قَبْلُ مُكْمَدًّا أَمَامَهُ. ١ 1
ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
فَقَالَ لِي ٱلْمَلِكُ: «لِمَاذَا وَجْهُكَ مُكْمَدٌّ وَأَنْتَ غَيْرُ مَرِيضٍ؟ مَا هَذَا إِلَا كآبَةَ قَلْبٍ!». فَخِفْتُ كَثِيرًا جِدًّا، ٢ 2
ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
وَقُلْتُ لِلْمَلِكِ: «لِيَحْيَ ٱلْمَلِكُ إِلَى ٱلْأَبَدِ. كَيْفَ لَا يَكْمَدُّ وَجْهِي وَٱلْمَدِينَةُ بَيْتُ مَقَابِرِ آبَائِي خَرَابٌ، وَأَبْوَابُهَا قَدْ أَكَلَتْهَا ٱلنَّارُ؟» ٣ 3
ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
فَقَالَ لِي ٱلْمَلِكُ: «مَاذَا طَالِبٌ أَنْتَ؟» فَصَلَّيْتُ إِلَى إِلَهِ ٱلسَّمَاءِ، ٤ 4
ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
وَقُلْتُ لِلْمَلِكِ: «إِذَا سُرَّ ٱلْمَلِكُ، وَإِذَا أَحْسَنَ عَبْدُكَ أَمَامَكَ، تُرْسِلُنِي إِلَى يَهُوذَا، إِلَى مَدِينَةِ قُبُورِ آبَائِي فَأَبْنِيهَا». ٥ 5
ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
فَقَالَ لِي ٱلْمَلِكُ، وَٱلْمَلِكَةُ جَالِسَةٌ بِجَانِبِهِ: «إِلَى مَتَى يَكُونُ سَفَرُكَ، وَمَتَى تَرْجِعُ؟» فَحَسُنَ لَدَى ٱلْمَلِكِ وَأَرْسَلَنِي، فَعَيَّنْتُ لَهُ زَمَانًا. ٦ 6
ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
وَقُلْتُ لِلْمَلِكِ: «إِنْ حَسُنَ عِنْدَ ٱلْمَلِكِ فَلْتُعْطَ لِي رَسَائِلُ إِلَى وُلَاةِ عَبْرِ ٱلنَّهْرِ لِكَيْ يُجِيزُونِي حَتَّى أَصِلَ إِلَى يَهُوذَا، ٧ 7
ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
وَرِسَالَةٌ إِلَى آسَافَ حَارِسِ فِرْدَوْسِ ٱلْمَلِكِ لِكَيْ يُعْطِيَنِي أَخْشَابًا لِسَقْفِ أَبْوَابِ ٱلْقَصْرِ ٱلَّذِي لِلْبَيْتِ، وَلِسُورِ ٱلْمَدِينَةِ، وَلِلْبَيْتِ ٱلَّذِي أَدْخُلُ إِلَيْهِ». فَأَعْطَانِي ٱلْمَلِكُ حَسَبَ يَدِ إِلَهِي ٱلصَّالِحَةِ عَلَيَّ. ٨ 8
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
فَأَتَيْتُ إِلَى وُلَاةِ عَبْرِ ٱلنَّهْرِ وَأَعْطَيْتُهُمْ رَسَائِلَ ٱلْمَلِكِ. وَأَرْسَلَ مَعِي ٱلْمَلِكُ رُؤَسَاءَ جَيْشٍ وَفُرْسَانًا. ٩ 9
ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
وَلَمَّا سَمِعَ سَنْبَلَّطُ ٱلْحُورُونِيُّ وَطُوبِيَّا ٱلْعَبْدُ ٱلْعَمُّونِيُّ سَاءَهُمَا مَسَاءَةً عَظِيمَةً، لِأَنَّهُ جَاءَ رَجُلٌ يَطْلُبُ خَيْرًا لِبَنِي إِسْرَائِيلَ. ١٠ 10
೧೦ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
فَجِئْتُ إِلَى أُورُشَلِيمَ وَكُنْتُ هُنَاكَ ثَلَاثَةَ أَيَّامٍ. ١١ 11
೧೧ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
ثُمَّ قُمْتُ لَيْلًا أَنَا وَرِجَالٌ قَلِيلُونَ مَعِي، وَلَمْ أُخْبِرْ أَحَدًا بِمَا جَعَلَهُ إِلَهِي فِي قَلْبِي لِأَعْمَلَهُ فِي أُورُشَلِيمَ. وَلَمْ يَكُنْ مَعِي بَهِيمَةٌ إِلَّا ٱلْبَهِيمَةُ ٱلَّتِي كُنْتُ رَاكِبَهَا. ١٢ 12
೧೨ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
وَخَرَجْتُ مِنْ بَابِ ٱلْوَادِي لَيْلًا أَمَامَ عَيْنِ ٱلتِّنِّينِ إِلَى بَابِ ٱلدِّمْنِ، وَصِرْتُ أَتَفَرَّسُ فِي أَسْوَارِ أُورُشَلِيمَ ٱلْمُنْهَدِمَةِ وَأَبْوَابِهَا ٱلَّتِي أَكَلَتْهَا ٱلنَّارُ. ١٣ 13
೧೩ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
وَعَبَرْتُ إِلَى بَابِ ٱلْعَيْنِ وَإِلَى بِرْكَةِ ٱلْمَلِكِ، وَلَمْ يَكُنْ مَكَانٌ لِعُبُورِ ٱلْبَهِيمَةِ ٱلَّتِي تَحْتِي. ١٤ 14
೧೪ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
فَصَعِدْتُ فِي ٱلْوَادِي لَيْلًا وَكُنْتُ أَتَفَرَّسُ فِي ٱلسُّورِ، ثُمَّ عُدْتُ فَدَخَلْتُ مِنْ بَابِ ٱلْوَادِي رَاجِعًا. ١٥ 15
೧೫ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
وَلَمْ يَعْرِفِ ٱلْوُلَاةُ إِلَى أَيْنَ ذَهَبْتُ، وَلَا مَا أَنَا عَامِلٌ، وَلَمْ أُخْبِرْ إِلَى ذَلِكَ ٱلْوَقْتِ ٱلْيَهُودَ وَٱلْكَهَنَةَ وَٱلْأَشْرَافَ وَٱلْوُلَاةَ وَبَاقِي عَامِلِي ٱلْعَمَلِ. ١٦ 16
೧೬ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
ثُمَّ قُلْتُ لَهُمْ: «أَنْتُمْ تَرَوْنَ ٱلشَّرَّ ٱلَّذِي نَحْنُ فِيهِ، كَيْفَ أَنَّ أُورُشَلِيمَ خَرِبَةٌ، وَأَبْوَابَهَا قَدْ أُحْرِقَتْ بِٱلنَّارِ. هَلُمَّ فَنَبْنِيَ سُورَ أُورُشَلِيمَ وَلَا نَكُونُ بَعْدُ عَارًا». ١٧ 17
೧೭ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
وَأَخْبَرْتُهُمْ عَنْ يَدِ إِلَهِي ٱلصَّالِحَةِ عَلَيَّ، وَأَيْضًا عَنْ كَلَامِ ٱلْمَلِكِ ٱلَّذِي قَالَهُ لِي، فَقَالُوا: «لِنَقُمْ وَلْنَبْنِ». وَشَدَّدُوا أَيَادِيَهُمْ لِلْخَيْرِ. ١٨ 18
೧೮ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
وَلَمَّا سَمِعَ سَنْبَلَّطُ ٱلْحُورُونِيُّ وَطُوبِيَّا ٱلْعَبْدُ ٱلْعَمُّونِيُّ وَجَشَمٌ ٱلْعَرَبِيُّ هَزَأُوا بِنَا وَٱحْتَقَرُونَا، وَقَالُوا: «مَا هَذَا ٱلْأَمْرُ ٱلَّذِي أَنْتُمْ عَامِلُونَ؟ أَعَلَى ٱلْمَلِكِ تَتَمَرَّدُونَ؟». ١٩ 19
೧೯ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
فَأَجَبْتُهُمْ وَقُلْتُ لَهُمْ: «إِنَّ إِلَهَ ٱلسَّمَاءِ يُعْطِينَا ٱلنَّجَاحَ، وَنَحْنُ عَبِيدُهُ نَقُومُ وَنَبْنِي. وَأَمَّا أَنْتُمْ فَلَيْسَ لَكُمْ نَصِيبٌ وَلَا حَقٌّ وَلَا ذِكْرٌ فِي أُورُشَلِيمَ». ٢٠ 20
೨೦ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.

< نَحَمْيَا 2 >