< نَحَمْيَا 2 >

وَفِي شَهْرِ نِيسَانَ فِي ٱلسَّنَةِ ٱلْعِشْرِينَ لِأَرْتَحْشَسْتَا ٱلْمَلِكِ، كَانَتْ خَمْرٌ أَمَامَهُ، فَحَمَلْتُ ٱلْخَمْرَ وَأَعْطَيْتُ ٱلْمَلِكَ. وَلَمْ أَكُنْ قَبْلُ مُكْمَدًّا أَمَامَهُ. ١ 1
ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.
فَقَالَ لِي ٱلْمَلِكُ: «لِمَاذَا وَجْهُكَ مُكْمَدٌّ وَأَنْتَ غَيْرُ مَرِيضٍ؟ مَا هَذَا إِلَا كآبَةَ قَلْبٍ!». فَخِفْتُ كَثِيرًا جِدًّا، ٢ 2
ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,
وَقُلْتُ لِلْمَلِكِ: «لِيَحْيَ ٱلْمَلِكُ إِلَى ٱلْأَبَدِ. كَيْفَ لَا يَكْمَدُّ وَجْهِي وَٱلْمَدِينَةُ بَيْتُ مَقَابِرِ آبَائِي خَرَابٌ، وَأَبْوَابُهَا قَدْ أَكَلَتْهَا ٱلنَّارُ؟» ٣ 3
“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.
فَقَالَ لِي ٱلْمَلِكُ: «مَاذَا طَالِبٌ أَنْتَ؟» فَصَلَّيْتُ إِلَى إِلَهِ ٱلسَّمَاءِ، ٤ 4
ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ
وَقُلْتُ لِلْمَلِكِ: «إِذَا سُرَّ ٱلْمَلِكُ، وَإِذَا أَحْسَنَ عَبْدُكَ أَمَامَكَ، تُرْسِلُنِي إِلَى يَهُوذَا، إِلَى مَدِينَةِ قُبُورِ آبَائِي فَأَبْنِيهَا». ٥ 5
ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.
فَقَالَ لِي ٱلْمَلِكُ، وَٱلْمَلِكَةُ جَالِسَةٌ بِجَانِبِهِ: «إِلَى مَتَى يَكُونُ سَفَرُكَ، وَمَتَى تَرْجِعُ؟» فَحَسُنَ لَدَى ٱلْمَلِكِ وَأَرْسَلَنِي، فَعَيَّنْتُ لَهُ زَمَانًا. ٦ 6
ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.
وَقُلْتُ لِلْمَلِكِ: «إِنْ حَسُنَ عِنْدَ ٱلْمَلِكِ فَلْتُعْطَ لِي رَسَائِلُ إِلَى وُلَاةِ عَبْرِ ٱلنَّهْرِ لِكَيْ يُجِيزُونِي حَتَّى أَصِلَ إِلَى يَهُوذَا، ٧ 7
ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ.
وَرِسَالَةٌ إِلَى آسَافَ حَارِسِ فِرْدَوْسِ ٱلْمَلِكِ لِكَيْ يُعْطِيَنِي أَخْشَابًا لِسَقْفِ أَبْوَابِ ٱلْقَصْرِ ٱلَّذِي لِلْبَيْتِ، وَلِسُورِ ٱلْمَدِينَةِ، وَلِلْبَيْتِ ٱلَّذِي أَدْخُلُ إِلَيْهِ». فَأَعْطَانِي ٱلْمَلِكُ حَسَبَ يَدِ إِلَهِي ٱلصَّالِحَةِ عَلَيَّ. ٨ 8
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.
فَأَتَيْتُ إِلَى وُلَاةِ عَبْرِ ٱلنَّهْرِ وَأَعْطَيْتُهُمْ رَسَائِلَ ٱلْمَلِكِ. وَأَرْسَلَ مَعِي ٱلْمَلِكُ رُؤَسَاءَ جَيْشٍ وَفُرْسَانًا. ٩ 9
ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.
وَلَمَّا سَمِعَ سَنْبَلَّطُ ٱلْحُورُونِيُّ وَطُوبِيَّا ٱلْعَبْدُ ٱلْعَمُّونِيُّ سَاءَهُمَا مَسَاءَةً عَظِيمَةً، لِأَنَّهُ جَاءَ رَجُلٌ يَطْلُبُ خَيْرًا لِبَنِي إِسْرَائِيلَ. ١٠ 10
ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.
فَجِئْتُ إِلَى أُورُشَلِيمَ وَكُنْتُ هُنَاكَ ثَلَاثَةَ أَيَّامٍ. ١١ 11
ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ, ನಾನೂ, ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
ثُمَّ قُمْتُ لَيْلًا أَنَا وَرِجَالٌ قَلِيلُونَ مَعِي، وَلَمْ أُخْبِرْ أَحَدًا بِمَا جَعَلَهُ إِلَهِي فِي قَلْبِي لِأَعْمَلَهُ فِي أُورُشَلِيمَ. وَلَمْ يَكُنْ مَعِي بَهِيمَةٌ إِلَّا ٱلْبَهِيمَةُ ٱلَّتِي كُنْتُ رَاكِبَهَا. ١٢ 12
ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.
وَخَرَجْتُ مِنْ بَابِ ٱلْوَادِي لَيْلًا أَمَامَ عَيْنِ ٱلتِّنِّينِ إِلَى بَابِ ٱلدِّمْنِ، وَصِرْتُ أَتَفَرَّسُ فِي أَسْوَارِ أُورُشَلِيمَ ٱلْمُنْهَدِمَةِ وَأَبْوَابِهَا ٱلَّتِي أَكَلَتْهَا ٱلنَّارُ. ١٣ 13
ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.
وَعَبَرْتُ إِلَى بَابِ ٱلْعَيْنِ وَإِلَى بِرْكَةِ ٱلْمَلِكِ، وَلَمْ يَكُنْ مَكَانٌ لِعُبُورِ ٱلْبَهِيمَةِ ٱلَّتِي تَحْتِي. ١٤ 14
ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,
فَصَعِدْتُ فِي ٱلْوَادِي لَيْلًا وَكُنْتُ أَتَفَرَّسُ فِي ٱلسُّورِ، ثُمَّ عُدْتُ فَدَخَلْتُ مِنْ بَابِ ٱلْوَادِي رَاجِعًا. ١٥ 15
ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.
وَلَمْ يَعْرِفِ ٱلْوُلَاةُ إِلَى أَيْنَ ذَهَبْتُ، وَلَا مَا أَنَا عَامِلٌ، وَلَمْ أُخْبِرْ إِلَى ذَلِكَ ٱلْوَقْتِ ٱلْيَهُودَ وَٱلْكَهَنَةَ وَٱلْأَشْرَافَ وَٱلْوُلَاةَ وَبَاقِي عَامِلِي ٱلْعَمَلِ. ١٦ 16
ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.
ثُمَّ قُلْتُ لَهُمْ: «أَنْتُمْ تَرَوْنَ ٱلشَّرَّ ٱلَّذِي نَحْنُ فِيهِ، كَيْفَ أَنَّ أُورُشَلِيمَ خَرِبَةٌ، وَأَبْوَابَهَا قَدْ أُحْرِقَتْ بِٱلنَّارِ. هَلُمَّ فَنَبْنِيَ سُورَ أُورُشَلِيمَ وَلَا نَكُونُ بَعْدُ عَارًا». ١٧ 17
ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.
وَأَخْبَرْتُهُمْ عَنْ يَدِ إِلَهِي ٱلصَّالِحَةِ عَلَيَّ، وَأَيْضًا عَنْ كَلَامِ ٱلْمَلِكِ ٱلَّذِي قَالَهُ لِي، فَقَالُوا: «لِنَقُمْ وَلْنَبْنِ». وَشَدَّدُوا أَيَادِيَهُمْ لِلْخَيْرِ. ١٨ 18
ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.
وَلَمَّا سَمِعَ سَنْبَلَّطُ ٱلْحُورُونِيُّ وَطُوبِيَّا ٱلْعَبْدُ ٱلْعَمُّونِيُّ وَجَشَمٌ ٱلْعَرَبِيُّ هَزَأُوا بِنَا وَٱحْتَقَرُونَا، وَقَالُوا: «مَا هَذَا ٱلْأَمْرُ ٱلَّذِي أَنْتُمْ عَامِلُونَ؟ أَعَلَى ٱلْمَلِكِ تَتَمَرَّدُونَ؟». ١٩ 19
ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.
فَأَجَبْتُهُمْ وَقُلْتُ لَهُمْ: «إِنَّ إِلَهَ ٱلسَّمَاءِ يُعْطِينَا ٱلنَّجَاحَ، وَنَحْنُ عَبِيدُهُ نَقُومُ وَنَبْنِي. وَأَمَّا أَنْتُمْ فَلَيْسَ لَكُمْ نَصِيبٌ وَلَا حَقٌّ وَلَا ذِكْرٌ فِي أُورُشَلِيمَ». ٢٠ 20
ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.

< نَحَمْيَا 2 >