< اَلْعَدَد 10 >

وَكَلَّمَ ٱلرَّبُّ مُوسَى قَائِلًا: ١ 1
ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
«ٱصْنَعْ لَكَ بُوقَيْنِ مِنْ فِضَّةٍ. مَسْحُولَيْنِ تَعْمَلُهُمَا، فَيَكُونَانِ لَكَ لِمُنَادَاةِ ٱلْجَمَاعَةِ وَلِٱرْتِحَالِ ٱلْمَحَلَّاتِ. ٢ 2
“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
فَإِذَا ضَرَبُوا بِهِمَا يَجْتَمِعُ إِلَيْكَ كُلُّ ٱلْجَمَاعَةِ إِلَى بَابِ خَيْمَةِ ٱلِٱجْتِمَاعِ. ٣ 3
ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
وَإِذَا ضَرَبُوا بِوَاحِدٍ يَجْتَمِعُ إِلَيْكَ ٱلرُّؤَسَاءُ، رُؤُوسُ أُلُوفِ إِسْرَائِيلَ. ٤ 4
ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
وَإِذَا ضَرَبْتُمْ هُتَافًا تَرْتَحِلُ ٱلْمَحَلَّاتُ ٱلنَّازِلَةُ إِلَى ٱلشَّرْقِ. ٥ 5
ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
وَإِذَا ضَرَبْتُمْ هُتَافًا ثَانِيَةً تَرْتَحِلُ ٱلْمَحَلَّاتُ ٱلنَّازِلَةُ إِلَى ٱلْجَنُوبِ. هُتَافًا يَضْرِبُونَ لِرِحْلَاتِهِمْ. ٦ 6
ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
وَأَمَّا عِنْدَمَا تَجْمَعُونَ ٱلْجَمَاعَةَ فَتَضْرِبُونَ وَلَا تَهْتِفُونَ. ٧ 7
ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
وَبَنُو هَارُونَ ٱلْكَهَنَةُ يَضْرِبُونَ بِٱلْأَبْوَاقِ. فَتَكُونُ لَكُمْ فَرِيضَةً أَبَدِيَّةً فِي أَجْيَالِكُمْ. ٨ 8
“ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
وَإِذَا ذَهَبْتُمْ إِلَى حَرْبٍ فِي أَرْضِكُمْ عَلَى عَدُوٍّ يَضُرُّ بِكُمْ، تَهْتِفُونَ بِٱلْأَبْوَاقِ، فَتُذْكَرُونَ أَمَامَ ٱلرَّبِّ إِلَهِكُمْ، وَتُخَلَّصُونَ مِنْ أَعْدَائِكُمْ. ٩ 9
ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
وَفِي يَوْمِ فَرَحِكُمْ، وَفِي أَعْيَادِكُمْ وَرُؤُوسِ شُهُورِكُمْ، تَضْرِبُونَ بِٱلْأَبْوَاقِ عَلَى مُحْرَقَاتِكُمْ وَذَبَائِحِ سَلَامَتِكُمْ، فَتَكُونُ لَكُمْ تَذْكَارًا أَمَامَ إِلَهِكُمْ. أَنَا ٱلرَّبُّ إِلَهُكُمْ». ١٠ 10
೧೦ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
وَفِي ٱلسَّنَةِ ٱلثَّانِيَةِ فِي ٱلشَّهْرِ ٱلثَّانِي، فِي ٱلْعِشْرِينَ مِنَ ٱلشَّهْرِ، ٱرْتَفَعَتِ ٱلسَّحَابَةُ عَنْ مَسْكَنِ ٱلشَّهَادَةِ. ١١ 11
೧೧ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
فَٱرْتَحَلَ بَنُو إِسْرَائِيلَ فِي رِحْلَاتِهِمْ مِنْ بَرِّيَّةِ سِينَاءَ، فَحَلَّتِ ٱلسَّحَابَةُ فِي بَرِّيَّةِ فَارَانَ. ١٢ 12
೧೨ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
ٱرْتَحَلُوا أَوَّلًا حَسَبَ قَوْلِ ٱلرَّبِّ عَنْ يَدِ مُوسَى. ١٣ 13
೧೩ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
فَٱرْتَحَلَتْ رَايَةُ مَحَلَّةِ بَنِي يَهُوذَا أَوَّلًا حَسَبَ أَجْنَادِهِمْ، وَعَلَى جُنْدِهِ نَحْشُونُ بْنُ عَمِّينَادَابَ، ١٤ 14
೧೪ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
وَعَلَى جُنْدِ سِبْطِ بَنِي يَسَّاكَرَ نَثَنَائِيلُ بْنُ صُوغَرَ، ١٥ 15
೧೫ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
وَعَلَى جُنْدِ سِبْطِ بَنِي زَبُولُونَ أَلِيآبُ بْنُ حِيلُونَ. ١٦ 16
೧೬ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
ثُمَّ أُنْزِلَ ٱلْمَسْكَنُ فَٱرْتَحَلَ بَنُو جَرْشُونَ وَبَنُو مَرَارِي حَامِلِينَ ٱلْمَسْكَنَ. ١٧ 17
೧೭ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
ثُمَّ ٱرْتَحَلَتْ رَايَةُ مَحَلَّةِ رَأُوبَيْنَ حَسَبَ أَجْنَادِهِمْ، وَعَلَى جُنْدِهِ أَلِيصُورُ بْنُ شَدَيْئُورَ، ١٨ 18
೧೮ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
وَعَلَى جُنْدِ سِبْطِ بَنِي شِمْعُونَ شَلُومِيئِيلُ بْنُ صُورِيشَدَّاي، ١٩ 19
೧೯ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
وَعَلَى جُنْدِ سِبْطِ بَنِي جَادَ أَلِيَاسَافُ بْنُ دَعُوئِيلَ. ٢٠ 20
೨೦ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
ثُمَّ ٱرْتَحَلَ ٱلْقَهَاتِيُّونَ حَامِلِينَ ٱلْمَقْدِسَ. وَأُقِيمَ ٱلْمَسْكَنُ إِلَى أَنْ جَاءُوا ٢١ 21
೨೧ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
ثُمَّ ٱرْتَحَلَتْ رَايَةُ مَحَلَّةِ بَنِي أَفْرَايِمَ حَسَبَ أَجْنَادِهِمْ، وَعَلَى جُنْدِهِ أَلِيشَمَعُ بْنُ عَمِّيهُودَ، ٢٢ 22
೨೨ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
وَعَلَى جُنْدِ سِبْطِ بَنِي مَنَسَّى جَمْلِيئِيلُ بْنُ فَدَهْصُورَ، ٢٣ 23
೨೩ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
وَعَلَى جُنْدِ سِبْطِ بَنِي بَنْيَامِينَ أَبِيدَنُ بْنُ جِدْعُونِي. ٢٤ 24
೨೪ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
ثُمَّ ٱرْتَحَلَتْ رَايَةُ مَحَلَّةِ بَنِي دَانَ سَاقَةِ جَمِيعِ ٱلْمَحَلَّاتِ حَسَبَ أَجْنَادِهِمْ، وَعَلَى جُنْدِهِ أَخِيعَزَرُ بْنُ عَمِّيشَدَّاي، ٢٥ 25
೨೫ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
وَعَلَى جُنْدِ سِبْطِ بَنِي أَشِيرَ فَجْعِيئِيلُ بْنُ عُكْرَنَ. ٢٦ 26
೨೬ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
وَعَلَى جُنْدِ سِبْطِ بَنِي نَفْتَالِي أَخِيرَعُ بْنُ عِينَنَ. ٢٧ 27
೨೭ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
هَذِهِ رِحْلَاتُ بَنِي إِسْرَائِيلَ بِأَجْنَادِهِمْ حِينَ ٱرْتَحَلُوا. ٢٨ 28
೨೮ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
وَقَالَ مُوسَى لِحُوبَابَ بْنِ رَعُوئِيلَ ٱلْمِدْيَانِيِّ حَمِي مُوسَى: «إِنَّنَا رَاحِلُونَ إِلَى ٱلْمَكَانِ ٱلَّذِي قَالَ ٱلرَّبُّ أُعْطِيكُمْ إِيَّاهُ. اِذْهَبْ مَعَنَا فَنُحْسِنَ إِلَيْكَ، لِأَنَّ ٱلرَّبَّ قَدْ تَكَلَّمَ عَنْ إِسْرَائِيلَ بِٱلْإِحْسَانِ». ٢٩ 29
೨೯ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
فَقَالَ لَهُ: «لَا أَذْهَبُ، بَلْ إِلَى أَرْضِي وَإِلَى عَشِيرَتِي أَمْضِي». ٣٠ 30
೩೦ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
فَقَالَ: «لَا تَتْرُكْنَا، لِأَنَّهُ بِمَا أَنَّكَ تَعْرِفُ مَنَازِلَنَا فِي ٱلْبَرِّيَّةِ تَكُونُ لَنَا كَعُيُونٍ. ٣١ 31
೩೧ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
وَإِنْ ذَهَبْتَ مَعَنَا فَبِنَفْسِ ٱلْإِحْسَانِ ٱلَّذِي يُحْسِنُ ٱلرَّبُّ إِلَيْنَا نُحْسِنُ نَحْنُ إِلَيْكَ». ٣٢ 32
೩೨ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
فَٱرْتَحَلُوا مِنْ جَبَلِ ٱلرَّبِّ مَسِيرَةَ ثَلَاثَةِ أَيَّامٍ، وَتَابُوتُ عَهْدِ ٱلرَّبِّ رَاحِلٌ أَمَامَهُمْ مَسِيرَةَ ثَلَاثَةِ أَيَّامٍ لِيَلْتَمِسَ لَهُمْ مَنْزِلًا. ٣٣ 33
೩೩ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
وَكَانَتْ سَحَابَةُ ٱلرَّبِّ عَلَيْهِمْ نَهَارًا فِي ٱرْتِحَالِهِمْ مِنَ ٱلْمَحَلَّةِ. ٣٤ 34
೩೪ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
وَعِنْدَ ٱرْتِحَالِ ٱلتَّابُوتِ كَانَ مُوسَى يَقُولُ: «قُمْ يَا رَبُّ، فَلْتَتَبَدَّدْ أَعْدَاؤُكَ وَيَهْرُبْ مُبْغِضُوكَ مِنْ أَمَامِكَ». ٣٥ 35
೩೫ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
وَعِنْدَ حُلُولِهِ كَانَ يَقُولُ: «ٱرْجِعْ يَا رَبُّ إِلَى رِبَوَاتِ أُلُوفِ إِسْرَائِيلَ». ٣٦ 36
೩೬ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.

< اَلْعَدَد 10 >