< اَلْعَدَد 21 >

وَلَمَّا سَمِعَ ٱلْكَنْعَانِيُّ مَلِكُ عَرَادَ ٱلسَّاكِنُ فِي ٱلْجَنُوبِ أَنَّ إِسْرَائِيلَ جَاءَ فِي طَرِيقِ أَتَارِيمَ، حَارَبَ إِسْرَائِيلَ وَسَبَى مِنْهُمْ سَبْيًا. ١ 1
ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಅತಾರೀಮ್ ಮಾರ್ಗವಾಗಿ ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕೇಳಿದಾಗ, ಅವನು ಅವರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.
فَنَذَرَ إِسْرَائِيلُ نَذْرًا لِلرَّبِّ وَقَالَ: «إِنْ دَفَعْتَ هَؤُلَاءِ ٱلْقَوْمَ إِلَى يَدِي أُحَرِّمُ مُدُنَهُمْ». ٢ 2
ಇಸ್ರಾಯೇಲರು ಯೆಹೋವನಿಗೆ ಪ್ರಮಾಣಮಾಡಿ, “ನಾವು ಈ ಜನರನ್ನು ಜಯಿಸುವಂತೆ ನೀನು ಅನುಗ್ರಹಿಸಿದರೆ ನಾವು ಅವರ ಗ್ರಾಮಗಳನ್ನು ಸಂಪೂರ್ಣವಾಗಿ ನಾಶಮಾಡುತ್ತೇವೆ” ಎಂದು ಹೇಳಿದರು.
فَسَمِعَ ٱلرَّبُّ لِقَوْلِ إِسْرَائِيلَ، وَدَفَعَ ٱلْكَنْعَانِيِّينَ، فَحَرَّمُوهُمْ وَمُدُنَهُمْ. فَدُعِيَ ٱسْمُ ٱلْمَكَانِ «حُرْمَةَ». ٣ 3
ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.
وَٱرْتَحَلُوا مِنْ جَبَلِ هُورٍ فِي طَرِيقِ بَحْرِ سُوفٍ لِيَدُورُوا بِأَرْضِ أَدُومَ، فَضَاقَتْ نَفْسُ ٱلشَّعْبِ فِي ٱلطَّرِيقِ. ٤ 4
ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
وَتَكَلَّمَ ٱلشَّعْبُ عَلَى ٱللهِ وَعَلَى مُوسَى قَائِلِينَ: «لِمَاذَا أَصْعَدْتُمَانَا مِنْ مِصْرَ لِنَمُوتَ فِي ٱلْبَرِّيَّةِ؟ لِأَنَّهُ لَا خُبْزَ وَلَا مَاءَ، وَقَدْ كَرِهَتْ أَنْفُسُنَا ٱلطَّعَامَ ٱلسَّخِيفَ». ٥ 5
ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
فَأَرْسَلَ ٱلرَّبُّ عَلَى ٱلشَّعْبِ ٱلْحَيَّاتِ ٱلْمُحْرِقَةَ، فَلَدَغَتِ ٱلشَّعْبَ، فَمَاتَ قَوْمٌ كَثِيرُونَ مِنْ إِسْرَائِيلَ. ٦ 6
ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
فَأَتَى ٱلشَّعْبُ إِلَى مُوسَى وَقَالُوا: «قَدْ أَخْطَأْنَا إِذْ تَكَلَّمْنَا عَلَى ٱلرَّبِّ وَعَلَيْكَ، فَصَلِّ إِلَى ٱلرَّبِّ لِيَرْفَعَ عَنَّا ٱلْحَيَّاتِ». فَصَلَّى مُوسَى لِأَجْلِ ٱلشَّعْبِ. ٧ 7
ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
فَقَالَ ٱلرَّبُّ لِمُوسَى: «ٱصْنَعْ لَكَ حَيَّةً مُحْرِقَةً وَضَعْهَا عَلَى رَايَةٍ، فَكُلُّ مَنْ لُدِغَ وَنَظَرَ إِلَيْهَا يَحْيَا». ٨ 8
ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
فَصَنَعَ مُوسَى حَيَّةً مِنْ نُحَاسٍ وَوَضَعَهَا عَلَى ٱلرَّايَةِ، فَكَانَ مَتَى لَدَغَتْ حَيَّةٌ إِنْسَانًا وَنَظَرَ إِلَى حَيَّةِ ٱلنُّحَاسِ يَحْيَا. ٩ 9
ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
وَٱرْتَحَلَ بَنُو إِسْرَائِيلَ وَنَزَلُوا فِي أُوبُوتَ. ١٠ 10
೧೦ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
وَٱرْتَحَلُوا مِنْ أُوبُوتَ وَنَزَلُوا فِي عَيِّي عَبَارِيمَ فِي ٱلْبَرِّيَّةِ، ٱلَّتِي قُبَالَةَ مُوآبَ إِلَى شُرُوقِ ٱلشَّمْسِ. ١١ 11
೧೧ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
مِنْ هُنَاكَ ٱرْتَحَلُوا وَنَزَلُوا فِي وَادِي زَارَدَ. ١٢ 12
೧೨ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
مِنْ هُنَاكَ ٱرْتَحَلُوا وَنَزَلُوا فِي عَبْرِ أَرْنُونَ ٱلَّذِي فِي ٱلْبَرِّيَّةِ، خَارِجًا عَنْ تُخُمِ ٱلْأَمُورِيِّينَ. لِأَنَّ أَرْنُونَ هُوَ تُخْمُ مُوآبَ، بَيْنَ مُوآبَ وَٱلْأَمُورِيِّينَ. ١٣ 13
೧೩ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
لِذَلِكَ يُقَالُ فِي كِتَابِ «حُرُوبِ ٱلرَّبِّ»: «وَاهِبٌ فِي سُوفَةَ وَأَوْدِيَةِ أَرْنُونَ ١٤ 14
೧೪ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
وَمَصَبِّ ٱلْأَوْدِيَةِ ٱلَّذِي مَالَ إِلَى مَسْكَنِ عَارَ، وَٱسْتَنَدَ إِلَى تُخُمِ مُوآبَ». ١٥ 15
೧೫ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
وَمِنْ هُنَاكَ إِلَى بِئْرٍ. وَهِيَ ٱلْبِئْرُ حَيْثُ قَالَ ٱلرَّبُّ لِمُوسَى: «ٱجْمَعِ ٱلشَّعْبَ فَأُعْطِيَهُمْ مَاءً». ١٦ 16
೧೬ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
حِينَئِذٍ تَرَنَّمَ إِسْرَائِيلُ بِهَذَا ٱلنَّشِيدِ: «اِصْعَدِي أَيَّتُهَا ٱلْبِئْرُ! أَجِيبُوا لَهَا. ١٧ 17
೧೭ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ
بِئْرٌ حَفَرَهَا رُؤَسَاءُ، حَفَرَهَا شُرَفَاءُ ٱلشَّعْبِ، بِصَوْلَجَانٍ، بِعِصِيِّهِمْ». وَمِنَ ٱلْبَرِّيَّةِ إِلَى مَتَّانَةَ، ١٨ 18
೧೮ಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,
وَمِنْ مَتَّانَةَ إِلَى نَحْلِيئِيلَ، وَمِنْ نَحْلِيئِيلَ إِلَى بَامُوتَ، ١٩ 19
೧೯ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
وَمِنْ بَامُوتَ إِلَى ٱلْجِوَاءِ ٱلَّتِي فِي صَحْرَاءِ مُوآبَ عِنْدَ رَأْسِ ٱلْفِسْجَةِ ٱلَّتِي تُشْرِفُ عَلَى وَجْهِ ٱلْبَرِّيَّةِ. ٢٠ 20
೨೦ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
وَأَرْسَلَ إِسْرَائِيلُ رُسُلًا إِلَى سِيحُونَ مَلِكِ ٱلْأَمُورِيِّينَ قَائِلًا: ٢١ 21
೨೧ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
«دَعْنِي أَمُرَّ فِي أَرْضِكَ. لَا نَمِيلُ إِلَى حَقْلٍ وَلَا إِلَى كَرْمٍ وَلَا نَشْرَبُ مَاءَ بِئْرٍ. فِي طَرِيقِ ٱلْمَلِكِ نَمْشِي حَتَّى نَتَجَاوَزَ تُخُومَكَ». ٢٢ 22
೨೨“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
فَلَمْ يَسْمَحْ سِيحُونُ لِإِسْرَائِيلَ بِٱلْمُرُورِ فِي تُخُومِهِ، بَلْ جَمَعَ سِيحُونُ جَمِيعَ قَوْمِهِ وَخَرَجَ لِلِقَاءِ إِسْرَائِيلَ إِلَى ٱلْبَرِّيَّةِ، فَأَتَى إِلَى يَاهَصَ وَحَارَبَ إِسْرَائِيلَ. ٢٣ 23
೨೩ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
فَضَرَبَهُ إِسْرَائِيلُ بِحَدِّ ٱلسَّيْفِ وَمَلَكَ أَرْضَهُ مِنْ أَرْنُونَ إِلَى يَبُّوقَ إِلَى بَنِي عَمُّونَ. لِأَنَّ تُخُمَ بَنِي عَمُّونَ كَانَ قَوِيًّا. ٢٤ 24
೨೪ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
فَأَخَذَ إِسْرَائِيلُ كُلَّ هَذِهِ ٱلْمُدُنِ، وَأَقَامَ إِسْرَائِيلُ فِي جَمِيعِ مُدُنِ ٱلْأَمُورِيِّينَ فِي حَشْبُونَ وَفِي كُلِّ قُرَاهَا. ٢٥ 25
೨೫ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
لِأَنَّ حَشْبُونَ كَانَتْ مَدِينَةَ سِيحُونَ مَلِكِ ٱلْأَمُورِيِّينَ، وَكَانَ قَدْ حَارَبَ مَلِكَ مُوآبَ ٱلْأَوَّلَ وَأَخَذَ كُلَّ أَرْضِهِ مِنْ يَدِهِ حَتَّى أَرْنُونَ. ٢٦ 26
೨೬ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
لِذَلِكَ يَقُولُ أَصْحَابُ ٱلْأَمْثَالِ: «اِيتُوا إِلَى حَشْبُونَ فَتُبْنَى، وَتُصْلَحَ مَدِينَةُ سِيحُونَ. ٢٧ 27
೨೭ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
لِأَنَّ نَارًا خَرَجَتْ مِنْ حَشْبُونَ، لَهِيبًا مِنْ قَرْيَةِ سِيحُونَ. أَكَلَتْ عَارَ مُوآبَ. أَهْلَ مُرْتَفَعَاتِ أَرْنُونَ. ٢٨ 28
೨೮ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
وَيْلٌ لَكَ يَا مُوآبُ. هَلَكْتِ يَا أُمَّةَ كَمُوشَ. قَدْ صَيَّرَ بَنِيهِ هَارِبِينَ وَبَنَاتِهِ فِي ٱلسَّبْيِ لِمَلِكِ ٱلْأَمُورِيِّينَ سِيحُونَ. ٢٩ 29
೨೯ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
لَكِنْ قَدْ رَمَيْنَاهُمْ. هَلَكَتْ حَشْبُونُ إِلَى دِيبُونَ. وَأَخْرَبْنَا إِلَى نُوفَحَ ٱلَّتِي إِلَى مِيدَبَا». ٣٠ 30
೩೦ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
فَأَقَامَ إِسْرَائِيلُ فِي أَرْضِ ٱلْأَمُورِيِّينَ. ٣١ 31
೩೧ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
وَأَرْسَلَ مُوسَى لِيَتَجَسَّسَ يَعْزِيرَ، فَأَخَذُوا قُرَاهَا وَطَرَدُوا ٱلْأَمُورِيِّينَ ٱلَّذِينَ هُنَاكَ. ٣٢ 32
೩೨ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
ثُمَّ تَحَوَّلُوا وَصَعِدُوا فِي طَرِيقِ بَاشَانَ. فَخَرَجَ عُوجُ مَلِكُ بَاشَانَ لِلِقَائِهِمْ هُوَ وَجَمِيعُ قَوْمِهِ إِلَى ٱلْحَرْبِ فِي إِذْرَعِي. ٣٣ 33
೩೩ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.
فَقَالَ ٱلرَّبُّ لِمُوسَى: «لَا تَخَفْ مِنْهُ لِأَنِّي قَدْ دَفَعْتُهُ إِلَى يَدِكَ مَعَ جَمِيعِ قَوْمِهِ وَأَرْضِهِ، فَتَفْعَلُ بِهِ كَمَا فَعَلْتَ بِسِيحُونَ مَلِكِ ٱلْأَمُورِيِّينَ ٱلسَّاكِنِ فِي حَشْبُونَ». ٣٤ 34
೩೪ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
فَضَرَبُوهُ وَبَنِيهِ وَجَمِيعَ قَوْمِهِ حَتَّى لَمْ يَبْقَ لَهُ شَارِدٌ، وَمَلَكُوا أَرْضَهُ. ٣٥ 35
೩೫ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.

< اَلْعَدَد 21 >