< أَمْثَالٌ 16 >
لِلْإِنْسَانِ تَدَابِيرُ ٱلْقَلْبِ، وَمِنَ ٱلرَّبِّ جَوَابُ ٱللِّسَانِ. | ١ 1 |
ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
كُلُّ طُرُقِ ٱلْإِنْسَانِ نَقِيَّةٌ فِي عَيْنَيْ نَفْسِهِ، وَٱلرَّبُّ وَازِنُ ٱلْأَرْوَاحِ. | ٢ 2 |
ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
أَلْقِ عَلَى ٱلرَّبِّ أَعْمَالَكَ فَتُثَبَّتَ أَفْكَارُكَ. | ٣ 3 |
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
اَلرَّبُّ صَنَعَ ٱلْكُلَّ لِغَرَضِهِ، وَٱلشِّرِّيرَ أَيْضًا لِيَوْمِ ٱلشَّرِّ. | ٤ 4 |
ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.
مَكْرَهَةُ ٱلرَّبِّ كُلُّ مُتَشَامِخِ ٱلْقَلْبِ. يَدًا لِيَدٍ لَا يَتَبَرَّأُ. | ٥ 5 |
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
بِٱلرَّحْمَةِ وَٱلْحَقِّ يُسْتَرُ ٱلْإِثْمُ، وَفِي مَخَافَةِ ٱلرَّبِّ ٱلْحَيَدَانُ عَنِ ٱلشَّرِّ. | ٦ 6 |
ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
إِذَا أَرْضَتِ ٱلرَّبَّ طُرُقُ إِنْسَانٍ، جَعَلَ أَعْدَاءَهُ أَيْضًا يُسَالِمُونَهُ. | ٧ 7 |
ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.
اَلْقَلِيلُ مَعَ ٱلْعَدْلِ خَيْرٌ مِنْ دَخْلٍ جَزِيلٍ بِغَيْرِ حَقٍّ. | ٨ 8 |
ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
قَلْبُ ٱلْإِنْسَانِ يُفَكِّرُ فِي طَرِيقِهِ، وَٱلرَّبُّ يَهْدِي خَطْوَتَهُ. | ٩ 9 |
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
فِي شَفَتَيِ ٱلْمَلِكِ وَحْيٌ. فِي ٱلْقَضَاءِ فَمُهُ لَا يَخُونُ. | ١٠ 10 |
ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.
قَبَّانُ ٱلْحَقِّ وَمَوَازِينُهُ لِلرَّبِّ. كُلُّ مَعَايِيرِ ٱلْكِيسِ عَمَلُهُ. | ١١ 11 |
ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.
مَكْرَهَةُ ٱلْمُلُوكِ فِعْلُ ٱلشَّرِّ، لِأَنَّ ٱلْكُرْسِيَّ يُثَبَّتُ بِٱلْبِرِّ. | ١٢ 12 |
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.
مَرْضَاةُ ٱلْمُلُوكِ شَفَتَا حَقٍّ، وَٱلْمُتَكَلِّمُ بِٱلْمُسْتَقِيمَاتِ يُحَبُّ. | ١٣ 13 |
ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.
غَضَبُ ٱلْمَلِكِ رُسُلُ ٱلْمَوْتِ، وَٱلْإِنْسَانُ ٱلْحَكِيمُ يَسْتَعْطِفُهُ. | ١٤ 14 |
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.
فِي نُورِ وَجْهِ ٱلْمَلِكِ حَيَاةٌ، وَرِضَاهُ كَسَحَابِ ٱلْمَطَرِ ٱلْمُتَأَخِّرِ. | ١٥ 15 |
ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
قِنْيَةُ ٱلْحِكْمَةِ كَمْ هِيَ خَيْرٌ مِنَ ٱلذَّهَبِ، وَقِنْيَةُ ٱلْفَهْمِ تُخْتَارُ عَلَى ٱلْفِضَّةِ! | ١٦ 16 |
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
مَنْهَجُ ٱلْمُسْتَقِيمِينَ ٱلْحَيَدَانُ عَنِ ٱلشَّرِّ. حَافِظٌ نَفْسَهُ حَافِظٌ طَرِيقَهُ. | ١٧ 17 |
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
قَبْلَ ٱلْكَسْرِ ٱلْكِبْرِيَاءُ، وَقَبْلَ ٱلسُّقُوطِ تَشَامُخُ ٱلرُّوحِ. | ١٨ 18 |
ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.
تَوَاضُعُ ٱلرُّوحِ مَعَ ٱلْوُدَعَاءِ خَيْرٌ مِنْ قَسْمِ ٱلْغَنِيمَةِ مَعَ ٱلْمُتَكَبِّرِينَ. | ١٩ 19 |
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
ٱلْفَطِنُ مِنْ جِهَةِ أَمْرٍ يَجِدُ خَيْرًا، وَمَنْ يَتَّكِلُ عَلَى ٱلرَّبِّ فَطُوبَى لَهُ. | ٢٠ 20 |
ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
حَكِيمُ ٱلْقَلْبِ يُدْعَى فَهِيمًا، وَحَلَاوَةُ ٱلشَّفَتَيْنِ تَزِيدُ عِلْمًا. | ٢١ 21 |
ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.
ٱلْفِطْنَةُ يَنْبُوعُ حَيَاةٍ لِصَاحِبِهَا، وَتَأْدِيبُ ٱلْحَمْقَى حَمَاقَةٌ. | ٢٢ 22 |
ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.
قَلْبُ ٱلْحَكِيمِ يُرْشِدُ فَمَهُ وَيَزِيدُ شَفَتَيْهِ عِلْمًا. | ٢٣ 23 |
ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
اَلْكَلَامُ ٱلْحَسَنُ شَهْدُ عَسَلٍ، حُلْوٌ لِلنَّفْسِ وَشِفَاءٌ لِلْعِظَامِ. | ٢٤ 24 |
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.
تُوجَدُ طَرِيقٌ تَظْهَرُ لِلْإِنْسَانِ مُسْتَقِيمَةً وَعَاقِبَتُهَا طُرُقُ ٱلْمَوْتِ. | ٢٥ 25 |
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
نَفْسُ ٱلتَّعِبِ تُتْعِبُ لَهُ، لِأَنَّ فَمَهُ يَحِثُّهُ. | ٢٦ 26 |
ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.
ٱلرَّجُلُ ٱللَّئِيمُ يَنْبُشُ ٱلشَّرَّ، وَعَلَى شَفَتَيْهِ كَٱلنَّارِ ٱلْمُتَّقِدَةِ. | ٢٧ 27 |
ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.
رَجُلُ ٱلْأَكَاذِيبِ يُطْلِقُ ٱلْخُصُومَةَ، وَٱلنَّمَّامُ يُفَرِّقُ ٱلْأَصْدِقَاءَ. | ٢٨ 28 |
ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
اَلرَّجُلُ ٱلظَّالِمُ يُغْوِي صَاحِبَهُ وَيَسُوقُهُ إِلَى طَرِيقٍ غَيْرِ صَالِحَةٍ. | ٢٩ 29 |
ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.
مَنْ يُغَمِّضُ عَيْنَيْهِ لِيُفَكِّرَ فِي ٱلْأَكَاذِيبِ، وَمَنْ يَعَضُّ شَفَتَيْهِ، فَقَدْ أَكْمَلَ شَرًّا. | ٣٠ 30 |
ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
تَاجُ جَمَالٍ: شَيْبَةٌ تُوجَدُ فِي طَرِيقِ ٱلْبِرِّ. | ٣١ 31 |
ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
اَلْبَطِيءُ ٱلْغَضَبِ خَيْرٌ مِنَ ٱلْجَبَّارِ، وَمَالِكُ رُوحِهِ خَيْرٌ مِمَّنْ يَأْخُذُ مَدِينَةً. | ٣٢ 32 |
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
ٱلْقُرْعَةُ تُلْقَى فِي ٱلْحِضْنِ، وَمِنَ ٱلرَّبِّ كُلُّ حُكْمِهَا. | ٣٣ 33 |
ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.