< رُؤيا 14 >

ثُمَّ نَظَرْتُ وَإِذَا خَرُوفٌ وَاقِفٌ عَلَى جَبَلِ صِهْيَوْنَ، وَمَعَهُ مِئَةٌ وَأَرْبَعَةٌ وَأَرْبَعُونَ أَلْفًا، لَهُمُ ٱسْمُ أَبِيهِ مَكْتُوبًا عَلَى جِبَاهِهِمْ. ١ 1
ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
وَسَمِعْتُ صَوْتًا مِنَ ٱلسَّمَاءِ كَصَوْتِ مِيَاهٍ كَثِيرَةٍ وَكَصَوْتِ رَعْدٍ عَظِيمٍ. وَسَمِعْتُ صَوْتًا كَصَوْتِ ضَارِبِينَ بِٱلْقِيثَارَةِ يَضْرِبُونَ بِقِيثَارَاتِهِمْ، ٢ 2
ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
وَهُمْ يَتَرَنَّمُونَ كَتَرْنِيمَةٍ جَدِيدَةٍ أَمَامَ ٱلْعَرْشِ وَأَمَامَ ٱلْأَرْبَعَةِ ٱلْحَيَوَانَاتِ وَٱلشُّيُوخِ. وَلَمْ يَسْتَطِعْ أَحَدٌ أَنْ يَتَعَلَّمَ ٱلتَّرْنِيمَةَ إِلَّا ٱلْمِئَةُ وَٱلْأَرْبَعَةُ وَٱلْأَرْبَعُونَ أَلْفًا ٱلَّذِينَ ٱشْتُرُوا مِنَ ٱلْأَرْضِ. ٣ 3
ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
هَؤُلَاءِ هُمُ ٱلَّذِينَ لَمْ يَتَنَجَّسُوا مَعَ ٱلنِّسَاءِ لِأَنَّهُمْ أَطْهَارٌ. هَؤُلَاءِ هُمُ ٱلَّذِينَ يَتْبَعُونَ ٱلْخَرُوفَ حَيْثُمَا ذَهَبَ. هَؤُلَاءِ ٱشْتُرُوا مِنْ بَيْنِ ٱلنَّاسِ بَاكُورَةً لِلهِ وَلِلْخَرُوفِ. ٤ 4
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
وَفِي أَفْوَاهِهِمْ لَمْ يُوجَدْ غِشٌّ، لِأَنَّهُمْ بِلَا عَيْبٍ قُدَّامَ عَرْشِ ٱللهِ. ٥ 5
ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
ثُمَّ رَأَيْتُ مَلَاكًا آخَرَ طَائِرًا فِي وَسَطِ ٱلسَّمَاءِ مَعَهُ بِشَارَةٌ أَبَدِيَّةٌ، لِيُبَشِّرَ ٱلسَّاكِنِينَ عَلَى ٱلْأَرْضِ وَكُلَّ أُمَّةٍ وَقَبِيلَةٍ وَلِسَانٍ وَشَعْبٍ، (aiōnios g166) ٦ 6
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios g166)
قَائِلًا بِصَوْتٍ عَظِيمٍ: «خَافُوا ٱللهَ وَأَعْطُوهُ مَجْدًا، لِأَنَّهُ قَدْ جَاءَتْ سَاعَةُ دَيْنُونَتِهِ، وَٱسْجُدُوا لِصَانِعِ ٱلسَّمَاءِ وَٱلْأَرْضِ وَٱلْبَحْرِ وَيَنَابِيعِ ٱلْمِيَاهِ». ٧ 7
ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
ثُمَّ تَبِعَهُ مَلَاكٌ آخَرُ قَائِلًا: «سَقَطَتْ! سَقَطَتْ بَابِلُ ٱلْمَدِينَةُ ٱلْعَظِيمَةُ، لِأَنَّهَا سَقَتْ جَمِيعَ ٱلْأُمَمِ مِنْ خَمْرِ غَضَبِ زِنَاهَا!». ٨ 8
ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
ثُمَّ تَبِعَهُمَا مَلَاكٌ ثَالِثٌ قَائِلًا بِصَوْتٍ عَظِيمٍ: «إِنْ كَانَ أَحَدٌ يَسْجُدُ لِلْوَحْشِ وَلِصُورَتِهِ، وَيَقْبَلُ سِمَتَهُ عَلَى جَبْهَتِهِ أَوْ عَلَى يَدِهِ، ٩ 9
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
فَهُوَ أَيْضًا سَيَشْرَبُ مِنْ خَمْرِ غَضَبِ ٱللهِ، ٱلْمَصْبُوبِ صِرْفًا فِي كَأْسِ غَضَبِهِ، وَيُعَذَّبُ بِنَارٍ وَكِبْرِيتٍ أَمَامَ ٱلْمَلَائِكَةِ ٱلْقِدِّيسِينَ وَأَمَامَ ٱلْخَرُوفِ. ١٠ 10
೧೦ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
وَيَصْعَدُ دُخَانُ عَذَابِهِمْ إِلَى أَبَدِ ٱلْآبِدِينَ. وَلَا تَكُونُ رَاحَةٌ نَهَارًا وَلَيْلًا لِلَّذِينَ يَسْجُدُونَ لِلْوَحْشِ وَلِصُورَتِهِ وَلِكُلِّ مَنْ يَقْبَلُ سِمَةَ ٱسْمِهِ». (aiōn g165) ١١ 11
೧೧ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn g165)
هُنَا صَبْرُ ٱلْقِدِّيسِينَ. هُنَا ٱلَّذِينَ يَحْفَظُونَ وَصَايَا ٱللهِ وَإِيمَانَ يَسُوعَ. ١٢ 12
೧೨ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
وَسَمِعْتُ صَوْتًا مِنَ ٱلسَّمَاءِ قَائِلًا لِي: «ٱكْتُبْ: طُوبَى لِلْأَمْوَاتِ ٱلَّذِينَ يَمُوتُونَ فِي ٱلرَّبِّ مُنْذُ ٱلْآنَ». «نَعَمْ» يَقُولُ ٱلرُّوحُ: «لِكَيْ يَسْتَرِيحُوا مِنْ أَتْعَابِهِمْ، وَأَعْمَالُهُمْ تَتْبَعُهُمْ». ١٣ 13
೧೩ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
ثُمَّ نَظَرْتُ وَإِذَا سَحَابَةٌ بَيْضَاءُ، وَعَلَى ٱلسَّحَابَةِ جَالِسٌ شِبْهُ ٱبْنِ إِنْسَانٍ، لَهُ عَلَى رَأْسِهِ إِكْلِيلٌ مِنْ ذَهَبٍ، وَفِي يَدِهِ مِنْجَلٌ حَادٌّ. ١٤ 14
೧೪ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
وَخَرَجَ مَلَاكٌ آخَرُ مِنَ ٱلْهَيْكَلِ، يَصْرُخُ بِصَوْتٍ عَظِيمٍ إِلَى ٱلْجَالِسِ عَلَى ٱلسَّحَابَةِ: «أَرْسِلْ مِنْجَلَكَ وَٱحْصُدْ، لِأَنَّهُ قَدْ جَاءَتِ ٱلسَّاعَةُ لِلْحَصَادِ، إِذْ قَدْ يَبِسَ حَصِيدُ ٱلْأَرْضِ». ١٥ 15
೧೫ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
فَأَلْقَى ٱلْجَالِسُ عَلَى ٱلسَّحَابَةِ مِنْجَلَهُ عَلَى ٱلْأَرْضِ، فَحُصِدَتِ ٱلْأَرْضُ. ١٦ 16
೧೬ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
ثُمَّ خَرَجَ مَلَاكٌ آخَرُ مِنَ ٱلْهَيْكَلِ ٱلَّذِي فِي ٱلسَّمَاءِ، مَعَهُ أَيْضًا مِنْجَلٌ حَادٌّ. ١٧ 17
೧೭ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
وَخَرَجَ مَلَاكٌ آخَرُ مِنَ ٱلْمَذْبَحِ لَهُ سُلْطَانٌ عَلَى ٱلنَّارِ، وَصَرَخَ صُرَاخًا عَظِيمًا إِلَى ٱلَّذِي مَعَهُ ٱلْمِنْجَلُ ٱلْحَادُّ، قَائِلًا: «أَرْسِلْ مِنْجَلَكَ ٱلْحَادَّ وَٱقْطِفْ عَنَاقِيدَ كَرْمِ ٱلْأَرْضِ، لِأَنَّ عِنَبَهَا قَدْ نَضِجَ». ١٨ 18
೧೮ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
فَأَلْقَى ٱلْمَلَاكُ مِنْجَلَهُ إِلَى ٱلْأَرْضِ وَقَطَفَ كَرْمَ ٱلْأَرْضِ، فَأَلْقَاهُ إِلَى مَعْصَرَةِ غَضَبِ ٱللهِ ٱلْعَظِيمَةِ. ١٩ 19
೧೯ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
وَدِيسَتِ ٱلْمَعْصَرَةُ خَارِجَ ٱلْمَدِينَةِ، فَخَرَجَ دَمٌ مِنَ ٱلْمَعْصَرَةِ حَتَّى إِلَى لُجُمِ ٱلْخَيْلِ، مَسَافَةَ أَلْفٍ وَسِتِّمِئَةِ غَلْوَةٍ. ٢٠ 20
೨೦ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.

< رُؤيا 14 >