< رُوما 9 >

أَقُولُ ٱلصِّدْقَ فِي ٱلْمَسِيحِ، لَا أَكْذِبُ، وَضَمِيرِي شَاهِدٌ لِي بِٱلرُّوحِ ٱلْقُدُسِ: ١ 1
ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
إِنَّ لِي حُزْنًا عَظِيمًا وَوَجَعًا فِي قَلْبِي لَا يَنْقَطِعُ. ٢ 2
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
فَإِنِّي كُنْتُ أَوَدُّ لَوْ أَكُونُ أَنَا نَفْسِي مَحْرُومًا مِنَ ٱلْمَسِيحِ لِأَجْلِ إِخْوَتِي أَنْسِبَائِي حَسَبَ ٱلْجَسَدِ، ٣ 3
ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
ٱلَّذِينَ هُمْ إِسْرَائِيلِيُّونَ، وَلَهُمُ ٱلتَّبَنِّي وَٱلْمَجْدُ وَٱلْعُهُودُ وَٱلِٱشْتِرَاعُ وَٱلْعِبَادَةُ وَٱلْمَوَاعِيدُ، ٤ 4
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
وَلَهُمُ ٱلْآبَاءُ، وَمِنْهُمُ ٱلْمَسِيحُ حَسَبَ ٱلْجَسَدِ، ٱلْكَائِنُ عَلَى ٱلْكُلِّ إِلَهًا مُبَارَكًا إِلَى ٱلْأَبَدِ. آمِينَ. (aiōn g165) ٥ 5
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. (aiōn g165)
وَلَكِنْ لَيْسَ هَكَذَا حَتَّى إِنَّ كَلِمَةَ ٱللهِ قَدْ سَقَطَتْ. لِأَنْ لَيْسَ جَمِيعُ ٱلَّذِينَ مِنْ إِسْرَائِيلَ هُمْ إِسْرَائِيلِيُّونَ، ٦ 6
ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
وَلَا لِأَنَّهُمْ مِنْ نَسْلِ إِبْرَاهِيمَ هُمْ جَمِيعًا أَوْلَادٌ. بَلْ «بِإِسْحَاقَ يُدْعَى لَكَ نَسْلٌ». ٧ 7
ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
أَيْ لَيْسَ أَوْلَادُ ٱلْجَسَدِ هُمْ أَوْلَادَ ٱللهِ، بَلْ أَوْلَادُ ٱلْمَوْعِدِ يُحْسَبُونَ نَسْلًا. ٨ 8
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
لِأَنَّ كَلِمَةَ ٱلْمَوْعِدِ هِيَ هَذِهِ: «أَنَا آتِي نَحْوَ هَذَا ٱلْوَقْتِ وَيَكُونُ لِسَارَةَ ٱبْنٌ». ٩ 9
“ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
وَلَيْسَ ذَلِكَ فَقَطْ، بَلْ رِفْقَةُ أَيْضًا، وَهِيَ حُبْلَى مِنْ وَاحِدٍ وَهُوَ إِسْحَاقُ أَبُونَا. ١٠ 10
೧೦ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
لِأَنَّهُ وَهُمَا لَمْ يُولَدَا بَعْدُ، وَلَا فَعَلَا خَيْرًا أَوْ شَرًّا، لِكَيْ يَثْبُتَ قَصْدُ ٱللهِ حَسَبَ ٱلِٱخْتِيَارِ، لَيْسَ مِنَ ٱلْأَعْمَالِ بَلْ مِنَ ٱلَّذِي يَدْعُو، ١١ 11
೧೧ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
قِيلَ لَهَا: «إِنَّ ٱلْكَبِيرَ يُسْتَعْبَدُ لِلصَّغِيرِ». ١٢ 12
೧೨
كَمَا هُوَ مَكْتُوبٌ: «أَحْبَبْتُ يَعْقُوبَ وَأَبْغَضْتُ عِيسُوَ». ١٣ 13
೧೩ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.
فَمَاذَا نَقُولُ؟ أَلَعَلَّ عِنْدَ ٱللهِ ظُلْمًا؟ حَاشَا! ١٤ 14
೧೪ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
لِأَنَّهُ يَقُولُ لِمُوسَى: «إِنِّي أَرْحَمُ مَنْ أَرْحَمُ، وَأَتَرَاءَفُ عَلَى مَنْ أَتَرَاءَفُ». ١٥ 15
೧೫“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
فَإِذًا لَيْسَ لِمَنْ يَشَاءُ وَلَا لِمَنْ يَسْعَى، بَلْ لِلهِ ٱلَّذِي يَرْحَمُ. ١٦ 16
೧೬ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
لِأَنَّهُ يَقُولُ ٱلْكِتَابُ لِفِرْعَوْنَ: «إِنِّي لِهَذَا بِعَيْنِهِ أَقَمْتُكَ، لِكَيْ أُظْهِرَ فِيكَ قُوَّتِي، وَلِكَيْ يُنَادَى بِٱسْمِي فِي كُلِّ ٱلْأَرْضِ». ١٧ 17
೧೭ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
فَإِذًا هُوَ يَرْحَمُ مَنْ يَشَاءُ، وَيُقَسِّي مَنْ يَشَاءُ. ١٨ 18
೧೮ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.
فَسَتَقُولُ لِي: «لِمَاذَا يَلُومُ بَعْدُ؟ لِأَنْ مَنْ يُقَاوِمُ مَشِيئَتَهُ؟» ١٩ 19
೧೯“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
بَلْ مَنْ أَنْتَ أَيُّهَا ٱلْإِنْسَانُ ٱلَّذِي تُجَاوِبُ ٱللهَ؟ أَلَعَلَّ ٱلْجِبْلَةَ تَقُولُ لِجَابِلِهَا: «لِمَاذَا صَنَعْتَنِي هَكَذَا؟». ٢٠ 20
೨೦ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
أَمْ لَيْسَ لِلْخَزَّافِ سُلْطَانٌ عَلَى ٱلطِّينِ، أَنْ يَصْنَعَ مِنْ كُتْلَةٍ وَاحِدَةٍ إِنَاءً لِلْكَرَامَةِ وَآخَرَ لِلْهَوَانِ؟ ٢١ 21
೨೧ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
فَمَاذَا؟ إِنْ كَانَ ٱللهُ، وَهُوَ يُرِيدُ أَنْ يُظْهِرَ غَضَبَهُ وَيُبَيِّنَ قُوَّتَهُ، ٱحْتَمَلَ بِأَنَاةٍ كَثِيرَةٍ آنِيَةَ غَضَبٍ مُهَيَّأَةً لِلْهَلَاكِ. ٢٢ 22
೨೨ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
وَلِكَيْ يُبَيِّنَ غِنَى مَجْدِهِ عَلَى آنِيَةِ رَحْمَةٍ قَدْ سَبَقَ فَأَعَدَّهَا لِلْمَجْدِ، ٢٣ 23
೨೩ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ٱلَّتِي أَيْضًا دَعَانَا نَحْنُ إِيَّاهَا، لَيْسَ مِنَ ٱلْيَهُودِ فَقَطْ بَلْ مِنَ ٱلْأُمَمِ أَيْضًا. ٢٤ 24
೨೪ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.
كَمَا يَقُولُ فِي هُوشَعَ أَيْضًا: «سَأَدْعُو ٱلَّذِي لَيْسَ شَعْبِي شَعْبِي، وَٱلَّتِي لَيْسَتْ مَحْبُوبَةً مَحْبُوبَةً. ٢٥ 25
೨೫ಆ ವಚನವೇನಂದರೆ, “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು.
وَيَكُونُ فِي ٱلْمَوْضِعِ ٱلَّذِي قِيلَ لَهُمْ فِيهِ: لَسْتُمْ شَعْبِي، أَنَّهُ هُنَاكَ يُدْعَوْنَ أَبْنَاءَ ٱللهِ ٱلْحَيِّ». ٢٦ 26
೨೬ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.
وَإِشَعْيَاءُ يَصْرُخُ مِنْ جِهَةِ إِسْرَائِيلَ: «وَإِنْ كَانَ عَدَدُ بَنِي إِسْرَائِيلَ كَرَمْلِ ٱلْبَحْرِ، فَٱلْبَقِيَّةُ سَتَخْلُصُ. ٢٧ 27
೨೭ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
لِأَنَّهُ مُتَمِّمُ أَمْرٍ وَقَاضٍ بِٱلْبِرِّ. لِأَنَّ ٱلرَّبَّ يَصْنَعُ أَمْرًا مَقْضِيًّا بِهِ عَلَى ٱلْأَرْضِ». ٢٨ 28
೨೮ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ,
وَكَمَا سَبَقَ إِشَعْيَاءُ فَقَالَ: «لَوْلَا أَنَّ رَبَّ ٱلْجُنُودِ أَبْقَى لَنَا نَسْلًا، لَصِرْنَا مِثْلَ سَدُومَ وَشَابَهْنَا عَمُورَةَ». ٢٩ 29
೨೯“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
فَمَاذَا نَقُولُ؟ إِنَّ ٱلْأُمَمَ ٱلَّذِينَ لَمْ يَسْعَوْا فِي أَثَرِ ٱلْبِرِّ أَدْرَكُوا ٱلْبِرَّ، ٱلْبِرَّ ٱلَّذِي بِٱلْإِيمَانِ. ٣٠ 30
೩೦ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
وَلَكِنَّ إِسْرَائِيلَ، وَهُوَ يَسْعَى فِي أَثَرِ نَامُوسِ ٱلْبِرِّ، لَمْ يُدْرِكْ نَامُوسَ ٱلْبِرِّ! ٣١ 31
೩೧ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
لِمَاذَا؟ لِأَنَّهُ فَعَلَ ذَلِكَ لَيْسَ بِٱلْإِيمَانِ، بَلْ كَأَنَّهُ بِأَعْمَالِ ٱلنَّامُوسِ. فَإِنَّهُمُ ٱصْطَدَمُوا بِحَجَرِ ٱلصَّدْمَةِ، ٣٢ 32
೩೨ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
كَمَا هُوَ مَكْتُوبٌ: «هَا أَنَا أَضَعُ فِي صِهْيَوْنَ حَجَرَ صَدْمَةٍ وَصَخْرَةَ عَثْرَةٍ، وَكُلُّ مَنْ يُؤْمِنُ بِهِ لَا يُخْزَى». ٣٣ 33
೩೩ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

< رُوما 9 >