< زَكَريَّا 7 >

وَكَانَ فِي ٱلسَّنَةِ ٱلرَّابِعَةِ لِدَارِيُوسَ ٱلْمَلِكِ أَنَّ كَلَامَ ٱلرَّبِّ صَارَ إِلَى زَكَرِيَّا فِي ٱلرَّابِعِ مِنَ ٱلشَّهْرِ ٱلتَّاسِعِ فِي كِسْلُو. ١ 1
ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
لَمَّا أَرْسَلَ أَهْلُ بَيْتِ إِيلَ شَرَاصِرَ وَرَجَمَ مَلِكَ وَرِجَالَهُمْ لِيُصَلُّوا قُدَّامَ ٱلرَّبِّ، ٢ 2
ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
وَلِيُكَلِّمُوا ٱلْكَهَنَةَ ٱلَّذِينَ فِي بَيْتِ رَبِّ ٱلْجُنُودِ وَٱلْأَنْبِيَاءَ قَائِلِينَ: «أَأَبْكِي فِي ٱلشَّهْرِ ٱلْخَامِسِ مُنْفَصِلًا، كَمَا فَعَلْتُ كَمْ مِنَ ٱلسِّنِينَ هَذِهِ؟». ٣ 3
ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
ثُمَّ صَارَ إِلَيَّ كَلَامُ رَبِّ ٱلْجُنُودِ قَائِلًا: ٤ 4
ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
«قُلْ لِجَمِيعِ شَعْبِ ٱلْأَرْضِ وَلِلْكَهَنَةِ قَائِلًا: لَمَّا صُمْتُمْ وَنُحْتُمْ فِي ٱلشَّهْرِ ٱلْخَامِسِ وَٱلشَّهْرِ ٱلسَّابِعِ، وَذَلِكَ هَذِهِ ٱلسَّبْعِينَ سَنَةً، فَهَلْ صُمْتُمْ صَوْمًا لِي أَنَا؟ ٥ 5
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
وَلَمَّا أَكَلْتُمْ وَلَمَّا شَرِبْتُمْ، أَفَمَا كُنْتُمْ أَنْتُمُ ٱلْآكِلِينَ وَأَنْتُمُ ٱلشَّارِبِينَ؟ ٦ 6
ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
أَلَيْسَ هَذَا هُوَ ٱلْكَلَامُ ٱلَّذِي نَادَى بِهِ ٱلرَّبُّ عَنْ يَدِ ٱلْأَنْبِيَاءِ ٱلْأَوَّلِينَ، حِينَ كَانَتْ أُورُشَلِيمُ مَعْمُورَةً وَمُسْتَرِيحَةً، وَمُدُنُهَا حَوْلَهَا، وَٱلْجَنُوبُ وَٱلسَّهْلُ مَعْمُورَيْنِ؟». ٧ 7
ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
وَكَانَ كَلَامُ ٱلرَّبِّ إِلَى زَكَرِيَّا قَائِلًا: ٨ 8
ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
«هَكَذَا قَالَ رَبُّ ٱلْجُنُودِ قَائِلًا: ٱقْضُوا قَضَاءَ ٱلْحَقِّ، وَٱعْمَلُوا إِحْسَانًا وَرَحْمَةً، كُلُّ إِنْسَانٍ مَعَ أَخِيهِ. ٩ 9
“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
وَلَا تَظْلِمُوا ٱلْأَرْمَلَةَ وَلَا ٱلْيَتِيمَ وَلَا ٱلْغَرِيبَ وَلَا ٱلْفَقِيرَ، وَلَا يُفَكِّرْ أَحَدٌ مِنْكُمْ شَرًّا عَلَى أَخِيهِ فِي قَلْبِكُمْ. ١٠ 10
೧೦ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
فَأَبَوْا أَنْ يُصْغُوا وَأَعْطَوْا كَتِفًا مُعَانِدَةً، وَثَقَّلُوا آذَانَهُمْ عَنِ ٱلسَّمْعِ. ١١ 11
೧೧“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
بَلْ جَعَلُوا قَلْبَهُمْ مَاسًا لِئَلَّا يَسْمَعُوا ٱلشَّرِيعَةَ وَٱلْكَلَامَ ٱلَّذِي أَرْسَلَهُ رَبُّ ٱلْجُنُودِ بِرُوحِهِ عَنْ يَدِ ٱلْأَنْبِيَاءِ ٱلْأَوَّلِينَ. فَجَاءَ غَضَبٌ عَظِيمٌ مِنْ عِنْدِ رَبِّ ٱلْجُنُودِ. ١٢ 12
೧೨ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
فَكَانَ كَمَا نَادَى هُوَ فَلَمْ يَسْمَعُوا، كَذَلِكَ يُنَادُونَ هُمْ فَلَا أَسْمَعُ، قَالَ رَبُّ ٱلْجُنُودِ. ١٣ 13
೧೩“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
وَأَعْصِفُهُمْ إِلَى كُلِّ ٱلْأُمَمِ ٱلَّذِينَ لَمْ يَعْرِفُوهُمْ. فَخَرِبَتِ ٱلْأَرْضُ وَرَاءَهُمْ، لَا ذَاهِبَ وَلَا آئِبَ. فَجَعَلُوا ٱلْأَرْضَ ٱلْبَهِجَةَ خَرَابًا». ١٤ 14
೧೪ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”

< زَكَريَّا 7 >