< زَكَريَّا 8 >

وَكَانَ كَلَامُ رَبِّ ٱلْجُنُودِ قَائِلًا: ١ 1
ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
«هَكَذَا قَالَ رَبُّ ٱلْجُنُودِ: غِرْتُ عَلَى صِهْيَوْنَ غَيْرَةً عَظِيمَةً، وَبِسَخَطٍ عَظِيمٍ غِرْتُ عَلَيْهَا. ٢ 2
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
هَكَذَا قَالَ ٱلرَّبُّ: قَدْ رَجَعْتُ إِلَى صِهْيَوْنَ وَأَسْكُنُ فِي وَسَطِ أُورُشَلِيمَ، فَتُدْعَى أُورُشَلِيمُ مَدِينَةَ ٱلْحَقِّ، وَجَبَلُ رَبِّ ٱلْجُنُودِ ٱلْجَبَلَ ٱلْمُقَدَّسَ. ٣ 3
ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
«هَكَذَا قَالَ رَبُّ ٱلْجُنُودِ: سَيَجْلِسُ بَعْدُ ٱلشُّيُوخُ وَٱلشَّيْخَاتُ فِي أَسْوَاقِ أُورُشَلِيمَ، كُلُّ إِنْسَانٍ مِنْهُمْ عَصَاهُ بِيَدِهِ مِنْ كَثْرَةِ ٱلْأَيَّامِ. ٤ 4
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
وَتَمْتَلِئُ أَسْوَاقُ ٱلْمَدِينَةِ مِنَ ٱلصِّبْيَانِ وَٱلْبَنَاتِ لَاعِبِينَ فِي أَسْوَاقِهَا. ٥ 5
ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.”
«هَكَذَا قَالَ رَبُّ ٱلْجُنُودِ: إِنْ يَكُنْ ذَلِكَ عَجِيبًا فِي أَعْيُنِ بَقِيَّةِ هَذَا ٱلشَّعْبِ فِي هَذِهِ ٱلْأَيَّامِ، أَفَيَكُونُ أَيْضًا عَجِيبًا فِي عَيْنَيَّ؟ يَقُولُ رَبُّ ٱلْجُنُودِ. ٦ 6
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.
«هَكَذَا قَالَ رَبُّ ٱلْجُنُودِ: هَأَنَذَا أُخَلِّصُ شَعْبِي مِنْ أَرْضِ ٱلْمَشْرِقِ وَمِنْ أَرْضِ مَغْرِبِ ٱلشَّمْسِ. ٧ 7
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,
وَآتِي بِهِمْ فَيَسْكُنُونَ فِي وَسَطِ أُورُشَلِيمَ، وَيَكُونُونَ لِي شَعْبًا،وَأَنَا أَكُونُ لَهُمْ إِلَهًا بِٱلْحَقِّ وَٱلْبِرِّ. ٨ 8
ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
«هَكَذَا قَالَ رَبُّ ٱلْجُنُودِ: لِتَتَشَدَّدْ أَيْدِيكُمْ أَيُّهَا ٱلسَّامِعُونَ فِي هَذِهِ ٱلْأَيَّامِ هَذَا ٱلْكَلَامَ مِنْ أَفْوَاهِ ٱلْأَنْبِيَاءِ ٱلَّذِي كَانَ يَوْمَ أُسِّسَ بَيْتُ رَبِّ ٱلْجُنُودِ لِبِنَاءِ ٱلْهَيْكَلِ. ٩ 9
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
لِأَنَّهُ قَبْلَ هَذِهِ ٱلْأَيَّامِ لَمْ تَكُنْ لِلْإِنْسَانِ أُجْرَةٌ وَلَا لِلْبَهِيمَةِ أُجْرَةٌ، وَلَا سَلَامٌ لِمَنْ خَرَجَ أَوْ دَخَلَ مِنْ قِبَلِ ٱلضِّيقِ. وَأَطْلَقْتُ كُلَّ إِنْسَانٍ، ٱلرَّجُلَ عَلَى قَرِيبِهِ. ١٠ 10
೧೦ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ, ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು.
أَمَّا ٱلْآنَ فَلَا أَكُونُ أَنَا لِبَقِيَّةِ هَذَا ٱلشَّعْبِ كَمَا فِي ٱلْأَيَّامِ ٱلْأُولَى، يَقُولُ رَبُّ ٱلْجُنُودِ. ١١ 11
೧೧ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
بَلْ زَرْعُ ٱلسَّلَامِ، ٱلْكَرْمُ يُعْطِي ثَمَرَهُ، وَٱلْأَرْضُ تُعْطِي غَلَّتَهَا، وَٱلسَّمَاوَاتُ تُعْطِي نَدَاهَا، وَأُمَلِّكُ بَقِيَّةَ هَذَا ٱلشَّعْبِ هَذِهِ كُلَّهَا. ١٢ 12
೧೨“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
وَيَكُونُ كَمَا أَنَّكُمْ كُنْتُمْ لَعْنَةً بَيْنَ ٱلْأُمَمِ يَا بَيْتَ يَهُوذَا وَيَا بَيْتَ إِسْرَائِيلَ، كَذَلِكَ أُخَلِّصُكُمْ فَتَكُونُونَ بَرَكَةً فَلَا تَخَافُوا. لِتَتَشَدَّدْ أَيْدِيكُمْ. ١٣ 13
೧೩ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”
«لِأَنَّهُ هَكَذَا قَالَ رَبُّ ٱلْجُنُودِ: كَمَا أَنِّي فَكَّرْتُ فِي أَنْ أُسِيءَ إِلَيْكُمْ حِينَ أَغْضَبَنِي آبَاؤُكُمْ، قَالَ رَبُّ ٱلْجُنُودِ، وَلَمْ أَنْدَمْ. ١٤ 14
೧೪ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
هَكَذَا عُدْتُ وَفَكَّرْتُ فِي هَذِهِ ٱلْأَيَّامِ فِي أَنْ أُحْسِنَ إِلَى أُورُشَلِيمَ وَبَيْتِ يَهُوذَا. لَا تَخَافُوا. ١٥ 15
೧೫ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.
هَذِهِ هِيَ ٱلْأُمُورُ ٱلَّتِي تَفْعَلُونَهَا. لِيُكَلِّمْ كُلُّ إِنْسَانٍ قَرِيبَهُ بِٱلْحَقِّ. ٱقْضُوا بِٱلْحَقِّ وَقَضَاءِ ٱلسَّلَامِ فِي أَبْوَابِكُمْ. ١٦ 16
೧೬“ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
وَلَا يُفَكِّرَنَّ أَحَدٌ فِي ٱلسُّوءِ عَلَى قَرِيبِهِ فِي قُلُوبِكُمْ. وَلَا تُحِبُّوا يَمِينَ ٱلزُّورِ. لِأَنَّ هَذِهِ جَمِيعَهَا أَكْرَهُهَا، يَقُولُ ٱلرَّبُّ». ١٧ 17
೧೭ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.”
وَكَانَ إِلَيَّ كَلَامُ رَبِّ ٱلْجُنُودِ قَائِلًا: ١٨ 18
೧೮“ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
«هَكَذَا قَالَ رَبُّ ٱلْجُنُودِ: إِنَّ صَوْمَ ٱلشَّهْرِ ٱلرَّابِعِ وَصَوْمَ ٱلْخَامِسِ وَصَوْمَ ٱلسَّابِعِ وَصَوْمَ ٱلْعَاشِرِ يَكُونُ لِبَيْتِ يَهُوذَا ٱبْتِهَاجًا وَفَرَحًا وَأَعْيَادًا طَيِّبَةً. فَأَحِبُّوا ٱلْحَقَّ وَٱلسَّلَامَ. ١٩ 19
೧೯ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”
هَكَذَا قَالَ رَبُّ ٱلْجُنُودِ: سَيَأْتِي شُعُوبٌ بَعْدُ، وَسُكَّانُ مُدُنٍ كَثِيرَةٍ. ٢٠ 20
೨೦ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;
وَسُكَّانُ وَاحِدَةٍ يَسِيرُونَ إِلَى أُخْرَى قَائِلِينَ: لِنَذْهَبْ ذَهَابًا لِنَتَرَضَّى وَجْهَ ٱلرَّبِّ وَنَطْلُبَ رَبَّ ٱلْجُنُودِ. أَنَا أَيْضًا أَذْهَبُ. ٢١ 21
೨೧ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
فَتَأْتِي شُعُوبٌ كَثِيرَةٌ وَأُمَمٌ قَوِيَّةٌ لِيَطْلُبُوا رَبَّ ٱلْجُنُودِ فِي أُورُشَلِيمَ، وَلْيَتَرَضَّوْا وَجْهَ ٱلرَّبِّ. ٢٢ 22
೨೨ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”
«هَكَذَا قَالَ رَبُّ ٱلْجُنُودِ: فِي تِلْكَ ٱلْأَيَّامِ يُمْسِكُ عَشَرَةُ رِجَالٍ مِنْ جَمِيعِ أَلْسِنَةِ ٱلْأُمَمِ يَتَمَسَّكُونَ بِذَيْلِ رَجُلٍ يَهُودِيٍّ قَائِلِينَ: نَذْهَبُ مَعَكُمْ لِأَنَّنَا سَمِعْنَا أَنَّ ٱللهَ مَعَكُمْ». ٢٣ 23
೨೩ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.

< زَكَريَّا 8 >