< زَكَريَّا 1 >

فِي ٱلشَّهْرِ ٱلثَّامِنِ فِي ٱلسَّنَةِ ٱلثَّانِيَةِ لِدَارِيُوسَ، كَانَتْ كَلِمَةُ ٱلرَّبِّ إِلَى زَكَرِيَّا بْنِ بَرَخِيَّا بْنِ عِدُّو ٱلنَّبِيِّ قَائِلًا: ١ 1
ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
«قَدْ غَضِبَ ٱلرَّبُّ غَضَبًا عَلَى آبَائِكُمْ. ٢ 2
ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
فَقُلْ لَهُمْ: هَكَذَا قَالَ رَبُّ ٱلْجُنُودِ: ٱرْجِعُوا إِلَيَّ، يَقُولُ رَبُّ ٱلْجُنُودِ، فَأَرْجِعَ إِلَيْكُمْ، يَقُولُ رَبُّ ٱلْجُنُودِ. ٣ 3
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
لَا تَكُونُوا كَآبَائِكُمُ ٱلَّذِينَ نَادَاهُمُ ٱلْأَنْبِيَاءُ ٱلْأَوَّلُونَ قَائِلِينَ: هَكَذَا قَالَ رَبُّ ٱلْجُنُودِ: ٱرْجِعُوا عَنْ طُرُقِكُمُ ٱلشِّرِّيرَةِ وَعَنْ أَعْمَالِكُمُ ٱلشِّرِّيرَةِ. فَلَمْ يَسْمَعُوا وَلَمْ يُصْغُوا إِلَيَّ، يَقُولُ رَبُّ ٱلْجُنُودِ. ٤ 4
ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
آبَاؤُكُمْ أَيْنَ هُمْ؟ وَٱلْأَنْبِيَاءُ هَلْ أَبَدًا يَحْيَوْنَ؟ ٥ 5
“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
وَلَكِنْ كَلَامِي وَفَرَائِضِي ٱلَّتِي أَوْصَيْتُ بِهَا عَبِيدِي ٱلْأَنْبِيَاءَ، أَفَلَمْ تُدْرِكْ آبَاءَكُمْ؟ فَرَجَعُوا وَقَالُوا: كَمَا قَصَدَ رَبُّ ٱلْجُنُودِ أَنْ يَصْنَعَ بِنَا كَطُرُقِنَا وَكَأَعْمَالِنَا، كَذَلِكَ فَعَلَ بِنَا». ٦ 6
ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
فِي ٱلْيَوْمِ ٱلرَّابِعِ وَٱلْعِشْرِينَ مِنَ ٱلشَّهْرِ ٱلْحَادِي عَشَرَ، هُوَ شَهْرُ شَبَاطَ. فِي ٱلسَّنَةِ ٱلثَّانِيَةِ لِدَارِيُوسَ، كَانَتْ كَلِمَةُ ٱلرَّبِّ إِلَى زَكَرِيَّا بْنِ بَرَخِيَّا بْنِ عِدُّو ٱلنَّبِيِّ قَائِلًا: ٧ 7
ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
رَأَيْتُ فِي ٱللَّيْلِ وَإِذَا بِرَجُلٍ رَاكِبٍ عَلَى فَرَسٍ أَحْمَرَ، وَهُوَ وَاقِفٌ بَيْنَ ٱلْآسِ ٱلَّذِي فِي ٱلظِّلِّ، وَخَلْفَهُ خَيْلٌ حُمْرٌ وَشُقْرٌ وَشُهْبٌ. ٨ 8
“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
فَقُلْتُ: «يَا سَيِّدِي، مَا هَؤُلَاءِ؟» فَقَالَ لِي ٱلْمَلَاكُ ٱلَّذِي كَلَّمَنِي: «أَنَا أُرِيكَ مَا هَؤُلَاءِ». ٩ 9
ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
فَأَجَابَ ٱلرَّجُلُ ٱلْوَاقِفُ بَيْنَ ٱلْآسِ وَقَالَ: «هَؤُلَاءِ هُمُ ٱلَّذِينَ أَرْسَلَهُمُ ٱلرَّبُّ لِلْجَوَلَانِ فِي ٱلْأَرْضِ». ١٠ 10
೧೦ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
فَأَجَابُوا مَلَاكَ ٱلرَّبِّ ٱلْوَاقِفَ بَيْنَ ٱلْآسِ وَقَالُوا: «قَدْ جُلْنَا فِي ٱلْأَرْضِ وَإِذَا ٱلْأَرْضُ كُلُّهَا مُسْتَرِيحَةٌ وَسَاكِنَةٌ». ١١ 11
೧೧ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
فَأَجَابَ مَلَاكُ ٱلرَّبِّ وَقَالَ: «يَارَبَّ ٱلْجُنُودِ، إِلَى مَتَى أَنْتَ لَا تَرْحَمُ أُورُشَلِيمَ وَمُدُنَ يَهُوذَا ٱلَّتِي غَضِبْتَ عَلَيْهَا هَذِهِ ٱلسَّبْعِينَ سَنَةً؟» ١٢ 12
೧೨ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
فَأَجَابَ ٱلرَّبُّ ٱلْمَلَاكَ ٱلَّذِي كَلَّمَنِي بِكَلَامٍ طَيِّبٍ وَكَلَامِ تَعْزِيَةٍ. ١٣ 13
೧೩ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
فَقَالَ لِي ٱلْمَلَاكُ ٱلَّذِي كَلَّمَنِي: «نَادِ قَائِلًا: هَكَذَا قَالَ رَبُّ ٱلْجُنُودِ: غِرْتُ عَلَى أُورُشَلِيمَ وَعَلَى صِهْيَوْنَ غَيْرَةً عَظِيمَةً. ١٤ 14
೧೪ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
وَأَنَا مُغْضِبٌ بِغَضَبٍ عَظِيمٍ عَلَى ٱلْأُمَمِ ٱلْمُطْمَئِنِّينَ. لِأَنِّي غَضِبْتُ قَلِيلًا وَهُمْ أَعَانُوا ٱلشَّرَّ. ١٥ 15
೧೫ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
لِذَلِكَ هَكَذَا قَالَ ٱلرَّبُّ: قَدْ رَجَعْتُ إِلَى أُورُشَلِيمَ بِٱلْمَرَاحِمِ فَبَيْتِي يُبْنَى فِيهَا، يَقُولُ رَبُّ ٱلْجُنُودِ، وَيُمَدُّ ٱلْمِطْمَارُ عَلَى أُورُشَلِيمَ. ١٦ 16
೧೬ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
نَادِ أَيْضًا وَقُلْ: هَكَذَا قَالَ رَبُّ ٱلْجُنُودِ: إِنَّ مُدُنِي تَفِيضُ بَعْدُ خَيْرًا، وَٱلرَّبُّ يُعَزِّي صِهْيَوْنَ بَعْدُ، وَيَخْتَارُ بَعْدُ أُورُشَلِيمَ». ١٧ 17
೧೭ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
فَرَفَعْتُ عَيْنَيَّ وَنَظَرْتُ وَإِذَا بِأَرْبَعَةِ قُرُونٍ. ١٨ 18
೧೮ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
فَقُلْتُ لِلْمَلَاكِ ٱلَّذِي كَلَّمَنِي: «مَا هَذِهِ؟» فَقَالَ لِي: «هَذِهِ هِيَ ٱلْقُرُونُ ٱلَّتِي بَدَّدَتْ يَهُوذَا وَإِسْرَائِيلَ وَأُورُشَلِيمَ». ١٩ 19
೧೯ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
فَأَرَانِي ٱلرَّبُّ أَرْبَعَةَ صُنَّاعٍ. ٢٠ 20
೨೦ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
فَقُلْتُ: «جَاءَ هَؤُلَاءِ، مَاذَا يَفْعَلُونَ؟» فَتَكَلَّمَ قَائِلًا: «هَذِهِ هِيَ ٱلْقُرُونُ ٱلَّتِي بَدَّدَتْ يَهُوذَا حَتَّى لَمْ يَرْفَعْ إِنْسَانٌ رَأْسَهُ. وَقَدْ جَاءَ هَؤُلَاءِ لِيُرْعِبُوهُمْ وَلِيَطْرُدُوا قُرُونَ ٱلْأُمَمِ ٱلرَّافِعِينَ قَرْنًا عَلَى أَرْضِ يَهُوذَا لِتَبْدِيدِهَا». ٢١ 21
೨೧ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.

< زَكَريَّا 1 >