< صَفَنْيَا 1 >

كَلِمَةُ ٱلرَّبِّ ٱلَّتِي صَارَتْ إِلَى صَفَنْيَا بْنِ كُوشِي بْنِ جَدَلْيَا بْنِ أَمَرِيَا بْنِ حَزَقِيَّا، فِي أَيَّامِ يُوشِيَّا بْنِ آمُونَ مَلِكِ يَهُوذَا: ١ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು. ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:
«نَزْعًا أَنْزَعُ ٱلْكُلَّ عَنْ وَجْهِ ٱلْأَرْضِ، يَقُولُ ٱلرَّبُّ. ٢ 2
ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”
أَنْزِعُ ٱلْإِنْسَانَ وَٱلْحَيَوَانَ. أَنْزِعُ طُيُورَ ٱلسَّمَاءِ وَسَمَكَ ٱلْبَحْرِ، وَٱلْمَعَاثِرَ مَعَ ٱلْأَشْرَارِ، وَأَقْطَعُ ٱلْإِنْسَانَ عَنْ وَجْهِ ٱلْأَرْضِ، يَقُولُ ٱلرَّبُّ. ٣ 3
“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.
«وَأَمُدُّ يَدِي عَلَى يَهُوذَا وَعَلَى كُلِّ سُكَّانِ أُورُشَلِيمَ، وَأَقْطَعُ مِنْ هَذَا ٱلْمَكَانِ بَقِيَّةَ ٱلْبَعْلِ، ٱسْمَ ٱلْكَمَارِيمِ، مَعَ ٱلْكَهَنَةِ. ٤ 4
“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.
وَٱلسَّاجِدِينَ عَلَى ٱلسُّطُوحِ لِجُنْدِ ٱلسَّمَاءِ، وَٱلسَّاجِدِينَ ٱلْحَالِفِينَ بِٱلرَّبِّ، وَٱلْحَالِفِينَ بِمَلْكُومَ، ٥ 5
ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
وَٱلْمُرْتَدِّينَ مِنْ وَرَاءِ ٱلرَّبِّ، وَٱلَّذِينَ لَمْ يَطْلُبُوا ٱلرَّبَّ وَلَا سَأَلُوا عَنْهُ. ٦ 6
ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”
«اُسْكُتْ قُدَّامَ ٱلسَّيِّدِ ٱلرَّبِّ، لِأَنَّ يَوْمَ ٱلرَّبِّ قَرِيبٌ. لِأَنَّ ٱلرَّبَّ قَدْ أَعَدَّ ذَبِيحَةً. قَدَّسَ مَدْعُوِّيهِ. ٧ 7
ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.
وَيَكُونُ فِي يَوْمِ ذَبِيحَةِ ٱلرَّبِّ أَنِّي أُعَاقِبُ ٱلرُّؤَسَاءَ وَبَنِي ٱلْمَلِكِ وَجَمِيعَ ٱلّلَابِسِينَ لِبَاسًا غَرِيبًا. ٨ 8
ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
وَفِي ذَلِكَ ٱلْيَوْمِ أُعَاقِبُ كُلَّ ٱلَّذِينَ يَقْفِزُونَ مِنْ فَوْقِ ٱلْعَتَبَةِ، ٱلَّذِينَ يَمْلَأُونَ بَيْتَ سَيِّدِهِمْ ظُلْمًا وَغِشًّا. ٩ 9
ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.
وَيَكُونُ فِي ذَلِكَ ٱلْيَوْمِ، يَقُولُ ٱلرَّبُّ، صَوْتُ صُرَاخٍ مِنْ بَابِ ٱلسَّمَكِ، وَوَلْوَلَةٌ مِنَ ٱلْقِسْمِ ٱلثَّانِي وَكَسْرٌ عَظِيمٌ مِنَ ٱلْآكَامِ. ١٠ 10
“ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.
وَلْوِلُوا يَا سُكَّانَ مَكْتِيشَ، لِأَنَّ كُلَّ شَعْبِ كَنْعَانَ بَادَ. ٱنْقَطَعَ كُلُّ ٱلْحَامِلِينَ ٱلْفِضَّةَ. ١١ 11
ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
وَيَكُونُ فِي ذَلِكَ ٱلْوَقْتِ أَنِّي أُفَتِّشُ أُورُشَلِيمَ بِٱلسُّرُجِ، وَأُعَاقِبُ ٱلرِّجَالَ ٱلْجَامِدِينَ عَلَى دُرْدِيِّهِمِ، ٱلْقَائِلِينَ فِي قُلُوبِهِمْ: إِنَّ ٱلرَّبَّ لَا يُحْسِنُ وَلَا يُسِيءُ. ١٢ 12
ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.
فَتَكُونُ ثَرْوَتُهُمْ غَنِيمَةً وَبُيُوتُهُمْ خَرَابًا، وَيَبْنُونَ بُيُوتًا وَلَا يَسْكُنُونَهَا، وَيَغْرِسُونَ كُرُومًا وَلَا يَشْرَبُونَ خَمْرَهَا. ١٣ 13
ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”
«قَرِيبٌ يَوْمُ ٱلرَّبِّ ٱلْعَظِيمِ. قَرِيبٌ وَسَرِيعٌ جِدًّا. صَوْتُ يَوْمِ ٱلرّبِّ. يَصْرُخُ حِينَئِذٍ ٱلْجَبَّارُ مُرًّا. ١٤ 14
ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.
ذَلِكَ ٱلْيَوْمُ يَوْمُ سَخَطٍ، يَوْمُ ضِيقٍ وَشِدَّةٍ، يَوْمُ خَرَابٍ وَدَمَارٍ، يَوْمُ ظَلَامٍ وَقَتَامٍ، يَوْمُ سَحَابٍ وَضَبَابٍ. ١٥ 15
ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,
يَوْمُ بُوقٍ وَهُتَافٍ علَى ٱلْمُدُنِ ٱلْمُحَصَّنَةِ وَعَلَى ٱلشُّرُفِ ٱلرَّفِيعَةِ. ١٦ 16
ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.
وَأُضَايِقُ ٱلنَّاسَ فَيَمْشُونَ كَٱلْعُمْيِ، لِأَنَّهُمْ أَخْطَأُوا إِلَى ٱلرَّبِّ، فَيُسْفَحُ دَمُهُمْ كَٱلتُّرَابِ وَلَحْمُهُمْ كَٱلْجِلَّةِ. ١٧ 17
“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.
لَا فِضَّتُهُمْ وَلَا ذَهَبُهُمْ يَسْتَطِيعُ إِنْقَاذَهُمْ في يَوْمِ غَضَبِ ٱلرَّبِّ، بَلْ بِنَارِ غَيْرَتِهِ تُؤْكَلُ ٱلْأَرْضُ كُلُّهَا، لِأَنَّهُ يَصْنَعُ فَنَاءً بَاغِتًا لِكُلِّ سُكَّانِ ٱلْأَرْضِ». ١٨ 18
ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.

< صَفَنْيَا 1 >