< ԱՌԱՋԻՆ ԿՈՐՆԹԱՑԻՍ 1 >

1 Պօղոս, կանչուած Աստուծոյ կամքով՝ Յիսուս Քրիստոսի առաքեալ ըլլալու, ու Սոսթենէս եղբայրը,
ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ,
2 Կորնթոսի մէջ եղած Աստուծոյ եկեղեցիին, անոնց՝ որ Քրիստոս Յիսուսով սրբացած են, կանչուած՝ սուրբեր ըլլալու բոլոր անոնց հետ, որ ամէն տեղ կը կանչեն մեր Տէրոջ՝ Յիսուս Քրիստոսի անունը, թէ՛ իրենց եւ թէ մեր Տէրոջ.
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
3 շնորհք ու խաղաղութիւն ձեզի Աստուծմէ՝ մեր Հօրմէն, եւ Տէր Յիսուս Քրիստոսէ:
ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.
4 Ամէն ատեն շնորհակալ կ՚ըլլամ իմ Աստուծմէս ձեզի համար, քանի որ Աստուծոյ շնորհքը տրուած է ձեզի Քրիստոս Յիսուսով,
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
5 ու դուք ամէն բանի մէջ հարստացած էք անով՝ ամէն խօսքով եւ ամէն գիտութեամբ:
ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
6 Այսպէս՝ Քրիստոսի վկայութիւնը հաստատուեցաւ ձեր մէջ,
ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
7 որպէսզի ո՛չ մէկ շնորհ պակսի ձեզի, մինչ կը սպասէք մեր Տէրոջ՝ Յիսուս Քրիստոսի յայտնութեան:
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
8 Ինք նաեւ պիտի հաստատէ ձեզ մինչեւ վախճանը, որ անմեղադրելի ըլլաք մեր Տէրոջ՝ Յիսուս Քրիստոսի օրը:
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
9 Հաւատարիմ է Աստուած, որու միջոցով կանչուեցաք հաղորդակից ըլլալու իր Որդիին, մեր Տէրոջ՝ Յիսուս Քրիստոսի:
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
10 Կ՚աղաչե՛մ ձեզի, եղբայրնե՛ր, մեր Տէրոջ՝ Յիսուս Քրիստոսի անունով, որ դուք բոլորդ ունենաք նո՛յն խօսքը, ու պառակտումներ չըլլան ձեր մէջ. հապա հաստատուած ըլլաք նո՛յն միտքով ու նո՛յն դատումով:
೧೦ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
11 Որովհետեւ, եղբայրնե՛րս, ձեր մասին բացայայտուեցաւ ինծի Քղուէի տունէն եղողներէն՝ թէ կռիւներ կան ձեր մէջ:
೧೧ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.
12 Հիմա սա՛ կ՚ըսեմ ձեզի. իբր թէ ձեզմէ իւրաքանչիւրը կ՚ըսէ. «Ես Պօղոսեան եմ», կամ. «Ես Ապողոսեան եմ», կամ. «Ես Կեփասեան եմ», կամ. «Ես Քրիստոսեան եմ»:
೧೨ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
13 Միթէ Քրիստոս բաժնուա՞ծ է. միթէ Պօղո՞ս խաչուեցաւ ձեզի համար, կամ թէ Պօղոսի՞ անունով մկրտուեցաք:
೧೩ಕ್ರಿಸ್ತನು ವಿಭಾಗಿಸಲ್ಪಟ್ಟಿದ್ದಾನೋ? ನಿಮಗೋಸ್ಕರ ಶಿಲುಬೆಗೇರಿದವನು ಪೌಲನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೋ?
14 Շնորհակալ կ՚ըլլամ Աստուծմէ, որ ձեզմէ ո՛չ մէկը մկրտեցի, բայց միայն Կրիսպոսը եւ Գայիոսը. որպէսզի ո՛չ մէկը ըսէ
೧೪ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
15 թէ ես մկրտած եմ իմ անունովս:
೧೫ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.
16 Ստեփանասի ընտանիքն ալ մկրտեցի: Չեմ գիտեր ամե՛նեւին՝ թէ ա՛լ ուրիշ մէկը մկրտեցի:
೧೬ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
17 Որովհետեւ Քրիստոս ղրկեց զիս ո՛չ թէ մկրտելու, հապա աւետարանելու. բայց ո՛չ խօսքերու իմաստութեամբ, որպէսզի Քրիստոսի խաչը ընդունայն չըլլայ:
೧೭ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
18 Արդարեւ խաչին քարոզութիւնը յիմարութիւն է անոնց համար՝ որ կը կորսուին, իսկ մեզի համար՝ որ փրկուած ենք՝ Աստուծոյ զօրութիւնն է:
೧೮ಶಿಲುಬೆಯ ಸಂದೇಶವು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುತನವಾಗಿದೆ, ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗೆ ಇದು ದೇವರ ಶಕ್ತಿಯಾಗಿದೆ.
19 Որովհետեւ գրուած է. «Իմաստուններուն իմաստութիւնը պիտի կորսնցնեմ, ու խելացիներուն խելքը պիտի ջնջեմ»:
೧೯“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
20 Ո՞ւր է իմաստունը, ո՞ւր է դպիրը, ո՞ւր է այս աշխարհի վիճաբանողը. միթէ Աստուած չյիմարացո՞ւց այս աշխարհի իմաստութիւնը: (aiōn g165)
೨೦ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ? (aiōn g165)
21 Արդարեւ՝ քանի աշխարհը իր իմաստութեամբ չճանչցաւ Աստուած՝ անոր իմաստութեան մէջ, Աստուած բարեհաճեցաւ քարոզութեան յիմարութեամբ փրկել անո՛նք՝ որ կը հաւատան.
೨೧ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
22 որովհետեւ Հրեաները նշան կը պահանջեն, եւ Յոյները իմաստութիւն կը փնտռեն,
೨೨ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
23 իսկ մենք կը քարոզենք խաչեալ Քրիստոսը, գայթակղութիւն՝ Հրեաներուն, ու յիմարութիւն՝ Յոյներուն.
೨೩ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
24 բայց անոնց որ կանչուած են, թէ՛ Հրեաներուն եւ թէ Յոյներուն, Քրիստոսը՝ Աստուծոյ զօրութիւնը եւ Աստուծոյ իմաստութիւնը.
೨೪ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
25 որովհետեւ Աստուծոյ յիմարութիւնը մարդոցմէ աւելի իմաստուն է, եւ Աստուծոյ տկարութիւնը մարդոցմէ աւելի ուժեղ է:
೨೫ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
26 Արդարեւ դուք կը տեսնէք ձեր կոչումը, եղբայրնե՛ր, թէ ի՛նչպէս ո՛չ թէ շատ իմաստուններ՝ մարմինի համեմատ, շատ զօրաւորներ, շատ ազնուականներ կանչուեցան,
೨೬ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
27 հապա Աստուած ընտրեց աշխարհի յիմարնե՛րը՝ որպէսզի ամօթահար ընէ իմաստունները: Աստուած ընտրեց աշխարհի տկարնե՛րը՝ որպէսզի ամօթահար ընէ հզօրները.
೨೭ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
28 Աստուած ընտրեց աշխարհի ստորիննե՛րը, անարգուածնե՛րն ու բա՛ն մը չեղողները, որպէսզի ոչնչացնէ բա՛ն մը եղողները.
೨೮ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
29 որպէսզի ո՛չ մէկ մարմին պարծենայ Աստուծոյ առջեւ:
೨೯ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
30 Բայց դուք Քրիստոս Յիսուսով անկէ՛ էք, որ Աստուծմէ մեզի համար իմաստութիւն, արդարութիւն, սրբութիւն եւ ազատագրութիւն եղաւ.
೩೦ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
31 որպէսզի, ինչպէս գրուած է. «Ո՛վ որ պարծենայ, թող պարծենայ Տէրոջմո՛վ»:
೩೧“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.

< ԱՌԱՋԻՆ ԿՈՐՆԹԱՑԻՍ 1 >