< ԳՈՐԾՔ ԱՌԱՔԵԼՈՑ 11 >

1 Առաքեալներն ու եղբայրները, որոնք Հրէաստանի կողմերն էին, լսեցին թէ հեթանոսներն ալ ընդունած են Աստուծոյ խօսքը:
ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿದರೆಂಬ ವಾರ್ತೆಯನ್ನು ಅಪೊಸ್ತಲರೂ ಯೂದಾಯದಲ್ಲೆಲ್ಲಾ ಇದ್ದ ಸಹೋದರರೂ ಕೇಳಿದರು.
2 Երբ Պետրոս Երուսաղէմ բարձրացաւ, թլփատուածները կը վիճէին անոր հետ
ಆದ್ದರಿಂದ ಪೇತ್ರನು ಯೆರೂಸಲೇಮಿಗೆ ಹೋದಾಗ ಸುನ್ನತಿಯಾದವರು ಅವನೊಂದಿಗೆ ವಾಗ್ವಾದಮಾಡಿ,
3 ու կ՚ըսէին. «Դուն անթլփատ մարդոց քով մտար եւ անոնց հետ հաց կերար»:
“ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.
4 Պետրոս ալ սկսաւ դէպքը կարգով բացատրել անոնց՝ ըսելով.
ಆಗ ಸಂಭವಿಸಿದ್ದೆಲ್ಲವನ್ನು ಪೇತ್ರನು ಕ್ರಮವಾಗಿ ವಿವರಿಸಿ:
5 «Ես կ՚աղօթէի Յոպպէ քաղաքը, երբ՝ վերացումի մէջ՝ տեսայ տեսիլք մը. անօթ մը՝ մեծ լաթի պէս, չորս ծայրերէն կախուած, իջաւ երկինքէն ու հասաւ մինչեւ ինծի:
“ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.
6 Մինչ կը դիտէի՝ աչքերս սեւեռած անոր վրայ, տեսայ երկրի չորքոտանիները, գազաններն ու սողունները, նաեւ երկինքի թռչունները:
ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು.
7 Ու լսեցի ձայն մը՝ որ կ՚ըսէր ինծի. “Կանգնէ՛, Պետրո՛ս, մորթէ՛ եւ կե՛ր”:
ಮಾತ್ರವಲ್ಲದೆ, ‘ಪೇತ್ರನೇ ಎದ್ದೇಳು, ಕೊಂದು ತಿನ್ನು,’ ಎಂದು ನನಗೆ ಹೇಳುವ ಒಂದು ವಾಣಿಯನ್ನು ಕೇಳಿಸಿಕೊಂಡೆನು.
8 Բայց ես ըսի. “Ամե՛նեւին, Տէ՛ր. որովհետեւ պիղծ կամ անմաքուր բան մը բնա՛ւ մտած չէ բերանս”:
“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.
9 Կրկին այդ ձայնը երկինքէն պատասխանեց ինծի. “Ի՛նչ որ Աստուած մաքրեց, դուն պիղծ մի՛ սեպեր”:
“ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು.
10 Ասիկա պատահեցաւ երեք անգամ, ու ամէն ինչ դարձեալ վեր քաշուեցաւ՝ դէպի երկինք:
ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.
11 Եւ ահա՛ անյապաղ երեք մարդիկ՝ Կեսարիայէն ղրկուած ինծի՝ եկան ու կեցան այն տան առջեւ, ուր հիւրընկալուած էի:
“ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು.
12 Հոգին ալ ըսաւ ինծի՝ որ երթամ անոնց հետ առանց տատամսելու: Այս վեց եղբայրներն ալ գացին ինծի հետ, ու մտանք այդ մարդուն տունը:
ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.
13 Ան ալ պատմեց մեզի թէ ի՛նչպէս իր տան մէջ տեսաւ հրեշտակ մը, որ կայնած էր եւ կ՚ըսէր իրեն. “Մա՛րդ ղրկէ Յոպպէ ու կանչէ՛ Սիմոնը, որ Պետրոս մականուանեալ է:
ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.
14 Ան խօսքեր պիտի ըսէ քեզի, որպէսզի փրկուիք՝ դուն եւ ամբողջ տունդ”:
ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು.
15 Երբ սկսայ խօսիլ, Սուրբ Հոգին իջաւ անոնց վրայ, ինչպէս նախապէս մեր վրայ ալ:
“ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು.
16 Եւ յիշեցի Տէրոջ ըսած խօսքը. “Արդարեւ Յովհաննէս մկրտեց ջուրով, բայց դուք պիտի մկրտուիք Սուրբ Հոգիով”:
‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.
17 Ուրեմն եթէ Աստուած տուաւ անոնց միեւնոյն պարգեւը՝ ինչպէս մեզի, երբ հաւատացին Տէր Յիսուս Քրիստոսի, ես ո՞վ էի՝ որ կարենայի արգիլել Աստուած»:
ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.
18 Այս բաները լսելով՝ հանդարտեցան, ու փառաբանեցին Աստուած՝ ըսելով. «Ուրեմն Աստուած հեթանոսներո՛ւն ալ ապաշխարութիւն շնորհեց՝ կեանքի համար»:
ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.
19 Ստեփանոսի մահէն ետք եղած հալածանքէն ցրուածները՝ հասան նաեւ մինչեւ Փիւնիկէ, Կիպրոս եւ Անտիոք, քարոզելով Աստուծոյ խօսքը ո՛չ մէկուն՝ բայց միայն Հրեաներուն:
ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.
20 Անոնցմէ ոմանք կիպրացի ու կիւրենացի մարդիկ էին, որոնք երբ մտան Անտիոք՝ կը խօսէին Հելլենացիներուն հետ, աւետելով Տէր Յիսուսը:
ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.
21 Տէրոջ ձեռքը անոնց հետ էր, եւ բազմաթիւ մարդիկ հաւատացին ու դարձան Տէրոջ:
ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.
22 Այս բաներուն լուրը հասաւ Երուսաղէմի եկեղեցիին ականջը, եւ ճամբեցին Բառնաբասը՝ որ երթայ մինչեւ Անտիոք:
ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.
23 Երբ ան եկաւ ու տեսաւ Աստուծոյ շնորհքը՝ ուրախացաւ, եւ կը յորդորէր բոլորն ալ՝ որ յարին Տէրոջ յօժար սիրտով՝՝.
ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.
24 (քանի որ ինք բարի մարդ էր, Սուրբ Հոգիով ու հաւատքով լեցուն.) եւ մեծ բազմութիւն մը աւելցաւ Տէրոջ եկեղեցիին թիւին վրայ:
ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.
25 Յետոյ Բառնաբաս մեկնեցաւ Տարսոն՝ փնտռելու Սօղոսը, ու գտնելով զայն՝ բերաւ Անտիոք:
ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು.
26 Անոնք լման տարի մը եկեղեցիին հետ հաւաքուելով՝ մեծ բազմութեան մը սորվեցուցին, եւ Անտիոքի՛ մէջ աշակերտները Քրիստոնեայ կոչուեցան առաջին անգամ:
ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.
27 Այդ օրերը՝ Երուսաղէմէն մարգարէներ իջան Անտիոք:
ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.
28 Անոնցմէ մէկը, Ագաբոս անունով, կանգնեցաւ եւ մատնանշեց Հոգիին զօրութեամբ՝ թէ մեծ սով մը պիտի ըլլայ ամբողջ երկրագունդին մէջ. ան ի՛րապէս եղաւ Կղօդիոսի օրերը:
ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.
29 Ուստի աշակերտները որոշեցին օգնութիւն ղրկել Հրէաստանի մէջ բնակող եղբայրներուն, իւրաքանչիւրը իր եկամուտին համեմատ:
ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.
30 Այդպէս ալ ըրին, ղրկելով զայն երէցներուն՝ Բառնաբասի ու Սօղոսի ձեռքով:
ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.

< ԳՈՐԾՔ ԱՌԱՔԵԼՈՑ 11 >