< ԳՈՐԾՔ ԱՌԱՔԵԼՈՑ 13 >

1 Քանի մը մարգարէներ ու վարդապետներ կային Անտիոք եղող եկեղեցիին մէջ.- Բառնաբաս, Շմաւոն՝ որ Նիգեր կը կոչուէր, Ղուկիոս Կիւրենացին, Մանայէն՝ Հերովդէս չորրորդապետին սննդակիցը, եւ Սօղոս:
ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.
2 Մինչ անոնք Տէրոջ պաշտօն կը կատարէին ու ծոմ կը պահէին, Սուրբ Հոգին ըսաւ. «Զատեցէ՛ք ինծի Բառնաբասը եւ Սօղոսը՝ այն գործին համար, որուն ես կանչած եմ զանոնք»:
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.
3 Ուստի՝ ծոմ պահելով ու աղօթելով՝ ձեռք դրին անոնց վրայ եւ ուղարկեցին:
ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
4 Անոնք ալ Սուրբ Հոգիէն ղրկուած՝ Սելեւկիա իջան, եւ անկէ նաւարկեցին դէպի Կիպրոս:
ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.
5 Հասնելով Սաղամինա՝ կը հռչակէին Աստուծոյ խօսքը Հրեաներու ժողովարաններուն մէջ. Յովհաննէս ալ կը սպասաւորէր իրենց:
ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.
6 Շրջելով այդ (ամբողջ) կղզին մինչեւ Պափոս՝ գտան մոգ մը, Հրեայ սուտ մարգարէ մը, որուն անունը Բարեյեսու էր.
ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.
7 ան փոխ-հիւպատոսին հետ էր, որ կը կոչուէր Սերգիոս Պօղոս, խելացի մարդ մը: Ասիկա՝ կանչելով Բառնաբասը եւ Սօղոսը՝ ուզեց լսել Աստուծոյ խօսքը:
ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.
8 Սակայն անոնց ընդդիմացաւ Եղիմաս մոգը (որովհետեւ ա՛յսպէս կը թարգմանուի անոր անունը), որ կը ջանար խոտորեցնել փոխ-հիւպատոսը հաւատքէն:
ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.
9 Բայց Սօղոս, որ Պօղոս ալ կը կոչուի, Սուրբ Հոգիով լեցուած՝ ակնապիշ նայեցաւ անոր
ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,
10 ու ըսաւ. «Ո՛վ ամէն նենգութեամբ եւ ամէն չարագործութեամբ լեցուն Չարախօսի՛ որդի, թշնամի ամբողջ արդարութեան, պիտի չդադրի՞ս խեղաթիւրելէ Տէրոջ ուղիղ ճամբաները:
“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?
11 Ահա՛ հիմա Տէրոջ ձեռքը քու վրադ է. կոյր պիտի ըլլաս եւ ատեն մը պիտի չտեսնես արեւը»: Անմի՛ջապէս մթութիւն ու խաւար իջաւ անոր վրայ, եւ շրջելով մէկը կը փնտռէր՝ որ ձեռքէն բռնելով տանէր զինք:
ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.
12 Այն ատեն փոխ-հիւպատոսը հաւատաց՝ երբ տեսաւ կատարուածը, մեծապէս ապշելով Տէրոջ ուսուցումին վրայ:
ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.
13 Պօղոս եւ իր ընկերակիցները նաւարկեցին Պափոսէն, ու գացին Պամփիւլիայի Պերգէն. բայց Յովհաննէս՝ զատուելով անոնցմէ՝ վերադարձաւ Երուսաղէմ:
ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.
14 Անոնք ալ գացին Պերգէէն եւ հասան Պիսիդիայի Անտիոքը, ու Շաբաթ օրը մտնելով ժողովարանը՝ նստան:
ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 Օրէնքին եւ Մարգարէներուն կարդացուելէն ետք՝ ժողովարանին պետերը մարդ ղրկեցին իրենց ու ըսին. «Մարդի՛կ եղբայրներ, եթէ դուք յորդորական խօսք մը ունիք ժողովուրդին՝ ըսէ՛ք»:
ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.
16 Ուստի Պօղոս կանգնեցաւ, եւ շարժելով ձեռքը՝ ըսաւ. «Իսրայելացի՛ մարդիկ, ու դո՛ւք՝ որ կը վախնաք Աստուծմէ, մտի՛կ ըրէք:
ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!
17 Այս ժողովուրդին՝ Իսրայէլի Աստուածը ընտրեց մեր հայրերը, բարձրացուց ժողովուրդը՝ երբ անոնք պանդխտացած էին Եգիպտոսի երկրին մէջ, եւ զօրաւոր բազուկով դուրս հանեց զանոնք:
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;
18 Գրեթէ քառասուն տարի կերակրեց զանոնք անապատին մէջ:
ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.
19 Քանանի երկրին մէջ, բնաջնջելով եօթը ազգ, անոնց երկիրը տուաւ իրենց՝ որ ժառանգեն:
ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.
20 Անկէ ետք՝ գրեթէ չորս հարիւր յիսուն տարի՝ դատաւորներ տուաւ իրենց, մինչեւ Սամուէլ մարգարէն:
ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.
21 Յետոյ թագաւոր ուզեցին, եւ Աստուած տուաւ իրենց Կիսի որդին՝ Սաւուղը, Բենիամինի տոհմէն մարդ մը, քառասուն տարի:
ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.
22 Երբ պաշտօնէ հեռացուց զայն, Դաւիթը նշանակեց իրենց վրայ իբր թագաւոր, որուն մասին վկայելով՝ ըսաւ. «Յեսսէի որդին՝ Դաւիթը գտայ, իմ սիրտիս համաձայն մարդ մը, որ պիտի գործադրէ իմ ամբողջ կամքս»:
ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.
23 Ասո՛ր զարմէն Աստուած՝ իր խոստումին համաձայն՝ հանեց Իսրայէլի Փրկիչ մը, Յիսուսը:
“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.
24 Դեռ ան չեկած, Յովհաննէս նախապէս քարոզեց ապաշխարութեան մկրտութիւնը՝ Իսրայէլի ամբողջ ժողովուրդին:
ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.
25 Երբ Յովհաննէս կը լրացնէր իր ընթացքը՝ ըսաւ. “Ո՞վ կը կարծէք՝ թէ եմ. ես Քրիստոսը չեմ, հապա ահա՛ իմ ետեւէս կու գայ մէկը՝ որուն ոտքերուն կօշիկները քակելու արժանի չեմ”:
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.
26 Մարդի՛կ եղբայրներ, Աբրահամի ցեղին որդինե՛ր, այս փրկութեան խօսքը ղրկուեցաւ ձեզի՛, եւ անոնց՝ որ ձեր մէջ աստուածավախ են:
“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.
27 Քանի որ Երուսաղէմ բնակողները եւ անոնց պետերը՝ ո՛չ զայն ճանչցան, ո՛չ ալ մարգարէներուն ձայները՝ որոնք կը կարդացուին ամէն Շաբաթ օր. բայց իրագործեցին գրուածները՝ դատելով զայն:
ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.
28 Թէպէտ չգտան մահուան արժանի պատճառ մը, խնդրեցին Պիղատոսէն՝ որ ան սպաննուի:
ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 Երբ գործադրեցին ամէն ինչ որ գրուած էր անոր մասին, վար իջեցնելով փայտէն՝ դրին գերեզմանի մը մէջ:
ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
30 Բայց Աստուած մեռելներէն յարուցանեց զայն:
ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.
31 Ան շատ օրեր երեւցաւ անոնց՝ որ Գալիլեայէն Երուսաղէմ ելեր էին իրեն հետ. անոնք են հիմա իր վկաները ժողովուրդին առջեւ:
ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.
32 Մե՛նք ալ կ՚աւետենք ձեզի այն խոստումը՝ որ եղած էր հայրերուն.
“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.
33 Աստուած իրագործեց զայն մեզի համար՝ որ անոնց զաւակներն ենք, յարուցանելով Յիսուսը՝ ինչպէս գրուած ալ է երկրորդ Սաղմոսին մէջ. “Դուն իմ Որդիս ես, ա՛յսօր ծնայ քեզ”:
ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’
34 Ան սա՛ կ՚ըսէ զինք մեռելներէն յարուցանելու մասին՝ որ անգա՛մ մըն ալ ապականութեան չվերադառնայ. “Ձեզի պիտի տամ Դաւիթի մնայուն կարեկցութիւնները”:
ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’
35 Այս մասին ուրիշ Սաղմոսի մը մէջ ալ կ՚ըսէ. “Պիտի չթոյլատրես որ քու Սուրբդ ապականութիւն տեսնէ”:
ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’
36 Որովհետեւ Դաւիթ ննջեց՝ Աստուծոյ ծրագիրով սպասաւորելէ ետք իր սերունդին, դրուեցաւ իր հայրերուն քով եւ ապականութիւն տեսաւ:
“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.
37 Բայց ա՛ն՝ որ Աստուած յարուցանեց, ապականութիւն չտեսաւ:
ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.
38 Ուրեմն գիտցէ՛ք, մարդի՛կ եղբայրներ, թէ ասո՛ր միջոցով մեղքերու ներում կը հռչակուի ձեզի,
“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.
39 եւ թէ իրմո՛վ ամէն հաւատացեալ կ՚արդարանայ այն բոլոր բաներէն՝ որոնցմէ չկրցաք արդարանալ Մովսէսի Օրէնքով:
ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.
40 Ուրեմն զգուշացէ՛ք, որպէսզի ձեզի չպատահի՝՝ ի՛նչ որ ըսուած է Մարգարէներուն մէջ.
ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:
41 “Տեսէ՛ք, արհամարհողներ, եւ զարմացէ՛ք ու ոչնչացէ՛ք. որովհետեւ պիտի կատարեմ արարք մը՝ ձեր օրերուն մէջ, այնպիսի արարք մը, որ եթէ մէկը պատմէ ձեզի՝ պիտի չհաւատաք”»:
“‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.
42 Երբ անկէ դուրս ելան՝ կ՚աղաչէին, որ հետեւեալ Շաբաթ ալ քարոզեն իրենց նոյն խօսքերը:
ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.
43 Երբ ժողովուրդը արձակուեցաւ, Հրեաներէն եւ բարեպաշտ նորահաւատներէն շատեր հետեւեցան Պօղոսի ու Բառնաբասի, որոնք կը խօսէին անոնց հետ եւ կը յորդորէին զանոնք, որ յարատեւեն Աստուծոյ շնորհքին մէջ:
ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.
44 Հետեւեալ Շաբաթ օրը, գրեթէ ամբողջ քաղաքը հաւաքուեցաւ՝ լսելու Աստուծոյ խօսքը:
ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.
45 Իսկ Հրեաները՝ երբ տեսան բազմութիւնները՝ լեցուեցան նախանձով, ու դէմ կը խօսէին Պօղոսի ըսածներուն՝ հակաճառելով եւ հայհոյելով:
ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.
46 Ուստի Պօղոս ու Բառնաբաս համարձակելով ըսին. «Հարկ էր որ Աստուծոյ խօսքը քարոզուէր նախ ձեզի՛. բայց քանի որ կը վանէք զայն ձեզմէ, եւ դուք ձեզ արժանի չէք սեպեր յաւիտենական կեանքի, ահա՛ մենք կը դառնանք հեթանոսներուն: (aiōnios g166)
ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. (aiōnios g166)
47 Որովհետեւ Տէրը սա՛ պատուիրած է մեզի. “Քեզ իբր լոյս դրի հեթանոսներուն, որպէսզի դուն փրկութեան պատճառ ըլլաս՝ մինչեւ երկրի ծայրերը”»:
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’”
48 Լսելով ասիկա՝ հեթանոսները կ՚ուրախանային ու կը փառաւորէին Աստուծոյ խօսքը, եւ անոնք որ սահմանուած էին յաւիտենական կեանքին՝ հաւատացին: (aiōnios g166)
ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು. (aiōnios g166)
49 Տէրոջ խօսքը կը տարածուէր ամբողջ երկրամասին մէջ:
ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.
50 Բայց Հրեաները գրգռեցին բարեպաշտ եւ մեծայարգ կիներն ու քաղաքին գլխաւորները, եւ Պօղոսի ու Բառնաբասի դէմ հալածանք հանելով՝ իրենց հողամասէն դուրս դրին զանոնք:
ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.
51 Անոնք ալ՝ իրենց ոտքերուն փոշին թօթուելով անոնց դէմ՝ գացին Իկոնիոն.
ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.
52 իսկ աշակերտները լեցուած էին ուրախութեամբ եւ Սուրբ Հոգիով՝՝:
ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.

< ԳՈՐԾՔ ԱՌԱՔԵԼՈՑ 13 >