< ԳՈՐԾՔ ԱՌԱՔԵԼՈՑ 15 >

1 Ոմանք՝ իջնելով Հրէաստանէն՝ կը սորվեցնէին եղբայրներուն ու կ՚ըսէին. «Եթէ Մովսէսի աւանդած սովորութեան համաձայն չթլփատուիք, չէք կրնար փրկուիլ»:
ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
2 Ուստի, երբ Պօղոս ու Բառնաբաս սաստիկ ընդվզեցան եւ վիճաբանեցան անոնց հետ, վճռեցին որ Պօղոս ու Բառնաբաս, նաեւ անոնցմէ քանի մը ուրիշներ, բարձրանան Երուսաղէմ՝ առաքեալներուն ու երէցներուն քով՝ այս հարցին համար:
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
3 Անոնք ալ՝ եկեղեցիէն ուղարկուած՝ անցան Փիւնիկէէն եւ Սամարիայէն, ու պատմելով հեթանոսներուն դարձի գալը՝ մեծապէս ուրախացուցին բոլոր եղբայրները:
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.
4 Երբ հասան Երուսաղէմ, ընդունուեցան եկեղեցիէն, առաքեալներէն ու երէցներէն, եւ պատմեցին ինչ որ Աստուած ըրեր էր իրենց հետ:
ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5 Բայց Փարիսեցիներու աղանդէն քանի մը հաւատացեալներ կայնեցան եւ ըսին. «Պէտք է թլփատել զանոնք, ու պատուիրել՝ որ պահեն Մովսէսի Օրէնքը»:
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.
6 Ուստի առաքեալներն ու երէցները հաւաքուեցան՝ նկատի առնելու համար այս բանը:
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
7 Շատ վիճաբանութիւն ըլլալէ ետք, Պետրոս կանգնեցաւ եւ ըսաւ անոնց. «Մարդի՛կ եղբայրներ, դուք գիտէք թէ առաջին օրերէն ի վեր Աստուած ընտրեց զիս մեր մէջէն, որպէսզի իմ բերանովս հեթանոսները լսեն աւետարանին խօսքը, ու հաւատան:
“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.
8 Սրտագէտն Աստուած վկայեց անոնց՝ Սուրբ Հոգին տալով անոնց, ինչպէս մեզի ալ,
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.
9 ու ո՛չ մէկ խտրութիւն դրաւ մեր եւ անոնց միջեւ՝ մաքրելով անոնց սիրտերը հաւատքով:
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10 Ուստի հիմա ինչո՞ւ կը փորձէք Աստուած, աշակերտներուն վիզին վրայ դնելով այնպիսի լուծ մը, որ ո՛չ մեր հայրերը, ո՛չ ալ մենք կարողացանք կրել:
೧೦ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
11 Բայց կը հաւատանք թէ Տէր Յիսուսի շնորհքո՛վ կը փրկուինք մենք, ինչպէս նաեւ անոնք»:
೧೧ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.
12 Ամբողջ բազմութիւնը լռեց, ու մտիկ կ՚ընէր Բառնաբասի եւ Պօղոսի, որոնք կը պատմէին թէ Աստուած ո՛րչափ նշաններ եւ սքանչելիքներ գործած էր հեթանոսներուն մէջ՝ իրենց միջոցով:
೧೨ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.
13 Երբ անոնք լռեցին, Յակոբոս ըսաւ. «Մարդի՛կ եղբայրներ, ինծի՛ մտիկ ըրէք.
೧೩ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;
14 Շմաւոն պատմեց թէ ի՛նչպէս Աստուած առաջին անգամ այցելեց հեթանոսներուն, որպէսզի անոնց մէջէն առնէ ժողովուրդ մը՝ կրելու համար իր անունը:
೧೪“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15 Այս բանին հետ կը համաձայնին մարգարէներուն խօսքերն ալ, ինչպէս գրուած է.
೧೫ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;
16 “Ասկէ ետք պիտի վերադառնամ ու պիտի վերակառուցանեմ Դաւիթի փլած խորանը. պիտի վերակառուցանեմ անոր աւերակները եւ վերականգնեմ զայն,
೧೬“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.
17 որպէսզի մնացած մարդիկը փնտռեն Տէրը, նաեւ բոլոր հեթանոսները՝ որոնք իմ անունովս կոչուած են՝՝, - կ՚ըսէ Տէրը՝ որ կ՚ընէ այս բոլոր բաները”:
೧೭ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು
18 Աստուած գիտէ իր բոլոր գործերը՝ դարերու սկիզբէն ի վեր: (aiōn g165)
೧೮ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ. (aiōn g165)
19 Ուստի ես յարմար կը դատեմ չնեղել անոնք՝ որ հեթանոսներէն կը դառնան Աստուծոյ.
೧೯“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
20 հապա նամակ մը գրել անոնց՝ որ ետ կենան կուռքերու պղծութիւններէն, պոռնկութենէ, խեղդուածէ եւ արիւնէ:
೨೦ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.
21 Որովհետեւ Մովսէս նախկին սերունդներէն ի վեր ունի զինք քարոզողներ ամէն քաղաքի մէջ, ու կը կարդացուի ժողովարաններու մէջ ամէն Շաբաթ օր»:
೨೧ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.
22 Այն ատեն առաքեալներուն ու երէցներուն՝ ամբողջ եկեղեցիին հետ՝ հաճելի թուեցաւ, որ մարդիկ ընտրեն իրենցմէ եւ Անտիոք ղրկեն՝ Պօղոսի ու Բառնաբասի հետ.- Բարսաբա մականուանեալ Յուդան եւ Շիղան, որոնք կառավարող մարդիկ էին եղբայրներուն մէջ:
೨೨ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,
23 Անոնց միջոցով ղրկեցին նամակ մը՝ սա՛պէս գրուած. «Առաքեալներէն, երէցներէն ու եղբայրներէն՝ ողջո՜յն Անտիոքի, Սուրիայի եւ Կիլիկիայի մէջ եղող եղբայրներուն, որոնք հեթանոսներէն դարձած են:
೨೩ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;
24 Քանի լսեցինք թէ մեր մէջէն ելած ոմանք՝ վրդոված են ձեզ խօսքերով, ու ցնցած ձեր անձերը՝ ըսելով թէ պէտք է թլփատուիլ եւ Օրէնքը պահել, - որոնց մենք այսպէս չպատուիրեցինք, -
೨೪“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
25 մեզի՝ միաբանութեամբ հաւաքուածներուս՝ յարմար թուեցաւ, որ մարդիկ ընտրելով ղրկենք ձեզի, մեր սիրելիներուն՝ Բառնաբասի ու Պօղոսի հետ,
೨೫ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,
26 որոնք մեր Տէրոջ՝ Յիսուս Քրիստոսի անունին համար իրենց անձերը ընծայած մարդիկ են:
೨೬ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.
27 Ուստի ղրկեցինք Յուդան եւ Շիղան, որպէսզի իրենք ալ բերանով նոյն բաները պատմեն ձեզի:
೨೭ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.
28 Որովհետեւ յարմար թուեցաւ Սուրբ Հոգիին ու մեզի ալ՝ աւելի ծանրութիւն չդնել ձեր վրայ, սա՛ հարկաւոր բաներէն զատ.-
೨೮ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
29 ետ կենալ կուռքերու զոհուածէ, արիւնէ, խեղդուածէ եւ պոռնկութենէ: Գոհ կ՚ըլլաք՝՝ եթէ հեռու մնաք՝՝ ատոնցմէ: Ո՛ղջ եղէք»:
೨೯ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30 Անոնք ալ՝ բաժնուելով՝ գացին Անտիոք, ու հաւաքելով բազմութիւնը՝ տուին նամակը:
೩೦ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31 Երբ կարդացին՝ ուրախացան տրուած մխիթարութեան համար:
೩೧ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32 Իսկ Յուդա եւ Շիղա, իրենք ալ մարգարէ ըլլալով, շատ խօսքերով յորդորեցին եղբայրները, ու ամրացուցին:
೩೨ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.
33 Ժամանակ մը հոն կենալէ ետք՝ եղբայրներէն խաղաղութեամբ ուղարկուեցան, եւ առաքեալներուն դարձան:
೩೩ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.
34 Բայց Շիղայի հաճելի թուեցաւ հոն մնալ:
೩೪ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.
35 Պօղոս ու Բառնաբաս ալ Անտիոքի մէջ կը կենային, եւ ուրիշ շատերու հետ կը սորվեցնէին ու կ՚աւետէին Տէրոջ խօսքը:
೩೫ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.
36 Քանի մը օր ետք՝ Պօղոս ըսաւ Բառնաբասի. «Վերադառնա՛նք եւ այցելե՛նք եղբայրներուն՝ այն բոլոր քաղաքներուն մէջ, ուր Տէրոջ խօսքը հռչակեցինք, ու տեսնենք թէ ի՛նչպէս են:
೩೬ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
37 Բառնաբաս կ՚ուզէր առնել Յովհաննէսն ալ, որ Մարկոս կը կոչուէր.
೩೭ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
38 բայց Պօղոս մտածեց թէ լաւ չէ իրենց հետ առնել Պամփիւլիայի մէջ իրենցմէ հեռացողը եւ իրենց հետ գործի չգացողը:
೩೮ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
39 Այսպէս՝ տարակարծութիւն եղաւ անոնց միջեւ, այն աստիճան՝ որ զատուեցան իրարմէ: Բառնաբաս առաւ Մարկոսը եւ նաւարկեց դէպի Կիպրոս:
೩೯ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
40 Պօղոս ալ ընտրեց Շիղան ու մեկնեցաւ, եղբայրներէն յանձնարարուած ըլլալով Աստուծոյ շնորհքին,
೪೦ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
41 եւ կը շրջէր Սուրիայի ու Կիլիկիայի մէջ՝ ամրացնելով եկեղեցիները:
೪೧ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

< ԳՈՐԾՔ ԱՌԱՔԵԼՈՑ 15 >