< ԳՈՐԾՔ ԱՌԱՔԵԼՈՑ 2 >

1 Երբ Պենտեկոստէի տօնը հասաւ, բոլորն ալ միաբան՝ մէկ տեղ էին:
ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
2 Յանկարծ շառաչ մը եղաւ երկինքէն՝ սաստկաշունչ հովի մը ձայնին պէս, ու լեցուց ամբողջ տունը՝ ուր նստած էին:
ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 Եւ բաժնուած լեզուներ երեւցան իրենց՝ որպէս թէ կրակէ, ու հանգչեցան անոնցմէ իւրաքանչիւրին վրայ:
ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.
4 Բոլորն ալ լեցուեցան Սուրբ Հոգիով եւ սկսան խօսիլ ուրիշ լեզուներով, ինչպէս Հոգին իրենց խօսիլ կու տար:
ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.
5 Երուսաղէմ բնակող Հրեաներ կային, բարեպաշտ մարդիկ՝ երկինքի տակ եղած ամէն ազգէ:
ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
6 Երբ այս ձայնը եղաւ, բազմութիւնը համախմբուեցաւ ու շփոթեցաւ, որովհետեւ կը լսէին թէ անոնք կը խօսէին իրենցմէ իւրաքանչիւրին սեփական բարբառով:
ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.
7 Բոլորն ալ զմայլած էին եւ կը զարմանային՝ իրարու ըսելով. «Ահա՛ ասոնք բոլորն ալ՝ որ կը խօսին, միթէ Գալիլեացի չե՞ն:
ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?
8 Ուրեմն ի՞նչպէս կը լսենք՝ մեր իւրաքանչիւրին սեփական բարբառով, այն երկրին՝ որուն մէջ ծնած ենք.
ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?
9 Պարթեւներ, Մարեր ու Եղամացիներ, եւ անոնք որ կը բնակին Միջագետքի, Հրէաստանի, Կապադովկիայի, Պոնտոսի, Ասիայի,
ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,
10 Փռիւգիայի, Պամփիւլիայի ու Եգիպտոսի մէջ, եւ Կիւրենէի մօտ՝ Լիպիայի կողմերը, նաեւ Հռոմէն գաղթած Հրեաներ ու նորահաւատներ,
ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.
11 Կրետացիներ եւ Արաբներ, կը լսենք թէ անոնք կը խօսին Աստուծոյ մեծամեծ գործերուն մասին՝ մե՛ր լեզուներով»:
ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.
12 Բոլորն ալ զմայլած էին, ու տարակուսած՝ կ՚ըսէին իրարու. «Ի՞նչ կրնայ ըլլալ ասիկա»:
ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.
13 Ոմանք ալ ծաղրելով կ՚ըսէին. «Անոնք լի են անոյշ գինիով»:
ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.
14 Բայց Պետրոս կանգնեցաւ տասնմէկին հետ, բարձրացուց ձայնը եւ ըսաւ անոնց. «Ո՛վ Հրէաստանցիներ, ու դուք բոլորդ՝ որ կը բնակիք Երուսաղէմ, սա՛ գիտցէ՛ք եւ մտի՛կ ըրէք իմ խօսքերս.
ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.
15 որովհետեւ ասոնք ո՛չ թէ արբեցած են՝ ինչպէս դուք կ՚ենթադրէք, քանի դեռ օրուան երրորդ ժամն՝՝ է,
ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!
16 հապա ասիկա ա՛յն է՝ որ ըսուեցաւ Յովէլ մարգարէին միջոցով.
ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:
17 “Վերջին օրերը, - կ՚ըսէ Աստուած, - իմ Հոգիէս պիտի թափեմ ամէն մարմինի վրայ, եւ ձեր որդիներն ու աղջիկները պիտի մարգարէանան, ձեր երիտասարդները տեսիլքներ պիտի տեսնեն, ու ձեր ծերերը երազներ պիտի տեսնեն:
“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
18 Իմ ծառաներուս եւ աղախիններուս վրայ ալ այդ օրերը իմ Հոգիէս պիտի թափեմ, ու պիտի մարգարէանան:
ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.
19 Վերը՝ երկինքը՝ սքանչելիքներ ցոյց պիտի տամ, եւ վարը՝ երկիրը՝ նշաններ, արիւն, կրակ ու ծուխի մառախուղ.
ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.
20 արեւը պիտի փոխուի խաւարի, եւ լուսինը՝ արիւնի, դեռ Տէրոջ մեծ ու երեւելի օրը չեկած:
ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
21 Եւ ո՛վ որ կանչէ Տէրոջ անունը՝ պիտի փրկուի”:
ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’
22 Իսրայելացի՛ մարդիկ, լսեցէ՛ք սա՛ խօսքերը. Յիսուս Նազովրեցին, Աստուծմէ ձեզի ցոյց տրուած մարդ մը՝ հրաշքներով, սքանչելիքներով ու նշաններով - որ Աստուած անոր միջոցով ըրաւ ձեր մէջ, ինչպէս դուք ալ գիտէք -,
“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
23 Աստուծոյ որոշած ծրագիրով եւ կանխագիտութեամբ մատնուած ըլլալով՝ առիք եւ սպաննեցիք անօրէններու ձեռքով՝ փայտի վրայ գամելով:
ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.
24 Բայց Աստուած յարուցանեց զայն՝ քակելով մահուան ցաւերը, քանի որ կարելի չէր որ ան բռնուէր անկէ:
ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
25 Որովհետեւ Դաւիթ կ՚ըսէ անոր մասին. “Ամէն ատեն կը տեսնեմ Տէրը իմ առջեւս, քանի որ իմ աջ կողմս է՝ որպէսզի չսասանիմ:
ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.
26 Ուստի իմ սիրտս ուրախացաւ եւ իմ լեզուս ցնծաց. նաեւ իմ մարմինս ալ պիտի հանգստանայ յոյսով.
ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.
27 որովհետեւ իմ անձս պիտի չթողուս դժոխքին մէջ, ու պիտի չթոյլատրես որ քու Սուրբդ ապականութիւն տեսնէ: (Hadēs g86)
ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. (Hadēs g86)
28 Կեանքի ճամբաները գիտցուցիր ինծի. քու երեսիդ ուրախութեամբ պիտի լեցնես զիս”:
ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’
29 Մարդի՛կ եղբայրներ, արտօնուած է ինծի համարձակութեամբ խօսիլ ձեզի Դաւիթ նահապետին մասին, որ վախճանեցաւ ու թաղուեցաւ, եւ անոր գերեզմանը մինչեւ այսօր մեր մէջ է:
“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.
30 Ուրեմն, որովհետեւ ան մարգարէ էր, - եւ գիտէր թէ Աստուած երդումով իրեն խոստացաւ, թէ պիտի յարուցանէ մարմինի համեմատ իր մէջքին պտուղէն եղող Քրիստոսը՝ որ բազմի իր գահին վրայ, -
ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.
31 ինք կանխատեսութեամբ խօսեցաւ Քրիստոսի յարութեան մասին, թէ անոր անձը դժոխքը չմնաց եւ անոր մարմինը ապականութիւն չտեսաւ: (Hadēs g86)
ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ (Hadēs g86)
32 Աստուած այս Յիսուսը յարուցանեց, որուն մենք բոլորս ալ վկայ ենք:
ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.
33 Ուստի Աստուծոյ աջ ձեռքով բարձրանալով ու Հօրմէն ստանալով Սուրբ Հոգիին խոստումը՝ թափեց ասիկա, որ դուք հիմա կը տեսնէք ու կը լսէք:
ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.
34 Որովհետեւ Դաւիթ երկինք չելաւ, բայց ինք կ՚ըսէ. “Տէրը ըսաւ իմ Տէրոջս. «Բազմէ՛ իմ աջ կողմս,
ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು
35 մինչեւ որ քու թշնամիներդ պատուանդան դնեմ ոտքերուդ»”:
ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.”’
36 Ուրեմն Իսրայէլի ամբողջ տունը ստուգապէս թող գիտնայ թէ Աստուած զայն Տէ՛ր ալ ըրաւ, Օծեա՛լ ալ, այդ Յիսուսը՝ որ դուք խաչեցիք»:
“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.
37 Երբ լսեցին ասիկա, զղջացին իրենց սիրտին մէջ եւ ըսին Պետրոսի ու միւս առաքեալներուն. «Մարդի՛կ եղբայրներ, ի՞նչ ընենք»:
ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.
38 Պետրոս ըսաւ անոնց. «Ապաշխարեցէ՛ք, ու ձեզմէ իւրաքանչիւրը թող մկրտուի Յիսուս Քրիստոսի անունով՝ մեղքերու ներումին համար, եւ պիտի ստանաք Սուրբ Հոգիին պարգեւը:
ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
39 Որովհետեւ խոստումը ձեզի համար է, նաեւ ձեր զաւակներուն, ու բոլոր հեռու եղողներուն, որ Տէրը՝ մեր Աստուածը պիտի կանչէ»:
ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.
40 Եւ ուրիշ շատ խօսքերով կը վկայէր, կը յորդորէր զանոնք ու կ՚ըսէր. «Ազատեցէ՛ք դուք ձեզ այս կամակոր սերունդէն»:
ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.
41 Ուստի անոնք՝ որ սիրայօժար ընդունեցին անոր խօսքերը՝ մկրտուեցան. եւ այդ օրը երեք հազար անձի չափ աւելցան եկեղեցիին թիւին վրայ:
ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
42 Անոնք միշտ կը յարատեւէին առաքեալներուն ուսուցումին ու հաղորդութեան, հաց կտրելու եւ աղօթելու մէջ:
ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
43 Վախը համակեց ամէն անձ՝՝, եւ շատ սքանչելիքներ ու նշաններ կատարուեցան առաքեալներուն միջոցով:
ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.
44 Բոլոր հաւատացեալները միասին էին, եւ բոլոր բաները հասարակաց էին:
ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
45 Կը ծախէին իրենց ստացուածքներն ու ինչքերը, եւ անոնց գինը կը բաժնէին բոլորին, որո՛ւ որ պէտք ըլլար:
ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.
46 Ամէն օր կը յարատեւէին միաբանութեամբ տաճարը երթալու մէջ, եւ հաց կտրելով իրենց տուներուն մէջ՝ իրենց կերակուրը կ՚ուտէին ցնծութեամբ ու պարզամտութեամբ:
ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.
47 Աստուած կը գովաբանէին եւ շնորհք կը գտնէին ամբողջ ժողովուրդին առջեւ. ու Տէրը օրէ օր փրկուածներ կ՚աւելցնէր եկեղեցիին թիւին վրայ:
ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.

< ԳՈՐԾՔ ԱՌԱՔԵԼՈՑ 2 >