< ԳՈՐԾՔ ԱՌԱՔԵԼՈՑ 20 >

1 Աղմուկին դադրելէն ետք՝ Պօղոս իրեն կանչեց աշակերտները, ու բարեւելով զանոնք՝ մեկնեցաւ որ Մակեդոնիա երթայ:
ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.
2 Այդ վայրերը շրջելէ եւ շատ խօսքերով զանոնք յորդորելէ ետք՝ Յունաստան գնաց,
ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.
3 ու երեք ամիս հոն կեցաւ: Երբ պիտի նաւարկէր դէպի Սուրիա՝ Հրեաները դաւադրեցին իրեն դէմ. ուստի որոշեց վերադառնալ՝ Մակեդոնիայէն անցնելով:
ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.
4 Բերիացի (Պիռոսի որդին) Սոպատրոս՝ մինչեւ Ասիա իրեն հետ գնաց, նաեւ Թեսաղոնիկեցիներէն՝ Արիստարքոս ու Սեկունդոս, Գայիոս Դերբացին, Տիմոթէոս, իսկ Ասիայէն՝ Տիւքիկոս եւ Տրոփիմոս:
ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.
5 Ասոնք նախապէս գացին ու Տրովադայի մէջ սպասեցին մեզի:
ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.
6 Մենք ալ՝ Բաղարջակերքի օրերէն ետք՝ Փիլիպպէէն նաւարկեցինք, հինգ օրուան մէջ հասանք Տրովադա՝ անոնց քով, ու հոն կեցանք եօթը օր:
ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.
7 Մէկշաբթի օրը, երբ հաւաքուած էինք՝՝ հաց կտրելու, Պօղոս կը քարոզէր անոնց, որովհետեւ հետեւեալ օրը պիտի մեկնէր. ու խօսքը երկարեց մինչեւ կէս գիշեր:
ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.
8 Շատ լապտերներ կային այն վերնատունը՝ ուր մենք հաւաքուած էինք:
ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.
9 Երիտասարդ մը՝ Եւտիքոս անունով, որ պատուհանին մէջ նստած էր, մտաւ խորունկ քունի մէջ: Երբ Պօղոս երկարեց քարոզը, ան՝ տարուած քունէն՝ ինկաւ երրորդ յարկէն վար, ու մեռած վերցուցին զայն:
ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.
10 Պօղոս վար իջաւ, ինկաւ անոր վրայ, գրկեց զայն եւ ըսաւ. «Մի՛ վրդովիք, որովհետեւ անոր հոգին իր մէջն է»:
ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.
11 Ուստի՝ երբ վեր ելաւ՝ կտրեց հացը, ճաշակեց, ու երկար խօսեցաւ՝ մինչեւ առտու. յետոյ մեկնեցաւ:
ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.
12 Իսկ այդ պատանին ողջ բերին, եւ չափազանց մխիթարուեցան:
ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.
13 Իսկ մենք՝ նախապէս նաւ մտնելով՝ մեկնեցանք դէպի Ասոս, ուրկէ պիտի առնէինք Պօղոսը, որովհետեւ ա՛յդպէս պատուիրած էր. քանի որ ինք պիտի երթար ցամաքով:
ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.
14 Երբ Ասոսի մէջ միացաւ մեզի, առինք զինք եւ գացինք Միտիլինէ:
ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು.
15 Անկէ ալ նաւարկելով՝ հետեւեալ օրը հասանք Քիոսի դիմաց. միւս օրը հասանք Սամոս, ու գիշերը մնալով Տրոգիլիոն՝ յաջորդ օրը գացինք Միլետոս:
ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು.
16 Արդարեւ Պօղոս որոշած էր նաւարկել Եփեսոսի քովէն, որովհետեւ չէր ուզեր ժամանակ անցընել Ասիայի մէջ, քանի որ կ՚աճապարէր Երուսաղէմ ըլլալ Պենտեկոստէի օրը՝ եթէ կարելի ըլլար իրեն:
ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.
17 Ուստի Միլետոսէն մարդ ղրկեց Եփեսոս, ու կանչեց եկեղեցիին երէցները:
ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.
18 Երբ եկան իր քով, ըսաւ անոնց. «Դուք գիտէ՛ք թէ ի՛նչպէս վարուեցայ ձեզի հետ ամբողջ ժամանակը, առաջին օրէն ի վեր երբ Ասիա եկայ,
ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.
19 ծառայելով Տէրոջ լման խոնարհութեամբ, եւ շատ արցունքով ու փորձութիւններով՝ որոնք պատահեցան ինծի Հրեաներուն դաւադրութիւններով.
ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.
20 ի՛նչպէս չընկրկեցայ օգտակար բաներէն որեւէ մէկը հաղորդելէ եւ սորվեցնելէ ձեզի՝ հրապարակաւ ու տուներու մէջ,
ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.
21 վկայելով թէ՛ Հրեաներուն եւ թէ Յոյներուն՝ դէպի Աստուած ապաշխարութեան ու մեր Տէրոջ՝ Յիսուս Քրիստոսի հանդէպ հաւատքին մասին:
ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.
22 Եւ հիմա ահա՛ կ՚երթամ Երուսաղէմ՝ հոգիով կապուած, ու չեմ գիտեր թէ հոն ի՛նչ պիտի պատահի ինծի.
“ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.
23 սակայն Սուրբ Հոգին կը վկայէ ամէն քաղաքի մէջ, եւ կ՚ըսէ թէ կապեր ու տառապանքներ կը սպասեն ինծի:
ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.
24 Բայց ես ո՛չ մէկ բան կը հաշուեմ, ո՛չ ալ ինծի համար պատուական կը նկատեմ՝՝ իմ անձս, որպէսզի ուրախութեամբ աւարտեմ ընթացքս, նաեւ այն սպասարկութիւնը որ ստացայ Տէր Յիսուսէն՝ վկայ ըլլալու Աստուծոյ շնորհքի աւետարանին:
ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.
25 Ու հիմա ահա՛ ես գիտեմ թէ դուք բոլորդ՝ որոնց մէջ շրջեցայ Աստուծոյ թագաւորութիւնը քարոզելով, ա՛լ իմ երեսս պիտի չտեսնէք:
“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.
26 Ուստի այսօր կը վկայեմ ձեզի թէ ես անպարտ եմ բոլորին արիւնէն.
ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.
27 որովհետեւ չընկրկեցայ Աստուծոյ ամբողջ ծրագիրը հաղորդելէ ձեզի:
ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.
28 Ուրեմն ուշադի՛ր եղէք դուք ձեզի եւ ամբողջ հօտին, որուն վրայ Սուրբ Հոգին տեսուչ դրաւ ձեզ՝ հովուելու Աստուծոյ եկեղեցին, որ ստացաւ իր արիւնով:
ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.
29 Քանի որ գիտեմ թէ իմ մեկնումէս ետք՝ ձեր մէջ պիտի մտնեն յափշտակող գայլեր, որոնք պիտի չխնայեն հօտին:
ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.
30 Ու ձեզմէ ալ պիտի ելլեն այնպիսի՛ մարդիկ, որոնք պիտի խօսին խոտոր բաներ՝ քաշելու համար աշակերտները իրենց ետեւէն:
ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.
31 Ուստի արթո՛ւն կեցէք, եւ յիշեցէ՛ք թէ երեք տարի, գիշեր ու ցերեկ, չդադրեցայ ձեզմէ իւրաքանչիւրը արցունքով խրատելէ:
ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.
32 Եւ հիմա, եղբայրնե՛ր, կը յանձնեմ ձեզ Աստուծոյ ու անոր շնորհքի խօսքին, որ կարող է շինել եւ ձեզի ժառանգութիւն տալ՝ բոլոր սրբացածներուն հետ:
“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.
33 Ո՛չ մէկուն արծաթին, կամ ոսկիին, կամ պատմուճանին ցանկացի:
ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.
34 Դուք ձեզմէ գիտէք թէ այս ձեռքե՛րս հոգացին իմ ու ինծի հետ եղողներուն կարիքները:
ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.
35 Ամէն բան ցոյց տուի ձեզի, թէ ա՛յսպէս պէտք է աշխատիլ եւ օգնել տկարներուն, ու յիշել Տէր Յիսուսի խօսքը՝ որ ի՛նք ըսաւ. “Աւելի՛ երանելի է տա՛լը՝ քան ստանալը”»:
ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.
36 Երբ այսպէս խօսեցաւ, ծնրադրեց եւ բոլորին հետ աղօթեց:
ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.
37 Բոլորն ալ շատ լացին, ու Պօղոսի վիզին վրայ իյնալով՝ համբուրեցին զայն:
ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.
38 Կը մորմոքէին մա՛նաւանդ այն խօսքին համար, որ ըսաւ թէ ա՛լ պիտի չտեսնէին իր երեսը: Եւ ուղեկցեցան անոր մինչեւ նաւը:
“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.

< ԳՈՐԾՔ ԱՌԱՔԵԼՈՑ 20 >