< ԳՈՐԾՔ ԱՌԱՔԵԼՈՑ 7 >

1 Քահանայապետը ըսաւ. «Այդ բաները ա՞յդպէս են ի՛րապէս»:
ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.
2 Ան ալ ըսաւ. «Մարդի՛կ եղբայրներ ու հայրե՛ր, մտի՛կ ըրէք. փառքի Աստուածը երեւցաւ մեր հօր՝ Աբրահամի, երբ Միջագետքի մէջ էր, դեռ Խառանի մէջ չբնակած, եւ ըսաւ անոր.
ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
3 “Ելի՛ր քու երկրէդ ու ազգականներէդ, եւ գնա՛ այն երկիրը՝ որ ես պիտի ցուցնեմ քեզի”:
‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
4 Այն ատեն՝ ելլելով Քաղդէացիներու երկրէն՝ բնակեցաւ Խառանի մէջ, եւ անոր հօր մեռնելէն ետք՝ անկէ փոխադրեց զայն այս երկիրը, ուր դուք կը բնակիք հիմա:
“ಆಗ ಅವನು ಕಲ್ದೀಯರ ದೇಶದಿಂದ ಹೊರಟುಹೋಗಿ, ಖಾರಾನಿನಲ್ಲಿ ವಾಸವಾಗಿದ್ದನು. ಅವನ ತಂದೆ ಸತ್ತಮೇಲೆ, ದೇವರು ಅವನನ್ನು ಅಲ್ಲಿಂದ ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬರಮಾಡಿದನು.
5 Ո՛չ մէկ ժառանգութիւն տուաւ անոր այս երկրին մէջ, ո՛չ իսկ ոտքի քայլի մը չափ տեղ. բայց խոստացաւ ասիկա իբր կալուած տալ իրեն, եւ իրմէ ետք՝ իր զարմին, երբ դեռ ինք զաւակ չունէր:
ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.
6 Աստուած սա՛պէս խօսեցաւ. “Անոր զարմը պանդուխտ պիտի ըլլայ օտար երկրի մը մէջ, ու զայն ստրուկ պիտի ընեն եւ չարչարեն չորս հարիւր տարի:
ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’
7 Բայց ե՛ս պիտի դատեմ այն ազգը՝ որուն ստրուկ պիտի ըլլան, - ըսաւ Աստուած, - եւ անկէ ետք պիտի ելլեն ու այս տեղին մէջ պիտի պաշտեն զիս”:
ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.
8 Անոր տուաւ թլփատութեան ուխտը, եւ յետոյ Աբրահամ ծնաւ Իսահակը, ու թլփատեց զայն ութերորդ օրը: Իսահակ ծնաւ Յակոբը, Յակոբ ալ՝ տասներկու նահապետները:
ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.
9 «Նահապետները՝ նախանձելով Յովսէփի՝ ծախեցին զայն Եգիպտոս տարուելու համար. բայց Աստուած անոր հետ էր,
“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,
10 ու ազատեց զայն իր բոլոր տառապանքներէն: Շնորհք եւ իմաստութիւն տուաւ անոր Եգիպտոսի Փարաւոն թագաւորին առջեւ. ան ալ կառավարիչ նշանակեց զայն Եգիպտոսի ու իր ամբողջ տան վրայ:
೧೦ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.
11 Երբ Եգիպտոսի եւ Քանանի ամբողջ երկրին մէջ սով եղաւ, ու մեծ տառապանք, մեր հայրերը ուտելիք չէին գտներ:
೧೧“ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.
12 Յակոբ՝ երբ լսեց թէ Եգիպտոսի մէջ ցորեն կը գտնուի՝ առաջին անգամ ճամբեց մեր հայրերը:
೧೨ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.
13 Երկրորդ անգամ՝ Յովսէփ ճանչցուց ինքզինք իր եղբայրներուն, եւ Յովսէփի ցեղը յայտնի եղաւ Փարաւոնի:
೧೩ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.
14 Յովսէփ մարդ ղրկեց ու կանչեց իր հայրը՝ Յակոբը, եւ բոլոր ազգականները՝ եօթանասունհինգ անձ:
೧೪ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.
15 Յակոբ իջաւ Եգիպտոս, ուր վախճանեցան ինք ու մեր հայրերը,
೧೫ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.
16 եւ փոխադրուելով Սիւքէմ՝ դրուեցան այն գերեզմանին մէջ, որ Աբրահամ արծաթով գնած էր Սիւքէմի հօր՝ Եմովրի որդիներէն:
೧೬ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
17 Երբ մօտեցաւ ժամանակը խոստումին՝ որուն համար Աստուած երդում ըրած էր Աբրահամի, ժողովուրդը աճեցաւ ու բազմացաւ Եգիպտոսի մէջ՝
೧೭“ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.
18 մինչեւ որ ուրիշ թագաւոր մը ելաւ, որ չէր ճանչնար Յովսէփը:
೧೮ಕಡೆಗೆ ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳ್ವಿಕೆಗೆ ಬಂದನು.
19 Ան խորամանկութեամբ վարուեցաւ մեր ցեղին դէմ եւ չարչարեց մեր հայրերը, մինչեւ անգամ անոնց երախաները դուրս նետել տալով, որպէսզի չապրեցնէ:
೧೯ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.
20 «Այդ ատեն Մովսէս ալ ծնաւ, որ գեղեցիկ էր Աստուծոյ առջեւ, ու երեք ամիս մեծցաւ իր հօր տունը:
೨೦ಆ ಸಮಯದಲ್ಲೇ ಮೋಶೆಯು ಹುಟ್ಟಿದನು. ಅವನು ದಿವ್ಯಸುಂದರನಾಗಿದ್ದನು ಮತ್ತು ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
21 Երբ ան դուրս դրուեցաւ, Փարաւոնի աղջիկը տարաւ զայն եւ մեծցուց իբր իր որդին:
೨೧ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
22 Մովսէս կրթուեցաւ Եգիպտացիներուն ամբողջ իմաստութեամբ, ու զօրաւոր էր իր խօսքերով եւ գործերով:
೨೨ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು.
23 Երբ լման քառասուն տարեկան եղաւ, իր սիրտը փափաքեցաւ այցելել իր եղբայրներուն՝ Իսրայէլի որդիներուն:
೨೩“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
24 Անիրաւուած տեսնելով Իսրայելացիներէն մէկը՝ պաշտպանեց զայն, եւ ընկճուածին վրէժը առաւ՝ զարնելով Եգիպտացին:
೨೪ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
25 Կը կարծէր թէ իր եղբայրները պիտի հասկնային թէ Աստուած իրենց փրկութիւն պիտի տար իր ձեռքով. բայց անոնք չհասկցան:
೨೫ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.
26 Հետեւեալ օրը հանդիպեցաւ անոնց՝ երբ կը կռուէին, եւ ուզեց հաշտեցնել զանոնք՝ ըսելով. “Մարդի՛կ, դուք եղբայրնե՛ր էք. ինչո՞ւ կ՚անիրաւէք զիրար”:
೨೬ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
27 Բայց ան որ կ՚անիրաւէր ընկերը՝ վանեց զինք ու ըսաւ. “Ո՞վ քեզ պետ եւ իրաւարար նշանակեց մեր վրայ:
೨೭“ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?
28 Զի՞ս ալ կ՚ուզես սպաննել, ինչպէս երէկ սպաննեցիր Եգիպտացին”:
೨೮ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
29 Այս խօսքէն ետք Մովսէս փախաւ ու պանդխտացաւ Մադիամի երկրին մէջ, ուր ծնաւ երկու որդի:
೨೯ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‍ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು.
30 Երբ քառասուն տարին լրացաւ, Տէրոջ հրեշտակը երեւցաւ անոր Սինա լերան անապատին մէջ՝ մորենիի կրակի բոցով:
೩೦“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.
31 Մովսէս ալ՝ երբ նշմարեց՝ զարմացաւ այդ տեսիլքին վրայ, ու երբ մօտեցաւ դիտելու՝ Տէրոջ ձայնը եկաւ անոր, որ կ՚ըսէր.
೩೧ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,
32 “Ե՛ս եմ քու հայրերուդ Աստուածը, Աբրահամի Աստուածը, Իսահակի Աստուածը եւ Յակոբի Աստուածը”: Մովսէս ալ՝ վախէն դողալով՝ չէր յանդգներ դիտել:
೩೨‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.
33 Տէրը ըսաւ անոր. “Հանէ՛ ոտքերուդ կօշիկները, որովհետեւ սուրբ երկիր է այն տեղը՝ ուր կայնած ես:
೩೩ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
34 Ի՛րապէս տեսայ Եգիպտոսի մէջ եղող ժողովուրդիս չարչարանքը, լսեցի անոնց հառաչանքը, եւ իջայ զանոնք ազատելու. ու հիմա եկո՛ւր, քեզ ղրկեմ Եգիպտոս”:
೩೪ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.
35 «Այս Մովսէսը, որ ուրացան՝ ըսելով. “Ո՞վ պետ եւ իրաւարար նշանակեց քեզ”, զա՛յն ղրկեց Աստուած իբր պետ եւ ազատարար՝ այն հրեշտակին ձեռքով, որ երեւցաւ անոր մորենիին մէջ:
೩೫“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.
36 Անիկա՛ դուրս հանեց զանոնք, սքանչելիքներ ու նշաններ ցոյց տալով Եգիպտոսի երկրին եւ Կարմիր ծովուն, ու քառասուն տարի՝ անապատին մէջ:
೩೬ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.
37 Այս Մովսէսն է որ ըսաւ Իսրայէլի որդիներուն. “Տէրը՝ ձեր Աստուածը՝ ձեր եղբայրներէն պիտի հանէ ձեզի մարգարէ մը՝ ինծի նման. մտի՛կ ըրէք անոր”:
೩೭“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.
38 Ասիկա ա՛ն է որ համախմբումին մէջ էր՝ անապատը, Սինա լերան վրայ իրեն խօսող հրեշտակին եւ մեր հայրերուն հետ: Ան կենարար պատգամներ ընդունեց՝ մեզի տալու.
೩೮ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
39 բայց մեր հայրերը չուզեցին անոր հնազանդիլ, հապա զայն վանեցին իրենցմէ ու Եգիպտոս դարձան իրենց սիրտին մէջ՝
೩೯“ಆದರೆ ನಮ್ಮ ಪೂರ್ವಿಕರು ಅವನ ಮಾತುಗಳನ್ನು ಕೇಳುವುದಕ್ಕೆ ಮನಸ್ಸಿಲ್ಲದೆ ಅವನನ್ನು ತಳ್ಳಿಬಿಟ್ಟು, ಪುನಃ ಐಗುಪ್ತದೇಶದ ಕಡೆಗೆ ಮನಸ್ಸಿಟ್ಟರು.
40 ըսելով Ահարոնի. “Աստուածնե՛ր շինէ մեզի, որպէսզի երթան մեր առջեւէն. որովհետեւ այդ Մովսէսը՝ որ հանեց մեզ Եգիպտոսի երկրէն, չենք գիտեր թէ ի՛նչ եղաւ անոր”:
೪೦“ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.
41 Այն օրերը շինեցին հորթ մը, զոհ մատուցանեցին կուռքին, եւ կ՚ուրախանային իրենց ձեռքերուն գործերով:
೪೧ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.
42 Աստուած ալ երես դարձուց ու մատնեց զանոնք պաշտելու երկինքի աստղերը, ինչպէս գրուած է Մարգարէներու գիրքին մէջ. “Միթէ ինծի՞ մատուցանեցիք մորթուած անասուններ եւ զոհեր՝ քառասուն տարի անապատին մէջ, ո՛վ Իսրայէլի տունը:
೪೨ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;
43 Հապա կրեցիք Մողոքի վրանը ու ձեր Հռեմփա աստուծոյն աստղը, ձեր կերտած պատկերները՝ անոնց երկրպագելու համար: Ես ալ պիտի տարագրեմ ձեզ Բաբելոնի միւս կողմը”:
೪೩ಅದಕ್ಕೆ ಬದಲಾಗಿ ನೀವು ಆರಾಧಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನೂ ರೆಫಾನ್ ದೇವತೆಯ ನಕ್ಷತ್ರರೂಪವನ್ನೂ ಹೊತ್ತುಕೊಂಡು ಹೋಗುತ್ತಿದ್ದಿರಲ್ಲಾ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಗಡಿಪಾರು ಮಾಡುವೆನು’ ಎಂಬುದೇ ಆಗಿದೆ.
44 «Անապատին մէջ՝ մեր հայրերը ունէին վկայութեան խորանը, ինչպէս Մովսէսի հետ խօսողը պատուիրած էր որ շինէ զայն՝ տեսած տիպարին պէս:
೪೪“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.
45 Անոնց յաջորդող մեր հայրերն ալ՝ զայն ստանալով՝ Յեսուի հետ մտցուցին կալուածը այն հեթանոսներուն, որ Աստուած վանեց մեր հայրերուն առջեւէն: Հոն մնաց մինչեւ Դաւիթի օրերը,
೪೫ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.
46 որ Աստուծոյ առջեւ շնորհք գտաւ եւ ուզեց բնակարան մը կառուցանել Յակոբի Աստուծոյն.
೪೬ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
47 բայց Սողոմո՛ն տուն մը կառուցանեց անոր:
೪೭ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
48 Սակայն Ամենաբարձրը չի բնակիր ձեռակերտ տաճարներու մէջ, ինչպէս մարգարէն կ՚ըսէ.
೪೮ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
49 “Երկինքը իմ գահս է, ու երկիրը իմ ոտքերուս պատուանդանն է. ինչպիսի՞ տուն պիտի կառուցանէք ինծի, - կ՚ըսէ Տէրը, - կամ ի՞նչպէս պիտի ըլլայ իմ հանգստավայրիս տեղը.
೪೯“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
50 միթէ իմ ձեռքս չէ՞ շիներ այս բոլորը”:
೫೦ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ.
51 «Խստապարանոցնե՛ր ու սիրտով եւ ականջով անթլփատնե՛ր, դուք միշտ կ՚ընդդիմանաք Սուրբ Հոգիին, ինչպէս ձեր հայրերը՝ այնպէս ալ դուք:
೫೧“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
52 Մարգարէներէն ո՞րը չհալածեցին ձեր հայրերը, ու չսպաննեցին անոնք՝ որ նախապէս ծանուցանեցին այն Արդարին գալուստը: Անոր մատնիչները եւ սպաննողները եղաք հիմա,
೫೨ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
53 դո՛ւք՝ որ ստացաք Օրէնքը հրեշտակներու կարգադրութեամբ, բայց չպահեցիք զայն»:
೫೩ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ” ಎಂದು ಹೇಳಿದನು.
54 Այս բաները լսելով՝ անոնք կը մոլեգնէին իրենց սիրտերուն մէջ եւ կը կրճտէին իրենց ակռաները անոր դէմ:
೫೪ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.
55 Բայց ան՝ լեցուած Սուրբ Հոգիով՝ ակնապիշ նայեցաւ դէպի երկինք, տեսաւ Աստուծոյ փառքը ու Յիսուսն ալ՝ որ Աստուծոյ աջ կողմը կայնած էր, եւ ըսաւ.
೫೫ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;
56 «Ահա՛ կը տեսնեմ երկինքը բացուած, ու մարդու Որդին՝ Աստուծոյ աջ կողմը կայնած»:
೫೬“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.
57 Իսկ անոնք բարձրաձայն աղաղակելով՝ գոցեցին իրենց ականջները, եւ բոլորը միաբանութեամբ խուժեցին անոր վրայ,
೫೭ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,
58 ու քաղաքէն դուրս հանելով՝ քարկոծեցին զայն. եւ վկաները իրենց հանդերձները պահ դրին երիտասարդի մը ոտքերուն քով, որ կը կոչուէր Սօղոս:
೫೮ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
59 Ու կը քարկոծէին Ստեփանոսը, որ կը գոչէր. «Տէ՛ր Յիսուս, ընդունէ՛ իմ հոգիս»:
೫೯ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,
60 Եւ ծնրադրելով՝ բարձրաձայն աղաղակեց. «Տէ՛ր, այս մեղքը մի՛ սեպեր ատոնց»: Ասիկա ըսելով՝ ննջեց:
೬೦ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

< ԳՈՐԾՔ ԱՌԱՔԵԼՈՑ 7 >