< ԳՈՐԾՔ ԱՌԱՔԵԼՈՑ 7 >

1 Քահանայապետը ըսաւ. «Այդ բաները ա՞յդպէս են ի՛րապէս»:
ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.
2 Ան ալ ըսաւ. «Մարդի՛կ եղբայրներ ու հայրե՛ր, մտի՛կ ըրէք. փառքի Աստուածը երեւցաւ մեր հօր՝ Աբրահամի, երբ Միջագետքի մէջ էր, դեռ Խառանի մէջ չբնակած, եւ ըսաւ անոր.
ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,
3 “Ելի՛ր քու երկրէդ ու ազգականներէդ, եւ գնա՛ այն երկիրը՝ որ ես պիտի ցուցնեմ քեզի”:
‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.
4 Այն ատեն՝ ելլելով Քաղդէացիներու երկրէն՝ բնակեցաւ Խառանի մէջ, եւ անոր հօր մեռնելէն ետք՝ անկէ փոխադրեց զայն այս երկիրը, ուր դուք կը բնակիք հիմա:
“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.
5 Ո՛չ մէկ ժառանգութիւն տուաւ անոր այս երկրին մէջ, ո՛չ իսկ ոտքի քայլի մը չափ տեղ. բայց խոստացաւ ասիկա իբր կալուած տալ իրեն, եւ իրմէ ետք՝ իր զարմին, երբ դեռ ինք զաւակ չունէր:
ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.
6 Աստուած սա՛պէս խօսեցաւ. “Անոր զարմը պանդուխտ պիտի ըլլայ օտար երկրի մը մէջ, ու զայն ստրուկ պիտի ընեն եւ չարչարեն չորս հարիւր տարի:
ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು.
7 Բայց ե՛ս պիտի դատեմ այն ազգը՝ որուն ստրուկ պիտի ըլլան, - ըսաւ Աստուած, - եւ անկէ ետք պիտի ելլեն ու այս տեղին մէջ պիտի պաշտեն զիս”:
ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.
8 Անոր տուաւ թլփատութեան ուխտը, եւ յետոյ Աբրահամ ծնաւ Իսահակը, ու թլփատեց զայն ութերորդ օրը: Իսահակ ծնաւ Յակոբը, Յակոբ ալ՝ տասներկու նահապետները:
ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.
9 «Նահապետները՝ նախանձելով Յովսէփի՝ ծախեցին զայն Եգիպտոս տարուելու համար. բայց Աստուած անոր հետ էր,
“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,
10 ու ազատեց զայն իր բոլոր տառապանքներէն: Շնորհք եւ իմաստութիւն տուաւ անոր Եգիպտոսի Փարաւոն թագաւորին առջեւ. ան ալ կառավարիչ նշանակեց զայն Եգիպտոսի ու իր ամբողջ տան վրայ:
ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.
11 Երբ Եգիպտոսի եւ Քանանի ամբողջ երկրին մէջ սով եղաւ, ու մեծ տառապանք, մեր հայրերը ուտելիք չէին գտներ:
“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.
12 Յակոբ՝ երբ լսեց թէ Եգիպտոսի մէջ ցորեն կը գտնուի՝ առաջին անգամ ճամբեց մեր հայրերը:
ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
13 Երկրորդ անգամ՝ Յովսէփ ճանչցուց ինքզինք իր եղբայրներուն, եւ Յովսէփի ցեղը յայտնի եղաւ Փարաւոնի:
ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.
14 Յովսէփ մարդ ղրկեց ու կանչեց իր հայրը՝ Յակոբը, եւ բոլոր ազգականները՝ եօթանասունհինգ անձ:
ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.
15 Յակոբ իջաւ Եգիպտոս, ուր վախճանեցան ինք ու մեր հայրերը,
ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.
16 եւ փոխադրուելով Սիւքէմ՝ դրուեցան այն գերեզմանին մէջ, որ Աբրահամ արծաթով գնած էր Սիւքէմի հօր՝ Եմովրի որդիներէն:
ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.
17 Երբ մօտեցաւ ժամանակը խոստումին՝ որուն համար Աստուած երդում ըրած էր Աբրահամի, ժողովուրդը աճեցաւ ու բազմացաւ Եգիպտոսի մէջ՝
“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.
18 մինչեւ որ ուրիշ թագաւոր մը ելաւ, որ չէր ճանչնար Յովսէփը:
ಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’
19 Ան խորամանկութեամբ վարուեցաւ մեր ցեղին դէմ եւ չարչարեց մեր հայրերը, մինչեւ անգամ անոնց երախաները դուրս նետել տալով, որպէսզի չապրեցնէ:
ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.
20 «Այդ ատեն Մովսէս ալ ծնաւ, որ գեղեցիկ էր Աստուծոյ առջեւ, ու երեք ամիս մեծցաւ իր հօր տունը:
“ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.
21 Երբ ան դուրս դրուեցաւ, Փարաւոնի աղջիկը տարաւ զայն եւ մեծցուց իբր իր որդին:
ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು.
22 Մովսէս կրթուեցաւ Եգիպտացիներուն ամբողջ իմաստութեամբ, ու զօրաւոր էր իր խօսքերով եւ գործերով:
ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.
23 Երբ լման քառասուն տարեկան եղաւ, իր սիրտը փափաքեցաւ այցելել իր եղբայրներուն՝ Իսրայէլի որդիներուն:
“ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.
24 Անիրաւուած տեսնելով Իսրայելացիներէն մէկը՝ պաշտպանեց զայն, եւ ընկճուածին վրէժը առաւ՝ զարնելով Եգիպտացին:
ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.
25 Կը կարծէր թէ իր եղբայրները պիտի հասկնային թէ Աստուած իրենց փրկութիւն պիտի տար իր ձեռքով. բայց անոնք չհասկցան:
ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.
26 Հետեւեալ օրը հանդիպեցաւ անոնց՝ երբ կը կռուէին, եւ ուզեց հաշտեցնել զանոնք՝ ըսելով. “Մարդի՛կ, դուք եղբայրնե՛ր էք. ինչո՞ւ կ՚անիրաւէք զիրար”:
ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.
27 Բայց ան որ կ՚անիրաւէր ընկերը՝ վանեց զինք ու ըսաւ. “Ո՞վ քեզ պետ եւ իրաւարար նշանակեց մեր վրայ:
“ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?
28 Զի՞ս ալ կ՚ուզես սպաննել, ինչպէս երէկ սպաննեցիր Եգիպտացին”:
ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.
29 Այս խօսքէն ետք Մովսէս փախաւ ու պանդխտացաւ Մադիամի երկրին մէջ, ուր ծնաւ երկու որդի:
ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು.
30 Երբ քառասուն տարին լրացաւ, Տէրոջ հրեշտակը երեւցաւ անոր Սինա լերան անապատին մէջ՝ մորենիի կրակի բոցով:
“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.
31 Մովսէս ալ՝ երբ նշմարեց՝ զարմացաւ այդ տեսիլքին վրայ, ու երբ մօտեցաւ դիտելու՝ Տէրոջ ձայնը եկաւ անոր, որ կ՚ըսէր.
ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.
32 “Ե՛ս եմ քու հայրերուդ Աստուածը, Աբրահամի Աստուածը, Իսահակի Աստուածը եւ Յակոբի Աստուածը”: Մովսէս ալ՝ վախէն դողալով՝ չէր յանդգներ դիտել:
‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.
33 Տէրը ըսաւ անոր. “Հանէ՛ ոտքերուդ կօշիկները, որովհետեւ սուրբ երկիր է այն տեղը՝ ուր կայնած ես:
“ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ.
34 Ի՛րապէս տեսայ Եգիպտոսի մէջ եղող ժողովուրդիս չարչարանքը, լսեցի անոնց հառաչանքը, եւ իջայ զանոնք ազատելու. ու հիմա եկո՛ւր, քեզ ղրկեմ Եգիպտոս”:
ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.
35 «Այս Մովսէսը, որ ուրացան՝ ըսելով. “Ո՞վ պետ եւ իրաւարար նշանակեց քեզ”, զա՛յն ղրկեց Աստուած իբր պետ եւ ազատարար՝ այն հրեշտակին ձեռքով, որ երեւցաւ անոր մորենիին մէջ:
“‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.
36 Անիկա՛ դուրս հանեց զանոնք, սքանչելիքներ ու նշաններ ցոյց տալով Եգիպտոսի երկրին եւ Կարմիր ծովուն, ու քառասուն տարի՝ անապատին մէջ:
ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.
37 Այս Մովսէսն է որ ըսաւ Իսրայէլի որդիներուն. “Տէրը՝ ձեր Աստուածը՝ ձեր եղբայրներէն պիտի հանէ ձեզի մարգարէ մը՝ ինծի նման. մտի՛կ ըրէք անոր”:
“‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.
38 Ասիկա ա՛ն է որ համախմբումին մէջ էր՝ անապատը, Սինա լերան վրայ իրեն խօսող հրեշտակին եւ մեր հայրերուն հետ: Ան կենարար պատգամներ ընդունեց՝ մեզի տալու.
ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.
39 բայց մեր հայրերը չուզեցին անոր հնազանդիլ, հապա զայն վանեցին իրենցմէ ու Եգիպտոս դարձան իրենց սիրտին մէջ՝
“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.
40 ըսելով Ահարոնի. “Աստուածնե՛ր շինէ մեզի, որպէսզի երթան մեր առջեւէն. որովհետեւ այդ Մովսէսը՝ որ հանեց մեզ Եգիպտոսի երկրէն, չենք գիտեր թէ ի՛նչ եղաւ անոր”:
ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು.
41 Այն օրերը շինեցին հորթ մը, զոհ մատուցանեցին կուռքին, եւ կ՚ուրախանային իրենց ձեռքերուն գործերով:
ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.
42 Աստուած ալ երես դարձուց ու մատնեց զանոնք պաշտելու երկինքի աստղերը, ինչպէս գրուած է Մարգարէներու գիրքին մէջ. “Միթէ ինծի՞ մատուցանեցիք մորթուած անասուններ եւ զոհեր՝ քառասուն տարի անապատին մէջ, ո՛վ Իսրայէլի տունը:
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.
43 Հապա կրեցիք Մողոքի վրանը ու ձեր Հռեմփա աստուծոյն աստղը, ձեր կերտած պատկերները՝ անոնց երկրպագելու համար: Ես ալ պիտի տարագրեմ ձեզ Բաբելոնի միւս կողմը”:
ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.
44 «Անապատին մէջ՝ մեր հայրերը ունէին վկայութեան խորանը, ինչպէս Մովսէսի հետ խօսողը պատուիրած էր որ շինէ զայն՝ տեսած տիպարին պէս:
“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.
45 Անոնց յաջորդող մեր հայրերն ալ՝ զայն ստանալով՝ Յեսուի հետ մտցուցին կալուածը այն հեթանոսներուն, որ Աստուած վանեց մեր հայրերուն առջեւէն: Հոն մնաց մինչեւ Դաւիթի օրերը,
ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.
46 որ Աստուծոյ առջեւ շնորհք գտաւ եւ ուզեց բնակարան մը կառուցանել Յակոբի Աստուծոյն.
ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.
47 բայց Սողոմո՛ն տուն մը կառուցանեց անոր:
ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
48 Սակայն Ամենաբարձրը չի բնակիր ձեռակերտ տաճարներու մէջ, ինչպէս մարգարէն կ՚ըսէ.
“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:
49 “Երկինքը իմ գահս է, ու երկիրը իմ ոտքերուս պատուանդանն է. ինչպիսի՞ տուն պիտի կառուցանէք ինծի, - կ՚ըսէ Տէրը, - կամ ի՞նչպէս պիտի ըլլայ իմ հանգստավայրիս տեղը.
“‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?
50 միթէ իմ ձեռքս չէ՞ շիներ այս բոլորը”:
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.
51 «Խստապարանոցնե՛ր ու սիրտով եւ ականջով անթլփատնե՛ր, դուք միշտ կ՚ընդդիմանաք Սուրբ Հոգիին, ինչպէս ձեր հայրերը՝ այնպէս ալ դուք:
“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!
52 Մարգարէներէն ո՞րը չհալածեցին ձեր հայրերը, ու չսպաննեցին անոնք՝ որ նախապէս ծանուցանեցին այն Արդարին գալուստը: Անոր մատնիչները եւ սպաննողները եղաք հիմա,
ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.
53 դո՛ւք՝ որ ստացաք Օրէնքը հրեշտակներու կարգադրութեամբ, բայց չպահեցիք զայն»:
ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.
54 Այս բաները լսելով՝ անոնք կը մոլեգնէին իրենց սիրտերուն մէջ եւ կը կրճտէին իրենց ակռաները անոր դէմ:
ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.
55 Բայց ան՝ լեցուած Սուրբ Հոգիով՝ ակնապիշ նայեցաւ դէպի երկինք, տեսաւ Աստուծոյ փառքը ու Յիսուսն ալ՝ որ Աստուծոյ աջ կողմը կայնած էր, եւ ըսաւ.
ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.
56 «Ահա՛ կը տեսնեմ երկինքը բացուած, ու մարդու Որդին՝ Աստուծոյ աջ կողմը կայնած»:
“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.
57 Իսկ անոնք բարձրաձայն աղաղակելով՝ գոցեցին իրենց ականջները, եւ բոլորը միաբանութեամբ խուժեցին անոր վրայ,
ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.
58 ու քաղաքէն դուրս հանելով՝ քարկոծեցին զայն. եւ վկաները իրենց հանդերձները պահ դրին երիտասարդի մը ոտքերուն քով, որ կը կոչուէր Սօղոս:
ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.
59 Ու կը քարկոծէին Ստեփանոսը, որ կը գոչէր. «Տէ՛ր Յիսուս, ընդունէ՛ իմ հոգիս»:
ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.
60 Եւ ծնրադրելով՝ բարձրաձայն աղաղակեց. «Տէ՛ր, այս մեղքը մի՛ սեպեր ատոնց»: Ասիկա ըսելով՝ ննջեց:
ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.

< ԳՈՐԾՔ ԱՌԱՔԵԼՈՑ 7 >