< ԳՈՐԾՔ ԱՌԱՔԵԼՈՑ 8 >

1 Սօղոս ալ կամակից էր անոր սպաննուելուն: Այդ օրը մեծ հալածանք եղաւ Երուսաղէմի մէջ եղող եկեղեցիին դէմ: Առաքեալներէն զատ՝ բոլորն ալ ցրուեցան Հրէաստանի ու Սամարիայի երկրամասերուն մէջ:
ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.
2 Բարեպաշտ մարդիկ վերցուցին Ստեփանոսը, եւ մեծապէս հեծեծեցին անոր վրայ:
ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.
3 Իսկ Սօղոս կ՚աւերէր եկեղեցին. կը մտնէր տուները, կը քաշկռտէր այր մարդիկ ու կիներ, եւ կը մատնէր զանոնք՝ բանտ նետուելու:
ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.
4 Ուրեմն անոնք որ ցրուած էին՝ կը շրջէին խօսքը աւետելով:
ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.
5 Փիլիպպոս ալ Սամարիայի մէկ քաղաքը իջնելով՝ Քրիստոսը կը քարոզէր անոնց:
ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು.
6 Եւ բազմութիւնը՝ միաբան՝ ուշադիր էր Փիլիպպոսի ըսածներուն, լսելով ու տեսնելով անոր ըրած նշանները:
ಜನಸಮೂಹವು ಫಿಲಿಪ್ಪನ ಬೋಧನೆ ಕೇಳಿ, ಅವನು ಮಾಡಿದ ಸೂಚಕಕಾರ್ಯಗಳನ್ನು ಕಂಡು, ಅವನು ಹೇಳಿದ್ದಕ್ಕೆಲ್ಲಾ ಮನಸ್ಸು ಕೊಟ್ಟರು.
7 Որովհետեւ անմաքուր ոգիները բարձրաձայն գոռալով դուրս կ՚ելլէին բազմաթիւ դիւահարներէ,
ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.
8 եւ շատ անդամալոյծներ ու կաղեր կը բուժուէին:
ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು.
9 Ուստի մեծ ուրախութիւն եղաւ այդ քաղաքին մէջ: Բայց մարդ մը կար՝ Սիմոն անունով, որ նախապէս մոգութիւն կ՚ընէր այդ քաղաքին մէջ եւ կը շշմեցնէր Սամարիայի ազգը, իր մասին ըսելով թէ մեծ մէկն է:
ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,
10 Բոլորն ալ, պզտիկէն մինչեւ մեծը, ուշադիր էին անոր ու կ՚ըսէին. «Ասիկա Աստուծոյ մեծ (կոչուած) զօրութիւնն է»:
ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು.
11 Ուշադրութիւն կը դարձնէին իրեն, որովհետեւ կը շշմեցնէր զիրենք մոգութիւններով՝ երկար ժամանակէ ի վեր:
ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು.
12 Բայց երբ հաւատացին Փիլիպպոսի՝ որ կ՚աւետէր Աստուծոյ թագաւորութեան ու Յիսուս Քրիստոսի անունին մասին, մկրտուեցան թէ՛ այր մարդիկ եւ թէ կիներ:
ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.
13 Սիմոն ինք ալ հաւատաց, ու մկրտուելով՝ չէր թողուր Փիլիպպոսը՝՝, եւ կը զմայլէր՝ տեսնելով կատարուած հրաշքներն ու մեծ նշանները:
ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.
14 Երբ Երուսաղէմի մէջ եղող առաքեալները լսեցին թէ Սամարացիները ընդունած են Աստուծոյ խօսքը, ղրկեցին անոնց Պետրոսն ու Յովհաննէսը,
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.
15 որոնք հոն հասնելով՝ աղօթեցին անոնց համար, որպէսզի ստանան Սուրբ Հոգին:
ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು.
16 (Որովհետեւ դեռ անոնցմէ ոեւէ մէկուն վրայ իջած չէր, հապա միայն մկրտուած էին Տէր Յիսուսի անունով: )
ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.
17 Այն ատեն իրենց ձեռքերը դրին անոնց վրայ, ու կը ստանային Սուրբ Հոգին:
ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.
18 Սիմոն, տեսնելով թէ Սուրբ Հոգին կը տրուի՝ առաքեալներուն ձեռնադրութեամբ, դրամ մատուցանեց անոնց եւ ըսաւ.
ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು,
19 «Ինծի՛ ալ տուէք այս իշխանութիւնը, որպէսզի որո՛ւ վրայ որ ձեռք դնեմ՝ ստանայ Սուրբ Հոգին»:
“ನಾನು ಯಾರ ಮೇಲೆ ಕೈಗಳನ್ನಿಡುವೆನೋ ಅವರೂ ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಂತೆ ಈ ಶಕ್ತಿಯನ್ನು ಕೊಡಬೇಕು,” ಎಂದು ಕೇಳಿದನು.
20 Պետրոս ըսաւ անոր. «Քու արծաթդ թող կորսուի քեզի հետ, որովհետեւ կարծեցիր թէ Աստուծոյ պարգեւը կը ստացուի դրամով:
ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!
21 Դուն մաս ու բաժին չունիս այդ բանին մէջ, որովհետեւ սիրտդ ուղիղ չէ Աստուծոյ առջեւ:
ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.
22 Ուրեմն զղջա՛ այդ չարամտութենէդ եւ աղերսէ՛ Աստուծոյ. թերեւս ներուի քեզի սիրտիդ չար մտածումը:
ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.
23 Որովհետեւ կը տեսնեմ քեզ մաղձի դառնութեան եւ անիրաւութեան կապին մէջ»:
ನೀನು ಕಹಿತನದಿಂದ ತುಂಬಿರುವೆ; ಪಾಪ ಬಂಧನದಲ್ಲಿರುವೆ ಎಂದು ಕಾಣುತ್ತಿದ್ದೇನೆ,” ಎಂದನು.
24 Սիմոն պատասխանեց. «Դո՛ւք աղերսեցէք Տէրոջ ինծի համար, որպէսզի այդ ձեր ըսածներէն ոչինչ պատահի ինծի՝՝»:
ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.
25 Անոնք ալ՝ վկայելէ ու Տէրոջ խօսքը քարոզելէ ետք՝ վերադարձան Երուսաղէմ, աւետարանելով Սամարացիներու բազմաթիւ գիւղերուն մէջ:
ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.
26 Տէրոջ հրեշտակը խօսեցաւ Փիլիպպոսի՝ ըսելով. «Կանգնէ՛ ու գնա՛ հարաւային կողմը, այն ճամբան՝ որ կ՚իջնէ Երուսաղէմէն դէպի Գազա եւ ամայի է»:
ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.
27 Ան ալ կանգնեցաւ ու գնաց: Եւ ահա՛ եթովպիացի ներքինի մը, Եթովպիացիներու Կանդակա թագուհիին մէկ պալատականը, - որ անոր բոլոր գանձերուն վերակացուն էր ու Երուսաղէմ եկած էր երկրպագելու, -
ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.
28 կը վերադառնար եւ իր կառքը նստած՝ կը կարդար Եսայի մարգարէին գիրքը:
ಈಗ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29 Հոգին ըսաւ Փիլիպպոսի. «Մօտեցի՛ր ու գնա՛ այդ կառքին քով»:
ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.
30 Փիլիպպոս ալ վազելով գնաց մօտը, լսեց թէ կը կարդար Եսայի մարգարէին գիրքը,
ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು.
31 եւ ըսաւ. «Արդեօք կը հասկնա՞ս կարդացածդ»: Ան ալ ըսաւ. «Ի՞նչպէս կրնամ հասկնալ, եթէ մէկը չառաջնորդէ զիս». եւ աղաչեց Փիլիպպոսի՝ որ ելլէ իր քով նստի:
ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.
32 Գիրքին մէջ կարդացած հատուածը սա՛ էր. «Ոչխարի պէս սպանդանոց տարուեցաւ, ու զինք խուզողին առջեւ մունջ կեցող գառի պէս՝ իր բերանը չբացաւ:
ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.
33 Իր նուաստացումին մէջ՝ իր իրաւունքը առնուեցաւ, եւ ո՞վ պիտի պատմէ անոր սերունդին մասին. որովհետեւ անոր կեանքը երկրէն վերցուած է»:
ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”
34 Ներքինին հարցուց Փիլիպպոսի. «Կ՚աղերսե՛մ քեզի, մարգարէն որո՞ւ համար կ՚ըսէ ասիկա. ինքնիրե՞ն համար՝ թէ ուրիշի մը համար»:
ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.
35 Ուստի Փիլիպպոս բացաւ իր բերանը, եւ սկսելով Գիրքին այդ խօսքէն՝ Յիսուսը աւետեց անոր:
ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.
36 Մինչ կ՚երթային իրենց ճամբան, եկան ջուրի մը քով: Ներքինին ըսաւ. «Ահա՛ ջուր, ա՛լ ի՞նչ կ՚արգիլէ զիս մկրտուելէ»:
ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.
37 (Փիլիպպոս ըսաւ անոր. «Եթէ կը հաւատաս ամբողջ սիրտովդ՝ արտօնուած է»: Ան ալ պատասխանեց. «Կը հաւատամ թէ Յիսուս Քրիստոս՝ Աստուծոյ Որդին է»: )
“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.
38 Ու հրամայեց որ կայնեցնեն կառքը: Երկուքն ալ իջան ջուրը, թէ՛ Փիլիպպոս, թէ՛ ներքինին. ու մկրտեց զայն:
ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39 Երբ դուրս ելան ջուրէն, Տէրոջ Հոգին յափշտակեց Փիլիպպոսը. ներքինին ա՛լ չտեսաւ զայն, եւ գնաց իր ճամբան ուրախութեամբ:
ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.
40 Իսկ Փիլիպպոս գտնուեցաւ Ազովտոսի մէջ, ու շրջելով աւետարանեց բոլոր քաղաքներուն մէջ՝ մինչեւ որ հասաւ Կեսարիա:
ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.

< ԳՈՐԾՔ ԱՌԱՔԵԼՈՑ 8 >